Homeಮುಖಪುಟಬಲವಂತದ ಮತಾಂತರಕ್ಕೆ ಸಂವಿಧಾನದಲ್ಲಿ ಶಿಕ್ಷೆಯಿದೆ, ಹೊಸ ಕಾಯ್ದೆಯ ಅಗತ್ಯವೇನಿದೆ?: ಸಿದ್ದರಾಮಯ್ಯ ಪ್ರಶ್ನೆ

ಬಲವಂತದ ಮತಾಂತರಕ್ಕೆ ಸಂವಿಧಾನದಲ್ಲಿ ಶಿಕ್ಷೆಯಿದೆ, ಹೊಸ ಕಾಯ್ದೆಯ ಅಗತ್ಯವೇನಿದೆ?: ಸಿದ್ದರಾಮಯ್ಯ ಪ್ರಶ್ನೆ

”ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ’

- Advertisement -
- Advertisement -

“ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಸರ್ಕಾರದ ನೂತನ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ? ಇದೇ ಕಾರಣಕ್ಕೆ ನಾವು ವಿರೋಧ ಮಾಡುತ್ತಿದ್ದೇವೆ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ’ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ. ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ” ಎಂದು ಹೇಳಿದ್ದಾರೆ.

’ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಅದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ. ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ’ ಎಂದಿದ್ದಾರೆ.

ಹಿಂದಿನ ಕರಡು ಪ್ರತಿಗೂ ಇಂದಿನ ಕರಡು ಪ್ರತಿಗೂ ವ್ಯತ್ಯಾಸ ತಿಳಿಸಿರುವ ವಿ ಪಕ್ಷ ನಾಯಕ, “ಮತಾಂತರ ನಿಷೇಧ ಕುರಿತ ಈ ಹಿಂದಿನ ಕರಡು ಪ್ರತಿಗೂ, ಈಗಿನ ಮಸೂದೆಗೂ ಇರುವ ಪ್ರಮುಖ ವ್ಯತ್ಯಾಸಗಳೆಂದರೆ. ಮೊದಲನೆಯದು ಹಿಂದಿನ ಕರಡು ಪ್ರತಿಯ ನಿಯಮ 3ರಲ್ಲಿ  ವಿವಾಹ ಎಂಬ ಪದ ಬಳಕೆ ಇರಲಿಲ್ಲ. ಬಿಜೆಪಿ ಯವರು ತಮ್ಮ ಕಾಯ್ದೆಯಲ್ಲಿ ವಿವಾಹವನ್ನು ಹೊಸದಾಗಿ ಸೇರಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಪ್ರಕಾರ ಸಾಕ್ಷಾಧಾರಗಳ ಕೊರತೆ ಕಂಡುಬಂದರೆ ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಈ ಹೊಸ ಕಾಯ್ದೆಯ ನಿಯಮ 12 ರ ಪ್ರಕಾರ ಸಾಕ್ಷಾಧಾರ ಕೊರತೆ ಇದ್ದರೂ ಅದು ದೂರುದಾರನಿಗೆ ಅನುಕೂಲ ಮಾಡಿಕೊಡಲಿದೆ. ಹೀಗಾಗಿ ಕಾಯ್ದೆಯು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

’ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ, ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ?’ ಎಂದು ಪ್ರಶ್ನಿಸಿದ್ದಾರೆ.

’ಇದೇ ಕಾರಣಕ್ಕೆ ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಅಲ್ಲಿನ ಹೈಕೋರ್ಟ್, ಅಲ್ಲಿನ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಸರ್ಕಾರವೇ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.

’ದೇಶದಲ್ಲಿ ಶತಮಾನಗಳ ಹಿಂದಿನಿಂದಲೂ ಮತಾಂತರ ನಡೆದುಕೊಂಡು ಬಂದಿದೆ. ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದ ಪಂಪ, ರನ್ನರು ಜೈನ ಧರ್ಮಕ್ಕೆ ಮತಾಂತರ ಗೊಂಡರು. ಸಾಮ್ರಾಟ್ ಆಶೋಕ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಹೋಗಿಲ್ಲವೇ? ಇದಕ್ಕೆ ಕಾರಣವೇನು ಎಂಬುದು ಯಾರಿಗೂ ತಿಳಿಯದ ವಿಷಯವಲ್ಲ. ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣನವರು ಬ್ರಾಹ್ಮಣರಾಗಿ ಹುಟ್ಟಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿಲ್ಲವೇ? ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್  ಲಕ್ಷಾಂತರ ಜನರ ಜೊತೆಗೆ ಬೌದ್ಧ ಧರ್ಮಕ್ಕೆ ಮತಾಂತರ ಆಗಿಲ್ಲವೇ? ಇವರ್ಯಾರು ಅಧಿಕಾರವೋ ಅಥವಾ ಇನ್ಯಾವುದೋ ಕಾರಣಕ್ಕೆ ಮತಾಂತರಗೊಂಡವರಲ್ಲ’ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

’ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. 2001 ಮತ್ತು 2011 ರ ಜನಗಣತಿಯನ್ನು ನೋಡಿದರೆ ಸತ್ಯ ಏನೆಂದು ಅರಿವಾಗುತ್ತದೆ. 2001 ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ 83.86% ಹಿಂದೂಗಳ ಪ್ರಮಾಣ ಇತ್ತು, ಅದು 2011 ಕ್ಕೆ ಶೇ. 84 ಕ್ಕೆ ಏರಿಕೆಯಾಗಿದೆ. ಮುಸ್ಲಿಮರ ಪ್ರಮಾಣ 12.23% ಇಂದ 12.92 ಹೆಚ್ಚಾಗಿದೆ. ಕ್ರೈಸ್ತರ ಪ್ರಮಾಣ 1.91% ಇಂದ 1.87% ಗೆ ಇಳಿಕೆಯಾಗಿದೆ. ಇದು ನಮ್ಮ ರಾಜ್ಯದ ವಾಸ್ತವ ಸ್ಥಿತಿ’ ಎಂದು ಅಂಕಿ ಅಂಶಗಳನ್ನು ಮುಂದಿಟ್ಟಿದ್ದಾರೆ.

’ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಸಂವಿಧಾನದ ಮೂಲ ನಿಯಮ. ಆದರೆ ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯಲ್ಲಿ ಮಹಿಳೆಯರು, ಅಪ್ರಾಪ್ತರು, ಬುದ್ಧಿಭ್ರಮಣೆಯಾದವರು, ಪರಿಶಿಷ್ಟ ಜಾತಿ ಮತ್ತು ವರ್ಗದವರನ್ನು ಕಾನೂನು ಬಾಹಿರವಾಗಿ ಮತಾಂತರ ಮಾಡಿದರೆ ಮಾತ್ರ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಈ ಅಸಮಾನತೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ’ ಎಂದಿ ತಿಳಿಸಿದ್ದಾರೆ.

’ಹಿಂದೂ ಧರ್ಮದ ಜಾತಿಯತೆ, ಅಸ್ಪೃಶ್ಯತೆ, ಅಸಮಾನತೆಗಳನ್ನು ಕಿತ್ತುಹಾಕಲು ಪ್ರಯತ್ನ ಮಾಡಿದ ಬಾಬಾ ಸಾಹೇಬರು, ಅದು ಸಾಧ್ಯವಾಗದಿದ್ದಾಗ ” ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿ ಸಾಯಲಾರೆ” ಎಂದು ಬೌದ್ಧ ಧರ್ಮಕ್ಕೆ ಮತಾಂತರ ಗೊಂಡರು. ಜೊತೆಗೆ ಲಕ್ಷಾಂತರ ಜನರಿಗೆ ಸ್ವ ಇಚ್ಛೆಯಿಂದ ಮತಾಂತರಗೊಳ್ಳಲು ಕರೆನೀಡಿದ್ದು ನಿಜವಲ್ಲವೇ? ಬಲವಂತದಿಂದ, ಆಸೆ ಆಮಿಷ ಒಡ್ಡಿ, ಹೆದರಿಸಿ ಬೆದರಿಸಿ, ಮೋಸದ ಮೂಲಕ ಮತಾಂತರ ಮಾಡುವುದನ್ನು ನಾನು ವಿರೋಧಿಸುತ್ತೇನೆ. ಇದರ ಜೊತೆಗೆ ಜಾತೀಯತೆ, ಅಸ್ಪೃಶ್ಯತೆ ಅನುಸರಿಸುತ್ತಿರುವವರಿಗೂ ಕಠಿಣ ಶಿಕ್ಷೆಯಾಗಬೇಕು ಎಂಬುದು ನನ್ನ ಒತ್ತಾಯ’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಮತಾಂತರವನ್ನು ದೂಷಿಸುವ ಬದಲು, ಮತಾಂತರವಾಗಲು ನಮ್ಮಲ್ಲಿರುವ ದೋಷಗಳೇನು ಎಂಬುದನ್ನು ಗುರುತಿಸಿ ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಇದು ನಿಜವಾಗಿ ಈಗ ನಾವು ಮಾಡಲೇಬೇಕಾದ ಕೆಲಸ. ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಸಂವಿಧಾನ ಬಾಹಿರ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು” ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮತಾಂತರ ನಿಷೇಧ ಮಸೂದೆ ಬೆನ್ನಲ್ಲೆ ದುಷ್ಕರ್ಮಿಗಳಿಂದ ಚರ್ಚ್ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...