Homeಕರ್ನಾಟಕಬೆಂಗಳೂರು: ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲು ಬಿಎಂಟಿಸಿ ನಿರ್ಧಾರ

ಬೆಂಗಳೂರು: ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲು ಬಿಎಂಟಿಸಿ ನಿರ್ಧಾರ

- Advertisement -
- Advertisement -

ಬೆಂಗಳೂರಿನಲ್ಲಿರುವ ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡಲು ವನಿತಾ ಸಂಗಾತಿ ಯೋಜನೆ ಅಡಿಯಲ್ಲಿ ಉಚಿತ ಬಸ್‌ ಪಾಸ್‌ ನೀಡಲು ಸರ್ಕಾರ ಮುಂದಾಗಿದೆ. ಮುಂದಿನ ತಿಂಗಳಿಂದ ಪಾಸ್ ದೊರೆಯಲಿದ್ದು, ಅರ್ಹರು ಅರ್ಜಿ ಸಲ್ಲಿಸಲು ಬಿಎಂಟಿಸಿ ಅರ್ಜಿ ಆಹ್ವಾನಿಸಿದೆ.

ಗಾರ್ಮೆಂಟ್ಸ್‌ಗಳಲ್ಲಿ ದುಡಿಯುವ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ಉಚಿತ ಬಸ್‌ ನೀಡುವುದಾಗಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮಂಡನೆಯ ಸಂದರ್ಭದಲ್ಲಿ ಘೋಷಿಸಿದ್ದರು. ಇದೀಗ, ಅವರ ಭರವಸೆ ಜಾರಿಗೆ ಬಂದಿದ್ದು, ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆಗಾಗಿ ಬಿಎಂಟಿಸಿ ಅರ್ಜಿ ಆಹ್ವಾನಿಸಿದೆ.

ನಗರದಲ್ಲಿ ಸುಮಾರು 850ಕ್ಕಿಂತಲೂ ಹೆಚ್ಚಿನ ಗಾರ್ಮೆಂಟ್ಸ್ ಕಾರ್ಖಾನೆಗಳಿವೆ. ಈ ಎಲ್ಲಾ ಕಾರ್ಖಾನೆಗಳಲ್ಲಿ ಸುಮಾರು 3 ಲಕ್ಷಕ್ಕಿಂತಲೂ ಹೆಚ್ಚಿನ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ, ಶೇ.80 ಕ್ಕಿಂತ ಹೆಚ್ಚು ಕಾರ್ಮಿಕರು ಮಹಿಳೆಯರಾಗಿದ್ದಾರೆ. ಈ ಎಲ್ಲಾ ಮಹಿಳಾ ಕಾರ್ಮಿಕರು ಪ್ರತಿ ನಿತ್ಯ ತಮ್ಮ ಕರ್ತವ್ಯ ಸ್ಥಳಕ್ಕೆ ಹೋಗಲು ಹಾಗೂ ವಾಸಸ್ಥಳಕ್ಕೆ ಹಿಂದಿರುಗಲು ಖಾಸಗಿ ಬಸ್ಸು, ಆಟೋ ಹಾಗೂ ಇತರೆ ಖಾಸಗಿ ಸಂಸ್ಥೆಯ ವಾಹನಗಳನ್ನು ಹೆಚ್ಚಾಗಿ ಅವಲಂಬಿಸಿರುವುದು ಕಂಡುಬಂದಿರುತ್ತದೆ. ಅವರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲು ಹಾಗೂ ಆರ್ಥಿಕ ಸಹಾಯವನ್ನು ಮಾಡಲು ‘ವನಿತಾ ಸಂಗಾತಿ’ ಯೋಜನೆಯಡಿಯಲ್ಲಿ ಉಚಿತವಾಗಿ ಮಾಸಿಕ ಬಸ್‌ ಪಾಸುಗಳನ್ನು ಜನವರಿ-22 ರಿಂದ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ಇದನ್ನೂ ಓದಿ: ಐತಿಹಾಸಿಕ ನಿರ್ಧಾರ:ಟ್ರಾನ್ಸ್‌ಜೆಂಡರ್‌ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆ

’ವನಿತಾ ಸಂಗಾತಿ’ ಪಾಸ್ ಪಡೆಯಲು ಬಯಸುವ ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರು, ತಾವು ಕರ್ತವ್ಯ ನಿರ್ವಹಿಸುವ ಗಾರ್ಮೆಂಟ್ಸ್‌ ಕಾರ್ಖಾನೆಯ ಮಾಲೀಕರಿಗೆ ಮನವಿ ಸಲ್ಲಿಸಬೇಕು. ಮಾಲೀಕರು ಅರ್ಜಿ ಸಲ್ಲಿಸಿರುವ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಇ-ಮೇಲ್‌ ವಿಳಾಸ [email protected] ಗೆ ಸಲ್ಲಿಸಬೇಕು.

ಅರ್ಜಿ ಪರಿಶೀಲಿಸಿದ ಬಳಿಕ ಅರ್ಹ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಒದಗಿಸುತ್ತದೆ ಎಂದು ಸಂಸ್ಥೆ ಹೇಳಿದೆ. ವನಿತಾ ಸಂಗಾತಿ ಪಾಸುಗಳನ್ನು ಪಡೆದ ಮಹಿಳಾ ಕಾರ್ಮಿಕರು ಸಂಸ್ಥೆಯ ಎಲ್ಲಾ ಸಾಮಾನ್ಯ ಸೇವೆಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದೆ.

ಬಿಎಂಟಿಸಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸ್ವೀಕರಿಸುವ ಪಟ್ಟಿಗನುಸಾರವಾಗಿ, ಗಾರ್ಮೆಂಟ್ಸ್‌ ಮಾಲೀಕರಿಂದ ಅವ‍ಶ್ಯ ದಾಖಲೆಗಳ ಪ್ರತಿಗಳನ್ನು (ಹಾರ್ಡ್‌ ಕಾಫಿ) ಹಾಗೂ ಗಾರ್ಮೆಂಟ್ಸ್‌ ಮಾಲೀಕರ ಪಾಲಿನ ಮೊತ್ತ ಶೇ.40 ರಷ್ಟನ್ನು ಪಡೆದು (ಆರ್‌.ಟಿ.ಜಿ.ಎಸ್‌/ ಎನ್.ಇ.ಎಫ್‌.ಟಿ ಮೂಲಕ), ವನಿತಾ ಸಂಗಾತಿ ಪಾಸುಗಳನ್ನು ಕೆಂಪೇಗೌಡ ಬಸ್‌ ನಿಲ್ದಾಣ ಪಾಸು ಕೌಂಟರ್‌ನಿಂದ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.


ಇದನ್ನೂ ಓದಿ: ಕಂಪೆನಿಯ ಹೊಸ ನೀತಿಗಳ ವಿರುದ್ಧ ಸಿಡಿದೆದ್ದ ‘ಅರ್ಬನ್ ಕಂಪನಿ’ಯ ಮಹಿಳಾ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...