Homeಕರ್ನಾಟಕಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ಎಡಗೈ- ಬಲಗೈ ಸಮುದಾಯಗಳ ನಡುವಿನ ಒಗ್ಗಟ್ಟಿನ ಕೊರತೆಯು ಅಟ್ರಾಸಿಟಿ ಪ್ರಕರಣ ಮುಚ್ಚಿಹಾಕಲು ಬಳಕೆಯಾಗುತ್ತಿದೆ ಎಂಬ ಅನುಮಾನಗಳು ಮೂಡಿವೆ.

- Advertisement -
- Advertisement -

ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸವರ್ಣಿಯರು ಹಲ್ಲೆ ನಡೆಸಿದ್ದಾರೆಂದು 27 ಮಂದಿ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾದ ಬಳಿಕ, ಈ ಪ್ರಕರಣವನ್ನು ಮುಚ್ಚಿ ಹಾಕಲು ದಲಿತ ಮುಖಂಡರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ದಲಿತರಲ್ಲಿನ ಎಡಗೈ (ಮಾದಿಗ), ಬಲಗೈ (ಹೊಲೆಯ) ಸಮುದಾಯಗಳ ನಡುವಿನ ಮುನಿಸುಗಳ ಲಾಭ ಪಡೆಯಲು ಸವರ್ಣಿಯರು ಯತ್ನಿಸುತ್ತಿದ್ದಾರೆ. ಹರಿಹರಪುರದಲ್ಲಿ ಮಾದಿಗ ಸಮುದಾಯದ ಮೇಲೆ ಹಲ್ಲೆಯಾಗಿದ್ದು, ಹೊಲೆಯ ಸಮುದಾಯದ ಮುಖಂಡರನ್ನು ಕರೆಸಿ ಸವರ್ಣೀಯರು ಮಾತು ಕತೆ ನಡೆಸಿ, ಅವರಿಂದ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ ಎಂಬ ದೂರುಗಳು ಬಂದಿವೆ.

ದಲಿತ ಮುಖಂಡರು ಮಾತುಕತೆ ನಡೆಸಿದ್ದಾರೆಂದು ವರದಿಗಳು ಆದ ಬಳಿಕ ಹರಿಹರಪುರದ ಸಂತ್ರಸ್ತ ಕುಟುಂಬಗಳ ಬಳಿ ವಿಚಾರಿಸಿದಾಗ, “ನಾವು ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಸವರ್ಣೀಯರ ಆಮಿಷಕ್ಕೆ ಒಳಗಾಗಿರುವವರು ದಲಿತರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಯತ್ನಿಸುತ್ತಿದ್ದಾರೆ. ಹಲ್ಲೆಗೊಳಗಾಗಿರುವ ಯುವಕರ ಮೇಲೆ ಸುಳ್ಳು ಆಪಾದನೆಗಳನ್ನು ಹೊರಿಸಿ ಪ್ರಕರಣ ಮುಚ್ಚಲು ಯತ್ನಿಸುತ್ತಿದ್ದಾರೆ” ಎಂದು ಹರಿಹರಪುರ ಮಾದಿಗ ಸಮುದಾಯದ ಮುಖಂಡರು, ಮಾದಿಗ ಸಮುದಾಯದ ಪರ ನಿಂತಿರುವ ಹೊಲೆಯ ಸಮುದಾಯದ ಮುಖಂಡರು ಹೇಳುತ್ತಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಮೇಲುಕೋಟೆ- ಪಾಂಡವಪುರ ಶಾಸಕರ ಸಂಧಾನ ಸಭೆ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಲಿತ ಮುಖಂಡರೊಂದಿಗೆ ಮೇಲುಕೋಟೆ- ಪಾಂಡವಪುರ ಕ್ಷೇತ್ರದ ಶಾಸಕ ಸಿ.ಎಸ್‌.ಪುಟ್ಟರಾಜು ಅವರ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿದೆ. ತನ್ನದಲ್ಲದ ಕ್ಷೇತ್ರದ ವಿವಾದದಲ್ಲಿ ಸಿ.ಎಸ್‌.ಪುಟ್ಟರಾಜು ಅವರು ಪಾಲ್ಗೊಂಡಿದ್ದು ಏತಕ್ಕೆ ಎಂಬ ಗೊಂದಲಗಳೂ ಉಂಟಾಗಿವೆ. ಕೆ.ಆರ್‌.ಪೇಟೆಗೆ ಬೇರೊಂದು ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದ್ದ ಶಾಸಕರು, ಹಾಗೆಯೇ ಸಂಧಾನ ಸಭೆಗೂ ಆಗಮಿಸಿದ್ದರಷ್ಟೇ ಎಂದು ಸವರ್ಣೀಯ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ.

“ಹರಿಹರಪುರದಲ್ಲಿ ಯಾವುದೇ ದಲಿತ ದೌರ್ಜನ್ಯ ನಡೆದಿಲ್ಲ. ಘಟನೆ ಶುದ್ಧ ಕಟ್ಟುಕತೆ. ಹಿಂದೆ ಕಳ್ಳತನ ಮಾಡಿ ಸಿಕ್ಕಿಬಿದ್ದವರು, ಹುಡುಗಿಯರನ್ನು ರೇಗಿಸಿದವರು, ರೇಪ್‌ ಕೇಸ್‌ನಲ್ಲಿ ಜೈಲಿಗೆ ಹೋಗಿ ಬಂದಿರುವ ಏಳೆಂಟು ಜನ ಅಯೋಗ್ಯರನ್ನು ಉಳಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಯತ್ನಿಸುತ್ತಿವೆ. ವಕೀಲರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ದಲಿತ ಮುಖಂಡ ಬಸ್ತಿ ರಂಗಪ್ಪ ಅವರ ನೇತೃತ್ವದಲ್ಲಿ ದಲಿತ ಸಂಘರ್ಷ ಸಮಿತಿಯವರು ಈ ಘಟನೆ ಶುದ್ಧ ಸುಳ್ಳು ಎಂದು ಹೇಳಿದ್ದಾರೆ” ಎಂದು ಮಾಧ್ಯಮವೊಂದರ ಜೊತೆ ಸವರ್ಣೀಯ ಸಮುದಾಯದ ಮುಖಂಡ, ಆರೋಪಿ ಶ್ರೀನಿವಾಸ್‌ ಮಾತನಾಡಿದ್ದು, ವಿಡಿಯೊ ವೈರಲ್ ಆಗಿದೆ. ಬಸ್ತಿ ರಂಗಪ್ಪ ಸಮ್ಮುಖದಲ್ಲಿ ಶ್ರೀನಿವಾಸ್ ಅವರು ಮಾತನಾಡುವುದನ್ನು ಇಲ್ಲಿ ಗಮನಿಸಬಹುದು.

ದೂರು ನೀಡಿರುವ ಯುವಕರು ಈ ಹಿಂದೆ ರೇಪ್‌ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ ಎಂಬ ಸವರ್ಣೀಯ ಮುಖಂಡರ ಆರೋಪದ ಕುರಿತು ಸ್ಪಷ್ಟನೆಯನ್ನು ಬಸ್ತಿ ರಂಗಪ್ಪ ಅವರಲ್ಲಿ ಕೇಳಿದಾಗ, “ಇದರ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದರು. “ರೇಪ್‌ ಕೇಸ್‌ಗಳಲ್ಲಿ ನಮ್ಮ ಹುಡುಗರು ಯಾರೂ ಸೇರಿಲ್ಲ. ಆದರೆ ದೇವಾಲಯ ಪ್ರವೇಶದಿಂದ ಗಲಾಟೆಯಾಗಿದೆ ಎಂಬುದು ಸುಳ್ಳು. ದಲಿತ ಹುಡುಗರು ಅಲ್ಲಿನ ಹುಡುಗಿಯರಿಗೆ ಬಾಳೆಹಣ್ಣಿನಲ್ಲಿ ತೀಡಿದ್ದಾರೆ, ಬಲೂನಿನಲ್ಲಿ ಹೊಡೆದಿದ್ದಾರೆ. ಹೀಗಾಗಿ ಗಲಾಟೆಯಾಗಿದೆ” ಎಂದರು. “ಇದಕ್ಕೆ ಪುರಾವೆಗಳು ಇದ್ದಾವೆಯೇ” ಎಂದು ಕೇಳಿದಾಗ, “ವಿಡಿಯೊ ಕಳಿಸುತ್ತೇನೆ” ಎಂದರು. ಶ್ರೀನಿವಾಸ್‌ ಅವರು ವಿಡಿಯೊವೊಂದನ್ನು ಕಳುಹಿಸಿದ್ದು, ದಲಿತ ಹುಡುಗರು ಸಿನಿಮಾ ಹಾಡೊಂಡಕ್ಕೆ ಕುಣಿಯುತ್ತಿರುವುದನ್ನು ಕಾಣಬಹುದೇ ಹೊರತು, ಹುಡುಗಿಯರಿಗೆ ಬಾಳೇಹಣ್ಣಿನಲ್ಲಿ ಹೊಡೆದಿರುವುದಾಗಲೀ, ಬಲೂನಿನಲ್ಲಿ ಹೊಡೆದಿರುವುದಾಗಲೀ ಕಂಡು ಬಂದಿಲ್ಲ.

“ನೀವು ಹೇಳುತ್ತಿರುವುದಕ್ಕೂ, ಇಲ್ಲಿನ ವಿಡಿಯೊಕ್ಕೂ ಯಾವುದೇ ಸಂಬಂಧಗಳು ಕಂಡು ಬರುತ್ತಿಲ್ಲ. ಬೇರೆ ವಿಡಿಯೊ ಇದ್ದರೆ ಕಳಿಸಿಕೊಡಿ” ಎಂದು ಕೇಳಿದಾಗ, ಕಳಿಸಿಕೊಡುವುದಾಗಿ ತಿಳಿಸಿದ್ದರು. ಆದರೆ ಎಲ್ಲ ವಿಡಿಯೊಗಳು ಪೊಲೀಸರ ಬಳಿ ಇವೆ ಹೊರತು, ನಮ್ಮಲ್ಲಿ ಈಗ ಇಲ್ಲ ಎಂದು ತಿಳಿಸಿದರು. (ಹಾಗೇನಾದರೂ ವಿಡಿಯೋ ಸಿಕ್ಕಲ್ಲಿ, ಸತ್ಯಾಸತ್ಯತೆ ಪರಿಶೀಲಿಸಿ ಓದುಗರಿಗೆ ನೀಡಲಾಗುವುದು).

“ಐದು ಹುಡುಗರು ಮಾತ್ರ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಇಡೀ ದಲಿತ ಸಮುದಾಯವಲ್ಲ. ಹೀಗಾಗಿ ತಪ್ಪು ಮಾಡಿರುವ ಸವರ್ಣೀಯರಿಗೂ, ದಲಿತರಿಗೂ ಶಿಕ್ಷೆಯಾಗಲಿ. ಇಲ್ಲಿ ಜಾತಿ ಜಾತಿ ತರಬಾರದು” ಎಂಬುದು ಬಸ್ತಿ ರಂಗಪ್ಪ ಅವರ ವಾದ. ಆದರೆ ಪೊಲೀಸರಿಗೆ ದೂರು ನೀಡಿರುವವರಲ್ಲಿ ಒಟ್ಟು ಹನ್ನೆರಡು ಮಂದಿ ಇದ್ದು, ಅಂಗವಿಕಲ ವ್ಯಕ್ತಿಯೊಬ್ಬರ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದನ್ನು ನಾನುಗೌರಿ.ಕಾಂ ಹೀಗಾಗಲೇ ವರದಿ ಮಾಡಿದೆ. (ವರದಿಯನ್ನು ಇಲ್ಲಿ ಓದಬಹುದು).

ಸಂಧಾನ ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಮುಖಂಡರ ಹೆಸರುಗಳನ್ನು ಬಸ್ತಿ ರಂಗಪ್ಪ ನಮ್ಮ ಗಮನಕ್ಕೆ ತಂದರು. ‌ಹೆಚ್ಚಿನ ಪರಿಶೀಲನೆ ನಡೆಸಿದಾಗ, ಈ ಸಭೆಯಲ್ಲಿ ಸಂತ್ರಸ್ತ ಕುಟುಂಬದ ಒಬ್ಬರೇ ಒಬ್ಬರು ದಲಿತರು ಪಾಲ್ಗೊಂಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿತು. ಸಂಧಾನ ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಮುಖಂಡರು ಬಲಗೈ (ಹೊಲೆಯ) ಸಮುದಾಯಕ್ಕೆ ಸೇರಿದವರು. ಹಲ್ಲೆಯಾಗಿರುವುದು ಎಡಗೈ (ಮಾದಿಗ) ಸಮುದಾಯದ ಮೇಲೆ. ಎಡಗೈ ಮತ್ತು ಬಲಗೈ ಸಮುದಾಯಗಳು ಅಣ್ಣತಮ್ಮಂದಿರಂತೆ ಇರದೆ ಕಿತ್ತಾಡಿಕೊಳ್ಳುತ್ತಿರುವುದರಿಂದ ಇದರ ಲಾಭವನ್ನು ಪಡೆಯಲು ಸವರ್ಣಿಯರು ಯತ್ನಿಸಿದ್ದಾರೆ ಎಂದು ಸಂತ್ರಸ್ತ ಯುವಕರಾದ ದರ್ಶನ್‌ ಮತ್ತು ಸಂಜು ಆರೋಪಿಸಿದ್ದಾರೆ.

ನಮ್ಮೊಂದಿಗೆ ಮಾತನಾಡಿರುವ ಆರೋಪಿ ಶ್ರೀನಿವಾಸ್, “ನಮ್ಮ ಊರಿನಲ್ಲಿ ಯಾವುದೇ ಜಾತಿ ವ್ಯವಸ್ಥೆ ಇಲ್ಲ. ಇದು ಜಾತಿ ಕಾರಣಕ್ಕೆ ನಡೆದ ಗಲಾಟೆಯಲ್ಲ. ಗಲಾಟೆ ಮಾಡಿದವರು ಹೀಗಾಗಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ” ಎಂದರು. “ಹರಿಹರಪುರವು ಜಾತಿ ಮುಕ್ತ ಗ್ರಾಮವೆಂದು ನೀವು ಹೇಳುತ್ತಿದ್ದೀರಿ. ಭಾರತಕ್ಕೆ ಇಂತಹ ಗ್ರಾಮಗಳ ಅಗತ್ಯವಿದೆ. ಮುಂದೊಮ್ಮೆ ಈ ಕುರಿತು ಪರಿಶೀಲಿಸಿ ವಿಶೇಷ ಲೇಖನ ಬರೆಯಲಾಗುವುದು” ಎಂದು ತಿಳಿಸಲಾಗಿದೆ.

ಸವರ್ಣೀಯರ ಮೇಲೆ ದೂರು ನೀಡಿರುವ ಯುವಕರನ್ನು ಸಂಪರ್ಕಿಸಿದಾಗ “ನಮ್ಮ ಮೇಲೆ ಯಾವುದೇ ಅತ್ಯಾಚಾರ ಪ್ರಕರಣ ದಾಖಲಾಗಿಲ್ಲ” ಎಂದು ತಿಳಿಸಿದ್ದಾರೆ. “ದಲಿತರು ಎಡಗೈ- ಬಲಗೈ ಎಂದು ಒಡೆದುಹೋದರೆ ಮುಂದೆ ಹೀಗೆಯೇ ದೌರ್ಜನ್ಯಕ್ಕೆ ಒಳಗಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...