Homeಮುಖಪುಟಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸುಖಿಧಾಂಗ್ ಗ್ರಾಮದ ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಅಡುಗೆಯವರಾಗಿ ಕೆಲಸಕ್ಕೆ ಸೇರಿದ್ದು, ಆಕೆ ದಲಿತ ಸಮುದಾಯದವರು ಎಂದು ‘ಮೇಲ್ಜಾತಿ’ಗೆ ಸೇರಿದ ಹಲವಾರು ವಿದ್ಯಾರ್ಥಿಗಳು ಅವರು ತಯಾರಿಸಿದ ಆಹಾರವನ್ನು ತಿನ್ನಲು ನಿರಾಕರಿಸಿರುವ ಘಟನೆ ನಡೆದಿದೆ.

ನವೆಂಬರ್ 25 ರಂದು ದಲಿತ ಸಮುದಾಯದ ಸುನಿತಾ ಅವರಿಗೆ ’ಭೋಜನ್ ಮಾತಾ’ (ಅಡುಗೆಯವರು) ಆಗಿ ಕೆಲಸ ಪಡೆದರು. ಆಕೆಗೆ ಮಾಸಿಕ ವೇತನವು 3,000 ರೂಪಾಯಿ ಆಗಿದೆ. ತನ್ನ ಇಬ್ಬರು ಮಕ್ಕಳು ಮತ್ತು ಅನಾರೋಗ್ಯಕ್ಕೆ ತುತ್ತಾಗಿರುವ ನಿರುದ್ಯೋಗಿ ಪತಿಯನ್ನು ಪೋಷಿಸಲು ಈ ಕೆಲಸ ತುಂಬಾ ಮುಖ್ಯವಾಗಿತ್ತು ಎನ್ನುತ್ತಾರೆ.

ಸುನೀತಾ ಅವರು ಡಿಸೆಂಬರ್ 14 ರಂದು ಶಾಲೆಯಲ್ಲಿ ಅಡುಗೆ ಮಾಡಿದ ತೊಂದರೆಗಳು ಆರಂಭವಾಗಿವೆ. ಈ ಮೇಲ್ಜಾತಿ’ಗೆ ವಿದ್ಯಾರ್ಥಿಗಳ ಪೋಷಕರು ಸುನೀತಾ ತಮ್ಮ ಮಕ್ಕಳಿಗೆ ಅಡುಗೆ ಮಾಡಿದ್ದರಿಂದ ಆಕ್ರೋಶಗೊಂಡಿದ್ದಾರೆ. ಮಾತ್ರವಲ್ಲದೆ ಅವರ ನೇಮಕಾತಿಯನ್ನು ಪ್ರಶ್ನಿಸಿದ್ದಾರೆ. ಶಾಲೆಯಲ್ಲಿ ತಯಾರಿಸಿದ ಊಟವನ್ನು ತಿನ್ನುವುದರಿಂದ ತಪ್ಪಿಸಲು ವಿದ್ಯಾರ್ಥಿಗಳು ಪ್ರತಿದಿನ ತಾವೇ ಊಟ ತರಲು ಪ್ರಾರಂಭಿಸಿದ್ದಾರೆ.

ಶಾಲೆಯಲ್ಲಿ 230 ವಿದ್ಯಾರ್ಥಿಗಳಿದ್ದು, ಕಿರಿಯ ತರಗತಿಗಳಲ್ಲಿ ಓದುತ್ತಿರುವ 66 ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

“ಡಿಸೆಂಬರ್ 13 ರಂದು ನಾನು ಶಾಲೆಗೆ ಸೇರಿದಾಗ, ಎಲ್ಲಾ ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಊಟವನ್ನು ಸೇವಿಸಿದ್ದರು. ಆದರೆ, ಮರುದಿನ ಅವರು ನಾನು ತಯಾರಿಸಿದ ಆಹಾರವನ್ನು ತಿನ್ನಲು ಮಕ್ಕಳು ನಿರಾಕರಿಸಿದಾಗ ನನಗೆ ಆಘಾತವಾಯಿತು. ಊಟ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಪೋಷಕರು ಹೇಳಿದ್ದಾರೆ. ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಮಕ್ಕಳಿಗೆ ಅಡುಗೆ ಮಾಡಬೇಡಿ ಎಂದು ಹೇಳಲಾಗಿತ್ತು. ಇದು ತುಂಬಾ ಅವಮಾನಕರವಾಗಿತ್ತು. ನಾನು ನ್ಯಾಯ ಕೇಳೀ ಮತ್ತೆ ಎಲ್ಲಿಗೂ ಹೋಗುವುದಿಲ್ಲ” ಎಂದು ಸುನೀತಾ ನೋವು ತೋಡಿಕೊಂಡಿದ್ದಾರೆ.

ಡಿಸೆಂಬರ್ 14 ರಂದು, ಸುನೀತಾ ವಿದ್ಯಾರ್ಥಿಗಳಿಗೆ ಅಡುಗೆ ಮಾಡದಂತೆ ತಡೆಯಲು ಪೋಷಕರು, ಬಹುತೇಕ ಗ್ರಾಮಸ್ಥರು ಶಾಲೆಗೆ ಆಗಮಿಸಿ ಶಿಕ್ಷಕರ ಮೇಲೆ ಒತ್ತಡ ಹೇರಿದ್ದರು.

ಪ್ರಕರಣದ ಗಂಭೀರತೆಯನ್ನು ಮನಗಂಡ ಚಂಪಾವತ್ ಜಿಲ್ಲಾ ಶಿಕ್ಷಣಾಧಿಕಾರಿ ಆರ್.ಸಿ. ಪುರೋಹಿತ್ ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳು ಮತ್ತು ಶಾಲೆಯ ಸಿಬ್ಬಂದಿಯೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.

ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿನೀತ್ ತೋಮರ್ ಮಾತನಾಡಿ, ‘ಶಾಲೆಯಲ್ಲಿ ದಲಿತ ಅಡುಗೆಯವರು ಮಾಡಿದ ಊಟ ಮಾಡುವುದಕ್ಕೆ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆಕ್ಷೇಪ ವ್ಯಕ್ತಪಡಿಸಿರುವ ವರದಿಗಳ ಬಗ್ಗೆ ಹಾಗೂ ನೇಮಕಾತಿ ಅಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ’ ಎಂದು ಹೇಳಿದ್ದಾರೆ.

ಸ್ಥಳೀಯ ‘ಮೇಲ್ಜಾತಿ’ ಗ್ರಾಮಸ್ಥರಿಂದ ಅವಮಾನಕ್ಕೊಳಗಾದ ನಂತರ ದಲಿತ ಮಹಿಳೆ ಸುನೀತಾ ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. “ಮೇಲ್ವರ್ಗದ ಹಳ್ಳಿಗರು ಶಕ್ತಿಶಾಲಿಗಳಾಗಿದ್ದು, ನನಗೆ ಶಾಲೆಯಲ್ಲಿ ಕೆಲಸ ಮಾಡಲು ಬಿಡುವುದಿಲ್ಲ. ನನ್ನ ನೇಮಕಾತಿಯನ್ನು ಅಸಿಂಧುಗೊಳಿಸಿ ಮೇಲ್ಜಾತಿಯ ಮಹಿಳೆಗೆ ಕೆಲಸ ಕೊಟ್ಟರೂ ಆಶ್ಚರ್ಯವಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಉತ್ತರಾಖಂಡದಲ್ಲಿ, ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಯೋಜನೆಗಾಗಿ, ಮಹಿಳೆಯರನ್ನು ಅಡುಗೆ ಮಾಡಲು ನೇಮಿಸಲಾಗುತ್ತದೆ ಮತ್ತು ಅವರನ್ನು “ಭೋಜನ್ ಮಾತಾಗಳು” ಎಂದು ಕರೆಯಲಾಗುತ್ತದೆ.


ಇದನ್ನೂ ಓದಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...