Homeಮುಖಪುಟಕೊಲ್ಕತ್ತಾ ಮುನ್ಸಿಪಲ್ ಚುನಾವಣೆ: ಠೇವಣಿ ಕಳೆದುಕೊಂಡ ಅತೀ ದೊಡ್ಡ ಪಕ್ಷ ಬಿಜೆಪಿ!

ಕೊಲ್ಕತ್ತಾ ಮುನ್ಸಿಪಲ್ ಚುನಾವಣೆ: ಠೇವಣಿ ಕಳೆದುಕೊಂಡ ಅತೀ ದೊಡ್ಡ ಪಕ್ಷ ಬಿಜೆಪಿ!

- Advertisement -
- Advertisement -

ಕೊಲ್ಕತ್ತಾ ಮುನ್ಸಿಪಲ್‌ ಕಾರ್ಪೊರೇಷನ್‌ ಚುನಾವಣೆಯಲ್ಲಿ ಆಡಳಿತರೂಢ ಟಿಎಂಸಿ ಭರ್ಜರಿ ಗೆಲುವು ಸಾಧಿಸಿದ್ದು ಇತ್ತೀಚೆಗೆ ಹೊರಬಿದ್ದಿತ್ತು. 144 ವಾರ್ಡ್‌ಗಳ ಪೈಕಿ ಟಿಎಂಸಿ ಬರೋಬ್ಬರಿ 134 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಚುನಾವಣೆ ಅತ್ಯದಿಕ ಠೇವಣಿ ಮೊತ್ತವನ್ನು ಕಳೆದುಕೊಂಡಿದ್ದು, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಗಳಾಗಿದ್ದಾರೆ.

ಠೇವಣಿ ಕಳೆದುಕೊಂಡಿರುವ ಅತೀದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದರೆ, ಕಾಂಗ್ರೆಸ್‌ ನಂತರದ ಸ್ಥಾನದಲ್ಲಿದೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಹೋಲಿಸಿದರೆ, ಎಡರಂಗದ ಸಾಧನೆ ಉತ್ತಮಮಾಗಿದೆ.

ಇದನ್ನೂ ಓದಿ:‘ನೀತಿಗೆಟ್ಟವರು, ದ್ರೋಹಿಗಳ ಗುಂಪು ಪಕ್ಷ ನಡೆಸುತ್ತಿದೆ’: ಕೊಲ್ಕತ್ತಾ ಪಾಲಿಕೆ ಚುನಾವಣೆ ಸೋಲಿನ ಬಳಿಕ ಸ್ವಪಕ್ಷದ ವಿರುದ್ಧ ಬಿಜೆಪಿ ಹಿರಿಯ ನಾಯಕ ಆಕ್ರೊಶ

144 ವಾರ್ಡ್‌ಗಳ ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಬಿಜೆಪಿಯು 142 ವಾರ್ಡ್‌ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಇವುಗಳಲ್ಲಿ 116 ಅಭ್ಯರ್ಥಿಗಳ ಠೇವಣಿ ಕೈತಪ್ಪಿದೆ. ಚಲಾವಣೆ ಆಗಿರುವ ಮತಗಳ ಪೈಕಿ, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಯು ಆರನೇ ಒಂದು ಭಾಗವನ್ನು ಗಳಿಸಲು ವಿಫಲವಾದರೆ ಠೇವಣಿ ಕಳೆದುಕೊಳ್ಳಬೇಕಾಗುತ್ತದೆ.

“ಇದು ವಾಸ್ತವ, ಇದು ಮುನ್ಸಿಪಲ್‌ ಚುನಾವಣೆಯಲ್ಲಿ ನಮ್ಮ ಪಕ್ಷದ ಕಳಪೆ ಪ್ರದರ್ಶನವಾಗಿದೆ. 2010ರಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷಕ್ಕೆ ಶಾಸಕರೇ ಇಲ್ಲದಿದ್ದಾಗ ಕೊಲ್ಕತ್ತಾ ಮುನ್ಸಿಪಲ್ 144 ವಾರ್ಡ್‌ಗಳಲ್ಲಿ ಮೂರು ವಾರ್ಡ್‌ಗಳನ್ನು ಗೆದ್ದಿದ್ದೆವು. ಈ ಬಾರಿ 70 ಶಾಸಕರು ಮತ್ತು 17 ಸಂಸದರ ದಂಡು ಹೊಂದಿದ್ದರೂ, ಪಕ್ಷವು ಮೂರಕ್ಕಿಂತ ಹೆಚ್ಚು ಸ್ಥಾನಗಳನ್ನು ಗಳಿಸಲು ವಿಫಲವಾಗಿದೆ. 2015 ರಲ್ಲಿ ಏಳು ವಾರ್ಡ್‌ಗಳಲ್ಲಿ ಗೆಲ್ಲುವ ಮೂಲಕ ಪಕ್ಷವು ಉತ್ತಮ ಸಾಧನೆ ಮಾಡಿತ್ತು” ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಚುನಾವಣಾ ಆಯೋಗವು ಮುನ್ಸಿಪಲ್‌‌ ಚುನಾವಣೆಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ತಲಾ ರೂ 500 ರೂ ಹಾಗೂ ಮಹಿಳಾ ಅಭ್ಯರ್ಥಿಗಳು ಮತ್ತು ಎಸ್‌ಸಿ ಅಭ್ಯರ್ಥಿಗಳಿಗೆ 250 ರೂ.ಗಳನ್ನು ಠೇವಣಿ ಪಡೆಯುತ್ತದೆ.

ಇದನ್ನೂ ಓದಿ:ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಟಿಎಂಸಿ ಅಭೂತಪೂರ್ವ ಜಯ; BJP ಹೀನಾಯ ಸೋಲು

ರಾಜ್ಯದ ರಾಜಕೀಯ ವಿಶ್ಲೇಷಕರ ಪ್ರಕಾರ, ಕೊಲ್ಕತ್ತಾ ಮುನ್ಸಿಪಲ್ ಚುನಾವಣೆಯಲ್ಲಿ ಸಿಪಿಐ(ಎಂ) ತನ್ನ ಗಳಿಯಲ್ಲಿ ಹೆಚ್ಚು ಸಾಧನೆ ಮಾಡಿರುವುದು ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿದ್ದು, ಹೀನಾಯ ಸೋಲಿಗೆ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಎಡರಂಗದ ಮತಬ್ಯಾಂಕ್‌‌‌‌ ಅನ್ನು ಒಡೆದು ಬಂಗಾಳದ ಈ ಹಿಂದಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಮತಗಳಿಸಿತ್ತು. ಆದರೆ ಕೊಲ್ಕತ್ತಾ ಮುನ್ಸಿಪಲ್‌ ಚುನಾವಣೆಯಲ್ಲಿ ಬಿಜೆಪಿಯು ಹೀನಾಯವಾಗಿ ಸೋಲಲು ಎಡರಂಗ ಕಾರಣ. ಯಾಕೆಂದರೆ ಎಡರಂಗವು ತನ್ನ ಹಿಂದಿನ ಮತ ಹಂಚಿಕೆಯ ಒಂದು ಭಾಗವನ್ನು ಮರಳಿ ಪಡೆದಿದೆ” ಎಂದು ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಬಿಷ್ಣುಪ್ರಿಯಾ ದತ್ತಾ ಗುಪ್ತಾ ಹೇಳಿದ್ದಾರೆ ಎಂದು TNIE ವರದಿ ಹೇಳಿದೆ.

ಡಿಸೆಂಬರ್ 19 ರಂದ ಪಾಲಿಕೆಯ 144 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. 144 ಕಾರ್ಪೊರೇಟರ್‌ಗಳ ಸ್ಥಾನಕ್ಕೆ ಒಟ್ಟು 950 ಅಭ್ಯರ್ಥಿಗಳು ಕಣದಲ್ಲಿದ್ದರು. ಪಾಲಿಕೆಯ ಈ ಹಿಂದಿನ ಚುನಾವಣೆಗಳು 2015 ರಲ್ಲಿ ನಡೆದಿದ್ದವು. ಡಿಸೆಂಬರ್‌ 21 ರ ಮಂಗಳವಾರದಂದು ಫಲಿತಾಂಶ ಹೊಬಿದ್ದಿದ್ದು, ಇದರಲ್ಲಿ ಟಿಎಂಸಿ 134 ವಾರ್ಡ್‌ಗಳಲ್ಲಿ ಗೆದ್ದರೆ, ಬಿಜೆಪಿ ಕೇವಲ 3 ವಾರ್ಡ್‌‌ಗಳಲ್ಲಷ್ಟೇ ಗೆಲುವು ಪಡೆದುಕೊಂಡಿದೆ.

ಇದನ್ನೂ ಓದಿ:ಕೊಲ್ಕತ್ತಾದಲ್ಲಿ ಹೊಸ ಕಾರ್ಯಕ್ರಮ ಘೋಷಿಸಿದ ಮುನಾವರ್‌ ಫಾರೂಖಿ!

ಉಳಿದಂತೆ ಸಿಪಿಐಎಂ 1 ವಾರ್ಡ್‌, ಸಿಪಿಐ ಒಂದು ವಾರ್ಡ್‌, ಕಾಂಗ್ರೆಸ್‌ 2 ಮತ್ತು ಪಕ್ಷೇತರ ಅಭ್ಯರ್ಥಿಗಳು ಮೂರು ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ.

2015 ರ ಪಾಲಿಕೆ ಚುನಾವಣೆಯಲ್ಲಿ ಟಿಎಂಸಿ 114 ವಾರ್ಡ್‌ಗಳಲ್ಲಿ, ಸಿಪಿಎಂ 10, ಬಿಜೆಪಿ 7, ಕಾಂಗ್ರೆಸ್‌ 5, ಸಿಪಿಐ 2, ಐಎನ್‌ಡಿ 3, ಆರ್‌ಎಸ್‌ಪಿ 2 ಮತ್ತು ಎಐಎಫ್‌ಬಿ 1 ಗೆದ್ದಿದ್ದವು. ಆದರೆ ಈ ಬಾರಿ ಟಿಎಂಸಿ ಬಹುತೇಕ ಏಕಮೇವ ಪಕ್ಷವಾಗಿ ಹೊರಹೊಮ್ಮಿದೆ.

ಸುಮಾರು 40.5 ಲಕ್ಷ ಮತದಾರರಲ್ಲಿ ಶೇಕಡಾ 63 ರಷ್ಟು ಮತದಾರರು ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದರೂ ಸಹ, ಎರಡು ಬೂತ್‌ಗಳಲ್ಲಿ ಬಾಂಬ್‌ಗಳನ್ನು ಎಸೆಯುವುದು ಸೇರಿದಂತೆ ಹಿಂಸಾಚಾರದ ಘಟನೆಗಳು ನಡೆದಿದ್ದವು.

ಇದನ್ನೂ ಓದಿ:ಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಶುಲ್ಕ ಮನ್ನಾ ಘೋಷಿಸಿದ ಕೊಲ್ಕತ್ತಾ ವಿಶ್ವವಿದ್ಯಾಲಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...