Homeಕರ್ನಾಟಕದೇವಾಲಯವನ್ನೇ ಧಿಕ್ಕರಿಸಿ: ಜಾತಿ ದೌರ್ಜನ್ಯಕ್ಕೆ ಒಳಗಾದ ಹರಿಹರಪುರ ದಲಿತರಿಗೆ ಕೃಷ್ಣಮೂರ್ತಿ ಮನವಿ

ದೇವಾಲಯವನ್ನೇ ಧಿಕ್ಕರಿಸಿ: ಜಾತಿ ದೌರ್ಜನ್ಯಕ್ಕೆ ಒಳಗಾದ ಹರಿಹರಪುರ ದಲಿತರಿಗೆ ಕೃಷ್ಣಮೂರ್ತಿ ಮನವಿ

- Advertisement -
- Advertisement -

“ದೇವಾಲಯ ಪ್ರವೇಶದ ವಿಚಾರವಾಗಿ ನಿಮ್ಮ ಮೇಲೆ ನಡೆದಿರುವ ಈ ಘಟನೆಗೆ ನೀವು ದೇವಸ್ಥಾನವನ್ನೇ ಧಿಕ್ಕರಿಸುವ ಮೂಲಕ ಉತ್ತರಿಸಬೇಕು” ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷರಾದ ಎಂ.ಕೃಷ್ಣಮೂರ್ತಿ ಮನವಿ ಮಾಡಿದರು.

ಕೃಷ್ಣರಾಜಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಇತ್ತೀಚೆಗೆ ಸವರ್ಣೀಯರಿಂದ ನಡೆದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಂತ್ವಾನ ಹೇಳಲು ಗ್ರಾಮಕ್ಕೆ ತೆರಳಿದ್ದ ಅವರು ಸಂತ್ರಸ್ತರೊಂದಿಗೆ ಮಾತನಾಡಿದರು.

“ನಿಮಗೆ ಬಾಬಾ ಸಾಹೇಬರ ಸಂವಿಧಾನವು ಶಿಕ್ಷಣ , ಮೀಸಲಾತಿ , ಉದ್ಯೋಗ , ಸಮಾನತೆ ಮತ್ತು ಮೂಲಭೂತ ಹಕ್ಕುಗಳನ್ನು ನೀಡಿದೆ ಹೊರತು ಯಾವ ದೇವಾಲಯಗಳಾಗಲಿ, ದೇವರಾಗಲಿ ಅಲ್ಲ” ಎಂದು ತಿಳಿಸಿದರು.

ಈ ಸಾಮಾಜಿಕ ವ್ಯವಸ್ಥೆಯಲ್ಲಿ ಸವರ್ಣಿಯರು ಯಾವುದೇ ಬದಲಾವಣೆಯನ್ನು ಬಯಸುವುದಿಲ್ಲ. ಹಾಗಾಗಿ ನಾವೇ ಮೊದಲು ಬದಲಾಗಬೇಕು. ಅಂತಿಮವಾಗಿ ನಾವು ಸ್ವ ಉದ್ಯೋಗದ ಮೂಲಕ ಸ್ವಾಭಿಮಾನ ಮೆರೆದು ನಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕು ಎಂದ ಅವರು, ಸಂತ್ರಸ್ತರಿಗೆ ಕಾನೂನಾತ್ಮಕ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.

ಬಹುಜನ ಸಮಾಜ ಪಕ್ಷದ ಜಿಲ್ಲಾ ಉಸ್ತುವಾರಿಗಳಾದ ಚಲುವರಾಜು , ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ , ತಾಲ್ಲೂಕು ಉಸ್ತುವಾರಿ ಗೋವಿಂದರಾಜು , ತಾಲ್ಲೂಕು ಅಧ್ಯಕ್ಷರಾದ ಬಸ್ತಿಪ್ರದೀಪ್ , ಪ್ರಧಾನ ಕಾರ್ಯದರ್ಶಿ ಗಂಗಾಧರ್ , ಹಾಜರಿದ್ದರು.

ಇದನ್ನೂ ಓದಿರಿ: ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ಏನಿದು ಪ್ರಕರಣ?

ಹನುಮ ಜಯಂತಿ ಪ್ರಯುಕ್ತ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ನಡೆದಿತ್ತು.

ಡಿ.16ರಂದು ಘಟನೆ ನಡೆದಿದ್ದು, ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರಂಜನ್‌ ದೂರು ಸ್ವೀಕರಿಸಲು ನಿರಾಕರಿಸಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಲ್ಲಿ ದಲಿತರು ನೋವು ತೋಡಿಕೊಂಡಿದ್ದು, 27 ಮಂದಿಯ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.

“ನಿಮ್ಮಿಂದ ದೇವಸ್ಥಾನ ಮಲಿನಗೊಂಡಿದೆ. ನಿಮ್ಮಂಥ ಜನರನ್ನು ಭೂಮಿ ಮೇಲೆ ಇರದಂತೆ ಸುಟ್ಟು ಹಾಕುತ್ತೇವೆ ಎಂದು ಡಿ.16ರ ರಾತ್ರಿ 11.30ರ ಸಮಯದಲ್ಲಿ ಸುಮಾರು 50-60 ಜನ ಸವರ್ಣೀಯರು ಮಾರಕಾಸ್ತ್ರಗಳಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಾದ ದೊಣ್ಣೆ, ಕೊಡಲಿ, ಪಂಚ್‌, ಕಲ್ಲು ಮತ್ತು ಇಟ್ಟಿಗೆಗಳೊಂದಿಗೆ ದಲಿತ ಕಾಲೋನಿಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಅಂಗವಿಕಲ ವ್ಯಕ್ತಿ ನಂಜಯ್ಯ ಎಂಬುವವರ ಮೇಲೆಯೂ ದಾಳಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ದಲಿತರು ದೂರು ನೀಡಿದ್ದರು.

ಘಟನೆಯಲ್ಲಿ ಗಾಯಗೊಂಡ ದಲಿತ ಯುವಕರಾದ ದರ್ಶನ್, ಸುನಿಲ್‌, ಲೋಹಿತ್‌, ಅಭಿಷೇಕ್‌, ವಿನಯ್‌, ಸಂಜಯ್‌, ಚಲವರಾಜು, ಭಾಗ್ಯಮ್ಮ, ಕುಮಾರ, ರಂಜಮ್ಮ, ಶೋಭಾ, ನಂಜಯ್ಯ ಅವರು ನೀಡಿದ ದೂರಿನ ಅನ್ವಯ 27 ಜನರ ಮೇಲೆ ಪ್ರಕರಣ ದಾಖಲಾಗಿದೆ.

ಆರೋಪಿಗಳು: ಮಂಜುನಾಥ್‌ (ತಂದೆ: ತಮ್ಮೇಗೌಡ), ಶ್ರೀಧರ (ನಾಗೇಗೌಡ), ಸಂತೋಷ್ (ಕೃಷ್ಣೇಗೌಡ), ಶ್ರೀನಿವಾಸ ಎಚ್‌.ಟಿ. (ತಿಮ್ಮೇಗೌಡ), ರಂಜಿತ್‌ (ನಾರಾಯಣಗೌಡ), ಸತೀಶ (ರಾಮೇಗೌಡ), ಸ್ವಾಮಿ (ಸಹದೇವ), ಮುತ್ತು (ನಾರಾಯಣ), ರಜಿತ್‌ ಅಲಿಯಾಸ್ ಮಿಲ್ಟ್ರಿ (ನಾರಾಯಣಗೌಡ), ಮಂಜುನಾಥ (ತಮ್ಮೇಗೌಡ), ಮೋಹನ್ (ನಂಜೇಗೌಡ), ಮಂಜ (ಜಿಂಕೆ ಚಲುವಯ್ಯ), ಹರೀಶ ಮಡಗಿನಕುಡಿ, ವೆಂಕಟೇಶ್‌ ಹರಿಹರಪುರ, ರಾಘು (ವೆಂಕಟೇಶ್‌), ರವಿ ಅಲಿಯಾಸ್ ಚಡ್ಡಿ (ಮಂಜೇಗೌಡ), ಮಂಜ (ಜವರೇಗೌಡ), ಸುರೇಶ (ಕರಿಯಪ್ಪ), ಗುಂಡೂ (ವೆಂಕಟಾಚಲ), ಬಾನುಪ್ರಕಾಶ್ (ಗಂಗಾಧರ್‌), ಶಿವಕುಮಾರ (ಶ್ರೀನಿವಾಸ್), ದರ್ಶನ್‌ ಕುರೇನಹಳ್ಳಿ, ದೀಪು (ಶಂಕರ್‌ ಅಲಿಯಾಸ್‌ ರೇಷ್ಮೇ ಇಲಾಖೆ), ಮೋಹನ (ಶ್ರೀನಿವಾಸ್‌), ಪ್ರದೀಪ್ (ವೆಂಕಟೇಶ್), ಜಯಂತ್‌ (ಡಯಟ್ ಜಯರಾಮ್‌), ಗೌತಮ್ಮ ಅಲಿಯಾಸ್ ಕುಳ್ಳಯ್ಯ.


ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಮಾನವೀಯ ಹಿಂದೂ ಧರ್ಮದ ರಕ್ಷಣೆಗಾಗಿ “ಮತಾಂತರ ವಿರೋಧಿ ಕಾನೂನನ್ನು” ಈ ಸರ್ಕಾರ ಜಾರಿ ಮಾಡಿದ್ದು ಇದನ್ನು ಪ್ರಜಾಪ್ರಭುತ್ವ, ಸ್ವಾತಂತ್ರ್ಯ ರಕ್ಷಣೆಗಾಗಿ ಎಲ್ಲರೂ ವಿರೋಧಿಸಬೇಕಾಗಿದೆ

  2. ಭಾರತದ ಸಂವಿಧಾನ ಅವಕಾಶ ಮಾಡಿಕೊಟ್ಟಿರುವಂತೆ ತನಗೆ ಆಪ್ತವೆನಿಸುವ ಧರ್ಮವನ್ನು ಅನುಸರಿಸಲು ಅವಕಾಶ ಇದೆ. ಹೀಗಿರುವಾಗ ಮತಾಂತರ ಕಾಯ್ದೆ ತರುವ ಪ್ರಮೇಯವಾದರೂ ಏನಿದೆ?
    ತನ್ನ ಮೂಲ ಧರ್ಮ ತೊರೆದು ಬೇರೆ ಧರ್ಮಕ್ಕೆ ಮತಾಂತರ ಹೋಗಲು ಬಯಸುವುದಕ್ಕೆ ಕಾರಣವೇನು? ಮೂಲ ಧರ್ಮದಲ್ಲಿ ತಾನು ಎದುರಿಸಬಹುದಾದ ಸಾಮಾಜಿಕ, ಆರ್ಥಿಕವಾಗಿ ಸಂಕಠಗಳು, ಮೇಲ್ವರ್ಗದ ದೌರ್ಜನ್ಯ, ಬಹಿಷ್ಕಾರ ಮುಂತಾದ ಕಾರಣಗಳು ಬೇರೆ ಧರ್ಮವನ್ನು ಅನುಸರಿಸುವುದು ಅನಿವಾರ್ಯವಾಗುತ್ತದೆ. ಅದರ ಸಂಕಟವನ್ನು ಅನುಭವಿಸಿದವರಿಗೆ ಅರಿವಾಗುತ್ತದೆ. ಇದಕ್ಕೆ ಉದಾಹರಣೆಯಾಗಿ ಇತ್ತೀಚಿಗಷ್ಟೇ ಮಂಡ್ಯದ ಕೆ. ಆರ್. ಪೇಟೆಯಲ್ಲಿ ನಡೆದ ಘಟನೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...