Homeದಲಿತ್ ಫೈಲ್ಸ್ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

‘ಭೋಜನ್ ಮಾತಾ’ ಆಗಿ ನೇಮಕಗೊಂಡಿದ್ದ ದಲಿತ ಮಹಿಳೆಯನ್ನು ಉತ್ತರಖಾಂಡ್‌ ಸರ್ಕಾರ ವಜಾಗೊಳಿಸಿದೆ. ನೇಮಕಾತಿಯಲ್ಲಿ ಲೋಪವಾಗಿದೆ ಎಂದು ಕಾರಣ ನೀಡಲಾಗಿದೆ.

- Advertisement -
- Advertisement -

ಉತ್ತರಾಖಂಡ್‌ನ ಸರ್ಕಾರಿ ಶಾಲೆಯೊಂದರಲ್ಲಿ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆಯೊಬ್ಬರು ನೇಮಕವಾದ ಬಳಿಕ ಸವರ್ಣೀಯ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಿದ್ದು ಸುದ್ದಿಯಾದ ಬೆನ್ನಲ್ಲೇ ನೇಮಕಾತಿಯಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ನಿರ್ಧರಿಸಿರುವ ಅಧಿಕಾರಿಗಳು ದಲಿತ ಮಹಿಳೆಯನ್ನು ಬುಧವಾರ ಕೆಲಸದಿಂದ ತೆಗೆದಿದ್ದಾರೆ.

ಸುಖಿಧಾಂಗ್ ಸರ್ಕಾರಿ ಅಂತರ ಕಾಲೇಜಿನ (ಜಿಐಸಿ) ಪ್ರಾಂಶುಪಾಲರಾದ ಪ್ರೇಮ್ ಸಿಂಗ್ ಅವರು ದಲಿತ ಮಹಿಳೆ ಸುನೀತಾ ದೇವಿ ಅವರನ್ನು ಭೋಜನ್‌ ಮಾತಾ (ಮಧ್ಯಾಹ್ನದ ಅಡುಗೆ ಮಾಡುವವರು) ಆಗಿ ನೇಮಕ ಮಾಡಿದ್ದರು. ಕಾಲೇಜಿನ ಪ್ರಾಂಶುಪಾಲರು ನೇಮಕಾತಿಯಲ್ಲಿ ನಿಯಮಗಳನ್ನು ಅನುಸರಿಸಲು ವಿಫಲರಾಗಿದ್ದಾರೆ ಎಂದು ನಾವು ವಿಚಾರಣೆಯ ಸಮಯದಲ್ಲಿ ಕಂಡುಕೊಂಡಿದ್ದೇವೆ. ಇದಾದ ನಂತರ ನಾವು ದಲಿತ ಭೋಜನ್‌ ಮಾತಾ ನೇಮಕಾತಿಯನ್ನು ಸರ್ವಾನುಮತದಿಂದ ರದ್ದುಗೊಳಿಸಿದ್ದೇವೆ ಎಂದು ಚಂಪಾವತ್ ಜಿಲ್ಲೆಯ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಆರ್‌.ಸಿ.ಪುರೋಹಿತ್ ಹೇಳಿದ್ದಾರೆ.

ಸವರ್ಣೀಯ ಮಹಿಳೆ ಶಕುಂತಲಾ ದೇವಿ ಅವರ ಸ್ಥಾನಕ್ಕೆ ಸುನೀತಾ ದೇವಿ ಅವರನ್ನು ಡಿಸೆಂಬರ್ 13ರಂದು ಭೋಜನ್‌ ಮಾತೆಯಾಗಿ ನೇಮಿಸಲಾಗಿತ್ತು. ದೇವಿಯವರು ನೇಮಕವಾದ ಮೊದಲ ದಿನ, ಎಲ್ಲಾ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಒಟ್ಟಿಗೆ ಸೇವಿಸಿದರು. ಆದರೆ ಮಾರನೇ ದಿನ 6ರಿಂದ 8ನೇ ತರಗತಿಯ ಸುಮಾರು 40 ಮೇಲ್ಜಾತಿ ವಿದ್ಯಾರ್ಥಿಗಳು ಊಟಕ್ಕೆ ಬರಲಿಲ್ಲ. ಮನೆಯಿಂದ ಟಿಫಿನ್ ತರಲು ಪ್ರಾರಂಭಿಸಿದರು.

ತಮ್ಮ ಮಕ್ಕಳು ಬಹಿಷ್ಕಾರ ಹಾಕಿದ್ದನ್ನು ಸವರ್ಣೀಯ ಪೋಷಕರು ಬೆಂಬಲಿಸಿದರು. “ಹೆಚ್ಚು ಅರ್ಹ ಅಭ್ಯರ್ಥಿಯಾದ ಬ್ರಾಹ್ಮಣ ಸಮುದಾಯದ ಪುಷ್ಪಾ ಭಟ್ ಅವರನ್ನು ಕಡೆಗಣಿಸಿ ಸುನೀತಾ ದೇವಿ ಅವರನ್ನು ಭೋಜನ್‌ ಮಾತಾ ಆಗಿ ಆಯ್ಕೆ ಮಾಡಲಾಗಿದೆ” ಎಂದು ಆರೋಪಿಸಿದ್ದರು. ಈ ಘಟನೆಯು ಪ್ರತಿಭಟನೆಯ ಸ್ವರೂಪ ಪಡೆದು ತನಿಖೆಯನ್ನು ಮಾಡಲಾಯಿತು.

ಇದನ್ನೂ ಓದಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ಉಪ ಶಿಕ್ಷಣಾಧಿಕಾರಿ (ಡಿಇಒ) ಅಂಶು ಬಿಷ್ತ್ ಅವರು ಮಂಗಳವಾರ ಇಂಟರ್ ಕಾಲೇಜಿಗೆ ಭೇಟಿ ನೀಡಿ ಶಾಲಾ ಆಡಳಿತ ಸಮಿತಿ (ಎಸ್‌ಎಂಸಿ), ಪೋಷಕ ಶಿಕ್ಷಕರ ಸಂಘ (ಪಿಟಿಎ) ಮತ್ತು ಗ್ರಾಮದ ಮುಖಂಡರ ಜೊತೆ ಸಭೆ ನಡೆಸಿದರು.

“ಪ್ರಾಂಶುಪಾಲರು ನೇಮಕಾತಿಯ ಮೊದಲು ಅನುಮೋದನೆಯನ್ನು ತೆಗೆದುಕೊಳ್ಳಬೇಕಾಗಿತ್ತು. ಆದರೆ ಅವರು ನಿಯಮಗಳನ್ನು ಅನುಸರಿಸಲು ವಿಫಲರಾಗಿದ್ದಾರೆ. ನಿಯಮಗಳ ಪ್ರಕಾರ, ನೇಮಕಾತಿಯ ಮೊದಲು ಡಿಇಒಯಿಂದ ಅನುಮೋದನೆ ಪಡೆಯಬೇಕು. ಹೀಗಾಗಿ ನೇಮಕಾತಿ ಪ್ರಕ್ರಿಯೆಯನ್ನು ಮತ್ತೆ ನಡೆಸಲಾಗುವುದು. ದಲಿತ ಭೋಜನ್‌ ಮಾತಾ ಮತ್ತೆ ಅರ್ಜಿ ಸಲ್ಲಿಸಬಹುದು” ಎಂದು ಪುರೋಹಿತ್ ಹೇಳಿದರು.

“ಹೊಸ ಅಡುಗೆಯವರನ್ನು ನೇಮಿಸುವವರೆಗೆ, ಇನ್ನೊಬ್ಬ ಭೋಜನ್‌ ಮಾತೆ ಅಂದರೆ ಸವರ್ಣೀಯ ಮಹಿಳೆ ಮಧ್ಯಾಹ್ನದ ಅಡುಗೆಯನ್ನು ಮಾಡುತ್ತಾರೆ. ನಾನು ಪ್ರತಿ ಜಾತಿಯ ಮಕ್ಕಳೊಂದಿಗೆ ಕುಳಿತು ಮಂಗಳವಾರ ಮಧ್ಯಾಹ್ನದ ಊಟವನ್ನು ಮಾಡಿದ್ದೇನೆ. ಈಗ ಪೋಷಕರು ಮತ್ತು ಮಕ್ಕಳ ನಡುವೆ ಯಾವುದೇ ಸಮಸ್ಯೆ ಇಲ್ಲ” ಎಂದು ಸಿಇಒ ತಿಳಿಸಿದ್ದಾರೆ.

“ನಮ್ಮ ಉನ್ನತ ಅಧಿಕಾರಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವು ಲೋಪದೋಷಗಳನ್ನು ಕಂಡು ದಲಿತ ಭೋಜನ್‌ ಮಾತಾ ನೇಮಕಾತಿಯನ್ನು ರದ್ದುಗೊಳಿಸಿದ್ದಾರೆ. ನಾವು ಪ್ರಕ್ರಿಯೆಯನ್ನು ಮತ್ತೆ ಪ್ರಾರಂಭಿಸುತ್ತೇವೆ. ಎಲ್ಲಾ ಮಕ್ಕಳು ಇಂದಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ತಿನ್ನಲು ಪ್ರಾರಂಭಿಸಿದ್ದಾರೆ” ಎಂದು ಪ್ರೇಮ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

“ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು ಸರ್ಕಾರದ ನಿರ್ಧಾರದಿಂದ ಖುಷಿಯಾಗಿದ್ದಾರೆ. ಶಿಕ್ಷಣ ಅಧಿಕಾರಿಗಳ ವಿಚಾರಣೆ ಮತ್ತು ನಿರ್ಧಾರದಿಂದ ಪೋಷಕರು ತೃಪ್ತರಾಗಿದ್ದಾರೆ. ನೇಮಕಾತಿ ಪ್ರಕ್ರಿಯೆಯನ್ನು ಮತ್ತೊಮ್ಮೆ ನಡೆಸಬೇಕು. ಭೋಜನ್ಮಾತೆಯ ನೇಮಕಾತಿಯಲ್ಲಿ ಎಲ್ಲಾ ಮಾನದಂಡಗಳನ್ನು ಅನುಸರಿಸಲಾಗುವುದು. ಸವರ್ಣೀಯ ಮಕ್ಕಳು ಬಹಿಷ್ಕಾರವನ್ನು ಕೈಬಿಟ್ಟು ಹಿಂದಿನಂತೆಯೇ ಮಧ್ಯಾಹ್ನದ ಊಟ ಮಾಡುತ್ತಿದ್ದಾರೆ” ಎಂದು ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ಹೇಳಿದ್ದಾರೆ.

ಇದನ್ನೂ ಓದಿರಿ: ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ದೇವಿಯನ್ನು ವಜಾಗೊಳಿಸುವ ಕ್ರಮವನ್ನು ಅನೇಕ ಕಾರ್ಯಕರ್ತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಕಟುವಾಗಿ ಟೀಕಿಸಿದ್ದಾರೆ. ಇದು ಜಾತಿ ತಾರತಮ್ಯ ಮತ್ತು ಪಕ್ಷಪಾತವನ್ನು ತೋರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ದಲಿತ ಮಹಿಳೆ ಮಾಡಿದ ಮಧ್ಯಾಹ್ನದ ಊಟವನ್ನು ಸವರ್ಣೀಯ ವಿದ್ಯಾರ್ಥಿಗಳು ಬಹಿಷ್ಕರಿಸುವುದು ಸಾಮಾಜಿಕ ಅನಿಷ್ಟ. ಈ ಸಂದರ್ಭದಲ್ಲಿ, ಅಧಿಕಾರಿಗಳು ಮತ್ತೊಮ್ಮೆ ಅವರನ್ನು ನೇಮಿಸಬೇಕು” ಎಂದು ಉತ್ತರಾಖಂಡ್ ಪರಿವರ್ತನ್ ಪಕ್ಷದ ಅಧ್ಯಕ್ಷ ಪಿ.ಸಿ.ತಿವಾರಿ ಆಗ್ರಹಿಸಿದ್ದಾರೆ.

ನವೆಂಬರ್ 25 ರಂದು ದಲಿತ ಸಮುದಾಯದ ಸುನಿತಾ ಅವರು ’ಭೋಜನ್ ಮಾತಾ’ (ಅಡುಗೆಯವರು) ಆಗಿ ಕೆಲಸ ಪಡೆದರು. ಅವರ ಮಾಸಿಕ ವೇತನವು 3,000 ರೂ. ಆಗಿತ್ತು. ತನ್ನ ಇಬ್ಬರು ಮಕ್ಕಳು ಮತ್ತು ಅನಾರೋಗ್ಯಕ್ಕೆ ತುತ್ತಾಗಿರುವ ನಿರುದ್ಯೋಗಿ ಪತಿಯನ್ನು ಪೋಷಿಸಲು ಈ ಕೆಲಸ ತುಂಬಾ ಮುಖ್ಯವಾಗಿತ್ತು ಎಂದು ವರದಿಗಳಾಗಿವೆ.

ಸುನೀತಾ ಅವರು ಡಿಸೆಂಬರ್ 14ರಂದು ಶಾಲೆಯಲ್ಲಿ ಅಡುಗೆ ಮಾಡಿದ ಬಳಿಕ ಬಹಿಷ್ಕಾರ ಮಾಡಲಾಯಿತು. ಸುನೀತಾ ತಮ್ಮ ಮಕ್ಕಳಿಗೆ ಅಡುಗೆ ಮಾಡಿದ್ದರಿಂದ ಸವರ್ಣೀಯ ವಿದ್ಯಾರ್ಥಿಗಳ ಪೋಷಕರು ಆಕ್ರೋಶಗೊಂಡಿದ್ದರು.

“ಡಿಸೆಂಬರ್ 13 ರಂದು ನಾನು ಶಾಲೆಗೆ ಸೇರಿದಾಗ, ಎಲ್ಲಾ ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಊಟವನ್ನು ಸೇವಿಸಿದ್ದರು. ಆದರೆ, ಮಾರನೇ ದಿನ ನಾನು ತಯಾರಿಸಿದ ಆಹಾರವನ್ನು ತಿನ್ನಲು ಮಕ್ಕಳು ನಿರಾಕರಿಸಿದಾಗ ನನಗೆ ಆಘಾತವಾಯಿತು. ಊಟ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಪೋಷಕರು ಹೇಳಿದ್ದರು. ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಮಕ್ಕಳಿಗೆ ಅಡುಗೆ ಮಾಡಬೇಡಿ ಎಂದು ಹೇಳಲಾಗಿತ್ತು. ಇದು ತುಂಬಾ ಅವಮಾನಕರವಾಗಿತ್ತು. ನಾನು ನ್ಯಾಯ ಕೇಳೀ ಮತ್ತೆ ಎಲ್ಲಿಗೂ ಹೋಗುವುದಿಲ್ಲ” ಎಂದು ಸುನೀತಾ ನೋವು ತೋಡಿಕೊಂಡಿದ್ದರು.

ಸ್ಥಳೀಯ ‘ಸವರ್ಣೀಯ’ ಗ್ರಾಮಸ್ಥರಿಂದ ಅವಮಾನಕ್ಕೊಳಗಾದ ನಂತರ ದಲಿತ ಮಹಿಳೆ ಸುನೀತಾ ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. “ಸವರ್ಣೀಯರು ಶಕ್ತಿಶಾಲಿಗಳಾಗಿದ್ದು, ನನಗೆ ಶಾಲೆಯಲ್ಲಿ ಕೆಲಸ ಮಾಡಲು ಬಿಡುವುದಿಲ್ಲ. ನನ್ನ ನೇಮಕಾತಿಯನ್ನು ಅಸಿಂಧುಗೊಳಿಸಿ ಸವರ್ಣೀಯ ಮಹಿಳೆಗೆ ಕೆಲಸ ಕೊಟ್ಟರೂ ಆಶ್ಚರ್ಯವಿಲ್ಲ” ಎಂದು ದೇವಿಯವರು ಘಟನೆ ನಡೆದ ಬಳಿಕ ಹೇಳಿಕೆ ನೀಡಿದ್ದು, ಅವರ ಆತಂಕ ಈಗ ನಿಜವಾಗಿದೆ.

ಉತ್ತರಾಖಂಡದಲ್ಲಿ, ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಯೋಜನೆಗಾಗಿ, ಮಹಿಳೆಯರನ್ನು ಅಡುಗೆ ಮಾಡಲು ನೇಮಿಸಲಾಗುತ್ತದೆ ಮತ್ತು ಅವರನ್ನು “ಭೋಜನ್ ಮಾತಾಗಳು” ಎಂದು ಕರೆಯಲಾಗುತ್ತದೆ.


ಇದನ್ನೂ ಓದಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...