HomeಚಳವಳಿExplainer: ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆಯ ಸಾಧಕ-ಬಾಧಕಗಳು

Explainer: ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆಯ ಸಾಧಕ-ಬಾಧಕಗಳು

- Advertisement -
- Advertisement -

ಲೋಕಸಭೆಯಲ್ಲಿ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ 2021 ಅನ್ನು ವಿಪಕ್ಷಗಳ ವಿರೋಧದ ನಡುವೆಯೂ ಅಂಗೀಕರಿಸಲಾಗಿದೆ. ಈ ಮಸೂದೆಯು ಮತದಾರರ ಪಟ್ಟಿಯನ್ನು ಆಧಾರ್‌ ಜೊತಗೆ ಜೋಡಿಸುವ ಉದ್ದೇಶವನ್ನು ಹೊಂದಿದೆ. ಮಸೂದೆಯನ್ನು ಕಾನೂನು ಸಚಿವ ಕಿರಣ್ ರಿಜಿಜು ಅವರು ಮಂಡಿಸಿದ್ದು, ಮಸೂದೆಯ ಭಾಗವಾಗಿರುವ ವಿವಿಧ ಪ್ರಸ್ತಾವನೆಗಳನ್ನು ಕಾನೂನು ಮತ್ತು ಸಿಬ್ಬಂದಿಗಳ ಸ್ಥಾಯಿ ಸಮಿತಿಯು ಶಿಫಾರಸ್ಸು ಮಾಡಿದೆ. ಇದು ಚುನಾವಣಾ ವ್ಯವಸ್ಥೆಯನ್ನು ಶುದ್ಧೀಕರಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ. 

ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ-2021 ಎಂದರೇನು?

ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ-2021 ಮತದಾರರಾಗಿ ನೋಂದಾಯಿಸಲು ಬಯಸುವ ಜನರಿಂದ ಅವರ ಗುರುತನ್ನು ದೃಢಪಡಿಸಲು ಆಧಾರ್ ಸಂಖ್ಯೆಯನ್ನು ಪಡೆಯುವ ಅಧಿಕಾರವನ್ನು ಚುನಾವಣಾ ಅಧಿಕಾರಿಗಳಿಗೆ ನೀಡುತ್ತದೆ. ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು ದೃಢೀಕರಿಸುವುದಕ್ಕಾಗಿ ಈಗಾಗಲೇ  ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡಿರುವ ಜನರಿಂದಲೂ ಆಧಾರ್ ಸಂಖ್ಯೆಗಳನ್ನು ಪಡೆದುಕೊಳ್ಳಲು ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಈ ಮಸೂದೆ ಅವಕಾಶ ನೀಡುತ್ತದೆ. 

ಒಂದು ಕ್ಷೇತ್ರ ಅಥವಾ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಒಬ್ಬನೇ ವ್ಯಕ್ತಿಯು ಒಂದಕ್ಕಿಂತಲೂ ಹೆಚ್ಚು ಮತದಾರ ಗುರುತಿನ ಚೀಟಿಯನ್ನು ಹೊಂದುವುದನ್ನು ಇದು ತಡೆಯುತ್ತದೆ ಎಂದು ಹೇಳಲಾಗಿದೆ. 

ಮಸೂದೆ ಕುರಿತು ಮಾತನಾಡಿದ ಸಚಿವ ರಿಜಿಜು, ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡುವುದು ಸ್ವಯಂಪ್ರೇರಿತವಾಗಿರುತ್ತದೆ. ತಿದ್ದುಪಡಿ ಮಸೂದೆಯು “ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಯಾವುದೇ ಅರ್ಜಿಯನ್ನು ನಿರಾಕರಿಸುವಂತಿಲ್ಲ. ಆಧಾರ್‌ ನೀಡದ ಕಾರಣಕ್ಕಾಗಿ ಮತದಾರರ ಪಟ್ಟಿಯಲ್ಲಿನ ಯಾವುದೇ ನಮೂದುಗಳನ್ನು ಅಳಿಸಲಾಗುವುದಿಲ್ಲ. ಆಧಾರ್‌ ನೀಡಲು ವಿಫಲರಾದಂತಹ ಜನರು ಸೂಚಿಸಬಹುದಾದಂತೆ ಇತರ ದಾಖಲೆಗಳನ್ನು ಒದಗಿಸಲು ಅನುಮತಿಸಲಾಗುವುದು” ಎಂದು ಹೇಳಿದ್ದಾರೆ.

ತಿದ್ದುಪಡಿಗಳ ಅಡಿಯಲ್ಲಿ ಪ್ರಸ್ತಾಪಿಸಲಾದ ವಿಷಯಗಳು

ಈ ಮಸೂದೆಯ ಮೂಲಕ ಪ್ರಜಾಪ್ರತಿನಿಧಿ ಕಾಯಿದೆ 1950 ಮತ್ತು 1951 ರ ವಿವಿಧ ವಿಭಾಗಗಳಿಗೆ ತಿದ್ದುಪಡಿ ಮಾಡಲು ಸರ್ಕಾರ ಮುಂದಾಗಿದೆ. ಮಸೂದೆಯ ಉದ್ದೇಶ ಮತ್ತು ಕಾರಣಗಳ ಹೇಳಿಕೆಯು RP ಕಾಯಿದೆ 1950ರ ಸೆಕ್ಷನ್ 23ಕ್ಕೆ ತಿದ್ದುಪಡಿ ಮಾಡಿ, ಮತದಾರರ ಪಟ್ಟಿಯ ಡೇಟಾವನ್ನು ಆಧಾರ್‌ ಲಿಂಕ್ ಮಾಡಲು ಅನುಮತಿಸಲಾಗುತ್ತದೆ.

ಆರ್‌ಪಿ ಕಾಯಿದೆ, 1950ರ ಸೆಕ್ಷನ್ 14ಕ್ಕೆ ಮಾಡಲಾಗುವ ತಿದ್ದುಪಡಿಯು ಅರ್ಹ ಜನರು ಮತದಾರರಾಗಿ ನೋಂದಾಯಿಸಲು ನಾಲ್ಕು ಅರ್ಹತಾ ದಿನಾಂಕಗಳನ್ನು ಪಡೆಯಲು ಅವಕಾಶ ಮಾಡಿಕೊಡುತ್ತದೆ. ಉದಾ: ಪ್ರಸ್ತುತ ಜನವರಿ 1ನ್ನು ತೆಗೆದುಕೊಂಡರೆ. ಈಗಿನಂತೆ, ಜನವರಿ 1 ರಂದು ಅಥವಾ ಅದಕ್ಕಿಂತ ಮೊದಲು 18 ವರ್ಷ ತುಂಬುವ ಜನರು ಮತದಾರರಾಗಿ ನೋಂದಾಯಿಸಿಕೊಳ್ಳಬಹುದು. ಆದರೆ ಜನವರಿ 1 ರ ನಂತರ 18 ವರ್ಷ ವಯಸ್ಸಿನವರು ನೋಂದಣಿಗಾಗಿ ಇಡೀ ವರ್ಷ ಕಾಯುತ್ತಾರೆ. ಹೀಗಾಗಿ, ಈ ಮಸೂದೆಯು ಜನವರಿ 1 ನೇ ದಿನ, ಏಪ್ರಿಲ್ 1 ನೇ ದಿನ, ಜುಲೈ 1 ನೇ ದಿನ ಮತ್ತು ಅಕ್ಟೋಬರ್ 1 ನೇ ದಿನವನ್ನು ಅರ್ಹತಾ ದಿನಾಂಕಗಳಾಗಿ ನಿಗದಿ ಪಡಿಸಲು ಪ್ರಸ್ತಾಪಿಸುತ್ತದೆ.

ಆರ್‌ಪಿ ಆಕ್ಟ್, 1950ರ ಸೆಕ್ಷನ್ 20ರ ಮತ್ತು ಆರ್‌ಪಿ ಆಕ್ಟ್, 1951ರ ಸೆಕ್ಷನ್ 60ರ  ತಿದ್ದುಪಡಿಯು ಸೇವಾ ಮತದಾರರಿಗೆ ಚುನಾವಣೆಗಳಲ್ಲಿ ಲಿಂಗ-ತಟಸ್ಥ  ಮಾಡಲು ಪ್ರಯತ್ನಿಸುತ್ತದೆ. ತಿದ್ದುಪಡಿಯು ಕಾನೂನುಗಳನ್ನು ಲಿಂಗ-ತಟಸ್ಥಗೊಳಿಸಲು ‘ಹೆಂಡತಿ’ ಪದವನ್ನು ‘ಸಂಗಾತಿ’ ಎಂದು ಬದಲಿಸುತ್ತದೆ.

ಆರ್‌ಪಿ ಆಕ್ಟ್, 1950ರ ಸೆಕ್ಷನ್ 28 ರಲ್ಲಿ ಪ್ರಸ್ತಾಪಿಸಲಾದ ತಿದ್ದುಪಡಿಯು ಆಧಾರ್ ಸಂಖ್ಯೆಯನ್ನು ತಿಳಿಸುವ ರೂಪ ಮತ್ತು ವಿಧಾನ ಮತ್ತು ಆಧಾರ್ ಬದಲಿಗೆ ಒದಗಿಸಬೇಕಾದ ಪರ್ಯಾಯ ದಾಖಲೆಗಳ ಕುರಿತು ಸಾಕಷ್ಟು ಕಾರಣಗಳನ್ನು ಒದಗಿಸುವಿಕೆಯ ಬಗ್ಗೆ ಕೇಂದ್ರ ಸರ್ಕಾರವು ನಿಯಮಗಳನ್ನು ರೂಪಿಸಿದಾಗ ತಿಳಿಯುತ್ತದೆ ಎಂದು ಸ್ಪಷ್ಟಪಡಿಸುತ್ತದೆ. ಈ ನಿಟ್ಟಿನಲ್ಲಿ ಮತ್ತು ಅಧಿಕೃತ ಗೆಜೆಟ್‌ನಲ್ಲಿ ತಿದ್ದುಪಡಿಯನ್ನು ತಿಳಿಸುತ್ತದೆ.

ವಿರೋಧ, ಕಾನೂನು ಮತ್ತು ರಾಜಕೀಯ

ಮಸೂದೆಯನ್ನು ಪರಿಚಯಿಸುವ ಸಂದರ್ಭದಲ್ಲಿ, ಕಾನೂನು ಸಚಿವ ರಿಜಿಜು ಅವರು ಮತದಾರರ ಪಟ್ಟಿಯಿಂದ ನಕಲಿ ಮತದಾರರನ್ನು ತೆಗೆದುಹಾಕುವ ಅಗತ್ಯವಿರುವುದರಿಂದ ಅಸ್ತಿತ್ವದಲ್ಲಿರುವ ಕಾನೂನಿನಲ್ಲಿರುವ ಕೆಲವು ಲೋಪವನ್ನು ತೆಗೆದುಹಾಕಲು ಸರ್ಕಾರ ಪ್ರಯತ್ನಿಸಿದೆ ಎಂದು ಒತ್ತಿ ಹೇಳಿದ್ದಾರೆ. ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವ ನಿಬಂಧನೆಯು “ಕಡ್ಡಾಯವಾಗಿರುವುದಿಲ್ಲ. ಆದರೆ ಸ್ವಯಂಪ್ರೇರಿತವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ. ಆದರೆ, ವಿರೋಧ ಪಕ್ಷಗಳ ಸಂಸದರು, ಈ ಮಸೂದೆಯು ಜನರ ಮೂಲಭೂತ ಮತ್ತು ಶಾಸನಬದ್ಧ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಆಧಾರ್ ಕೇವಲ ವಾಸಸ್ಥಳದ ಪುರಾವೆಯಾಗಿದೆ. ಅದು ಪೌರತ್ವದ ಪುರಾವೆಯಲ್ಲ. ಇದಲ್ಲದೆ, ನಾಗರಿಕರಿಗೆ ಮಾತ್ರ ಮತ ಚಲಾಯಿಸಲು ಅವಕಾಶ ಇದ್ದಾಗ, ಮತದಾರರ ಪಟ್ಟಿಗ ಆಧಾರ್ ಸಂಖ್ಯೆ ಜೋಡಿಸುವುದು ನಕಲಿ ಮತದಾರರನ್ನು ತಡೆಯಲು ಹೇಗೆ ಸಾಧ್ಯವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. 

ಇದು ಪುಟ್ಟಸ್ವಾಮಿ ಪ್ರಕರಣ (ಗೌಪ್ಯತೆಯ ಹಕ್ಕು)ದಲ್ಲಿ ಆಧಾರ್‌ ಬಗ್ಗೆ ಸುಪ್ರೀಂ ನೀಡಿದ್ದ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದಾರೆ. 

ಆಧಾರ್‌ ಒಂದು ಗುರುತಿನ ಚೀಟಿ ಮಾತ್ರವೇ ಆಗಿದ್ದು, ಇದನ್ನು ಮತದಾರರ ಪಟ್ಟಿಗೆ ಲಿಂಕ್‌ ಮಾಡುವುದರಿಂದ ಭಾರತದ ಪೌರತ್ವವನ್ನು ಪಡೆಯದೇ ಇರುವವರೂ ಕೂಡ ಮತದಾನದ ಹಕ್ಕನ್ನು ಪಡೆಯುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಇದು, ಭಾರತೀಯ ಪ್ರಜೆಗಳ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ಹೇಳಲಾಗುತ್ತಿದೆ. 

ವಿರೋಧಕ್ಕೆ ಕಾರಣಗಳು ಹೀಗಿವೆ:

ಆಧಾರ್ ಪೌರತ್ವದ ಪುರಾವೆ ಅಲ್ಲ. ಮತದಾರರ ಪಟ್ಟಿಯಿಂದ ನಾಗರಿಕರ ಹೆಸರನ್ನು ಪರಿಶೀಲಿಸಲು ಅಥವಾ ಅಳಿಸಲು ಕಾನೂನುಬದ್ಧ ಆಧಾರವಾಗಿ ಆಧಾರ್‌ಅನ್ನು ಬಳಸಲಾಗುವುದಿಲ್ಲ.
ಆಧಾರ್ ಬಳಸಿ ಮತದಾರರ ಪಟ್ಟಿಯನ್ನು ಪರಿಶೀಲಿಸುವ ಹಿಂದಿನ ಪ್ರಯತ್ನಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ನಡೆದಿದ್ದು, ಈ ಪ್ರಯತ್ನವು ಮತದಾರರಿಗೆ ಅನ್ಯಾಯ ಮತ್ತು ಸಾಮೂಹಿಕ ಅಮಾನ್ಯೀಕರಣಕ್ಕೆ ಕಾರಣವಾಗಿವೆ. 2015 ರಲ್ಲಿ, ರಾಷ್ಟ್ರೀಯ ಚುನಾವಣಾ ಪಟ್ಟಿ ಶುದ್ಧೀಕರಣ ಮತ್ತು ದೃಢೀಕರಣ ಕಾರ್ಯಕ್ರಮದ (ಎನ್‌ಇಆರ್‌ಪಿಎಪಿ) ಮೂಲಕ ಮತದಾರರ ಪಟ್ಟಿಗೆ ಆಧಾರ್  ಜೋಡಿಸುವ ಕಾರ್ಯಕ್ರಮವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಈ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಇದೀಗ ಮತ್ತೆ ಅಂತದ್ದೇ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಇದು ಆಧಾರ್ ಲಿಂಕ್ ಕುರಿತು ಸುಪ್ರೀಂ ಕೋರ್ಟ್‌ನ ಆದೇಶಗಳ ಉಲ್ಲಂಘನೆಯಾಗಿದೆ.

MNREGA ಅಥವಾ PDS ಫಲಾನುಭವಿಗಳ ಡೇಟಾವನ್ನೂ ಶುದ್ಧಗೊಳಿಸಲು ಆಧಾರ್ ಅನ್ನು ಲಿಂಕ್‌ ಮಾಡಲು ಪ್ರಯತ್ನಿಸಲಾಗಿತ್ತು. ಆದರೆ, ಅದು ನಿಜವಾದ ಫಲಾನುಭವಿಗಳನ್ನು ಅಳಿಸಲು ಕಾರಣವಾಯಿತು. ಅಲ್ಲದೆ, ನೈಜ ಫಲಾನುಭವಿಗಳನ್ನು ಕಲ್ಯಾಣ ಯೋಜನೆಗಳಿಂದ ಹೊರಗಿಡಲು ಕಾರಣವಾಯಿತು.

ಆಧಾರ್ ಡೇಟಾಬೇಸ್ ಅನೇಕ ಡೇಟಾ ಗುಣಮಟ್ಟದ ಸಮಸ್ಯೆಗಳನ್ನು ಹೊಂದಿದ್ದು, ಅದು ಮತದಾರರ ಡೇಟಾದ ಗುಣಮಟ್ಟ ಮತ್ತು ನಂಬಿಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇದು ವಂಚನೆಗಳಿಗೆ ಹೆಚ್ಚು ಕಾರಣವಾಗುತ್ತದೆ. ವಾಸ್ತವವಾಗಿ, ವಿವಾದದಲ್ಲಿ ಮುಳುಗಿರುವ ಆಧಾರ್ ಯೋಜನೆಗೆ ನ್ಯಾಯಸಮ್ಮತತೆಯನ್ನು ಒದಗಿಸುವ ಮಾರ್ಗವಾಗಿ ಯುಐಡಿಎಐ ಈ ಪ್ರಸ್ತಾಪಕ್ಕಾಗಿ ತೀವ್ರವಾಗಿ ಲಾಬಿ ನಡೆಸುತ್ತಿದೆ ಎಂದು ಕಂಡುಬಂದಿದೆ.

ಮತದಾರರ ಡೇಟಾಬೇಸ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದು ಮತದಾರರ ಗೌಪ್ಯತೆಯ ಮೇಲಿನ ದಾಳಿಯಾಗಿದೆ. ಇದು ಮತದಾರರ ಪ್ರೊಫೈಲ್‌ಗಳ ಮೇಲೆ ಕಣ್ಗಾವಲು ಸಕ್ರಿಯಗೊಳಿಸುತ್ತದೆ. ಇದು ವಿಶೇಷವಾಗಿ ಅಲ್ಪಸಂಖ್ಯಾತರಿಗೆ ಹೆಚ್ಚು ಹಾನಿಕಾರಕವಾಗಿದೆ. ಹಿಂದಿನ ಕೆಲವು ಅನುಭವಗಳು ಸೂಚಿಸುವಂತೆ, ಪಕ್ಷ ಅಥವಾ ಅದರ ಸಿದ್ಧಾಂತವನ್ನು ವಿರೋಧಿಸುವವರನ್ನು ಹಕ್ಕುಚ್ಯುತಿಗೊಳಿಸಲು ಇದನ್ನು ಬಳಸಬಹುದು.

ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆಗಳನ್ನು ಲಿಂಕ್ ಮಾಡುವುದು ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವಾಗಿರುವ ಮತದಾನದ ಗೌಪ್ಯತೆಯನ್ನು ಹಾಳುಮಾಡಲು ದಾರಿ ಮಾಡಿಕೊಡುತ್ತದೆ.

ಪುಟ್ಟಸ್ವಾಮಿ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಪ್ರಮಾಣಾನುಗುಣ ಪರೀಕ್ಷೆಯನ್ನು ಪೂರೈಸದ ಕಾರಣ ಆಧಾರ್ ಮತ್ತು ವೋಟರ್ ಐಡಿಯನ್ನು ಲಿಂಕ್ ಮಾಡುವುದು ಅಸಂವಿಧಾನಿಕವಾಗಿದೆ. ಇದು ಪ್ರಮಾಣಾನುಗುಣವಾಗಿರಲು, ಕಾನೂನುಬದ್ಧ ಗುರಿಯನ್ನು ಅನುಸರಿಸಲು ಅಗತ್ಯವಾದ ಸಾಧನವಾಗಿದೆ ಎಂದು ಸರ್ಕಾರವು ತೋರಿಸಬೇಕಾಗಿದೆ.

ಮತದಾರರ ಡೇಟಾದಲ್ಲಿ ಎಷ್ಟು ನಕಲಿ ದೋಷಗಳು ಅಸ್ತಿತ್ವದಲ್ಲಿವೆ ಎಂಬುದನ್ನು ತೋರಿಸಲು ಸರ್ಕಾರದ ಬಳಿ ಅಗತ್ಯ ಪುರಾವೆಗಳೂ ಇಲ್ಲ ಅಥವಾ ಮತದಾರರ ಐಡಿಯೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವುದರಿಂದ ಅಂತಹ ದೋಷಗಳನ್ನು ಕಡಿಮೆ ಮಾಡುತ್ತದೆ ಎಂದು ತೋರಿಸುವಂತಹ ಯಾವುದೇ ಪುರಾವೆಗಳನ್ನೂ ಸರ್ಕಾರ ಇಟ್ಟುಕೊಂಡಿಲ್ಲ.

ಈಗಿರುವ ಕಾನೂನುಗಳು ಏನು ಹೇಳುತ್ತವೆ

RPAಯ ಸೆಕ್ಷನ್ 15ರ ಪ್ರಕಾರ ಪ್ರತಿ ಕ್ಷೇತ್ರಕ್ಕೆ ಮತದಾರರ ಪಟ್ಟಿಯನ್ನು ಹೊಂದಿರಬೇಕು ಎಂದು ಹೇಳುತ್ತದೆ. ಇದನ್ನು ಚುನಾವಣಾ ಆಯೋಗದ ಮೇಲ್ವಿಚಾರಣೆ, ನಿರ್ದೇಶನ ಮತ್ತು ನಿಯಂತ್ರಣದ ಅಡಿಯಲ್ಲಿ ಈ ಕಾಯಿದೆಯ ನಿಬಂಧನೆಗಳಿಗೆ ಅನುಗುಣವಾಗಿ ತಯಾರಿಸಲಾಗುತ್ತದೆ.

ಸೆಕ್ಷನ್ 16 ಹೇಳುವಂತೆ ಒಬ್ಬ ವ್ಯಕ್ತಿಯು ಭಾರತದ ಪ್ರಜೆಯಾಗಿಲ್ಲದಿದ್ದರೆ ಮತದಾರರ ಪಟ್ಟಿಯಲ್ಲಿ ನೋಂದಣಿಗೆ ಅನರ್ಹನಾಗುತ್ತಾನೆ.

ಸೆಕ್ಷನ್ 17ರ ಪ್ರಕಾರ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಗೆ ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಯಾವುದೇ ವ್ಯಕ್ತಿಗೆ ಅರ್ಹತೆ ಇರುವುದಿಲ್ಲ.

ಸೆಕ್ಷನ್ 19ರ ಪ್ರಕಾರ ಅರ್ಹತಾ ದಿನಾಂಕದಂದು 18 ವರ್ಷಕ್ಕಿಂತ ಕಡಿಮೆಯಿಲ್ಲದ ವಯಸ್ಸಿನ ಮತ್ತು ಸಾಮಾನ್ಯವಾಗಿ ಕ್ಷೇತ್ರದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಅರ್ಹರಾಗಿರುತ್ತಾರೆ.


ಇದನ್ನೂ ಓದಿ: ಓಟರ್‌ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆ ಅಂಗೀಕರಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...