Homeಮುಖಪುಟರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರೆಕ್ ಒಬ್ರಿಯನ್ ಎರಡನೇ ಬಾರಿಗೆ ಅಮಾನತು

ರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರೆಕ್ ಒಬ್ರಿಯನ್ ಎರಡನೇ ಬಾರಿಗೆ ಅಮಾನತು

- Advertisement -
- Advertisement -

ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಡೆರೆಕ್ ಒಬ್ರಿಯನ್ ಅವರನ್ನು ಸಂಸತ್ ಅಧಿವೇಶನದ ಉಳಿದ ಅವಧಿಗೆ ಪಾಲ್ಗೊಳ್ಳದಂತೆ ಮಂಗಳವಾರ ಅಮಾನತುಗೊಳಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಚುನಾವಣಾ ಸುಧಾರಣೆಗಳ ಕುರಿತಾದ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಒಬ್ರಿಯಾನ್ ಸಂಸತ್ತಿನ ನಿಯಮ ಪುಸ್ತಕದ ಪ್ರತಿಯನ್ನು ಅಧ್ಯಕ್ಷರ ಮೇಲೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಅಮಾನತುಗೊಳಿಸುವಿಕೆಗೆ ಪ್ರಸ್ತಾವನೆಯನ್ನು ಮಂಡಿಸಿದ್ದರು.

ಸದನದಲ್ಲಿ ಪ್ರತಿಪಕ್ಷಗಳ ಸಂಸದರ ಅನುಪಸ್ಥಿತಿಯಲ್ಲಿಯೇ ಸಂಸದ ಡೆರೆಕ್ ಒಬ್ರಿಯನ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಅಂಗೀಕರಿಸಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸರ್ಕಾರದಿಂದ ನಿರ್ಬಂಧ

ರಾಜ್ಯಸಭೆಯಲ್ಲಿ ಮಂಗಳವಾರದ ಕಲಾಪದ ವೇಳೆ, ಮತದಾರರ ಗುರುತಿನ ಚೀಟಿಗಳೊಂದಿಗೆ ಆಧಾರ್ ಕಾರ್ಡ್‌ ಲಿಂಕ್ ಮಾಡುವ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ, 2021 ರ ನಿಬಂಧನೆಯ ವಿರುದ್ಧ ವಿರೋಧ ಪಕ್ಷದ ಸಂಸದರು ಸದನದ ಬಾವಿಯಲ್ಲಿ ಇಳಿದು ಪ್ರತಿಭಟನೆ ನಡೆಸುತ್ತಿದ್ದರು.

ಈ ವೇಳೆ ಒಬ್ರಿಯನ್ ಸೇರಿದಂತೆ ವಿರೋಧ ಪಕ್ಷಗಳ ಸದಸ್ಯರು ಮಸೂದೆಯ ಮೇಲೆ ಮತಗಳ ವಿಭಜನೆಗೆ ಒತ್ತಾಯಿಸಿದ್ದರು. ಆದರೆ ರಾಜ್ಯಸಭೆಯ ಉಪ ಅಧ್ಯಕ್ಷ ಹರಿವಂಶ್ ಅವರು ಧ್ವನಿ ಮತದ ಮೂಲಕ ಮಸೂದೆ ಅಂಗೀಕರಿಸಿದ್ದರು. ಕಾಂಗ್ರೆಸ್, ಟಿಎಂಸಿ, ಎಎಪಿ, ಶಿವಸೇನೆ, ಎಡಪಕ್ಷಗಳು, ಆರ್‌ಜೆಡಿ, ಡಿಎಂಕೆ, ಸಮಾಜವಾದಿ ಪಕ್ಷ ಮತ್ತು ಬಿಎಸ್‌ಪಿ ಸೇರಿದಂತೆ ಪ್ರತಿಪಕ್ಷಗಳು ತಮಗೆ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ಆರೋಪಿಸಿ ಸಭಾತ್ಯಾಗ ಮಾಡಿದ್ದವು.

ಈ ವೇಳೆ ಡೆರೆಕ್ ಒಬ್ರಿಯನ್ ಅವರು ಅಧ್ಯಕ್ಷರ ಕಡೆಗೆ ನಿಯಮ ಪುಸ್ತಕದ ಪ್ರತಿಯನ್ನು ಅಧ್ಯಕ್ಷರ ಮೇಲೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಆರೋಪ ನಿರಾಕರಿಸಿದ ಸಂಸದ “ ನಿಜವಾಗಿಯೂ ನಾನು ನಿಯಮ ಪುಸ್ತಕವನ್ನು ಎಸೆದಿದ್ದೇನೆ ಎಂದು ಯಾರು ಹೇಳಿದರು? ಆ ದೃಶ್ಯಗಳನ್ನು ನನಗೆ ತೋರಿಸಿ”ಎಂದು ಕೇಳಿದ್ದರು.

“ನೀವು ನನ್ನನ್ನು ಸದಸನದಿಂದ ಅಮಾನತುಗೊಳಿಸಬಹುದು, ನೀವು ನನ್ನನ್ನು ಮೌನಗೊಳಿಸಲು ಸಾಧ್ಯವಿಲ್ಲ” ಎಂದು ಡೆರೆಕ್ ಒಬ್ರಿಯನ್ ಹೇಳಿದ್ದಾರೆ. ಜೊತೆಗ ಕಳೆದ ಬಾರಿ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿದಕ್ಕಾಗಿ ಅಮಾನತು ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ.

ಆಗಸ್ಟ್‌ನಲ್ಲಿ ನಡೆದ ಮುಂಗಾರು ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ಮತ್ತು ಹಿಂಸಾಚಾರದ ಆರೋಪದ ಮೇಲೆ 12 ಸಂಸದರನ್ನು ನವೆಂಬರ್ 29 ರಂದು ಅಮಾನತುಗೊಳಿಸಲಾಗಿತ್ತು. ಕಳೆದ ಎರಡು ವಾರಗಳಿಂದ ಹದಿನೈದು ಪ್ರತಿಪಕ್ಷಗಳು ಸಂಸದರ ಅಮಾನತು ವಿರೋಧಿಸಿ ಪ್ರತಿಭಟನೆ ನಡೆಸುತ್ತಿವೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...