Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಮನುಷ್ಯ ರೂಪದ ಪ್ರಾಣಿಯು ಜನರನ್ನು ಕೊಲ್ಲುತ್ತಿದ್ದು, ಜನರು ಎಚ್ಚರ ವಹಿಸಬೇಕೆಂದು ವಾಟ್ಸ್‌ಆಪ್‌ನಲ್ಲಿ ವಿಡಿಯೊಗಳನ್ನು ಹರಿಬಿಡಲಾಗಿದೆ.

- Advertisement -
- Advertisement -

“ನೋಡಿ ಫ್ರೆಂಡ್ಸ್, ಆದಷ್ಟು ರಾತ್ರಿ ಹೊತ್ತು ಓಡಾಡುವುದನ್ನು ಕಡಿಮೆ ಮಾಡಿ. ಯಾಕೆಂದ್ರೆ ಸೇಮ್ ಮನುಷ್ಯ ಆಕಾರದಲ್ಲಿ ಒಂದು ಪ್ರಾಣಿ ಬಂದಿದೆ. ಹುಷಾರು ಫ್ರೆಂಡ್ಸ್, ನೆನ್ನೆ ಹೊಸಕೆರೆ ಪಕ್ಕ ಇರುವ ಹೇಳದಾಸರಹಳ್ಳಿಯಲ್ಲಿ ಒಬ್ಬ ಮನುಷ್ಯನನ್ನು ಕೊಂದಿದೆ ಮತ್ತು ನೊಣವಿನಕೆರೆ ಹತ್ತಿರ ಕೂಡ ಬಂದು ಅಲ್ಲಿಯೂ ಇಬ್ಬರು ವ್ಯಕ್ತಿಯನ್ನು ಕೊಂದಿದೆ. ಈ ಪ್ರಾಣಿ ಮರದ ಮೇಲೆ ಇರುತ್ತೆ… Be Care Full”

“ಸ್ನೇಹಿತರೆ, ತುಮಕೂರು ಜಿಲ್ಲೆಯಲ್ಲಿ ಮನುಷ್ಯನ ರೂಪದಲ್ಲಿ ಇರುವಂತಹ ಒಂದು ವಿಷಜಂತು ಪ್ರಾಣಿ, ಮನುಷ್ಯರನ್ನು ಸಾಯಿಸುತ್ತಾ ಬರುತ್ತಿದೆ. ಹೊಸಕೆರೆ ಪಕ್ಕ ಇರುವಂತಹ ಹೇಳದಾಸರಹಳ್ಳಿಯಲ್ಲಿ ಮನುಷ್ಯನನ್ನು ಕೊಂದು, ನೊಣವಿನಕೆರೆ ಹತ್ತಿರ ಇರುವಂತಹ ಹಳ್ಳಿಗಳಲ್ಲಿ ಮನುಷ್ಯರನ್ನು ಕೊಂದಿದೆ. ಮನುಷ್ಯರೂಪದಲ್ಲೇ ಇರುವಂತಹ ಈ ಪ್ರಾಣಿ ಹೆಚ್ಚಾಗಿ ಮರದ ಮೇಲೆ ಇರುತ್ತದೆ. ಸುತ್ತಮುತ್ತಲಿನ ಊರುಗಳಲ್ಲಿ ಇರುವಂತಹ ಜನರು ಹುಷಾರಾಗಿ ಎಚ್ಚರದಿಂದ ಇರಬೇಕಾಗಿ ವಿನಂತಿ…..”
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

-ಈ ರೀತಿಯ ವಿವರಣೆಗಳೊಂದಿಗೆ ವಿಡಿಯೊಗಳನ್ನು ಹಂಚಿಕೊಳ್ಳಲಾಗುತ್ತಿದೆ. ಭೀಕರವಾಗಿ ಗಾಯಗೊಂಡು ಸಾವನ್ನಪ್ಪಿದವರ ಚಿತ್ರಗಳು, ಸತ್ತವರ ಸುತ್ತ ರೋಧಿಸುತ್ತಿರುವವರ ದೃಶ್ಯಗಳು ವಾಟ್ಸ್‌ಅಪ್‌ನಲ್ಲಿ ಹರಿದಾಡಿವೆ. ಜೊತೆಗೆ ಮನುಷ್ಯನ ಆಕಾರ ಹೋಲುವ ಪ್ರಾಣಿಯೊಂದರ ಎರಡು ವಿಡಿಯೊ ತುಣುಕುಗಳೂ ಇದರಲ್ಲಿ ಸೇರಿವೆ.

ಮೇಲಿನ ಪ್ರತಿಪಾದನೆಯೊಂದಿಗೆ ಈ ವಿಡಿಯೊಗಳನ್ನು ವ್ಯಾಪಕವಾಗಿ ವಾಟ್ಸ್‌ಅಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ನಾನುಗೌರಿ.ಕಾಂ ಓದುಗರು ಈ ವಿಡಿಯೊಗಳನ್ನು ನಮ್ಮೊಂದಿಗೆ ಹಂಚಿಕೊಂಡು ಸತ್ಯಪರಿಶೀಲನೆ ಮಾಡಲು ಕೋರಿದ್ದಾರೆ.

ಸತ್ಯಾಂಶ

ಮನುಷ್ಯನನ್ನು ಹೋಲುವ ತೋಳವೊಂದರ ವಿಡಿಯೊಗಳ ಸ್ಕ್ರೀನ್‌ ಶಾಟ್‌ ತೆಗೆದು ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಈ ವಿಡಿಯೊವನ್ನು ಹೋಲುವ ಹಲವು ಕ್ಲಿಪ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದವು. “Werewolf founded in Brazil… do you believe?” ಎಂಬ ಟೈಟಲ್‌ನೊಂದಿಗೆ anilmal good stories ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿರುವ ವಿಡಿಯೊವನ್ನು ಪರಿಶೀಲಿಸಿದೆವು. ಈ ವಿಡಿಯೊವನ್ನು ಜೂನ್‌ 20, 2021ರಲ್ಲಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

https://www.youtube.com/watch?v=W0hvvgSyQQQ

ಈ ವಿಡಿಯೊದ ಆಧಾರದೊಂದಿಗೆ ಮತ್ತಷ್ಟು ಪರಿಶೀಲನೆ ಮಾಡಿದಾಗ ಮನುಷ್ಯನನ್ನು ಹೋಲುವ ತೋಳದ ವಿಡಿಯೊವನ್ನು ಅನೇಕರು ತರಹೇವಾರಿ ಪ್ರತಿಪಾದನೆಯೊಂದಿಗೆ ಹಂಚಿಕೊಂಡಿರುವುದು ತಿಳಿದುಬಂದಿದೆ. ಈ ತೋಳದ ಕಲಾಕೃತಿಯ ಕುರಿತು ಪ್ರಖ್ಯಾತ ಫ್ಯಾಕ್ಟ್‌ಚೆಕ್‌ ಸಂಸ್ಥೆಯಾದ Factlyಯು ಜುಲೈ 4, 2021ರಂದು ಸತ್ಯಶೋಧನೆ ವರದಿಯೊಂದನ್ನು ಮಾಡಿದೆ.

“ಸಿಯಾಲ್‌ಕೋಟ್‌ ಗಡಿಯಲ್ಲಿ ಪಾಕ್‌ ಸೇನೆಯು ವೇರ್‌ವೂಲ್ಫ್‌ ಪ್ರಾಣಿಯನ್ನು ಹೊಡೆದು ಸಾಯಿಸಲಾಗಿದೆ” ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊ ವೈರಲ್ ಆಗಿದ್ದಾಗ, ಫ್ಯಾಕ್ಟ್‌ಲಿ ಸಂಸ್ಥೆ ಫ್ಯಾಕ್ಟ್‌ಚೆಕ್‌ ಮಾಡಿರುವುದನ್ನು ಕಾಣಬಹುದು.

https://www.youtube.com/watch?v=PJrS7L34KeE

“ಈ ವಿಡಿಯೊವನ್ನು ರಿವರ್ಸ್ ಸರ್ಚ್ ಮಾಡಿದಾಗ 2020ರ ನವೆಂಬರ್‌‌ 27ರಂದು ಇನ್ಸ್‌ಟಾಗ್ರಾಮ್‌ ಖಾತೆಯಲ್ಲಿ ರೊಬ್ಕೋಬಸ್ಕಿ ಎಂಬವರು ಇದೇ ರೀತಿಯ ವಿಡಿಯೊಗಳನ್ನು ಹಂಚಿಕೊಂಡಿರುವುದು ಕಂಡು ಬಂತು. ಜೋಸೆಫ್‌ ರೊಬ್ಕೋಬಸ್ಕಿ ಅವರು ಹವ್ಯಾಸಿ ಶಿಲ್ಪಾಕಲಾ ಕಲಾವಿದರಾಗಿದ್ದಾರೆ. ವೇರ್‌ವೂಲ್ಫ್‌ (ಮನುಷ್ಯರೂಪದ ತೋಳ) ಹೋಲುವ ಹಲವು ಪೋಸ್ಟ್‌ಗಳನ್ನು ರಾಬ್ಕೋಬಸ್ಕಿ ಅವರ ಖಾತೆಯಲ್ಲಿ ಕಾಣಬಹುದು.

ಪಾಟಿ ಕ್ಯಾಟರ್‌ ಎಂಬವವರು ಅಪ್‌ಲೋಡ್‌ ಮಾಡಿರುವ ವಿಡಿಯೊವೊಂದು ರಾಬ್ಕೋಬಸ್ಕಿ ಅವರ ಕುರಿತು ಬೆಳಕು ಚೆಲ್ಲುತ್ತದೆ.

https://www.youtube.com/watch?v=kATCYMqqovQ

ದೈತ್ಯಾಕಾರದ ಶಿಲ್ಪಗಳು ಮತ್ತು ಸ್ಪೆಷಲ್‌ ಎಫೆಕ್ಟ್‌ಗಳನ್ನು ರಚಿಸುವ ಜಟಿಲತೆಗಳ ಬಗ್ಗೆ ರಾಬ್ಕೊಬಸ್ಕಿ ಮಾತನಾಡುತ್ತಾರೆ. ರೊಬ್ಕೊಬಸ್ಕಿ ಅವರು ಅರಿಕ್ಸೋನಾದ ಫೀನಿಕ್ಸ್‌ನವರು ಎಂದು ವಿಡಿಯೊ ವಿವರಣೆ ಹೇಳುತ್ತದೆ. ರೊಬ್ಕೋಬಸ್ಕಿಯವರು ಹವ್ಯಾಸಿ SFX ಶಿಲ್ಪ ಕಲಾವಿದ ಮತ್ತು ಕಲಾ ನಿರ್ದೇಶಕ ಎಂದು ತಿಳಿಯುತ್ತದೆ. ಲಾಸ್ ಏಂಜಲೀಸ್ – ಆಧಾರಿತ ದೂರದರ್ಶನ ಮತ್ತು ಚಲನಚಿತ್ರ ನಿರ್ಮಾಣ ಸ್ಟುಡಿಯೋ ಟ್ರೆಮುಲಸ್ ಮೋಷನ್ ಪಿಕ್ಚರ್ಸ್ ಟ್ವೀಟ್ ಮಾಡಿ, “ರೋಬ್ಕೊಬಸ್ಕಿ ಅವರು`Unsanctified’ ಎಂಬ ಶೀರ್ಷಿಕೆಯ ಚಲನಚಿತ್ರಕ್ಕಾಗಿ ಮನುಷ್ಯರೂಪದ ತೋಳವನ್ನು ರಚಿಸಿದ್ದಾರೆ” ಎಂದು ತಿಳಿಸಿದೆ. ಟ್ವೀಟ್ ಪ್ರಕಾರ, “ಅರ್ಜೆಂಟೀನಾ ಮತ್ತು ಬ್ರೆಜಿಲ್‌ನಲ್ಲಿ ಜನರು ಇದನ್ನು ನಿಜವಾದ ತೋಳವೆಂದು ನಂಬಿದ್ದಾರೆ” ಫ್ಯಾಕ್ಟ್‌ಲಿ ವರದಿ ಮಾಡಿದೆ.

https://twitter.com/motiontremulous/status/1405897387214884871?lang=en

ಸಿಯೋಲ್‌ ಕೋಟ್‌ ಗಡಿಯಲ್ಲಿ ಪಾಕ್‌ ಸೇನೆಯಿಂದ ಹತ್ಯೆಯಾದ ಪ್ರಾಣಿಯೆಂದು ವೈರಲ್ ಆದ ಈ ಕಲಾಕೃತಿ ಈಗ, ತುಮಕೂರು ಜಿಲ್ಲೆಗೆ ವಿಚಿತ್ರ ಪ್ರಾಣಿಯೊಂದು ಬಂದಿದೆ ಎಂಬ ಪ್ರತಿಪಾದನೆಯೊಂದಿಗೆ ವೈರಲ್‌ ಆಗಿದೆ. ಇದು ಸಿನಿಮಾಕ್ಕಾಗಿ ಮಾಡಿದ ಕಲಾಕೃತಿಯೇ ಹೊರತು ನಿಜವಾದ ಪ್ರಾಣಿಯ ದೃಶ್ಯವಲ್ಲ.

ಸಾವಿನ ದೃಶ್ಯಗಳ ಸತ್ಯಾಸತ್ಯತೆ

ಕಲಾಕೃತಿಯೊಂದಿಗೆ ಗಾಯಗೊಂಡು ಸಾವಿಗೀಡಾದವರ ದೃಶ್ಯಗಳನ್ನೂ ಹಂಚಿಕೊಳ್ಳಲಾಗುತ್ತಿದೆ. ಮಗುವೊಂದು ಗಾಯಗೊಂಡಿರುವ ವಿಡಿಯೊವೂ ಇದರಲ್ಲಿದೆ. ಇದನ್ನು ಪರಿಶೀಲಿಸಿದಾಗ, ಇದೇ ದೃಶ್ಯವನ್ನು ಹೋಲುವ ಸುದ್ದಿಯೊಂದು ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ಮಾಲ್‌ಬಜಾರ್‌ನ ಮೆಟ್ಲಿ ಬ್ಲಾಕ್‌ನಲ್ಲಿ ಕಾಡು ಪ್ರಾಣಿಗಳು ದಾಳಿ ಮಾಡಿರುವ ಸುದ್ದಿ ಇದಾಗಿದೆ. ಮಗು ಹಾಗೂ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.

ಅರಣ್ಯಾಧಿಕಾರಿಗಳು ಈ ಕಾಡುಪ್ರಾಣಿಯನ್ನು ಸೆರೆ ಹಿಡಿದಿದ್ದು, ಕಳೆದ ನವೆಂಬರ್‌ನಲ್ಲಿ ಕಾಡು ಕರಡಿಗಳ ದಾಳಿ ಕುರಿತು ಹಲವು ಸುದ್ದಿವಾಹಿನಿಗಳು ಈ ಕುರಿತು ವರದಿ ಮಾಡಿರುವುದನ್ನು ಕಾಣಬಹುದು.

ವಾಟ್ಸ್‌ಆಪ್‌ನಲ್ಲಿ ಮತ್ತೊಂದು ವಿಡಿಯೊ ಹರಿದಾಡಿದೆ. ವಿಚಿತ್ರ ಪ್ರಾಣಿಯು ಒಬ್ಬ ಪುರುಷ ಹಾಗೂ ಮಹಿಳೆಯನ್ನು ಕೊಂದಿರುವುದಾಗಿ ಬಿಂಬಿಸಲಾಗಿದೆ. ಆದರೆ ಇದು ಕೂಡ ಸುಳ್ಳಾಗಿದೆ. ಈ ವಿಡಿಯೊ ಯಾವುದೋ ಅಪರಾಧ ಪ್ರಕರಣವೆಂದು ಶಂಕಿಸಬಹುದೇ ಹೊರತು, ಸ್ಥಳೀಯ ಪ್ರಕರಣವಾಗಿಲ್ಲ. ಈ ವಿಡಿಯೊ ಎಲ್ಲಿಯದ್ದು ಎಂಬುದು ಪತ್ತೆಯಾಗಿಲ್ಲ.

ಯಾವುದಾದರೂ ಕೊಲೆ ಪ್ರಕರಣ ನೊಣವಿನಕೆರೆ ಹಾಗೂ ಹೊಸಕೆರೆ ವ್ಯಾಪ್ತಿಯಲ್ಲಿ ಘಟಿಸಿದೆಯೇ ಎಂದು ತಿಳಿಯಲು ಪೊಲೀಸ್ ಠಾಣೆಗಳಿಗೆ ಕರೆ ಮಾಡಲಾಯಿತು. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಹೊಸಕೆರೆ ಬರಲಿದೆ. “ನಮ್ಮ ವ್ಯಾಪ್ತಿಯಲ್ಲಿ ಇಂತಹ ಯಾವುದೇ ಪ್ರಕರಣಗಳು ನಡೆದಿಲ್ಲ” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ತಿಪಟೂರು ತಾಲ್ಲೂಕಿನ ನೊಣವಿನಕೆರೆ ಪೊಲೀಸರಿಗೆ ಕರೆ ಮಾಡಿದಾಗ, “ಈ ಸುದ್ದಿಯ ಕುರಿತು ಸ್ಪಷ್ಟನೆ ಕೇಳಿ ಅನೇಕರು ಕರೆ ಮಾಡುತ್ತಿದ್ದಾರೆ. ಇದು ಸುಳ್ಳು ಸುದ್ದಿಯಾಗಿದ್ದು, ನಮ್ಮ ವ್ಯಾಪ್ತಿಯಲ್ಲಿ ಯಾವುದೇ ಕೊಲೆಯಾಗಿಲ್ಲ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಸಾಮರ್ಥ್ಯ ಅಲ್ಲಗಳೆದು ಕಾಂಗ್ರೆಸ್ ವಕ್ತಾರರೊಬ್ಬರು ಮೋದಿಯನ್ನು ಹೊಗಳಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...