Homeಮುಖಪುಟ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ಭಯೋತ್ಪಾದಕರಾದರೆ 1 ಕೋಟಿ ಮತ್ತು ಒಂದು ವರ್ಷದವರೆಗೆ ಅದೇ ಕೆಲಸ ಮಾಡುವುದಾದರೆ 100 ಕೋಟಿ ಸಂಗ್ರಹಿಸಿ ನೀಡುತ್ತೇನೆ ಎಂದಿರುವ ಅವರ ವಿರುದ್ದ ಯಾವುದೇ ಪ್ರಕರಣ ದಾಖಲಾಗಿಲ್ಲ

- Advertisement -
- Advertisement -

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್‌ನ ಪ್ರಮುಖ ಸಂಘಟಕರಲ್ಲಿ ಒಬ್ಬರಾದ ವಿವಾದಿತ ಉಗ್ರಗಾಮಿ ಹಿಂದುತ್ವ ನಾಯಕ ನರಸಿಂಗಾನಂದ ಗಿರಿ ಅವರು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಭಯೋತ್ಪಾದಕ ಸಂಘಟನೆಯಾದ ಎಲ್‌ಟಿಟಿಇ ನಾಯಕ ಪ್ರಭಾಕರನ್‌ ತರ ಆಗುವಂತೆ ಹಿಂದೂ ಯುವಕರಿಗೆ ಕರೆ ನೀಡಿದ್ದು, ಅವರಿಗೆ 1 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಈ ಯುವಕರು ಒಂದು ವರ್ಷ ಹಾಗೆಯೆ ಮುಂದುವರೆಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗಾಗಿ ಸಂಗ್ರಹಿಸುವುದಾಗಿ ಅವರು ಹೇಳಿದ್ದಾರೆ.

ಇದು ನರಸಿಂಗಾನಂದ ಅವರ ಎರಡನೇ ಧರಂ ಸಂಸದ್ ಆಗಿದ್ದು, ಮೊದಲನೇ ಧರಂ ಸಂಸದ್‌‌ 2020 ರ ಜನವರಿ ತಿಂಗಳಲ್ಲಿ ನಡೆದಿತ್ತು. ಈ ವೇಳೆ ದೆಹಲಿ ವಿಧಾನಸಭಾ ಚುನಾವಣೆಗಳು ಇದ್ದವು ಮತ್ತು ಇದರ ನಂತರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಕೋಮು ಗಲಭೆಗಳು ನಡೆದಿದ್ದು. ಇದೀಗ ಹರಿದ್ವಾರದಲ್ಲಿ ಎರಡನೇ ಧರಂ ಸಂಸದ್‌ ನಡೆದಿದ್ದು, ಇನ್ನು ಕೆಲವೇ ತಿಂಗಳಲ್ಲಿ ಉತ್ತರಾಖಂಡದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಡಿಸೆಂಬರ್ 19 ರಂದು ನಡೆದ ಕಾರ್ಯಕ್ರಮದಲ್ಲಿ, “ನಮಗೆ ಸಹಾಯ ಬೇಕಾದಾಗ, ಹಿಂದೂ ಸಮುದಾಯವು ನಮಗೆ ಸಹಾಯ ಮಾಡಲಿಲ್ಲ. ಆದರೆ ಯಾವುದೇ ಯುವ ಕಾರ್ಯಕರ್ತ ‘ಹಿಂದೂ ಪ್ರಭಾಕರನ್’ ಆಗಲು ಸಿದ್ಧರಾಗಿದ್ದರೆ, ಬೇರೆಯವರಿಗಿಂತ ಮೊದಲು ನಾನು ಅವನಿಗೆ 1 ಕೋಟಿ ನೀಡುತ್ತೇನೆ…ಯಾರಾದರೂ ‘ಹಿಂದೂಗಳ ಪ್ರಭಾಕರನ್’ ಆಗುವ ಜವಾಬ್ದಾರಿಯನ್ನು ತೆಗೆದುಕೊಂಡರೆ, ನಾನು 1 ಕೋಟಿ ನೀಡುತ್ತೇನೆ ಮತ್ತು ಅವರು ಒಂದು ವರ್ಷ ಹಾಗೆ ಮುಂದುವರಿಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗೆ ಸಂಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

ಶ್ರೀಲಂಕಾ ತಮಿಳರಿಗೆ ಸ್ವತಂತ್ರ ರಾಜ್ಯವನ್ನು ಬಯಸಿ ಅಲ್ಲಿನ ಸರ್ಕಾರದ ವಿರುದ್ದ ಕಟ್ಟಿದ ಸಶಸ್ತ್ರ ಸಂಘಟನೆಯಾದ ಎಲ್‌ಟಿಟಿಇ ಸಂಸ್ಥಾಪಕರಾಗಿದ್ದಾರೆ ವೇಲುಪಿಳ್ಳೈ ಪ್ರಭಾಕರನ್‌. ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸಾವಿಗೆ ಪ್ರಭಾಕರನ್ ಮತ್ತು ಎಲ್‌ಟಿಟಿಇ ಕಾರಣವಾಗಿದೆ. ಈ ಸಂಘಟನೆಯನ್ನು ಭಾರತದಲ್ಲಿ ಭಯೋತ್ಪಾದಕ ಸಂಘಟನೆ ಎಂದು ನಿಷೇಧಿಸಲಾಗಿದೆ.

ಹಿಂದೂ ಧರ್ಮದ ‘ರಕ್ಷಣೆ’ಗಾಗಿ ದೊಡ್ಡ ಪ್ರಮಾಣದ ಹಿಂಸಾತ್ಮಕ ಉಗ್ರಗಾಮಿ ಚಳುವಳಿಗೆ ನರಸಿಂಗಾನಂದರ ಕರೆದಿದ್ದಾರೆ. ನರಸಿಂಗಾನಂದ ಅವರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಇದುವೇ ಮೊದಲ ಬಾರಿಯಲ್ಲ. ಆದರೆ, ಶಸ್ತ್ರ ಎತ್ತುವವರಿಗೆ ಬಹಿರಂಗವಾಗಿ ಬಹುಮಾನವನ್ನು ಘೋಷಿಸುತ್ತಿವುದು ಇದು ಮೊದಲ ಬಾರಿಯಾಗಿದೆ.

ಇದನ್ನೂ ಓದಿ:ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ಅದೇ ಸಮಾರಂಭದಲ್ಲಿ ಅವರು ಮುಸ್ಲಿಂ ವಿರೋಧಿ ಚಾನೆಲ್‌ ಸುದರ್ಶನ್‌ ನ್ಯೂಸ್‌ಗೆ ಸಂದರ್ಶನ ನೀಡಿದ್ದರು. ಇದರಲ್ಲಿ ಧರಂ ಸಂಸದ್‌ನಲ್ಲಿ ಪ್ರಭಾಕರನ್‌ ಅವರ ಹೇಳಿಕೆಯನ್ನು ಚರ್ಚಿಸಿದ ಅವರು, “ನಮ್ಮ ಧರಂ ಸಂಸದ್‌ನಲ್ಲಿ, ಹತ್ ಯೋಗಿಜಿ ಮಹಾರಾಜ್ ನಮಗೆ ಪ್ರಭಾಕರನ ಅವಶ್ಯಕತೆಯಿದೆ ಎಂದು ಹೇಳಿದರು. ನಮಗೆ ಪ್ರಭಾಕರನ್, ಭಿಂದ್ರನ್‌ವಾಲೆ ಮತ್ತು ಜನರಲ್ ಶಾಬೇಗ್ ಸಿಂಗ್ ಅವರ ಅವಶ್ಯಕತೆಯಿದೆ ಎಂದು ನಾನು ಹೇಳುತ್ತೇನೆ. ಪ್ರತಿ ಹಿಂದೂ ಮಂದಿರದಲ್ಲಿ ಒಬ್ಬ ಪ್ರಭಾಕರನ್, ಒಬ್ಬ ಭಿಂದ್ರನ್ವಾಲೆ ಮತ್ತು ಒಬ್ಬ ಶಾಬೇಗ್ ಸಿಂಗ್ ಇರುವವರೆಗೂ ಹಿಂದೂ ಧರ್ಮವನ್ನು ಉಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ನರಸಿಂಗಾನಂದ ಅವರು ಪ್ರಭಾಕರನ್‌ ಜೊತೆಗೆ ಉಲ್ಲೇಖಿಸಿದ ಭಿಂದ್ರನ್‌ವಾಲೆ ಮತ್ತು ಜನರಲ್‌ ಶಾಬೇಗ್‌ ಸಿಂಗ್‌‌ ಅವರು ತಮಗೆ ಬೇರೆಯೇ ದೇಶ ಬೇಕು ಎಂದು ಹೋರಾಟಡುತ್ತಿರುವ ಖಾಲಿಸ್ತಾನ್ ಭಯೋತ್ಪಾದಕ ಸಂಘಟನೆಯ ನಾಯಕರಾಗಿದ್ದಾರೆ.

ಇಷ್ಟೇ ಅಲ್ಲದೆ ನರಸಿಂಗಾನಂದ ಅವರು ‘ಶಸ್ತ್ರಮೇವ ಜಯತೇ'(ಆಯುಧದಿಂದ ಮಾತ್ರ ವಿಜಯ) ಎಂಬ ಘೋಷಣೆಯನ್ನು ಮುಂದಿಟ್ಟಿದ್ದು, ಹಿಂಸಾಚಾರಕ್ಕೆ ಕರೆನೀಡಿದ್ದಾರೆ

ನರಸಿಂಗಾನಂದ ಅವರು ತಮ್ಮ ಭಾಷಣ ಮತ್ತು ಸಂದರ್ಶನದಲ್ಲಿ ಸ್ಪಷ್ಟವಾಗಿ ಹಿಂದೂ ಯುವಕರಿಗೆ ಭಯೋತ್ಪಾದಕರಾಗಿ ಎಂದು ಹೇಳಿದ್ದಾರೆ. ಅಲ್ಲದೆ ಭಾರತದಲ್ಲಿ ‘ಭಯೋತ್ಪಾದನೆ’ ಎಂದು ಪರಿಗಣಿಸಲ್ಪಟ್ಟಿರುವ ಹಿಂಸಾತ್ಮಕ ಕ್ರಮಕ್ಕೆ ಅವರು ಸ್ಪಷ್ಟವಾಗಿ ಕರೆ ನೀಡುತ್ತಿದ್ದರೂ, ಸ್ಥಳೀಯ ಪೋಲೀಸ್ ಅಥವಾ ಯಾವುದೇ ಕೇಂದ್ರ ಕಾನೂನು ಜಾರಿ ಸಂಸ್ಥೆ ಅವರ ವಿರುದ್ಧ ಪ್ರಕರಣ ದಾಖಲಿಸಿಲ್ಲ ಎಂದು ದಿ ವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ:ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...