Homeಮುಖಪುಟಕೊಲ್ಕತ್ತಾ ಮುನ್ಸಿಪಲ್ ಚುನಾವಣೆ: ಠೇವಣಿ ಕಳೆದುಕೊಂಡ ಅತೀ ದೊಡ್ಡ ಪಕ್ಷ ಬಿಜೆಪಿ!

ಕೊಲ್ಕತ್ತಾ ಮುನ್ಸಿಪಲ್ ಚುನಾವಣೆ: ಠೇವಣಿ ಕಳೆದುಕೊಂಡ ಅತೀ ದೊಡ್ಡ ಪಕ್ಷ ಬಿಜೆಪಿ!

- Advertisement -
- Advertisement -

ಕೊಲ್ಕತ್ತಾ ಮುನ್ಸಿಪಲ್‌ ಕಾರ್ಪೊರೇಷನ್‌ ಚುನಾವಣೆಯಲ್ಲಿ ಆಡಳಿತರೂಢ ಟಿಎಂಸಿ ಭರ್ಜರಿ ಗೆಲುವು ಸಾಧಿಸಿದ್ದು ಇತ್ತೀಚೆಗೆ ಹೊರಬಿದ್ದಿತ್ತು. 144 ವಾರ್ಡ್‌ಗಳ ಪೈಕಿ ಟಿಎಂಸಿ ಬರೋಬ್ಬರಿ 134 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಚುನಾವಣೆ ಅತ್ಯದಿಕ ಠೇವಣಿ ಮೊತ್ತವನ್ನು ಕಳೆದುಕೊಂಡಿದ್ದು, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಗಳಾಗಿದ್ದಾರೆ.

ಠೇವಣಿ ಕಳೆದುಕೊಂಡಿರುವ ಅತೀದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದರೆ, ಕಾಂಗ್ರೆಸ್‌ ನಂತರದ ಸ್ಥಾನದಲ್ಲಿದೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಹೋಲಿಸಿದರೆ, ಎಡರಂಗದ ಸಾಧನೆ ಉತ್ತಮಮಾಗಿದೆ.

ಇದನ್ನೂ ಓದಿ:‘ನೀತಿಗೆಟ್ಟವರು, ದ್ರೋಹಿಗಳ ಗುಂಪು ಪಕ್ಷ ನಡೆಸುತ್ತಿದೆ’: ಕೊಲ್ಕತ್ತಾ ಪಾಲಿಕೆ ಚುನಾವಣೆ ಸೋಲಿನ ಬಳಿಕ ಸ್ವಪಕ್ಷದ ವಿರುದ್ಧ ಬಿಜೆಪಿ ಹಿರಿಯ ನಾಯಕ ಆಕ್ರೊಶ

144 ವಾರ್ಡ್‌ಗಳ ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಬಿಜೆಪಿಯು 142 ವಾರ್ಡ್‌ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಇವುಗಳಲ್ಲಿ 116 ಅಭ್ಯರ್ಥಿಗಳ ಠೇವಣಿ ಕೈತಪ್ಪಿದೆ. ಚಲಾವಣೆ ಆಗಿರುವ ಮತಗಳ ಪೈಕಿ, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಯು ಆರನೇ ಒಂದು ಭಾಗವನ್ನು ಗಳಿಸಲು ವಿಫಲವಾದರೆ ಠೇವಣಿ ಕಳೆದುಕೊಳ್ಳಬೇಕಾಗುತ್ತದೆ.

“ಇದು ವಾಸ್ತವ, ಇದು ಮುನ್ಸಿಪಲ್‌ ಚುನಾವಣೆಯಲ್ಲಿ ನಮ್ಮ ಪಕ್ಷದ ಕಳಪೆ ಪ್ರದರ್ಶನವಾಗಿದೆ. 2010ರಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷಕ್ಕೆ ಶಾಸಕರೇ ಇಲ್ಲದಿದ್ದಾಗ ಕೊಲ್ಕತ್ತಾ ಮುನ್ಸಿಪಲ್ 144 ವಾರ್ಡ್‌ಗಳಲ್ಲಿ ಮೂರು ವಾರ್ಡ್‌ಗಳನ್ನು ಗೆದ್ದಿದ್ದೆವು. ಈ ಬಾರಿ 70 ಶಾಸಕರು ಮತ್ತು 17 ಸಂಸದರ ದಂಡು ಹೊಂದಿದ್ದರೂ, ಪಕ್ಷವು ಮೂರಕ್ಕಿಂತ ಹೆಚ್ಚು ಸ್ಥಾನಗಳನ್ನು ಗಳಿಸಲು ವಿಫಲವಾಗಿದೆ. 2015 ರಲ್ಲಿ ಏಳು ವಾರ್ಡ್‌ಗಳಲ್ಲಿ ಗೆಲ್ಲುವ ಮೂಲಕ ಪಕ್ಷವು ಉತ್ತಮ ಸಾಧನೆ ಮಾಡಿತ್ತು” ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಚುನಾವಣಾ ಆಯೋಗವು ಮುನ್ಸಿಪಲ್‌‌ ಚುನಾವಣೆಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ತಲಾ ರೂ 500 ರೂ ಹಾಗೂ ಮಹಿಳಾ ಅಭ್ಯರ್ಥಿಗಳು ಮತ್ತು ಎಸ್‌ಸಿ ಅಭ್ಯರ್ಥಿಗಳಿಗೆ 250 ರೂ.ಗಳನ್ನು ಠೇವಣಿ ಪಡೆಯುತ್ತದೆ.

ಇದನ್ನೂ ಓದಿ:ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಟಿಎಂಸಿ ಅಭೂತಪೂರ್ವ ಜಯ; BJP ಹೀನಾಯ ಸೋಲು

ರಾಜ್ಯದ ರಾಜಕೀಯ ವಿಶ್ಲೇಷಕರ ಪ್ರಕಾರ, ಕೊಲ್ಕತ್ತಾ ಮುನ್ಸಿಪಲ್ ಚುನಾವಣೆಯಲ್ಲಿ ಸಿಪಿಐ(ಎಂ) ತನ್ನ ಗಳಿಯಲ್ಲಿ ಹೆಚ್ಚು ಸಾಧನೆ ಮಾಡಿರುವುದು ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿದ್ದು, ಹೀನಾಯ ಸೋಲಿಗೆ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಎಡರಂಗದ ಮತಬ್ಯಾಂಕ್‌‌‌‌ ಅನ್ನು ಒಡೆದು ಬಂಗಾಳದ ಈ ಹಿಂದಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಮತಗಳಿಸಿತ್ತು. ಆದರೆ ಕೊಲ್ಕತ್ತಾ ಮುನ್ಸಿಪಲ್‌ ಚುನಾವಣೆಯಲ್ಲಿ ಬಿಜೆಪಿಯು ಹೀನಾಯವಾಗಿ ಸೋಲಲು ಎಡರಂಗ ಕಾರಣ. ಯಾಕೆಂದರೆ ಎಡರಂಗವು ತನ್ನ ಹಿಂದಿನ ಮತ ಹಂಚಿಕೆಯ ಒಂದು ಭಾಗವನ್ನು ಮರಳಿ ಪಡೆದಿದೆ” ಎಂದು ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಬಿಷ್ಣುಪ್ರಿಯಾ ದತ್ತಾ ಗುಪ್ತಾ ಹೇಳಿದ್ದಾರೆ ಎಂದು TNIE ವರದಿ ಹೇಳಿದೆ.

ಡಿಸೆಂಬರ್ 19 ರಂದ ಪಾಲಿಕೆಯ 144 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. 144 ಕಾರ್ಪೊರೇಟರ್‌ಗಳ ಸ್ಥಾನಕ್ಕೆ ಒಟ್ಟು 950 ಅಭ್ಯರ್ಥಿಗಳು ಕಣದಲ್ಲಿದ್ದರು. ಪಾಲಿಕೆಯ ಈ ಹಿಂದಿನ ಚುನಾವಣೆಗಳು 2015 ರಲ್ಲಿ ನಡೆದಿದ್ದವು. ಡಿಸೆಂಬರ್‌ 21 ರ ಮಂಗಳವಾರದಂದು ಫಲಿತಾಂಶ ಹೊಬಿದ್ದಿದ್ದು, ಇದರಲ್ಲಿ ಟಿಎಂಸಿ 134 ವಾರ್ಡ್‌ಗಳಲ್ಲಿ ಗೆದ್ದರೆ, ಬಿಜೆಪಿ ಕೇವಲ 3 ವಾರ್ಡ್‌‌ಗಳಲ್ಲಷ್ಟೇ ಗೆಲುವು ಪಡೆದುಕೊಂಡಿದೆ.

ಇದನ್ನೂ ಓದಿ:ಕೊಲ್ಕತ್ತಾದಲ್ಲಿ ಹೊಸ ಕಾರ್ಯಕ್ರಮ ಘೋಷಿಸಿದ ಮುನಾವರ್‌ ಫಾರೂಖಿ!

ಉಳಿದಂತೆ ಸಿಪಿಐಎಂ 1 ವಾರ್ಡ್‌, ಸಿಪಿಐ ಒಂದು ವಾರ್ಡ್‌, ಕಾಂಗ್ರೆಸ್‌ 2 ಮತ್ತು ಪಕ್ಷೇತರ ಅಭ್ಯರ್ಥಿಗಳು ಮೂರು ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ.

2015 ರ ಪಾಲಿಕೆ ಚುನಾವಣೆಯಲ್ಲಿ ಟಿಎಂಸಿ 114 ವಾರ್ಡ್‌ಗಳಲ್ಲಿ, ಸಿಪಿಎಂ 10, ಬಿಜೆಪಿ 7, ಕಾಂಗ್ರೆಸ್‌ 5, ಸಿಪಿಐ 2, ಐಎನ್‌ಡಿ 3, ಆರ್‌ಎಸ್‌ಪಿ 2 ಮತ್ತು ಎಐಎಫ್‌ಬಿ 1 ಗೆದ್ದಿದ್ದವು. ಆದರೆ ಈ ಬಾರಿ ಟಿಎಂಸಿ ಬಹುತೇಕ ಏಕಮೇವ ಪಕ್ಷವಾಗಿ ಹೊರಹೊಮ್ಮಿದೆ.

ಸುಮಾರು 40.5 ಲಕ್ಷ ಮತದಾರರಲ್ಲಿ ಶೇಕಡಾ 63 ರಷ್ಟು ಮತದಾರರು ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದರೂ ಸಹ, ಎರಡು ಬೂತ್‌ಗಳಲ್ಲಿ ಬಾಂಬ್‌ಗಳನ್ನು ಎಸೆಯುವುದು ಸೇರಿದಂತೆ ಹಿಂಸಾಚಾರದ ಘಟನೆಗಳು ನಡೆದಿದ್ದವು.

ಇದನ್ನೂ ಓದಿ:ಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಶುಲ್ಕ ಮನ್ನಾ ಘೋಷಿಸಿದ ಕೊಲ್ಕತ್ತಾ ವಿಶ್ವವಿದ್ಯಾಲಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...