Homeಕರ್ನಾಟಕಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ಅಡ್ಡಂಡ ಕಾರ್ಯಪ್ಪ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ; ವಜಾಕ್ಕೆ ಮತ್ತೆ ಆಗ್ರಹ

ರಂಗಾಯಣ ನಿರ್ದೇಶಕರ ನಡೆಗೆ ಮಾಜಿ ನಿರ್ದೇಶಕರು ಮತ್ತು ಚಿಂತಕರು ಕಿಡಿ ಕಾರಿದ್ದಾರೆ

- Advertisement -
- Advertisement -

ರಂಗಾಯಣ ವಿವಾದ ಮತ್ತೆ ಬುಗಿಲೆದ್ದಿದ್ದು, ಭಾನುವಾರ ನಡೆದ ಆನ್‌ಲೈನ್ ಚಿಂತನಾ ಕಾರ್ಯಕ್ರಮದಲ್ಲಿ ರಂಗಾಯಣದ ಮಾಜಿ ನಿರ್ದೇಶಕರುಗಳು ಮತ್ತು ಚಿಂತಕರುಗಳು ರಂಗಾಯಣದ ಹಾಲಿ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಅವರ ವಿರುದ್ದ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಿರುವುದಾಗಿ ಹಿರಿಯ ರಂಗಕರ್ಮಿ, ರಂಗಾಯಣದ ಮಾಜಿ ನಿರ್ದೇಶಕರೂ ಆಗಿರುವ ಸಿ.ಬಸವಲಿಂಗಯ್ಯ ಹೇಳಿದ್ದಾರೆ.

‘ಸಮುದಾಯ ಕರ್ನಾಟಕ ರಾಜ್ಯ ಸಮಿತಿ’ ಮತ್ತು ಸಮಾನ ಆಸಕ್ತ ಸಂಘಟನೆಗಳು ಭಾನುವಾರ ನಡೆಸಿದ ‘ರಂಗಾಯಣ ಉಳಿಸಿ’ ಆನ್‌ಲೈನ್ ಪ್ರತಿರೋಧ ಕಾರ್ಯಕ್ರಮದಲ್ಲಿ ರಂಗಾಯಣ ನಿರ್ದೇಶಕರನ್ನು ವಜಾಗೊಳಿಸಲು ಮತ್ತೆ ಆಗ್ರಹಿಸಲಾಯಿತು. ಬಹುತ್ವ ಸಂಸ್ಕೃತಿಗೆ ಧಕ್ಕೆಯಾಗಬಾರದು, ಹಾಗಾಗಿ ನಮಗೆ ಯಾವುದೇ ಪಟ್ಟ ಕಟ್ಟಿದರೂ ಹೋರಾಟದಿಂದ ಹಿಂಜರಿಯುವುದಿಲ್ಲ ಎಂದು ಗುಡುಗಿದ್ದಾರೆ.

ಇದನ್ನೂ ಓದಿ:ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ಈ ವೇಳೆ ರಂಗಾಯಣ ಮಾಜಿ ನಿರ್ದೇಶಕ ಸಿ.ಬಸವಲಿಂಗಯ್ಯ ಅವರು ಮಾತನಾಡಿ, ರಂಗಾಯಣದಲ್ಲಿ ರಾಜಕೀಯ ಅಜೆಂಡಾ ಶುರುವಾಗಿದೆ. ಧನಿ ಎತ್ತಬೇಕಾದ ಕಲಾವಿದರೂ ಮೌನ ವಹಿಸಿದ್ದಾರೆ. ಸಂಘ ಪರಿವಾರದ ಚಿಂತನೆ ಯುವ ಸಮೂಹದ ದಿಕ್ಕು ತಪ್ಪಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ರಂಗಾಯಣದಲ್ಲಿ ಪ್ರಸನ್ನ ಅವರು ಬಹುರೂಪಿ ಉತ್ಸವ ಜಾರಿಗೆ ತಂದರು. ನನ್ನ ಅವಧಿಯಲ್ಲಿ ಚಿಣ್ಣರ ಮೇಳ ಶುರುವಾಯಿತು. ಹೀಗೆ ಪ್ರತಿ ನಿರ್ದೇಶಕರೂ ಒಂದೊಂದು ಹೊಸ ಯೋಜನೆ ತಂದಿದ್ದಾರೆ. ಜನಮೆಚ್ಚುಗೆ ಪಡೆದ ಯೋಜನೆಗಳು ಉಳಿದುಕೊಂಡಿವೆ. ಕಾರ್ಯಪ್ಪ ಅವರೂ ಹೊಸ ಯೋಜನೆ ತರಲಿ. ಅವರ ಆರ್‌ಎಸ್‌ಎಸ್ ಸಂಸ್ಕೃತಿಯದ್ದೇ ನಾಟಕ ಮಾಡಿ ಪ್ರದರ್ಶಿಸಲಿ. ನಮ್ಮನ್ನು ಮಾವೋವಾದಿಗಳು ಎನ್ನುವವರು ನಮ್ಮ ಯೋಜನೆಗಳನ್ನೇಕೆ ಮುಂದುವರಿಸಬೇಕು” ಎಂದು ಬಸವಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಪ್ಪ ರಾಜಕೀಯ ಆಕಾಂಕ್ಷಿ:

ರಂಗಕರ್ಮಿ ಮತ್ತು ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ (ಜನ್ನಿ) ಮಾತನಾಡಿ, “ಕಾರ್ಯಪ್ಪ ಅವರು ಮೂಲ ರಾಜಕೀಯ ಆಕಾಂಕ್ಷಿ. ಜನವಿರೋಧಿ ನೀತಿಗಳ ಮೂಲಕ ರಂಗಾಯಣ ನೀತಿಗೆ ವಿರೋಧವಾಗಿ ಮಾತನಾಡುವುದು, ರಾಜಕೀಯ ಬೆರಸುವುದು, ‘ಕೋಮುವಾದ ಪಡೆಯಿಂದ ಬಂದಿದೇನೆ ಏನು ಬೇಕಾದರೂ ಮಾಡಿಕೊಳ್ಳಿ’ ಎನ್ನುವ ಅಪ್ರಬುದ್ಧ ಹೇಳಿಕೆಗಳನ್ನು ಬಳಸುತ್ತಿರುವುದು ರಂಗಾಯಣದ ಇತಿಹಾಸಲ್ಲಿ ಇದೇ ಮೊದಲು. ಇಂಥವರ ವಿರುದ್ಧ ಕ್ರಮ ಆಗಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ಸಮಾಜವಾದಿ ಪ.ಮಲ್ಲೇಶ್ ಮಾತನಾಡಿ, “ವ್ಯಕ್ತಿಗೆ ಯಾವುದೇ ಸಿದ್ದಾಂತವಿದ್ದರೂ, ಧರ್ಮ ಅನುಸರಿಸಿದರೂ ರಂಗಾಯಣಕ್ಕೆ ಬಂದ ಮೇಲೆ ಎಲ್ಲರನ್ನೂ ಒಳಗೊಳ್ಳುವಂತಿರಬೇಕು. ಅದಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಹಿಂದಿನ ನಿರ್ದೇಶಕರೆಲ್ಲರೂ ಕಲೆ ಸಂಸ್ಕೃತಿ ಬೆಳೆಸುವತ್ತ ಚಿತ್ತ ಹರಿಸಿದ್ದರು. ಆದರೆ, ಕಾರ್ಯಪ್ಪ ಅವರು ಹಿಂದೂ ಧರ್ಮದ ಪರ ವಾಲಿದ್ದಾರೆ” ಎಂದು ತಿಳಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಅಡ್ಡಂಡ ಸಿ.ಕಾರ್ಯಪ್ಪ ಅವರ ನೇಮಕಾತಿಯನ್ನು ನಾವು ವಿರೋಧಿಸಿರಲಿಲ್ಲ. ಏಕೆಂದರೆ ರಂಗಪ್ರಜ್ಞೆ ಹೊಂದಿದ್ದ ವ್ಯಕ್ತಿ ಎಂದು ಖುಷಿಯಾಗಿತ್ತು. ನಂತರದಲ್ಲಿ ನಡವಳಿಕೆಯನ್ನು ನೋಡಿದಾಗ ರಂಗಾಯಣವನ್ನು ಆರ್‌ಎಸ್‌ಎಸ್ ಪ್ರೇರಿತ ಆದೇಶಗಳ ವೇದಿಕೆಯಾಗಿ ರೂಪಿಸುತ್ತಿದ್ದಾರೆ ಎನ್ನಿಸುತ್ತಿದೆ.

ವಿಶ್ವಪ್ರಜ್ಞೆಯಂತೆ ಎಲ್ಲರನ್ನೂ ಒಳಗೊಳ್ಳುವ ರಂಗಾಯಣದಲ್ಲಿ ಎಡ-ಬಲವನ್ನು ತರುತ್ತಾ, ಆರ್‌ಎಸ್‌ಎಸ್ ಬೈಠಕ್ ಕೇಂದ್ರವಾಗಿ ನಡೆದುಕೊಳ್ಳುತ್ತಿರುವುದು ನಾಚಿಗೇಡಿನ ಸಂಗತಿ. ಕಾರ್ಯಪ್ಪ ಅವರ ಮನಸ್ಸು- ಮಾತು, ಅಸಾಂಸ್ಕೃತಿಕ ಮತ್ತು ರಂಗಾಯಣಕ್ಕೆ ಅಪಚಾರ ಮಾಡುವ ರೀತಿ ನಡೆಯುತ್ತಿದೆ. ಹಾಗಾಗಿ, ರಂಗಾಯಣ ಕೋಮುವಾದದೆಡೆಗೆ ಹೋಗದಂತೆ ಎಚ್ಚರವಹಿಸಬೇಕಿದೆ” ಎಂದು ಕರೆ ನೀಡಿದ್ದಾರೆ.

ರಂಗಾಯಣ ಮಾಜಿ ನಿರ್ದೇಶಕರಾದ ಚಿದಂಬರರಾವ್ ಜಂಬೆ, ಭಾಗೀರಥಿ ಬಾಯಿ ಕದಂ, ಲಕ್ಷ್ಮೀ ಚಂದ್ರಶೇಖರ್, ನಾ.ದಿವಾಕರ್, ಸುಮಾ, ಕೆ.ಎಸ್.ವಿಮಲಾ, ಟಿ.ಸುಂದರ್‌ರಾವ್, ಗೋಪಾಲಕೃಷ್ಣ, ಎಸ್.ದೇವೇಂದ್ರಗೌಡ, ಜೆ.ಸಿ.ಶಶಿಧರ್, ಅಶ್ವಿನಿ, ಬಾಬು ಇಲಿಗರ್, ಜೆ.ಸಿ.ಶಶಿಧರ್, ಡಿ.ಆರ್.ಲಕ್ಷ್ಮೀನಾರಾಯಣ, ಕಾವ್ಯ ಅಚ್ಚುತ್, ಎನ್.ಎಸ್.ಶಾಂತಕುಮಾರ್, ಲಾವಣಿಕಾ, ಪುರುಷೋತ್ತಮ್, ಸುಷ್ಮಾ, ಮಲ್ಲಿಕಾರ್ಜುನ ಕಡಕೊಳ, ಸುಶೀಲ, ಲಕ್ಷ್ಮಣ್, ಪ್ರವೀಣ್ ರೆಡ್ಡಿ ರಾಯಚೂರು ಇನ್ನಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ:ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

ರಂಗಾಯಣದಲ್ಲಿ ಈ ರೀತಿಯ ನಡವಳಿಕೆಯಾಗಲಿ, ನಿರ್ದೇಶಕರಿಂದ ಈ ರೀತಿ ಮಾತುಗಳಾಗಲಿ ನಾವು ಕಂಡರಿಲಿಲ್ಲ. ಸಾಮಾಜಿಕವಾಗಿ ಮಾಡುವ ಕೆಲಸವನ್ನು ಬಿಟ್ಟು , ಉಳಿದೆಲ್ಲವನ್ನೂ ಮಾಡುತ್ತಿದ್ದಾರೆ. ನನ್ನ ವಿರುದ್ಧ ವೈಯಕ್ತಿಕವಾಗಿ ಟೀಕೆ ಮಾಡಿದ್ದು, ನೋವುಂಟು ಮಾಡಿದೆ.
-ಭಾಗೀರಥಿ ಬಾಯಿ ಕದಂ, ರಂಗಾಯಣ ಮಾಜಿ ನಿರ್ದೇಶಕರು

ಯಾವುದೇ ವ್ಯಕ್ತಿಯ ರಾಗದ್ವೇಷ ಆ ಸಂಸ್ಥೆಯದ್ದಾಗಬಾರದು. ಇಂದಿನ ವಿದ್ಯಮಾನ ಕಂಡು ಬೇಸರವಾಗಿದೆ. ರಂಗಾಯಣ ತನ್ನ ಘನತೆಯಂತೆಯೇ ಬೆಳೆಯಬೇಕು. ನಿರ್ದೇಶಕರು ಪೂರಕವಾಗಿ ಜವಾಬ್ದಾರಿ ನಿರ್ವಹಿಸಬೇಕು. ಹೊರತುಪಡಿಸಿ, ಬೇಜಾಬ್ದಾರಿಯಿಂದ ಮಾತನಾಡುವುದು ಆ ಸ್ಥಾನಕ್ಕೆ ಅವಮಾನ ಮಾಡಿದಂತೆ. ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣ ಕಟ್ಟುವ ಬಗ್ಗೆ ಯೋಚನೆ ಮಾಡಿಲ್ಲ. ಮಾಡಿದ್ದರೆ ಉದ್ಧಟತನದ ಮಾತುಗಳು ಬರುತ್ತಿರಲಿಲ್ಲ.
-ಚಿದಂಬರ ರಾವ್ ಜಂಬೆ, ರಂಗಾಯಣ ಮಾಜಿ ನಿರ್ದೇಶಕರು

ಅಡ್ಡಂಡ ಸಿ.ಕಾರ್ಯಪ್ಪ ಅವರು ರಂಗಾಯಣದಲ್ಲಿ ಆರ್‌ಎಸ್‌ಎಸ್- ಬಿಜೆಪಿ ಸ್ಥಾಪಿಸುವ ಉದ್ದೇಶ ಹೊಂದಿದ್ದಾರೆ. ಅದಕ್ಕಾಗಿ ಅವರನ್ನು ವಿರೋಧಿಸುತ್ತಿದ್ದೇವೆ. ನಾವು ಅವರನ್ನು ಕೋಮುವಾದಿ ಅಂದೆವು. ಆದರೆ, ಕೆಟ್ಟ ಭಾಷೆಗಳನ್ನು ಉಪಯೋಗಿಸಿಲ್ಲ. ಆದರೆ, ಅವರು ತಮ್ಮ ಪದ ಪ್ರಯೋಗದಿಂದ ಸಂಸ್ಕೃತಿ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಹಾಗಾಗಿ, ಎಂತಹ ಸಂದರ್ಭ ಬಂದರೂ ಅವರು ವರ್ಗಾವಣೆ ಆಗಬೇಕು. ನಾವೆಲ್ಲರೂ ಸಂಘಟಕರಾಗಿ ಹೋರಾಡಬೇಕು.
– ಪ.ಮಲ್ಲೇಶ್, ಸಮಾಜವಾದಿ

ಇದನ್ನೂ ಓದಿ:ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...