Homeಕರ್ನಾಟಕಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

ಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

- Advertisement -
- Advertisement -

ರಾಜ್ಯದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲವು ಗ್ರಾಮಗಳಲ್ಲಿ ಬಲವಂತದ ಮತಾಂತರ ನಡೆದಿದೆ ಎಂದ ಬಿಜೆಪಿ ಶಾಸಕರ ಹೇಳಿಕೆಗೆ ವ್ಯತಿರಿಕ್ತ ವರದಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ತಹಸೀಲ್ದಾರ್ ತಿಪ್ಪೇಸ್ವಾಮಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಹುದ್ದೆಗಾಗಿ ತಿಪ್ಪೇಸ್ವಾಮಿ ಕಾಯುವಂತಾಗಿದೆ.

ಹೊಸದುರ್ಗದಲ್ಲಿ ಹೊಸ ತಹಸೀಲ್ದಾರ್ ಅಧಿಕಾರ ವಹಿಸಿಕೊಂಡಿದ್ದಾರೆ. “ಹಲವು ಮಾಧ್ಯಮಗಳು ಬಲವಂತದ ಮತಾಂತರದ ಬಗ್ಗೆ ವರದಿ ಮಾಡಿದ ನಂತರ ನಾನು ಸಮೀಕ್ಷೆ ನಡೆಸಿದೆ. ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿತ್ತು. ಜನರು ಹೇಳಿದ್ದನ್ನು ನನ್ನ ವರದಿಯಲ್ಲಿ ನಾನು ಹೈಲೈಟ್ ಮಾಡಿದ್ದೇನೆ” ಎಂದು ತಿಪ್ಪೇಸ್ವಾಮಿ ತಿಳಿಸಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜೊತೆಗೆ “ವರ್ಗಾವಣೆಗೂ ಹಾಗೂ ವರದಿಗೂ ಯಾವುದೇ ಸಂಬಂಧವಿಲ್ಲ” ಎಂದೂ ತಿಳಿಸಿದ್ದಾರೆ.

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ತಮ್ಮ ಕ್ಷೇತ್ರದಲ್ಲಿ ಬಲವಂತದ ಮತಾಂತರಗಳು ಹೆಚ್ಚಾಗಿವೆ ಎಂದು ರಾಜ್ಯದ ವಿಧಾನಸಭೆಯಲ್ಲಿ ಸೆಪ್ಪೆಂಬರ್‌‌ನಲ್ಲಿ ಆರೋಪಿಸಿದ್ದರು. ಹೊಸದುರ್ಗ ತಾಲೂಕು ಆಡಳಿತ ಕೆಲ ಗ್ರಾಮಗಳಲ್ಲಿ ಮತಾಂತರ ಸಂಬಂಧ ಸಮೀಕ್ಷೆ ನಡೆಸಿತ್ತು.

ಆದರೆ, ಕುಟುಂಬಗಳು ಸ್ವಇಚ್ಛೆಯಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ತಹಸೀಲ್ದಾರ್‌‌ ತಿಪ್ಪೇಸ್ವಾಮಿ ನೇತೃತ್ವದ ತಂಡ ವರದಿ ಸಲ್ಲಿಸಿತ್ತು. ತಾಲೂಕಿನ ಎರಡು ಗ್ರಾಮಗಳಲ್ಲಿ 46 ಕುಟುಂಬಗಳು ತಾವಾಗಿಯೇ ಕ್ರೈಸ್ತ ಧರ್ಮ ಸ್ವೀಕರಿಸಿದ್ದು, ಯಾರೂ ಕೂಡ ಬಲವಂತ ಮಾಡಿಲ್ಲ ಎಂಬುದು ಬಯಲಾಗಿತ್ತು. ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಯಾರೂ ಒತ್ತಾಯಿಸಲಿಲ್ಲ ಎಂದು ಕುಟುಂಬಗಳು ಅಧಿಕೃತ ಹೇಳಿಕೆ ನೀಡಿದ್ದವು.

“ಯಾರೂ ಬಲವಂತಪಡಿಸಿಲ್ಲ ಎಂದು ಕುಟುಂಬಗಳು ನಮಗೆ ತಿಳಿಸಿದವು. ಅಲ್ಲದೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಾಗಿನಿಂದ ಈ ಕುಟುಂಬಗಳು ಸಂತೋಷವಾಗಿವೆ, ಮಾನಸಿಕ ಶಾಂತಿಯನ್ನೂ ಹೊಂದಿವೆ. ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಕೆಲವರು ಆಮಿಷ ಒಡ್ಡುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ನಾವು ಕೇಳಿದಾಗ, ಕುಟುಂಬಗಳು ಆ ವರದಿಗಳನ್ನು ತಳ್ಳಿಹಾಕಿದವು” ಎಂದು ತಿಪ್ಪೇಸ್ವಾಮಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು.

ಮತಾಂತರ ಹೆಸರಲ್ಲಿ ಕ್ರಿಶ್ಚಿಯನ್ನರ ಮೇಲೆ ದ್ವೇಷ ರಾಜಕಾರಣ

ಧರ್ಮಾಚರಣೆಯ ಅಪರಾಧೀಕರಣ, ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲಿನ ದ್ವೇಷದ ಅಪರಾಧಗಳ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕದ (ಪಿಯುಸಿಎಲ್‌) ವರದಿಯು ಆತಂಕವನ್ನು ವ್ಯಕ್ತಪಡಿಸಿದೆ. ಜನವರಿಯಿಂದ ನವೆಂಬರ್‌‌ವರೆಗೆ ಒಟ್ಟು 39 ಕ್ರಿಶ್ಚಿಯನ್ನರ ಮೇಲಿನ ದ್ವೇಷ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ವರದಿ ಹೇಳಿದೆ.

ಬಹುತೇಕ ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ತಮ್ಮ ಪೂಜಾ ಸ್ಥಳಗಳನ್ನು ಮುಚ್ಚುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಅವರ ಭಾನುವಾರದ ಪ್ರಾರ್ಥನೆಗಾಗಿ ಒಟ್ಟುಗೂಡುವುದನ್ನು ನಿಲ್ಲಿಸಲಾಗುತ್ತಿದೆ. ಹಿಂದುತ್ವ ಗುಂಪುಗಳು ರಾಜ್ಯದ ಸಹಭಾಗಿತ್ವದೊಂದಿಗೆ ಸಾಮೂಹಿಕವಾಗಿ ಧಾರ್ಮಿಕ ಸಮುದಾಯವಾಗಿ ಪ್ರಾರ್ಥಿಸುವುದರ ಮೇಲಿನ ಈ ದಾಳಿಗಳು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿ ಕಾರ್ಯನಿರ್ವಹಿಸುತ್ತವೆ. ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ದಾಳಿಗಳು ಧರ್ಮವನ್ನು ಪ್ರಚಾರಮಾಡುವ ಪ್ರಚಾರದ ಹಕ್ಕಿಗೆ ಸಂಬಂಧಿಸಿರುವುದಿಲ್ಲ. ಬದಲಿಗೆ, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಆಚರಣೆ ಮಾಡುವ ಹಕ್ಕಿನ ಮೇಲಿನ ದಾಳಿಗಳಾಗಿವೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...