Homeಮುಖಪುಟಕೊಲ್ಕತ್ತಾ ಮುನ್ಸಿಪಲ್ ಚುನಾವಣೆ: ಠೇವಣಿ ಕಳೆದುಕೊಂಡ ಅತೀ ದೊಡ್ಡ ಪಕ್ಷ ಬಿಜೆಪಿ!

ಕೊಲ್ಕತ್ತಾ ಮುನ್ಸಿಪಲ್ ಚುನಾವಣೆ: ಠೇವಣಿ ಕಳೆದುಕೊಂಡ ಅತೀ ದೊಡ್ಡ ಪಕ್ಷ ಬಿಜೆಪಿ!

- Advertisement -
- Advertisement -

ಕೊಲ್ಕತ್ತಾ ಮುನ್ಸಿಪಲ್‌ ಕಾರ್ಪೊರೇಷನ್‌ ಚುನಾವಣೆಯಲ್ಲಿ ಆಡಳಿತರೂಢ ಟಿಎಂಸಿ ಭರ್ಜರಿ ಗೆಲುವು ಸಾಧಿಸಿದ್ದು ಇತ್ತೀಚೆಗೆ ಹೊರಬಿದ್ದಿತ್ತು. 144 ವಾರ್ಡ್‌ಗಳ ಪೈಕಿ ಟಿಎಂಸಿ ಬರೋಬ್ಬರಿ 134 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಚುನಾವಣೆ ಅತ್ಯದಿಕ ಠೇವಣಿ ಮೊತ್ತವನ್ನು ಕಳೆದುಕೊಂಡಿದ್ದು, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಗಳಾಗಿದ್ದಾರೆ.

ಠೇವಣಿ ಕಳೆದುಕೊಂಡಿರುವ ಅತೀದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದರೆ, ಕಾಂಗ್ರೆಸ್‌ ನಂತರದ ಸ್ಥಾನದಲ್ಲಿದೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಹೋಲಿಸಿದರೆ, ಎಡರಂಗದ ಸಾಧನೆ ಉತ್ತಮಮಾಗಿದೆ.

ಇದನ್ನೂ ಓದಿ:‘ನೀತಿಗೆಟ್ಟವರು, ದ್ರೋಹಿಗಳ ಗುಂಪು ಪಕ್ಷ ನಡೆಸುತ್ತಿದೆ’: ಕೊಲ್ಕತ್ತಾ ಪಾಲಿಕೆ ಚುನಾವಣೆ ಸೋಲಿನ ಬಳಿಕ ಸ್ವಪಕ್ಷದ ವಿರುದ್ಧ ಬಿಜೆಪಿ ಹಿರಿಯ ನಾಯಕ ಆಕ್ರೊಶ

144 ವಾರ್ಡ್‌ಗಳ ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಬಿಜೆಪಿಯು 142 ವಾರ್ಡ್‌ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಇವುಗಳಲ್ಲಿ 116 ಅಭ್ಯರ್ಥಿಗಳ ಠೇವಣಿ ಕೈತಪ್ಪಿದೆ. ಚಲಾವಣೆ ಆಗಿರುವ ಮತಗಳ ಪೈಕಿ, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಯು ಆರನೇ ಒಂದು ಭಾಗವನ್ನು ಗಳಿಸಲು ವಿಫಲವಾದರೆ ಠೇವಣಿ ಕಳೆದುಕೊಳ್ಳಬೇಕಾಗುತ್ತದೆ.

“ಇದು ವಾಸ್ತವ, ಇದು ಮುನ್ಸಿಪಲ್‌ ಚುನಾವಣೆಯಲ್ಲಿ ನಮ್ಮ ಪಕ್ಷದ ಕಳಪೆ ಪ್ರದರ್ಶನವಾಗಿದೆ. 2010ರಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷಕ್ಕೆ ಶಾಸಕರೇ ಇಲ್ಲದಿದ್ದಾಗ ಕೊಲ್ಕತ್ತಾ ಮುನ್ಸಿಪಲ್ 144 ವಾರ್ಡ್‌ಗಳಲ್ಲಿ ಮೂರು ವಾರ್ಡ್‌ಗಳನ್ನು ಗೆದ್ದಿದ್ದೆವು. ಈ ಬಾರಿ 70 ಶಾಸಕರು ಮತ್ತು 17 ಸಂಸದರ ದಂಡು ಹೊಂದಿದ್ದರೂ, ಪಕ್ಷವು ಮೂರಕ್ಕಿಂತ ಹೆಚ್ಚು ಸ್ಥಾನಗಳನ್ನು ಗಳಿಸಲು ವಿಫಲವಾಗಿದೆ. 2015 ರಲ್ಲಿ ಏಳು ವಾರ್ಡ್‌ಗಳಲ್ಲಿ ಗೆಲ್ಲುವ ಮೂಲಕ ಪಕ್ಷವು ಉತ್ತಮ ಸಾಧನೆ ಮಾಡಿತ್ತು” ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಚುನಾವಣಾ ಆಯೋಗವು ಮುನ್ಸಿಪಲ್‌‌ ಚುನಾವಣೆಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ತಲಾ ರೂ 500 ರೂ ಹಾಗೂ ಮಹಿಳಾ ಅಭ್ಯರ್ಥಿಗಳು ಮತ್ತು ಎಸ್‌ಸಿ ಅಭ್ಯರ್ಥಿಗಳಿಗೆ 250 ರೂ.ಗಳನ್ನು ಠೇವಣಿ ಪಡೆಯುತ್ತದೆ.

ಇದನ್ನೂ ಓದಿ:ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಟಿಎಂಸಿ ಅಭೂತಪೂರ್ವ ಜಯ; BJP ಹೀನಾಯ ಸೋಲು

ರಾಜ್ಯದ ರಾಜಕೀಯ ವಿಶ್ಲೇಷಕರ ಪ್ರಕಾರ, ಕೊಲ್ಕತ್ತಾ ಮುನ್ಸಿಪಲ್ ಚುನಾವಣೆಯಲ್ಲಿ ಸಿಪಿಐ(ಎಂ) ತನ್ನ ಗಳಿಯಲ್ಲಿ ಹೆಚ್ಚು ಸಾಧನೆ ಮಾಡಿರುವುದು ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿದ್ದು, ಹೀನಾಯ ಸೋಲಿಗೆ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಎಡರಂಗದ ಮತಬ್ಯಾಂಕ್‌‌‌‌ ಅನ್ನು ಒಡೆದು ಬಂಗಾಳದ ಈ ಹಿಂದಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಮತಗಳಿಸಿತ್ತು. ಆದರೆ ಕೊಲ್ಕತ್ತಾ ಮುನ್ಸಿಪಲ್‌ ಚುನಾವಣೆಯಲ್ಲಿ ಬಿಜೆಪಿಯು ಹೀನಾಯವಾಗಿ ಸೋಲಲು ಎಡರಂಗ ಕಾರಣ. ಯಾಕೆಂದರೆ ಎಡರಂಗವು ತನ್ನ ಹಿಂದಿನ ಮತ ಹಂಚಿಕೆಯ ಒಂದು ಭಾಗವನ್ನು ಮರಳಿ ಪಡೆದಿದೆ” ಎಂದು ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಬಿಷ್ಣುಪ್ರಿಯಾ ದತ್ತಾ ಗುಪ್ತಾ ಹೇಳಿದ್ದಾರೆ ಎಂದು TNIE ವರದಿ ಹೇಳಿದೆ.

ಡಿಸೆಂಬರ್ 19 ರಂದ ಪಾಲಿಕೆಯ 144 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. 144 ಕಾರ್ಪೊರೇಟರ್‌ಗಳ ಸ್ಥಾನಕ್ಕೆ ಒಟ್ಟು 950 ಅಭ್ಯರ್ಥಿಗಳು ಕಣದಲ್ಲಿದ್ದರು. ಪಾಲಿಕೆಯ ಈ ಹಿಂದಿನ ಚುನಾವಣೆಗಳು 2015 ರಲ್ಲಿ ನಡೆದಿದ್ದವು. ಡಿಸೆಂಬರ್‌ 21 ರ ಮಂಗಳವಾರದಂದು ಫಲಿತಾಂಶ ಹೊಬಿದ್ದಿದ್ದು, ಇದರಲ್ಲಿ ಟಿಎಂಸಿ 134 ವಾರ್ಡ್‌ಗಳಲ್ಲಿ ಗೆದ್ದರೆ, ಬಿಜೆಪಿ ಕೇವಲ 3 ವಾರ್ಡ್‌‌ಗಳಲ್ಲಷ್ಟೇ ಗೆಲುವು ಪಡೆದುಕೊಂಡಿದೆ.

ಇದನ್ನೂ ಓದಿ:ಕೊಲ್ಕತ್ತಾದಲ್ಲಿ ಹೊಸ ಕಾರ್ಯಕ್ರಮ ಘೋಷಿಸಿದ ಮುನಾವರ್‌ ಫಾರೂಖಿ!

ಉಳಿದಂತೆ ಸಿಪಿಐಎಂ 1 ವಾರ್ಡ್‌, ಸಿಪಿಐ ಒಂದು ವಾರ್ಡ್‌, ಕಾಂಗ್ರೆಸ್‌ 2 ಮತ್ತು ಪಕ್ಷೇತರ ಅಭ್ಯರ್ಥಿಗಳು ಮೂರು ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ.

2015 ರ ಪಾಲಿಕೆ ಚುನಾವಣೆಯಲ್ಲಿ ಟಿಎಂಸಿ 114 ವಾರ್ಡ್‌ಗಳಲ್ಲಿ, ಸಿಪಿಎಂ 10, ಬಿಜೆಪಿ 7, ಕಾಂಗ್ರೆಸ್‌ 5, ಸಿಪಿಐ 2, ಐಎನ್‌ಡಿ 3, ಆರ್‌ಎಸ್‌ಪಿ 2 ಮತ್ತು ಎಐಎಫ್‌ಬಿ 1 ಗೆದ್ದಿದ್ದವು. ಆದರೆ ಈ ಬಾರಿ ಟಿಎಂಸಿ ಬಹುತೇಕ ಏಕಮೇವ ಪಕ್ಷವಾಗಿ ಹೊರಹೊಮ್ಮಿದೆ.

ಸುಮಾರು 40.5 ಲಕ್ಷ ಮತದಾರರಲ್ಲಿ ಶೇಕಡಾ 63 ರಷ್ಟು ಮತದಾರರು ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದರೂ ಸಹ, ಎರಡು ಬೂತ್‌ಗಳಲ್ಲಿ ಬಾಂಬ್‌ಗಳನ್ನು ಎಸೆಯುವುದು ಸೇರಿದಂತೆ ಹಿಂಸಾಚಾರದ ಘಟನೆಗಳು ನಡೆದಿದ್ದವು.

ಇದನ್ನೂ ಓದಿ:ಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಶುಲ್ಕ ಮನ್ನಾ ಘೋಷಿಸಿದ ಕೊಲ್ಕತ್ತಾ ವಿಶ್ವವಿದ್ಯಾಲಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...