Homeಕರ್ನಾಟಕರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆ: ಅಧಿಕಾರ ಶಾಶ್ವತವಲ್ಲ ಎಂದ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆ: ಅಧಿಕಾರ ಶಾಶ್ವತವಲ್ಲ ಎಂದ ಬಸವರಾಜ ಬೊಮ್ಮಾಯಿ

- Advertisement -
- Advertisement -

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವದಂತಿ ಹಬ್ಬಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಯಾವುದೇ ಅಧಿಕಾರ ಶಾಶ್ವತವಲ್ಲ ಎನ್ನುವ ಹೇಳಿಕೆ ಊಹಾಪೋಹಗಳಿಗೆ ನೀರೆರೆದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ತವರು ಕ್ಷೇತ್ರವಾದ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಭಾನುವಾರ ಮಾತಾಡುತ್ತಾ ಭಾವುಕರಾಗಿದ್ದಾರೆ. ಅಧಿಕಾರದ ಎಲ್ಲಾ ಸ್ಥಾನಗಳು ತಾತ್ಕಾಲಿಕ, ಯಾವುದು ಶಾಶ್ವತವಲ್ಲ ಎಂದಿದ್ದಾರೆ.

“ಯಾವುದೂ ಶಾಶ್ವತವಲ್ಲ, ಈ ಜೀವನ ಶಾಶ್ವತವಲ್ಲ, ನಾವು ಎಷ್ಟು ದಿನ ಬದುಕುತ್ತೇವೆ ಎಂಬುದು ನಮಗೆ ತಿಳಿದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರದ ಎಲ್ಲಾ ಹುದ್ದೆಗಳೂ ಶಾಶ್ವತವಲ್ಲ. ಈ ಬಗ್ಗೆ ನಾವು ನಿರಂತರವಾಗಿ ಜಾಗೃತರಾಗಿರಬೇಕು. ಕ್ಷೇತ್ರದ ಹೊರಗಡೆ ಮಾತ್ರ ನಾನು ಸಿಎಂ, ಇಲ್ಲಿ ಬಂದಾಗ ಕೇವಲ ಬಸವರಾಜ ಬೊಮ್ಮಾಯಿ” ಎಂದು ಲಿಂಗಾಯತ ಪಂಚಮಸಾಲಿ ಸಮುದಾಯ ಭವನದ ಕಾಮಗಾರಿಗೆ ಅಡಿಗಲ್ಲು ಮತ್ತು ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಕೃಷಿ ಕಾಯ್ದೆಗಳ ವಾಪಸಾತಿ ಕುರಿತು ರೈತರೊಂದಿಗೆ ಮಾತುಕತೆಗೆ ಸಿದ್ದ – ಬಸವರಾಜ ಬೊಮ್ಮಾಯಿ

“ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರದಿಂದಲೇ ನಾನು ರಾಜ್ಯದ ಸಿಎಂ ಆಗಿದ್ದೇನೆ. ನಾನು ಯಾವಾಗಲೂ ಹೇಳುವ ಒಂದು ವಿಷಯವೆಂದರೆ, ನಾನು ಈ ಕ್ಷೇತ್ರದಿಂದ ಹೊರಗಿರುವಾಗ ನಾನು ಗೃಹ ಸಚಿವ, ಜಲಸಂಪನ್ಮೂಲ ಸಚಿವನಾಗಿರಬಹುದು. ಆದರೆ, ನಾನು ಇಲ್ಲಿಗೆ ಹಿಂತಿರುಗಿದಾಗಲೆಲ್ಲಾ ನಾನು ಬಸವರಾಜ ಬೊಮ್ಮಾಯಿ ಮಾತ್ರ” ಎಂದಿದ್ದಾರೆ.

“ನಿಮ್ಮ ಮನೆಗೆ ಬಂದಾಗ ನೀವು ನನಗೆ ರೊಟ್ಟಿ ತಿನ್ನಿಸಿದ್ದೀರಿ, ಅದನ್ನು ಎಂದಿಗೂ ಮರೆಯುವುದಿಲ್ಲ. ನಾನು ಯಾವುದೇ ಕೆಲಸ ಮಾಡಿದರೂ ನಿಮಗೆ ಸದಾ ಋಣಿಯಾಗಿರುತ್ತೇನೆ. ನನಗೆ ಯಾವುದೇ ದೊಡ್ಡ ಆಸೆಗಳಿಲ್ಲ. ಆದರೆ ನನ್ನ ಕ್ಷೇತ್ರದ ಜನರ ಪ್ರೀತಿಗೆ ಸದಾ ಪಾತ್ರನಾಗಬೇಕು ಎಂದು ಬಯಸುತ್ತೇನೆ” ಎಂದಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಈ ವರ್ಷದ ಜುಲೈನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಬೊಮ್ಮಾಯಿ ಅವರ ಈ ಹೇಳಿಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರವಾಧಿಯಿರುವ ಸುಮಾರು 16 ತಿಂಗಳಲ್ಲಿ ಮತ್ತೊಂದು ನಾಯಕತ್ವ ಬದಲಾವಣೆಗೆ ಸಾಕ್ಷಿಯಾಗಲಿದೆ ಎನ್ನಲಾಗಿದೆ.

ಒಟ್ಟಾರೆ 5 ತಿಂಗಳ ಕಾಲ ಅಧಿಕಾರ ನಡೆಸಿರುವ ಸಿಎಂ ಬಸವರಾಜ ಬೊಮ್ಮಾಯಿ ಇಷ್ಟರಲ್ಲೇ ಅಧಿಕಾರ ಶಾಶ್ವತವಲ್ಲ ಎಂಬ ಮಾತುಗಳನ್ನಾಡುತ್ತಿರುವುದು ಹೈಕಮಾಂಡ್‌ನಿಂದ ಯಾವುದಾದರೂ ಸೂಚನೆ ಬಂದಿರಬಹುದು ಎಂಬ ಅನುಮಾನಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ’ನಿರಂತರ ಸುಳ್ಳು ಹೇಳುವ ಮೂಲಕ ಬಿಜೆಪಿ ಮೂಲ ತತ್ವ ಎತ್ತಿ ಹಿಡಿದ ಬಸವರಾಜ ಬೊಮ್ಮಾಯಿ’: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...