Homeಮುಖಪುಟತಮ್ಮ ಜೀವನದಲ್ಲಿ ಎಂದೂ ಅಶ್ಲೀಲ ಚಿತ್ರ ತಯಾರಿಕೆ, ಪ್ರಸಾರ ಮಾಡಿಲ್ಲ ಎಂದ ಉದ್ಯಮಿ ರಾಜ್ ಕುಂದ್ರಾ

ತಮ್ಮ ಜೀವನದಲ್ಲಿ ಎಂದೂ ಅಶ್ಲೀಲ ಚಿತ್ರ ತಯಾರಿಕೆ, ಪ್ರಸಾರ ಮಾಡಿಲ್ಲ ಎಂದ ಉದ್ಯಮಿ ರಾಜ್ ಕುಂದ್ರಾ

- Advertisement -
- Advertisement -

’ತಮ್ಮ ಜೀವನದಲ್ಲಿ ಎಂದೂ ಕೂಡ ಅಶ್ಲೀಲ ಚಿತ್ರ ತಯಾರಿಕೆ ಮತ್ತು ವಿತರಣೆಯಲ್ಲಿ ಭಾಗಿಯಾಗಿಲ್ಲ ಎಂದ ಉದ್ಯಮಿ ರಾಜ್ ಕುಂದ್ರಾ ಹೇಳಿದ್ದಾರೆ. ಈ ವರ್ಷದ ಜುಲೈನಲ್ಲಿ ಅಶ್ಲೀಲ ಚಿತ್ರಗಳನ್ನು ತಯಾರಿಸುವುದು ಮತ್ತು ಮೊಬೈಲ್ ಆ್ಯಪ್‌ಗಳ ಮೂಲಕ ಅದನ್ನು ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌‌‌‌ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಬಂಧನಕ್ಕೆ ಒಳಗಾಗಿದ್ದರು.

ಪ್ರಕರಣದಲ್ಲಿ ಜಾಮೀನು ಪಡೆದಿರುವ ಉದ್ಯಮಿ ರಾಜ್ ಕುಂದ್ರಾ ಸೋಮವಾರ ಈ ಕುರಿತು ಮಾತನಾಡಿದ್ದಾರೆ. ತಮ್ಮ ಜೀವನದಲ್ಲಿ ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ವಿತರಣೆಯಲ್ಲಿ ಭಾಗಿಯಾಗಿಲ್ಲ. ಇದು ಒಂದು ಷಡ್ಯಂತ್ರ. ಮಾಧ್ಯಮಗಳು ಈಗಾಗಲೇ ನನ್ನನ್ನು ‘ತಪ್ಪಿತಸ್ಥ’ ಎಂದು ಘೋಷಿಸಿವೆ ಎಂದು ಹೇಳಿಕೊಂಡಿದ್ದಾರೆ.

“ನನ್ನ ಮೌನವನ್ನು ದೌರ್ಬಲ್ಯ ಎಂದುಕೊಂಡು ಹಲವು ಆಧಾರವಿಲ್ಲದ, ತಪ್ಪುದಾರಿಗೆಳೆಯುವ ಮತ್ತು ಬೇಜವಾಬ್ದಾರಿ ಹೇಳಿಕೆಗಳು ಮತ್ತು ಲೇಖನಗಳು ಬರುತ್ತಿವೆ. ಹೀಗಾಗಿ ನಾನು ಮಾತನಾಡುತ್ತಿದ್ದೇನೆ. ನಾನು ಎಂದಿಗೂ ಅಶ್ಲೀಲ ಚಿತ್ರ ತಯಾರಿಕೆ ಮತ್ತು ವಿತರಣೆಯಲ್ಲಿ ಭಾಗಿಯಾಗಿಲ್ಲ ಎಂದು ಹೇಳುವ ಮೂಲಕ ನನ್ನ ಮಾತು ಪ್ರಾರಂಭಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಚೆನ್ನೈ: ಪತ್ನಿಯ ಸಹಾಯದಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಯಂ ಘೋಷಿತ ದೇವಮಾನವನ ಬಂಧನ

“ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಈಗ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಹೆಚ್ಚಿನ ವಿಷಯಗಳನ್ನು ಸ್ಪಷ್ಟಪಡಿಸಲಾರೆ. ಆದರೆ ನಾನು ವಿಚಾರಣೆಯನ್ನು ಎದುರಿಸಲು ಸಿದ್ಧನಿದ್ದೇನೆ. ನ್ಯಾಯಾಂಗದಲ್ಲಿ ನನಗೆ ಸಂಪೂರ್ಣ ನಂಬಿಕೆಯಿದೆ. ಅಲ್ಲಿ ಸತ್ಯ ಗೆಲ್ಲುತ್ತದೆ” ಎಂದಿದ್ದಾರೆ.

ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ಅವುಗಳನ್ನು ಹಾಟ್‌ಶಾಟ್‌ ಸೇರಿದಂತೆ ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಸಾರ ಮಾಡುವ ಬಗ್ಗೆ, ಫೆಬ್ರವರಿಯಲ್ಲಿ ಮುಂಬಯಿಯ ಅಪರಾಧ ವಿಭಾಗದಲ್ಲಿ ಕುಂದ್ರಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಜುಲೈ 19 ರಂದು ಬಂಧಿಸಲಾಗಿತ್ತು.

ಎಫ್‌ಐಆರ್‌ನಲ್ಲಿ ನಟಿಯರಾದ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಅವರನ್ನು ಸಹ ಆರೋಪಿಗಳೆಂದು ಹೆಸರಿಸಲಾಗಿದೆ. ರಾಜ್ ಕುಂದ್ರಾಗೆ ಸೆಪ್ಟೆಂಬರ್‌ನಲ್ಲಿ ಜಾಮೀನು ನೀಡಲಾಗಿದೆ. ಪ್ರಕರಣದಲ್ಲಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕಳೆದ ವಾರ ಸುಪ್ರೀಂ ಕೋರ್ಟ್ ಬಂಧನದಿಂದ ರಕ್ಷಣೆ ನೀಡಿದೆ.


ಇದನ್ನೂ ಓದಿ: ಅಶ್ಲೀಲ ಚಿತ್ರ ತಯಾರಿಕೆ, ಪ್ರಸಾರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...