Homeಕರ್ನಾಟಕಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ಎಡಗೈ- ಬಲಗೈ ಸಮುದಾಯಗಳ ನಡುವಿನ ಒಗ್ಗಟ್ಟಿನ ಕೊರತೆಯು ಅಟ್ರಾಸಿಟಿ ಪ್ರಕರಣ ಮುಚ್ಚಿಹಾಕಲು ಬಳಕೆಯಾಗುತ್ತಿದೆ ಎಂಬ ಅನುಮಾನಗಳು ಮೂಡಿವೆ.

- Advertisement -
- Advertisement -

ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸವರ್ಣಿಯರು ಹಲ್ಲೆ ನಡೆಸಿದ್ದಾರೆಂದು 27 ಮಂದಿ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾದ ಬಳಿಕ, ಈ ಪ್ರಕರಣವನ್ನು ಮುಚ್ಚಿ ಹಾಕಲು ದಲಿತ ಮುಖಂಡರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ದಲಿತರಲ್ಲಿನ ಎಡಗೈ (ಮಾದಿಗ), ಬಲಗೈ (ಹೊಲೆಯ) ಸಮುದಾಯಗಳ ನಡುವಿನ ಮುನಿಸುಗಳ ಲಾಭ ಪಡೆಯಲು ಸವರ್ಣಿಯರು ಯತ್ನಿಸುತ್ತಿದ್ದಾರೆ. ಹರಿಹರಪುರದಲ್ಲಿ ಮಾದಿಗ ಸಮುದಾಯದ ಮೇಲೆ ಹಲ್ಲೆಯಾಗಿದ್ದು, ಹೊಲೆಯ ಸಮುದಾಯದ ಮುಖಂಡರನ್ನು ಕರೆಸಿ ಸವರ್ಣೀಯರು ಮಾತು ಕತೆ ನಡೆಸಿ, ಅವರಿಂದ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ ಎಂಬ ದೂರುಗಳು ಬಂದಿವೆ.

ದಲಿತ ಮುಖಂಡರು ಮಾತುಕತೆ ನಡೆಸಿದ್ದಾರೆಂದು ವರದಿಗಳು ಆದ ಬಳಿಕ ಹರಿಹರಪುರದ ಸಂತ್ರಸ್ತ ಕುಟುಂಬಗಳ ಬಳಿ ವಿಚಾರಿಸಿದಾಗ, “ನಾವು ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಸವರ್ಣೀಯರ ಆಮಿಷಕ್ಕೆ ಒಳಗಾಗಿರುವವರು ದಲಿತರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಯತ್ನಿಸುತ್ತಿದ್ದಾರೆ. ಹಲ್ಲೆಗೊಳಗಾಗಿರುವ ಯುವಕರ ಮೇಲೆ ಸುಳ್ಳು ಆಪಾದನೆಗಳನ್ನು ಹೊರಿಸಿ ಪ್ರಕರಣ ಮುಚ್ಚಲು ಯತ್ನಿಸುತ್ತಿದ್ದಾರೆ” ಎಂದು ಹರಿಹರಪುರ ಮಾದಿಗ ಸಮುದಾಯದ ಮುಖಂಡರು, ಮಾದಿಗ ಸಮುದಾಯದ ಪರ ನಿಂತಿರುವ ಹೊಲೆಯ ಸಮುದಾಯದ ಮುಖಂಡರು ಹೇಳುತ್ತಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಮೇಲುಕೋಟೆ- ಪಾಂಡವಪುರ ಶಾಸಕರ ಸಂಧಾನ ಸಭೆ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಲಿತ ಮುಖಂಡರೊಂದಿಗೆ ಮೇಲುಕೋಟೆ- ಪಾಂಡವಪುರ ಕ್ಷೇತ್ರದ ಶಾಸಕ ಸಿ.ಎಸ್‌.ಪುಟ್ಟರಾಜು ಅವರ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿದೆ. ತನ್ನದಲ್ಲದ ಕ್ಷೇತ್ರದ ವಿವಾದದಲ್ಲಿ ಸಿ.ಎಸ್‌.ಪುಟ್ಟರಾಜು ಅವರು ಪಾಲ್ಗೊಂಡಿದ್ದು ಏತಕ್ಕೆ ಎಂಬ ಗೊಂದಲಗಳೂ ಉಂಟಾಗಿವೆ. ಕೆ.ಆರ್‌.ಪೇಟೆಗೆ ಬೇರೊಂದು ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದ್ದ ಶಾಸಕರು, ಹಾಗೆಯೇ ಸಂಧಾನ ಸಭೆಗೂ ಆಗಮಿಸಿದ್ದರಷ್ಟೇ ಎಂದು ಸವರ್ಣೀಯ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ.

“ಹರಿಹರಪುರದಲ್ಲಿ ಯಾವುದೇ ದಲಿತ ದೌರ್ಜನ್ಯ ನಡೆದಿಲ್ಲ. ಘಟನೆ ಶುದ್ಧ ಕಟ್ಟುಕತೆ. ಹಿಂದೆ ಕಳ್ಳತನ ಮಾಡಿ ಸಿಕ್ಕಿಬಿದ್ದವರು, ಹುಡುಗಿಯರನ್ನು ರೇಗಿಸಿದವರು, ರೇಪ್‌ ಕೇಸ್‌ನಲ್ಲಿ ಜೈಲಿಗೆ ಹೋಗಿ ಬಂದಿರುವ ಏಳೆಂಟು ಜನ ಅಯೋಗ್ಯರನ್ನು ಉಳಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಯತ್ನಿಸುತ್ತಿವೆ. ವಕೀಲರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ದಲಿತ ಮುಖಂಡ ಬಸ್ತಿ ರಂಗಪ್ಪ ಅವರ ನೇತೃತ್ವದಲ್ಲಿ ದಲಿತ ಸಂಘರ್ಷ ಸಮಿತಿಯವರು ಈ ಘಟನೆ ಶುದ್ಧ ಸುಳ್ಳು ಎಂದು ಹೇಳಿದ್ದಾರೆ” ಎಂದು ಮಾಧ್ಯಮವೊಂದರ ಜೊತೆ ಸವರ್ಣೀಯ ಸಮುದಾಯದ ಮುಖಂಡ, ಆರೋಪಿ ಶ್ರೀನಿವಾಸ್‌ ಮಾತನಾಡಿದ್ದು, ವಿಡಿಯೊ ವೈರಲ್ ಆಗಿದೆ. ಬಸ್ತಿ ರಂಗಪ್ಪ ಸಮ್ಮುಖದಲ್ಲಿ ಶ್ರೀನಿವಾಸ್ ಅವರು ಮಾತನಾಡುವುದನ್ನು ಇಲ್ಲಿ ಗಮನಿಸಬಹುದು.

ದೂರು ನೀಡಿರುವ ಯುವಕರು ಈ ಹಿಂದೆ ರೇಪ್‌ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ ಎಂಬ ಸವರ್ಣೀಯ ಮುಖಂಡರ ಆರೋಪದ ಕುರಿತು ಸ್ಪಷ್ಟನೆಯನ್ನು ಬಸ್ತಿ ರಂಗಪ್ಪ ಅವರಲ್ಲಿ ಕೇಳಿದಾಗ, “ಇದರ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದರು. “ರೇಪ್‌ ಕೇಸ್‌ಗಳಲ್ಲಿ ನಮ್ಮ ಹುಡುಗರು ಯಾರೂ ಸೇರಿಲ್ಲ. ಆದರೆ ದೇವಾಲಯ ಪ್ರವೇಶದಿಂದ ಗಲಾಟೆಯಾಗಿದೆ ಎಂಬುದು ಸುಳ್ಳು. ದಲಿತ ಹುಡುಗರು ಅಲ್ಲಿನ ಹುಡುಗಿಯರಿಗೆ ಬಾಳೆಹಣ್ಣಿನಲ್ಲಿ ತೀಡಿದ್ದಾರೆ, ಬಲೂನಿನಲ್ಲಿ ಹೊಡೆದಿದ್ದಾರೆ. ಹೀಗಾಗಿ ಗಲಾಟೆಯಾಗಿದೆ” ಎಂದರು. “ಇದಕ್ಕೆ ಪುರಾವೆಗಳು ಇದ್ದಾವೆಯೇ” ಎಂದು ಕೇಳಿದಾಗ, “ವಿಡಿಯೊ ಕಳಿಸುತ್ತೇನೆ” ಎಂದರು. ಶ್ರೀನಿವಾಸ್‌ ಅವರು ವಿಡಿಯೊವೊಂದನ್ನು ಕಳುಹಿಸಿದ್ದು, ದಲಿತ ಹುಡುಗರು ಸಿನಿಮಾ ಹಾಡೊಂಡಕ್ಕೆ ಕುಣಿಯುತ್ತಿರುವುದನ್ನು ಕಾಣಬಹುದೇ ಹೊರತು, ಹುಡುಗಿಯರಿಗೆ ಬಾಳೇಹಣ್ಣಿನಲ್ಲಿ ಹೊಡೆದಿರುವುದಾಗಲೀ, ಬಲೂನಿನಲ್ಲಿ ಹೊಡೆದಿರುವುದಾಗಲೀ ಕಂಡು ಬಂದಿಲ್ಲ.

“ನೀವು ಹೇಳುತ್ತಿರುವುದಕ್ಕೂ, ಇಲ್ಲಿನ ವಿಡಿಯೊಕ್ಕೂ ಯಾವುದೇ ಸಂಬಂಧಗಳು ಕಂಡು ಬರುತ್ತಿಲ್ಲ. ಬೇರೆ ವಿಡಿಯೊ ಇದ್ದರೆ ಕಳಿಸಿಕೊಡಿ” ಎಂದು ಕೇಳಿದಾಗ, ಕಳಿಸಿಕೊಡುವುದಾಗಿ ತಿಳಿಸಿದ್ದರು. ಆದರೆ ಎಲ್ಲ ವಿಡಿಯೊಗಳು ಪೊಲೀಸರ ಬಳಿ ಇವೆ ಹೊರತು, ನಮ್ಮಲ್ಲಿ ಈಗ ಇಲ್ಲ ಎಂದು ತಿಳಿಸಿದರು. (ಹಾಗೇನಾದರೂ ವಿಡಿಯೋ ಸಿಕ್ಕಲ್ಲಿ, ಸತ್ಯಾಸತ್ಯತೆ ಪರಿಶೀಲಿಸಿ ಓದುಗರಿಗೆ ನೀಡಲಾಗುವುದು).

“ಐದು ಹುಡುಗರು ಮಾತ್ರ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಇಡೀ ದಲಿತ ಸಮುದಾಯವಲ್ಲ. ಹೀಗಾಗಿ ತಪ್ಪು ಮಾಡಿರುವ ಸವರ್ಣೀಯರಿಗೂ, ದಲಿತರಿಗೂ ಶಿಕ್ಷೆಯಾಗಲಿ. ಇಲ್ಲಿ ಜಾತಿ ಜಾತಿ ತರಬಾರದು” ಎಂಬುದು ಬಸ್ತಿ ರಂಗಪ್ಪ ಅವರ ವಾದ. ಆದರೆ ಪೊಲೀಸರಿಗೆ ದೂರು ನೀಡಿರುವವರಲ್ಲಿ ಒಟ್ಟು ಹನ್ನೆರಡು ಮಂದಿ ಇದ್ದು, ಅಂಗವಿಕಲ ವ್ಯಕ್ತಿಯೊಬ್ಬರ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದನ್ನು ನಾನುಗೌರಿ.ಕಾಂ ಹೀಗಾಗಲೇ ವರದಿ ಮಾಡಿದೆ. (ವರದಿಯನ್ನು ಇಲ್ಲಿ ಓದಬಹುದು).

ಸಂಧಾನ ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಮುಖಂಡರ ಹೆಸರುಗಳನ್ನು ಬಸ್ತಿ ರಂಗಪ್ಪ ನಮ್ಮ ಗಮನಕ್ಕೆ ತಂದರು. ‌ಹೆಚ್ಚಿನ ಪರಿಶೀಲನೆ ನಡೆಸಿದಾಗ, ಈ ಸಭೆಯಲ್ಲಿ ಸಂತ್ರಸ್ತ ಕುಟುಂಬದ ಒಬ್ಬರೇ ಒಬ್ಬರು ದಲಿತರು ಪಾಲ್ಗೊಂಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿತು. ಸಂಧಾನ ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಮುಖಂಡರು ಬಲಗೈ (ಹೊಲೆಯ) ಸಮುದಾಯಕ್ಕೆ ಸೇರಿದವರು. ಹಲ್ಲೆಯಾಗಿರುವುದು ಎಡಗೈ (ಮಾದಿಗ) ಸಮುದಾಯದ ಮೇಲೆ. ಎಡಗೈ ಮತ್ತು ಬಲಗೈ ಸಮುದಾಯಗಳು ಅಣ್ಣತಮ್ಮಂದಿರಂತೆ ಇರದೆ ಕಿತ್ತಾಡಿಕೊಳ್ಳುತ್ತಿರುವುದರಿಂದ ಇದರ ಲಾಭವನ್ನು ಪಡೆಯಲು ಸವರ್ಣಿಯರು ಯತ್ನಿಸಿದ್ದಾರೆ ಎಂದು ಸಂತ್ರಸ್ತ ಯುವಕರಾದ ದರ್ಶನ್‌ ಮತ್ತು ಸಂಜು ಆರೋಪಿಸಿದ್ದಾರೆ.

ನಮ್ಮೊಂದಿಗೆ ಮಾತನಾಡಿರುವ ಆರೋಪಿ ಶ್ರೀನಿವಾಸ್, “ನಮ್ಮ ಊರಿನಲ್ಲಿ ಯಾವುದೇ ಜಾತಿ ವ್ಯವಸ್ಥೆ ಇಲ್ಲ. ಇದು ಜಾತಿ ಕಾರಣಕ್ಕೆ ನಡೆದ ಗಲಾಟೆಯಲ್ಲ. ಗಲಾಟೆ ಮಾಡಿದವರು ಹೀಗಾಗಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ” ಎಂದರು. “ಹರಿಹರಪುರವು ಜಾತಿ ಮುಕ್ತ ಗ್ರಾಮವೆಂದು ನೀವು ಹೇಳುತ್ತಿದ್ದೀರಿ. ಭಾರತಕ್ಕೆ ಇಂತಹ ಗ್ರಾಮಗಳ ಅಗತ್ಯವಿದೆ. ಮುಂದೊಮ್ಮೆ ಈ ಕುರಿತು ಪರಿಶೀಲಿಸಿ ವಿಶೇಷ ಲೇಖನ ಬರೆಯಲಾಗುವುದು” ಎಂದು ತಿಳಿಸಲಾಗಿದೆ.

ಸವರ್ಣೀಯರ ಮೇಲೆ ದೂರು ನೀಡಿರುವ ಯುವಕರನ್ನು ಸಂಪರ್ಕಿಸಿದಾಗ “ನಮ್ಮ ಮೇಲೆ ಯಾವುದೇ ಅತ್ಯಾಚಾರ ಪ್ರಕರಣ ದಾಖಲಾಗಿಲ್ಲ” ಎಂದು ತಿಳಿಸಿದ್ದಾರೆ. “ದಲಿತರು ಎಡಗೈ- ಬಲಗೈ ಎಂದು ಒಡೆದುಹೋದರೆ ಮುಂದೆ ಹೀಗೆಯೇ ದೌರ್ಜನ್ಯಕ್ಕೆ ಒಳಗಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....