Homeಕರ್ನಾಟಕಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಜ್ಯದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು, ಅದರ ಕೆಳಗಡೆ ಶಿವನ ದೇವಾಲಯವೊಂದು ಕಾಣಿಸುತ್ತಿದೆ ಎಂದು ಹೇಳುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಟಿಪ್ಪು ಸುಲ್ತಾನ್ ಆಳ್ವಿಕೆಯಲ್ಲಿ ಶಿವ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಯಿತು. ಮುಸ್ಲಿಮರು ನಮಾಜ್ ಮಾಡುವ ಮಸೀದಿಯ ಕೆಳಗೆ ದೇವಸ್ಥಾನ ಇರುತ್ತದೆ ಎಂದು ಒಂದು ಪೋಸ್ಟ್ ಹೇಳುತ್ತದೆ. ಆ ಪೋಸ್ಟ್ ಎಷ್ಟು ನಿಜ ಎಂಬುದನ್ನು ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಮಾಡಿದ ಕ್ಲೈಮ್‌ನ ವಿವರಗಳಿಗಾಗಿ Googleನಲ್ಲಿ ಹುಡುಕಾಡಿದಾಗ ಈ ಫೋಟೋವನ್ನು 2016 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆ ಹಳೆಯ ಪೋಸ್ಟ್‌ಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಒಬ್ಬ ಬಳಕೆದಾರರು ಫೋಟೋ ಜೊತೆಗೆ “ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಲಾಗುತ್ತಿದೆ, 500 ವರ್ಷ ಪುರಾತನವಾದದ್ದು, ಹಿಂದೂ ಬ್ರಾಹ್ಮಣರು ಭವ್ಯವಾದ ಶಿಲ್ಪಗಳನ್ನು ಕೆತ್ತಿದ್ದಾರೆ ನೋಡಿ” ಎಂದಿದ್ದಾರೆ.

 ಈ ಟ್ವೀಟ್‌ಗಳಲ್ಲಿ ಹಂಚಿಕೊಂಡಿರುವ ಮಸೀದಿಯ ಫೋಟೋವನ್ನು ‘ಟ್ರಿಪ್ ಅಡ್ವೈಸರ್’ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಟ್ರಿಪ್ ಅಡ್ವೈಸರ್ ವೆಬ್‌ಸೈಟ್ ಪ್ರಕಾರ ಈ ಫೋಟೋ ರಾಯಚೂರಿನ ಏಕ್ ಮಿನಾರ್ ಮಸೀದಿಯಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೋದ ಕುರಿತು ಹೆಚ್ಚಿನ ಮಾಹಿತಿಯ ಹುಡುಕಾಡಿದಾಗ, ಈ ಘಟನೆಗೆ ಸಂಬಂಧಿಸಿದಂತೆ ‘ಡೆಕ್ಕನ್ ಕ್ರಾನಿಕಲ್’ ಸುದ್ದಿ ಸಂಸ್ಥೆ 15 ಏಪ್ರಿಲ್ 2016 ರಂದು ಲೇಖನವನ್ನು ಪ್ರಕಟಿಸಿರುವುದು ಕಂಡುಬಂದಿದೆ. ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು 2016 ರಲ್ಲಿ ರಸ್ತೆ ವಿಸ್ತರಣೆಯ ಭಾಗವಾಗಿ ಕೆಡವಲಾಯಿತು ಎಂದು ಈ ಲೇಖನ ವರದಿ ಮಾಡಿದೆ. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಅಲ್ಲಿನ ಹಿಂದೂ ಸಮುದಾಯಗಳ ಪ್ರಕಾರ ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಭವ್ಯವಾದ ಶಿಲ್ಪಕಲಾ ಸ್ತಂಭಗಳನ್ನು ಹೋಲುತ್ತವೆ ಎಂದು ಹೇಳಲಾಗುತ್ತದೆ. ಏಕ್ ಮಿನಾರ್ ಮಸೀದಿಯ ಇತಿಹಾಸವನ್ನು ತಕ್ಷಣವೇ ತನಿಖೆ ಮಾಡಿ ಮತ್ತು ಈ ಹಿಂದೆ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆಯೇ ಎಂದು ಸ್ಪಷ್ಟಪಡಿಸಬೇಕೆಂದು ರಾಯಚೂರು ಹಿಂದೂ ಸಮುದಾಯವು ಸರ್ಕಾರವನ್ನು ಒತ್ತಾಯಿಸಿದೆ ಎಂದು ಲೇಖನ ವರದಿ ಮಾಡಿದೆ.

ಆದರೆ, ಈ ಲೇಖನದಲ್ಲಿ ಎಲ್ಲಿಯೂ ಏಕ್ ಮಿನಾರ್ ಮಸೀದಿಯ ಕಂಬಗಳು ಹಿಂದೂ ದೇವಾಲಯಕ್ಕೆ ಸೇರಿವೆ ಎಂದು ದೃಢಪಡಿಸಲಾಗಿಲ್ಲ. ‘ದಿ ಹಿಂದೂ’ ಸುದ್ದಿ ಸಂಸ್ಥೆ ರಾಯಚೂರು ರಸ್ತೆ ಅಗಲೀಕರಣ ಕೆಡವುವ ಕುರಿತು 2016ರ ಏಪ್ರಿಲ್ 10ರಂದು ಲೇಖನ ಪ್ರಕಟಿಸಿತ್ತು.

ಏಕ್ ಮಿನಾರ್ ಮಸೀದಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಸ್ಪಷ್ಟನೆಗಾಗಿ ‘ಆಲ್ಟ್ ನ್ಯೂಸ್’ ಸತ್ಯ ತಪಾಸಣೆ ಸಂಸ್ಥೆ ಅಂದಿನ ರಾಯಚೂರು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿತ್ತು. ಆಲ್ಟ್ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದ ರಾಯಚೂರು ಜಿಲ್ಲಾಧಿಕಾರಿಗಳು, ” ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು. ರಾಯಚೂರು ರಸ್ತೆ ವಿಸ್ತರಣೆಯ ಭಾಗವಾಗಿ ಪ್ರಾಚೀನ ಏಕ್ ಮಿನಾರ್ ಮಸೀದಿ ಹಾಗೂ ಕೆಲವು ಧಾರ್ಮಿಕ ಕಟ್ಟಡಗಳನ್ನು ಕೆಡವಲಾಯಿತು. ಪ್ರಾಚೀನ ಸ್ಮಾರಕಗಳಲ್ಲಿ ಹಲವು ವಿಧಗಳಿವೆ. ಸರಳವಾಗಿ ಹೇಳುವುದಾದರೆ, ಕಂಬವನ್ನು ಹಿಂದೂ ದೇವಾಲಯ ಎಂದು ಹೇಳಲಾಗುವುದಿಲ್ಲ. ಕೆಲವು ಗುಂಪುಗಳು ಈ ಆರೋಪ ಮಾಡಲು ಯತ್ನಿಸಿದ್ದವು. ಆದರೆ ಅವರ ಆರೋಪಗಳ ಬಗ್ಗೆ ಮತ್ತೆ ಅವರನ್ನೇ ಕೇಳಿದಾಗ ಅವರು ಆರೋಪಗಳನ್ನು ಮುಂದುವರಿಸಲಿಲ್ಲ” ಎಂದು ಹೇಳಿದ್ದಾರೆ.

ಈ ವಿವರಗಳನ್ನು ಆಧರಿಸಿ, 2016 ರಲ್ಲಿ ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಿದಾಗ ಶಿವನ ದೇವಾಲಯವನ್ನು ಕಂಡುಬಂದಿದೆ ಎಂಬ ಹೇಳಿಕೆಯು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಒಟ್ಟಾರೆ ರಾಜ್ಯದ ರಾಯಚೂರಿನಲ್ಲಿ ರಸ್ತೆ ಅಗಲೀಕರಣದ ಭಾಗವಾಗಿ ಕೆಡವಲ್ಪಟ್ಟ ಮಸೀದಿಯ ಕೆಳಗೆ ಹಿಂದೂ ದೇಗುಲ ಸಿಕ್ಕಿಲ್ಲ.

ಪ್ರತಿಪಾದನೆ: ಕರ್ನಾಟಕದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು ಅದರ ಶಿವ ದೇವಾಲಯ ಕಂಡು ಬಂದಿದೆ.

ನಿಜಾಂಶ: 2016ರಲ್ಲಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ರಸ್ತೆ ವಿಸ್ತರಣೆಯ ಭಾಗವಾಗಿ ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು ಕೆಡವಿದ್ದರು. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಕಂಬಗಳನ್ನು ಹೋಲುತ್ತವೆ ಎಂದು ಅಲ್ಲಿನ ಹಿಂದೂ ಸಮುದಾಯವು ಆರೋಪಿಸಿದೆ. ಆದರೆ, ಏಕ್ ಮಿನಾರ್ ಮಸೀದಿ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ ಎಂದು ಅಂದಿನ ರಾಯಚೂರು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಪೋಸ್ಟ್ ಮೂಲಕ ಹೇಳಿರುವುದು ತಪ್ಪುದಾರಿಗೆಳೆಯುವಂತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...