Homeಕರ್ನಾಟಕಸಮಾನ ವೇತನ ಕಾನೂನು ಮಾಡಿ ಅಂದರೆ ಮೊಟ್ಟೆ, ಮಾಂಸ ತಿನ್ನಬೇಡಿ ಅಂತ ಕಾನೂನು ಮಾಡ್ತಾರೆ: ಬಾಲನ್‌

ಸಮಾನ ವೇತನ ಕಾನೂನು ಮಾಡಿ ಅಂದರೆ ಮೊಟ್ಟೆ, ಮಾಂಸ ತಿನ್ನಬೇಡಿ ಅಂತ ಕಾನೂನು ಮಾಡ್ತಾರೆ: ಬಾಲನ್‌

- Advertisement -
- Advertisement -

ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಕಾನೂನು ಮಾಡಿ ಅಂದರೆ ಮೊಟ್ಟೆ ತಿನ್ನಬೇಡಿ, ಮಾಂಸ ತಿನ್ನಬೇಡಿ, ದನ ತಿನ್ನಬೇಡಿ ಅಂತ ಕಾನೂನು ಮಾಡ್ತಾರೆ ಎಂದು ಹೈಕೋರ್ಟ್ ವಕೀಲರಾದ ಬಾಲನ್‌ ಹೇಳಿದರು.

ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ (ಎಂಎಎಸ್‌ಎ) ಅಡಿಯಲ್ಲಿ ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ (ಟಿಯುಸಿಐ), ಕರ್ನಾಟಕ ಶ್ರಮಿಕ ಶಕ್ತಿ (ಕೆಎಸ್‌ಎಸ್‌), ಬಿಡಬ್ಲ್ಯೂಎಸ್‌ಎಸ್‌ಬಿ ಗುತ್ತಿಗೆ ಕಾರ್ಮಿಕರ ಸಂಘ, ಬೆಂಗಳೂರು ರೇಸ್‌ ಕೋರ್ಸ್ ಕಾರ್ಮಿಕರ ಸಂಘ, ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರ ಸಂಘ, ಕರ್ನಾಟಕ ರಾಜ್ಯ ಲೋಡಿಂಗ್‌ ಅಂಡ್‌ ಅನ್ ಲೋಡಿಂಗ್‌ ಕಾರ್ಮಿಕರ ಒಕ್ಕೂಟ, ವಲಸೆ ಕಾರ್ಮಿಕರ ಸೌಹಾರ್ದ ಕೇಂದ್ರ (ಎಂಡಬ್ಲೂಎಸ್‌ಎನ್‌), ಮಂಡ್ಯ ರೈಲ್ವೆ ಗೂಡ್ಸ್‌ ಶೆಡ್ ಕಾರ್ಮಿಕರ ಸಂಘ, ಕೆಎಸ್‌‌ಬಿಸಿಎಲ್‌ ಲೋಡಿಂಗ್ ಕಾರ್ಮಿಕರ ಸಂಘ, ಕೂಲಿ ನೇಕಾರ ಕಾರ್ಮಿಕರ ಬಳಗ ಒಂದುಗೂಡಿ ಬೆಂಗಳೂರಿನಲ್ಲಿ ಭಾನುವಾರ ನಡೆಸಿದ ಬೃಹತ್‌ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ನೀವು ಕಾನೂನು ಮಾಡ್ರಯ್ಯ, ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಕಾನೂನು ಮಾಡಿ. ಕೆಲಸದಿಂದ ತೆಗೆಯಬಾರದೆಂದು ಕಾನೂನು ಮಾಡಿ. ಅದನ್ನು ಬಿಟ್ಟು ಮೊಟ್ಟೆ ತಿನ್ನಬಾರದೆಂದು, ಮಟನ್‌ ತಿನ್ನಬಾರದೆಂದು, ದನದ ಮಾಂಸ ತಿನ್ನಬಾರದೆಂದು, ನೀರು ಕುಡಿಯಬಾರದೆಂದು ಕಾನೂನು ಮಾಡುತ್ತಿದ್ದಾರೆ. ಎಂಥ ಕಾನೂನು ಮಾಡ್ತಾ ಇದ್ದಿರಯ್ಯ ಬೊಮ್ಮಾಯಿ? ನೀವು ಈ ರೀತಿ ಕೆಲಸ ಮಾಡಿದರೆ- ಮುಂದಿನ ಚುನಾವಣೆಯಲ್ಲಿ ಬೊಮ್ಮಾಯಿ ಆಪ್‌ ನಹೀ ನಹೀ” ಎಂದು ಎಚ್ಚರಿಸಿದರು.

“ನಮ್ಮ ಕೆಲಸದ ಹಕ್ಕುಗಳು ಇರುವ ಕಾನೂನನ್ನು, ನಮ್ಮ ಸಂಬಳದ ಹಕ್ಕಿನ ಕಾನೂನುಗಳನ್ನು, ನಮ್ಮ ಸಾಮಾಜಿಕ ಹಕ್ಕುಗಳಾದ ಪಿಎಫ್‌, ಗ್ರಾಚ್ಯುಟಿ, ರಜೆ ಇತ್ಯಾದಿಗಳನ್ನು ನೀಡಿದ ಕಾನೂನುಗಳನ್ನು ಕಿತ್ತುಕೊಂಡಿದ್ದಾರೆ. ನೌಕರರಾಗಬೇಕಿದ್ದವರನ್ನು ಕೂಲಿಗಳನ್ನಾಗಿ ಮಾಡಿದ್ದಾರೆ. ಒಂದೇ ಕೆಲಸ, ಒಂದೇ ಪೊರಕೆ. ಆದರೆ ಗುತ್ತಿಗೆಯವರಿಗೆ ಹಾಗೂ ಕಾಯಂ ನೌಕರರಿಗೆ ಬೇರೆ ಬೇರೆ ಸಂಬಳ ನೀಡುತ್ತಿದ್ದಾರೆ” ಎಂದು ವಿವರಿಸಿದರು.

ಕ್ಯಾಂಟೀನ್‌ ನಮ್ಮ ಹಕ್ಕು. ಮಧ್ಯಾಹ್ನ ಊಟ ಕೊಡಬೇಕು. ಒಂದು ಕಾಲದಲ್ಲಿ ಇದೆಲ್ಲ ಇತ್ತು. 1996ರಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ, ರೈಲ್ವೆ, ಬಿಬಿಎಂಪಿ, ಆಸ್ಪತ್ರೆ ಸೇರಿದಂತೆ ಹಲವು ಕಡೆಗಳಲ್ಲಿ ಗುತ್ತಿಗೆ ಪದ್ಧತಿ ಇರಬಾರದೆಂದು ಹೇಳಿತ್ತು. ಆದರೆ 2001ನೇ ಇಸವಿಯಲ್ಲಿ ವಾಜಪೇಯಿ ಆ ಕಾನೂನನ್ನು ಕಿತ್ತು ಹಾಕಿ, ನಿಮ್ಮ ಬಾಯಿಗೆ ಮಣ್ಣು ಹಾಕಿದರು. 2002ರಲ್ಲಿ ಸುಪ್ರೀಂ ಕೋರ್ಟ್, ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಗುತ್ತಿಗೆ ಪದ್ಧತಿಯ ಪರವಾಗಿ ತೀರ್ಪು ನೀಡಿತು. ನಾನು ಸುಪ್ರಿಂ ಕೋರ್ಟ್‌‌ಗೆ ದಿಕ್ಕಾರ ಹೇಳುತ್ತೇನೆ. ನಿಮ್ಮ ಬಾಯಿಗೆ ಸುಪ್ರಿಂಕೋರ್ಟ್ ಮಣ್ಣು ಹಾಕಿದೆ. ನೀವು ಗುತ್ತಿಗೆ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದರೆ ಅದಕ್ಕೆ ಬಿಜೆಪಿ ಮತ್ತು ಸುಪ್ರೀಂ ಕೋರ್ಟ್ ಕಾರಣ ಎಂದು ಆರೋಪಿಸಿದರು.

ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿಯುಸಿಐ ರಾಜ್ಯಾಧ್ಯಕ್ಷರಾದ ಆರ್‌‌.ಮಾನಸಯ್ಯ, “ದೆಹಲಿ ಗಡಿಯಲ್ಲಿ ರೈತರು ಪಟ್ಟು ಹಿಡಿದು ಕುಳಿತು ಮೋದಿ ಸರ್ಕಾರವನ್ನು ಸೋಲಿಸಿದಂತೆ ಎಲ್ಲಾ ಕಾರ್ಮಿಕರ ಸಂಟನೆಗಳನ್ನು ಒಂದು ವೇದಿಕೆಯಲ್ಲಿ ತಂದು ಅದೇ ಮಾದರಿ ಹೋರಾಟಕ್ಕೆ ಕಾರ್ಮಿಕರು ಹೋಗಬೇಕಾಗಿದೆ. ಕಾರ್ಮಿಕರ ನಡುವೆ ಐಡೆಂಟಿಟಿ ಪೊಲಿಟಿಕ್ಸ್‌ ಬಿತ್ತುತ್ತಿದ್ದಾರೆ. ನೀವು ಪೌರ ಕಾರ್ಮಿಕರು, ಹಾಗಾಗಿ ಸಕ್ಕರೆ ಕಾರ್ಖಾನೆ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಕ್ಕರೆ ಕಾರ್ಮಿಕರು ಉಕ್ಕಿನ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸರ್ಕಾರಿ ನೌಕರರು ಸ್ಟೀಲ್ ಕಾರ್ಮಿಕರ ಜೊತೆ ಹೋಗಬಾರದು ಎಂದು ಹೇಳುತ್ತಾರೆ. ನೀವು ಸಾರಿಗೆ ಕಾರ್ಮಿಕರು, ಅಂಗನವಾಡಿ ಕಾರ್ಮಿಕರ ಜೊತೆ ಹೋಗಬಾರದು ಅಂತಾರೆ. ಈ ರೀತಿಯಲ್ಲಿ ನಮ್ಮ ನಡುವೆ ಅಸ್ಮಿತೆಯ ರಾಜಕಾರಣವನ್ನು ಹರಡುವ ಮೂಲಕ ಕಾರ್ಮಿಕರನ್ನು ತುಂಡರಿಸಿದ್ದಾರೆ. ಕಾರ್ಮಿಕರಲ್ಲಿ ಮೂಢನಂಬಿಕೆಗಳನ್ನು ಬಿತ್ತುತ್ತಿದ್ದಾರೆ” ಎಂದು ತಿಳಿಸಿದರು.

ಕಾರ್ಮಿಕರಿಗೆ ಕನಿಷ್ಠ 25,000 ರೂ. ಮಾಸಿಕ ವೇತನ ಕಡ್ಡಾಯ ಮಾಡಲೇಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲೇಬೇಕು. ಇಲ್ಲವಾದರೆ ನಮ್ಮ ಕೈಯಲ್ಲಿರುವ ಪೊರಕೆ, ಗುದ್ದಲಿ, ಸುತ್ತಿಗೆಗಳು ಮಾತನಾಡುತ್ತವೆ. ಕಾರ್ಮಿಕರೆಂದರೆ ಕನಿಷ್ಠರಲ್ಲ. ಈ ದೇಶದ ಕಟ್ಟಾಳುಗಳು ಎಂದು ಬಣ್ಣಿಸಿದರು.

ದೇಶ ಕಟ್ಟೋರು ಕಾರ್ಮಿಕರೇ ಹೊರತು ಎಸ್‌ಎಸ್‌ಎಸ್‌, ಬಜರಂಗದಳ, ವಿಎಚ್‌ಪಿಗಳಲ್ಲ, ಇನ್ಯಾವುದೇ ಸ್ವಾಮೀಜಿಗಳಲ್ಲ. ಘಂಟೆ ಭಾರಿಸಿದರೆ ದೇಶ ನಡೆಯುವುದಿಲ್ಲ, ಮಂತ್ರ ಹೇಳಿದರೆ ದೇಶ ನಡೆಯುವುದಿಲ್ಲ. ಹೀಗಾಗಿ ಮಂತ್ರ ಹೇಳುವ ತುಟಿಗಳಿಗಿಂತ ಮಣ್ಣು ಅಗೆಯುವ ಕೈಗಳನ್ನು ಪ್ರೀತಿಸಿ ಎಂದು ಮಾರ್ಮಿಕವಾಗಿ ನುಡಿದರು.

ಕೇಂದ್ರೀಯ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಕಾರ್ಮಿಕರು ಬೃಹತ್‌ ಮೆರವಣಿಗೆ ನಡೆಸಿದರು. ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ನೂರ್‌ ಶ್ರೀಧರ್‌, “ರೈತ ಮತ್ತು ಕಾರ್ಮಿಕ ಎಂಬ ಎರಡು ಹೆಜ್ಜೇನು ಗೂಡಿಗೆ ಇವರು ಕಲ್ಲು ಹೊಡೆದಿದ್ದಾರೆ. ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಇವರ ವಿನಾಶಕ್ಕೆ ಇದು ನಾಂದಿಯಾಗಲಿದೆ. ಎದ್ದೇಳುವ ಹೆಜ್ಜೇನುಗಳು ಸುಮ್ಮನೆ ಬಿಡುವುದಿಲ್ಲ. ಹೀಗಾಗಲೇ ರೈತ ಜೇನುಗೂಡಿಗೆ ಕಲ್ಲು ಹೊಡೆದು ಕಚ್ಚಿಸಿಕೊಂಡು, ಮೈಯೆಲ್ಲ ಕೆರೆದುಕೊಂಡು ಒಂದು ವರ್ಷದ ಬಳಿಕ ಮೂರು ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡಿದ್ದಾರೆ. ರೈತರು ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ನಾಟಕವನ್ನಾದರೂ ಆಡುವ ಪರಿಸ್ಥಿತಿಗೆ ಬಂದಿದ್ದಾರೆ” ಎಂದರು.


ಇದನ್ನೂ ಓದಿರಿ: ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...