Homeಮುಖಪುಟಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸುಖಿಧಾಂಗ್ ಗ್ರಾಮದ ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಅಡುಗೆಯವರಾಗಿ ಕೆಲಸಕ್ಕೆ ಸೇರಿದ್ದು, ಆಕೆ ದಲಿತ ಸಮುದಾಯದವರು ಎಂದು ‘ಮೇಲ್ಜಾತಿ’ಗೆ ಸೇರಿದ ಹಲವಾರು ವಿದ್ಯಾರ್ಥಿಗಳು ಅವರು ತಯಾರಿಸಿದ ಆಹಾರವನ್ನು ತಿನ್ನಲು ನಿರಾಕರಿಸಿರುವ ಘಟನೆ ನಡೆದಿದೆ.

ನವೆಂಬರ್ 25 ರಂದು ದಲಿತ ಸಮುದಾಯದ ಸುನಿತಾ ಅವರಿಗೆ ’ಭೋಜನ್ ಮಾತಾ’ (ಅಡುಗೆಯವರು) ಆಗಿ ಕೆಲಸ ಪಡೆದರು. ಆಕೆಗೆ ಮಾಸಿಕ ವೇತನವು 3,000 ರೂಪಾಯಿ ಆಗಿದೆ. ತನ್ನ ಇಬ್ಬರು ಮಕ್ಕಳು ಮತ್ತು ಅನಾರೋಗ್ಯಕ್ಕೆ ತುತ್ತಾಗಿರುವ ನಿರುದ್ಯೋಗಿ ಪತಿಯನ್ನು ಪೋಷಿಸಲು ಈ ಕೆಲಸ ತುಂಬಾ ಮುಖ್ಯವಾಗಿತ್ತು ಎನ್ನುತ್ತಾರೆ.

ಸುನೀತಾ ಅವರು ಡಿಸೆಂಬರ್ 14 ರಂದು ಶಾಲೆಯಲ್ಲಿ ಅಡುಗೆ ಮಾಡಿದ ತೊಂದರೆಗಳು ಆರಂಭವಾಗಿವೆ. ಈ ಮೇಲ್ಜಾತಿ’ಗೆ ವಿದ್ಯಾರ್ಥಿಗಳ ಪೋಷಕರು ಸುನೀತಾ ತಮ್ಮ ಮಕ್ಕಳಿಗೆ ಅಡುಗೆ ಮಾಡಿದ್ದರಿಂದ ಆಕ್ರೋಶಗೊಂಡಿದ್ದಾರೆ. ಮಾತ್ರವಲ್ಲದೆ ಅವರ ನೇಮಕಾತಿಯನ್ನು ಪ್ರಶ್ನಿಸಿದ್ದಾರೆ. ಶಾಲೆಯಲ್ಲಿ ತಯಾರಿಸಿದ ಊಟವನ್ನು ತಿನ್ನುವುದರಿಂದ ತಪ್ಪಿಸಲು ವಿದ್ಯಾರ್ಥಿಗಳು ಪ್ರತಿದಿನ ತಾವೇ ಊಟ ತರಲು ಪ್ರಾರಂಭಿಸಿದ್ದಾರೆ.

ಶಾಲೆಯಲ್ಲಿ 230 ವಿದ್ಯಾರ್ಥಿಗಳಿದ್ದು, ಕಿರಿಯ ತರಗತಿಗಳಲ್ಲಿ ಓದುತ್ತಿರುವ 66 ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

“ಡಿಸೆಂಬರ್ 13 ರಂದು ನಾನು ಶಾಲೆಗೆ ಸೇರಿದಾಗ, ಎಲ್ಲಾ ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಊಟವನ್ನು ಸೇವಿಸಿದ್ದರು. ಆದರೆ, ಮರುದಿನ ಅವರು ನಾನು ತಯಾರಿಸಿದ ಆಹಾರವನ್ನು ತಿನ್ನಲು ಮಕ್ಕಳು ನಿರಾಕರಿಸಿದಾಗ ನನಗೆ ಆಘಾತವಾಯಿತು. ಊಟ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಪೋಷಕರು ಹೇಳಿದ್ದಾರೆ. ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಮಕ್ಕಳಿಗೆ ಅಡುಗೆ ಮಾಡಬೇಡಿ ಎಂದು ಹೇಳಲಾಗಿತ್ತು. ಇದು ತುಂಬಾ ಅವಮಾನಕರವಾಗಿತ್ತು. ನಾನು ನ್ಯಾಯ ಕೇಳೀ ಮತ್ತೆ ಎಲ್ಲಿಗೂ ಹೋಗುವುದಿಲ್ಲ” ಎಂದು ಸುನೀತಾ ನೋವು ತೋಡಿಕೊಂಡಿದ್ದಾರೆ.

ಡಿಸೆಂಬರ್ 14 ರಂದು, ಸುನೀತಾ ವಿದ್ಯಾರ್ಥಿಗಳಿಗೆ ಅಡುಗೆ ಮಾಡದಂತೆ ತಡೆಯಲು ಪೋಷಕರು, ಬಹುತೇಕ ಗ್ರಾಮಸ್ಥರು ಶಾಲೆಗೆ ಆಗಮಿಸಿ ಶಿಕ್ಷಕರ ಮೇಲೆ ಒತ್ತಡ ಹೇರಿದ್ದರು.

ಪ್ರಕರಣದ ಗಂಭೀರತೆಯನ್ನು ಮನಗಂಡ ಚಂಪಾವತ್ ಜಿಲ್ಲಾ ಶಿಕ್ಷಣಾಧಿಕಾರಿ ಆರ್.ಸಿ. ಪುರೋಹಿತ್ ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳು ಮತ್ತು ಶಾಲೆಯ ಸಿಬ್ಬಂದಿಯೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.

ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿನೀತ್ ತೋಮರ್ ಮಾತನಾಡಿ, ‘ಶಾಲೆಯಲ್ಲಿ ದಲಿತ ಅಡುಗೆಯವರು ಮಾಡಿದ ಊಟ ಮಾಡುವುದಕ್ಕೆ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆಕ್ಷೇಪ ವ್ಯಕ್ತಪಡಿಸಿರುವ ವರದಿಗಳ ಬಗ್ಗೆ ಹಾಗೂ ನೇಮಕಾತಿ ಅಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ’ ಎಂದು ಹೇಳಿದ್ದಾರೆ.

ಸ್ಥಳೀಯ ‘ಮೇಲ್ಜಾತಿ’ ಗ್ರಾಮಸ್ಥರಿಂದ ಅವಮಾನಕ್ಕೊಳಗಾದ ನಂತರ ದಲಿತ ಮಹಿಳೆ ಸುನೀತಾ ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. “ಮೇಲ್ವರ್ಗದ ಹಳ್ಳಿಗರು ಶಕ್ತಿಶಾಲಿಗಳಾಗಿದ್ದು, ನನಗೆ ಶಾಲೆಯಲ್ಲಿ ಕೆಲಸ ಮಾಡಲು ಬಿಡುವುದಿಲ್ಲ. ನನ್ನ ನೇಮಕಾತಿಯನ್ನು ಅಸಿಂಧುಗೊಳಿಸಿ ಮೇಲ್ಜಾತಿಯ ಮಹಿಳೆಗೆ ಕೆಲಸ ಕೊಟ್ಟರೂ ಆಶ್ಚರ್ಯವಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಉತ್ತರಾಖಂಡದಲ್ಲಿ, ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಯೋಜನೆಗಾಗಿ, ಮಹಿಳೆಯರನ್ನು ಅಡುಗೆ ಮಾಡಲು ನೇಮಿಸಲಾಗುತ್ತದೆ ಮತ್ತು ಅವರನ್ನು “ಭೋಜನ್ ಮಾತಾಗಳು” ಎಂದು ಕರೆಯಲಾಗುತ್ತದೆ.


ಇದನ್ನೂ ಓದಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...