Homeಕರ್ನಾಟಕದೇವಾಲಯವನ್ನೇ ಧಿಕ್ಕರಿಸಿ: ಜಾತಿ ದೌರ್ಜನ್ಯಕ್ಕೆ ಒಳಗಾದ ಹರಿಹರಪುರ ದಲಿತರಿಗೆ ಕೃಷ್ಣಮೂರ್ತಿ ಮನವಿ

ದೇವಾಲಯವನ್ನೇ ಧಿಕ್ಕರಿಸಿ: ಜಾತಿ ದೌರ್ಜನ್ಯಕ್ಕೆ ಒಳಗಾದ ಹರಿಹರಪುರ ದಲಿತರಿಗೆ ಕೃಷ್ಣಮೂರ್ತಿ ಮನವಿ

- Advertisement -
- Advertisement -

“ದೇವಾಲಯ ಪ್ರವೇಶದ ವಿಚಾರವಾಗಿ ನಿಮ್ಮ ಮೇಲೆ ನಡೆದಿರುವ ಈ ಘಟನೆಗೆ ನೀವು ದೇವಸ್ಥಾನವನ್ನೇ ಧಿಕ್ಕರಿಸುವ ಮೂಲಕ ಉತ್ತರಿಸಬೇಕು” ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷರಾದ ಎಂ.ಕೃಷ್ಣಮೂರ್ತಿ ಮನವಿ ಮಾಡಿದರು.

ಕೃಷ್ಣರಾಜಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಇತ್ತೀಚೆಗೆ ಸವರ್ಣೀಯರಿಂದ ನಡೆದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಂತ್ವಾನ ಹೇಳಲು ಗ್ರಾಮಕ್ಕೆ ತೆರಳಿದ್ದ ಅವರು ಸಂತ್ರಸ್ತರೊಂದಿಗೆ ಮಾತನಾಡಿದರು.

“ನಿಮಗೆ ಬಾಬಾ ಸಾಹೇಬರ ಸಂವಿಧಾನವು ಶಿಕ್ಷಣ , ಮೀಸಲಾತಿ , ಉದ್ಯೋಗ , ಸಮಾನತೆ ಮತ್ತು ಮೂಲಭೂತ ಹಕ್ಕುಗಳನ್ನು ನೀಡಿದೆ ಹೊರತು ಯಾವ ದೇವಾಲಯಗಳಾಗಲಿ, ದೇವರಾಗಲಿ ಅಲ್ಲ” ಎಂದು ತಿಳಿಸಿದರು.

ಈ ಸಾಮಾಜಿಕ ವ್ಯವಸ್ಥೆಯಲ್ಲಿ ಸವರ್ಣಿಯರು ಯಾವುದೇ ಬದಲಾವಣೆಯನ್ನು ಬಯಸುವುದಿಲ್ಲ. ಹಾಗಾಗಿ ನಾವೇ ಮೊದಲು ಬದಲಾಗಬೇಕು. ಅಂತಿಮವಾಗಿ ನಾವು ಸ್ವ ಉದ್ಯೋಗದ ಮೂಲಕ ಸ್ವಾಭಿಮಾನ ಮೆರೆದು ನಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕು ಎಂದ ಅವರು, ಸಂತ್ರಸ್ತರಿಗೆ ಕಾನೂನಾತ್ಮಕ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.

ಬಹುಜನ ಸಮಾಜ ಪಕ್ಷದ ಜಿಲ್ಲಾ ಉಸ್ತುವಾರಿಗಳಾದ ಚಲುವರಾಜು , ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ , ತಾಲ್ಲೂಕು ಉಸ್ತುವಾರಿ ಗೋವಿಂದರಾಜು , ತಾಲ್ಲೂಕು ಅಧ್ಯಕ್ಷರಾದ ಬಸ್ತಿಪ್ರದೀಪ್ , ಪ್ರಧಾನ ಕಾರ್ಯದರ್ಶಿ ಗಂಗಾಧರ್ , ಹಾಜರಿದ್ದರು.

ಇದನ್ನೂ ಓದಿರಿ: ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ಏನಿದು ಪ್ರಕರಣ?

ಹನುಮ ಜಯಂತಿ ಪ್ರಯುಕ್ತ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ನಡೆದಿತ್ತು.

ಡಿ.16ರಂದು ಘಟನೆ ನಡೆದಿದ್ದು, ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರಂಜನ್‌ ದೂರು ಸ್ವೀಕರಿಸಲು ನಿರಾಕರಿಸಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಲ್ಲಿ ದಲಿತರು ನೋವು ತೋಡಿಕೊಂಡಿದ್ದು, 27 ಮಂದಿಯ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.

“ನಿಮ್ಮಿಂದ ದೇವಸ್ಥಾನ ಮಲಿನಗೊಂಡಿದೆ. ನಿಮ್ಮಂಥ ಜನರನ್ನು ಭೂಮಿ ಮೇಲೆ ಇರದಂತೆ ಸುಟ್ಟು ಹಾಕುತ್ತೇವೆ ಎಂದು ಡಿ.16ರ ರಾತ್ರಿ 11.30ರ ಸಮಯದಲ್ಲಿ ಸುಮಾರು 50-60 ಜನ ಸವರ್ಣೀಯರು ಮಾರಕಾಸ್ತ್ರಗಳಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಾದ ದೊಣ್ಣೆ, ಕೊಡಲಿ, ಪಂಚ್‌, ಕಲ್ಲು ಮತ್ತು ಇಟ್ಟಿಗೆಗಳೊಂದಿಗೆ ದಲಿತ ಕಾಲೋನಿಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಅಂಗವಿಕಲ ವ್ಯಕ್ತಿ ನಂಜಯ್ಯ ಎಂಬುವವರ ಮೇಲೆಯೂ ದಾಳಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ದಲಿತರು ದೂರು ನೀಡಿದ್ದರು.

ಘಟನೆಯಲ್ಲಿ ಗಾಯಗೊಂಡ ದಲಿತ ಯುವಕರಾದ ದರ್ಶನ್, ಸುನಿಲ್‌, ಲೋಹಿತ್‌, ಅಭಿಷೇಕ್‌, ವಿನಯ್‌, ಸಂಜಯ್‌, ಚಲವರಾಜು, ಭಾಗ್ಯಮ್ಮ, ಕುಮಾರ, ರಂಜಮ್ಮ, ಶೋಭಾ, ನಂಜಯ್ಯ ಅವರು ನೀಡಿದ ದೂರಿನ ಅನ್ವಯ 27 ಜನರ ಮೇಲೆ ಪ್ರಕರಣ ದಾಖಲಾಗಿದೆ.

ಆರೋಪಿಗಳು: ಮಂಜುನಾಥ್‌ (ತಂದೆ: ತಮ್ಮೇಗೌಡ), ಶ್ರೀಧರ (ನಾಗೇಗೌಡ), ಸಂತೋಷ್ (ಕೃಷ್ಣೇಗೌಡ), ಶ್ರೀನಿವಾಸ ಎಚ್‌.ಟಿ. (ತಿಮ್ಮೇಗೌಡ), ರಂಜಿತ್‌ (ನಾರಾಯಣಗೌಡ), ಸತೀಶ (ರಾಮೇಗೌಡ), ಸ್ವಾಮಿ (ಸಹದೇವ), ಮುತ್ತು (ನಾರಾಯಣ), ರಜಿತ್‌ ಅಲಿಯಾಸ್ ಮಿಲ್ಟ್ರಿ (ನಾರಾಯಣಗೌಡ), ಮಂಜುನಾಥ (ತಮ್ಮೇಗೌಡ), ಮೋಹನ್ (ನಂಜೇಗೌಡ), ಮಂಜ (ಜಿಂಕೆ ಚಲುವಯ್ಯ), ಹರೀಶ ಮಡಗಿನಕುಡಿ, ವೆಂಕಟೇಶ್‌ ಹರಿಹರಪುರ, ರಾಘು (ವೆಂಕಟೇಶ್‌), ರವಿ ಅಲಿಯಾಸ್ ಚಡ್ಡಿ (ಮಂಜೇಗೌಡ), ಮಂಜ (ಜವರೇಗೌಡ), ಸುರೇಶ (ಕರಿಯಪ್ಪ), ಗುಂಡೂ (ವೆಂಕಟಾಚಲ), ಬಾನುಪ್ರಕಾಶ್ (ಗಂಗಾಧರ್‌), ಶಿವಕುಮಾರ (ಶ್ರೀನಿವಾಸ್), ದರ್ಶನ್‌ ಕುರೇನಹಳ್ಳಿ, ದೀಪು (ಶಂಕರ್‌ ಅಲಿಯಾಸ್‌ ರೇಷ್ಮೇ ಇಲಾಖೆ), ಮೋಹನ (ಶ್ರೀನಿವಾಸ್‌), ಪ್ರದೀಪ್ (ವೆಂಕಟೇಶ್), ಜಯಂತ್‌ (ಡಯಟ್ ಜಯರಾಮ್‌), ಗೌತಮ್ಮ ಅಲಿಯಾಸ್ ಕುಳ್ಳಯ್ಯ.


ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಮಾನವೀಯ ಹಿಂದೂ ಧರ್ಮದ ರಕ್ಷಣೆಗಾಗಿ “ಮತಾಂತರ ವಿರೋಧಿ ಕಾನೂನನ್ನು” ಈ ಸರ್ಕಾರ ಜಾರಿ ಮಾಡಿದ್ದು ಇದನ್ನು ಪ್ರಜಾಪ್ರಭುತ್ವ, ಸ್ವಾತಂತ್ರ್ಯ ರಕ್ಷಣೆಗಾಗಿ ಎಲ್ಲರೂ ವಿರೋಧಿಸಬೇಕಾಗಿದೆ

  2. ಭಾರತದ ಸಂವಿಧಾನ ಅವಕಾಶ ಮಾಡಿಕೊಟ್ಟಿರುವಂತೆ ತನಗೆ ಆಪ್ತವೆನಿಸುವ ಧರ್ಮವನ್ನು ಅನುಸರಿಸಲು ಅವಕಾಶ ಇದೆ. ಹೀಗಿರುವಾಗ ಮತಾಂತರ ಕಾಯ್ದೆ ತರುವ ಪ್ರಮೇಯವಾದರೂ ಏನಿದೆ?
    ತನ್ನ ಮೂಲ ಧರ್ಮ ತೊರೆದು ಬೇರೆ ಧರ್ಮಕ್ಕೆ ಮತಾಂತರ ಹೋಗಲು ಬಯಸುವುದಕ್ಕೆ ಕಾರಣವೇನು? ಮೂಲ ಧರ್ಮದಲ್ಲಿ ತಾನು ಎದುರಿಸಬಹುದಾದ ಸಾಮಾಜಿಕ, ಆರ್ಥಿಕವಾಗಿ ಸಂಕಠಗಳು, ಮೇಲ್ವರ್ಗದ ದೌರ್ಜನ್ಯ, ಬಹಿಷ್ಕಾರ ಮುಂತಾದ ಕಾರಣಗಳು ಬೇರೆ ಧರ್ಮವನ್ನು ಅನುಸರಿಸುವುದು ಅನಿವಾರ್ಯವಾಗುತ್ತದೆ. ಅದರ ಸಂಕಟವನ್ನು ಅನುಭವಿಸಿದವರಿಗೆ ಅರಿವಾಗುತ್ತದೆ. ಇದಕ್ಕೆ ಉದಾಹರಣೆಯಾಗಿ ಇತ್ತೀಚಿಗಷ್ಟೇ ಮಂಡ್ಯದ ಕೆ. ಆರ್. ಪೇಟೆಯಲ್ಲಿ ನಡೆದ ಘಟನೆ.

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...