Homeಮುಖಪುಟಗುಂಪು ಹಿಂಸಾಚಾರ ವಿರೋಧಿ ಮಸೂದೆ ಅಂಗೀಕರಿಸಿದ ಜಾರ್ಖಂಡ್‌

ಗುಂಪು ಹಿಂಸಾಚಾರ ವಿರೋಧಿ ಮಸೂದೆ ಅಂಗೀಕರಿಸಿದ ಜಾರ್ಖಂಡ್‌

- Advertisement -
- Advertisement -

ಜಾರ್ಖಂಡ್ ವಿಧಾನಸಭೆಯು ಮಂಗಳವಾರದಂದು ‘ಗುಂಪು ಹತ್ಯೆ ಮತ್ತು ಗುಂಪು ಹಿಂಸಾಚಾರ’ದ ವಿರುದ್ಧ ಮಸೂದೆಯನ್ನು ಅಂಗೀಕರಿಸಿದೆ. ಸುದ್ದಿ ಸಂಸ್ಥೆ ಎಎನ್‌ಐ, “ಜಾರ್ಖಂಡ್‌ ಸರ್ಕಾರ ‘ಗುಂಪು ಹಿಂಸಾಚಾರ ಮತ್ತು ಗುಂಪು ಹತ್ಯೆ ತಡೆ ಮಸೂದೆ-2021’ ಕಾಯ್ದೆಯನ್ನು ಅಂಗೀಕರಿಸಿದೆ” ಎಂದು ವರದಿ ಮಾಡಿದೆ. ಮಾಧ್ಯಮ ವರದಿಗಳ ಪ್ರಕಾರ, ಮಸೂದೆಯು ಸಾಂವಿಧಾನಿಕ ಹಕ್ಕುಗಳ ಪರಿಣಾಮಕಾರಿ ರಕ್ಷಣೆ ಮತ್ತು ಗುಂಪು ಹಿಂಸಾಚಾರವನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ.

ಮಸೂದೆಯು ಗುಂಪು ಹಲ್ಲೆ ಅಥವಾ ಅದರಲ್ಲಿ ಭಾಗವಹಿಸಿದ ತಪ್ಪಿತಸ್ಥರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ಮತ್ತು 25 ಲಕ್ಷ ರೂಪಾಯಿ ದಂಡವನ್ನು ವಿಧಿಸುತ್ತದೆ ಎಂದು ವರದಿಗಳು ಉಲ್ಲೇಖಿಸಿವೆ. ಈ ಬೆಳವಣಿಗೆಯೊಂದಿಗೆ, ಗುಂಪು ಹಲ್ಲೆಯ ವಿರುದ್ದ ಮಸೂದೆ ಅಂಗೀಕರಿಸಿರುವ ಮೂರನೇ ರಾಜ್ಯವಾಗಿ ಜಾರ್ಖಂಡ್ ಹೊರ ಹೊಮ್ಮಿದೆ. ಈ ಹಿಂದೆ ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನ ರಾಜ್ಯಗಳು ಗುಂಪು ಹಿಂಸಾಚಾರ ವಿರೋಧಿ ಮಸೂದೆಯನ್ನು ಅಂಗೀಕರಿಸಿದ್ದವು.

ಇದನ್ನೂ ಓದಿ:Explainer: ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆಯ ಸಾಧಕ-ಬಾಧಕಗಳು

ಉದ್ದೇಶಿತ ವಿಧೇಯಕವು ಲಿಂಚಿಂಗ್ ತಡೆಗಟ್ಟುವಿಕೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಮನ್ವಯಗೊಳಿಸಲು ನೋಡಲ್ ಅಧಿಕಾರಿ ಎಂದು ಕರೆಯಲಾಗುವ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೋಲೀಸ್ ಶ್ರೇಣಿಗಿಂತ ಕಡಿಮೆಯಿಲ್ಲದ ರಾಜ್ಯ ಸಂಯೋಜಕರನ್ನು ನೇಮಿಸಲು ಅವಕಾಶ ನೀಡುತ್ತದೆ. ಈ ನೋಡಲ್ ಅಧಿಕಾರಿಯನ್ನು ಪೊಲೀಸ್ ಮಹಾನಿರ್ದೇಶಕರು ನೇಮಿಸುತ್ತಾರೆ.

ಸಾಂವಿಧಾನಿಕ ನಿಯಮಗಳಿಗೆ ಅನುಸಾರವಾಗಿ ಕಾನೂನಾಗಲು ಈ ಮಸೂದೆಯನ್ನು ಈಗ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುವುದು ಎನ್ನಲಾಗಿದೆ.

ಸದನದಲ್ಲಿ ಮಸೂದೆಯನ್ನು ಮಂಡಿಸಿದ ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅಲಂಗೀರ್ ಆಲಂ, “ಜನರಿಗೆ ಪರಿಣಾಮಕಾರಿ ಭದ್ರತೆ ಒದಗಿಸುವುದು, ಅವರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುವುದು ಮತ್ತು ಗುಂಪು ಹಿಂಸಾಚಾರವನ್ನು ತಡೆಯುವುದು ಇದರ ಮುಖ್ಯ ಉದ್ದೇಶವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

ಮಸೂದೆಯ ಮೇಲಿನ ಚರ್ಚೆಯ ಸಮಯದಲ್ಲಿ, ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ ಹಲವಾರು ತಿದ್ದುಪಡಿಗಳನ್ನು ಮಂಡಿಸಿತು. ಅದನ್ನು ಸರ್ಕಾರವು ಧ್ವನಿ ಮತದ ಮೂಲಕ ಬದಿಗಿಟ್ಟಿತು. ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಸರ್ಕಾರ ತರಾತುರಿಯಲ್ಲಿ ಮಸೂದೆಯನ್ನು ತಂದಿದೆ ಎಂದು ಬಿಜೆಪಿ ನಾಯಕ ಸಿಪಿ ಸಿಂಗ್ ಆರೋಪಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಗುಂಪು ಹಿಂಸಾಚಾರದ ಅನೇಕ ಪ್ರಕರಣಗಳು ವರದಿಯಾಗಿವೆ. 2019 ರಲ್ಲಿ 24 ವರ್ಷದ ತಬ್ರೇಜ್ ಅನ್ಸಾರಿಯನ್ನು ಸೆರೈಕೆಲಾ ಖಾರ್ಸಾವನ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯ ಮೇಲೆ ಕಟ್ಟಿಹಾಕಿ ಥಳಿಸಿದಾಗ ರಾಜ್ಯದಲ್ಲಿ ಗುಂಪು ಹತ್ಯೆಯ ಘಟನೆಗಳು ಮುನ್ನೆಲೆಗೆ ಬಂದಿದ್ದವು. ಈ ಥಳಿತದಿಂದಾಗಿ ಅವರು ಸಾವನ್ನಪ್ಪಿದ್ದರು.

ಬುಡಕಟ್ಟು ರಾಜ್ಯವಾದ ಜಾರ್ಖಂಡ್‌ನಲ್ಲಿ ವಾಮಾಚಾರ ನಡೆಸುತ್ತಿದ್ದಾರೆ ಎಂದು ಶಂಕಿಸಿ ಗುಂಪು ಹತ್ಯೆ ಮಾಡಿದ ಘಟನೆಗಳೂ ನಡೆದಿವೆ. ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಗುಂಪು ಹಿಂಸಾಚಾರದ ಘಟನೆಗಳನ್ನು ಖಂಡಿಸಿ, ಅದರ ವಿರುದ್ಧ ಕಾನೂನು ತರುವುದಾಗಿ ಭರವಸೆ ನೀಡಿದ್ದರು.

ಇದನ್ನೂ ಓದಿ:ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿವೆ 26 ಹೊಸ ಮಸೂದೆ: ಇಲ್ಲಿದೆ ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...