Homeಕರ್ನಾಟಕ‘ಮತಾಂತರ ನಿಷೇಧ ಮಸೂದೆ’ ವಿಧಾನಸಭೆಯಲ್ಲಿ ಪಾಸ್‌

‘ಮತಾಂತರ ನಿಷೇಧ ಮಸೂದೆ’ ವಿಧಾನಸಭೆಯಲ್ಲಿ ಪಾಸ್‌

- Advertisement -
- Advertisement -

ವಿರೋಧ ಪಕ್ಷಗಳ ತೀವ್ರ ವಿರೋಧದ ನಡೆವೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನು (ಧಾರ್ಮಿಕ ಸ್ವಾತಂತ್ರ್ಯದ ಕರ್ನಾಟಕ ಹಕ್ಕು ಮಸೂದೆ, 2021) ಧ್ವನಿಮತದ ಮೂಲಕ ಅಂಗೀಕಾರ ಮಾಡಲಾಗಿದೆ.

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆಯ ಕುರಿತು ಗಂಭೀರ ಚರ್ಚೆಯಾಯಿತು. ಸದನದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು, “2001ರ ಜನಗಣತಿ ಪ್ರಕಾರ, ಹಿಂದೂಗಳು 83.86 ಇದ್ದರು. 2011ರಲ್ಲಿ 84 ರಷ್ಟಾಗಿದ್ದಾರೆ. ಅದೇ ರೀತಿ ಇಸ್ಲಾಂ ಧರ್ಮದವರು 2001ರಲ್ಲಿ 12.23 ಇತ್ತು 2011ರಲ್ಲಿ 12.92 ಹೆಚ್ಚಳ ಕಂಡಿದೆ. ಕ್ರಿಶ್ಚಿಯನ್ 2001ರಲ್ಲಿ 1.91 2011ರಲ್ಲಿ 1.87 ಆಗಿದೆ” ಎಂದು ತಿಳಿಸಿದರು.

ಕಾನೂನು ಸಚಿವ ಮಾಧುಸ್ವಾಮಿ ಕಾಂಗ್ರೆಸ್ ಅವಧಿಯಲ್ಲಿ ಈ ಮಸೂದೆ ಇನಿಷಿಯೇಟ್ ಆಗಿತ್ತು ಎಂದು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಸ್ಕೂಟನಿ ಕಮಿಷನ್ ಗೆ ಕಾನೂನು ಸಚಿವರು ಅಧ್ಯಕ್ಷರು ಆಗಿರುತ್ತಾರೆ. ಕಾನೂನು ಸಚಿವರು ಸ್ಕೂಟನಿ ಮಾಡಿ, ಶಾಸಕಾಂಗಕ್ಕೆ ಹೋಗಿ, ಅದು ಡ್ರಾಫ್ಟ್ ಆಗಿ, ನಂತರ ಮುಖ್ಯಮಂತ್ರಿ ಹತ್ತಿರ ಬಂದು, ಆಮೇಲೆ ಕ್ಯಾಬಿನೆಟ್ ಗೆ ಹೋಗುತ್ತದೆ. ಅಂದಿನ ಸರ್ಕಾರದಲ್ಲಿ ಜಯಚಂದ್ರ ಅವರು ಕಾನೂನು ಸಚಿವರಾಗಿದ್ದರು. ಅವರಿಗೆ ಫೋನ್ ಮಾಡ್ದೆ, ನಮ್ಮ ಕಾಲದಲ್ಲಿ ಅದು ಇನಿಷಿಯೇಟ್ ಆಗಿಲ್ಲ ಅಂತಾ ಹೇಳಿದರು. ವಿಷಯವನ್ನು ಪರಿಶೀಲನೆ ಮಾಡಿ ಅಂತಾ ಹೇಳಿದರೆ ಇನಿಷಿಯೇಷನ್ ಆಗಲ್ಲ. ಅದಕ್ಕೆ ಒಪ್ಪಿಗೆ ಕೊಟ್ಟರೆ ಮಾತ್ರ ಇನಿಷೇಷಯೇಷನ್ ಆಗುತ್ತೆ ಎಂದು ಸಿದ್ದರಾಮಯ್ಯ ಸದನದಲ್ಲಿ ವಿವರಿಸಿದರು.

ಉತ್ತರಪ್ರದೇಶ, ಗುಜರಾತ್, ಮಧ್ಯಪ್ರದೇಶ ಮತ್ತು ಕರ್ನಾಟಕ ರಾಜ್ಯಗಳ ಮತಾಂತರ ಮಸೂದೆಯ ಡ್ರಾಫ್ಟ್ ತಯಾರಿ ಮಾಡಿದ್ದು ಒಬ್ಬರೇ. ಒಂದು ರೀತಿಯಲ್ಲಿ ಇದು ಕಟ್ & ಪೇಸ್ಟ್ ಎಂದು ಆರೋಪಿಸಿದರು. ಮಸೂದೆಯ ಸೆಕ್ಷನ್ 3 ವಿವಾಹದ ನಿಬಂಧನೆಗಳನ್ನು ಹೇರಿದೆ. ಇದನ್ನು ಗುಜರಾತ್ ಹೈಕೋರ್ಟ್ ಪ್ರಶ್ನಿಸಿ ಗುಜರಾತ್ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಆ ಸೆಕ್ಷನ್ ತಡೆ ಹಿಡಿದಿದೆ. ಆದರೆ ಆ ಸೆಕ್ಷನ್ ನಮ್ಮ ಮಸೂದೆಯಲ್ಲಿ ಯಥಾವತ್ ಇದೆ ಎಂದು ಆರೋಪಿಸಿದರು.

ಕಾನೂನು ಆಯೋಗದ ಡ್ರಾಫ್ಟ್ನಲ್ಲೂ ಇದು ಇರಲಿಲ್ಲ. ಸೆಕ್ಷನ್ 5 ಮತ್ತು 12 ಕೂಡ ಯುಪಿ ಮಸೂದೆಯ ನಕಲುಗಳೇ ಆಗಿವೆ. ಕಾನೂನು ಆಯೋಗದ ಡ್ರಾಫ್ಟ್ಗೆ ಇವೆಲ್ಲ ವಿರುದ್ಧವಾಗಿವೆ. ಬಲವಂತದ, ಆಮಿಷದ ಮತಾಂತರ ತಪ್ಪು ಎಂದು ಸಂವಿಧಾನವೇ ಹೇಳಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ ಕೂಡ ಇದನ್ನು ಅಪರಾಧ ಎಂದು ಹೇಳುತ್ತದೆ. ಹೀಗಿರುವಾಗ ಮತಾಂತರ ತಡೆಗೆ ಪ್ರತ್ಯೇಕ ಕಾಯಿದೆ ಅಗತ್ಯವಿತ್ತೆ? ಎಂದು ಪ್ರಶ್ನಿಸಿದರು.

“ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಸರ್ಕಾರದ ನೂತನ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ? ಇದೇ ಕಾರಣಕ್ಕೆ ನಾವು ವಿರೋಧ ಮಾಡುತ್ತಿದ್ದೇವೆ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ’ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ. ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ” ಎಂದು ಹೇಳಿದ್ದಾರೆ.

’ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಅದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ. ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ’ ಎಂದಿದ್ದಾರೆ.

’ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ, ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ?’ ಎಂದು ಪ್ರಶ್ನಿಸಿದ್ದಾರೆ.

’ಇದೇ ಕಾರಣಕ್ಕೆ ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಅಲ್ಲಿನ ಹೈಕೋರ್ಟ್, ಅಲ್ಲಿನ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಸರ್ಕಾರವೇ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಮತಾಂತರ ನಿಷೇಧ ಮಸೂದೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರವಾಗಿದ್ದು, ವಿಧಾನಪರಿಷತ್‌‌ನಲ್ಲಿಯೂ ಅಂಗೀಕಾರವಾದಲ್ಲಿ ಕಾಯ್ದೆಯಾಗಿ ಜಾರಿಯಾಗಲಿದೆ.


ಇದನ್ನೂ ಓದಿರಿ: ದೇವಾಲಯವನ್ನೇ ಧಿಕ್ಕರಿಸಿ: ಜಾತಿ ದೌರ್ಜನ್ಯಕ್ಕೆ ಒಳಗಾದ ಹರಿಹರಪುರ ದಲಿತರಿಗೆ ಕೃಷ್ಣಮೂರ್ತಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...