Homeಮುಖಪುಟಮುಸ್ಲಿಮರ ವಿರುದ್ಧ ದ್ವೇ‍ಷ ಭಾಷಣ: ಕಾನೂನು ಬಾಹಿರ ಎಂದ ಉತ್ತರಖಂಡ ಪೊಲೀಸರು

ಮುಸ್ಲಿಮರ ವಿರುದ್ಧ ದ್ವೇ‍ಷ ಭಾಷಣ: ಕಾನೂನು ಬಾಹಿರ ಎಂದ ಉತ್ತರಖಂಡ ಪೊಲೀಸರು

ಹರಿದ್ವಾರ ಧರ್ಮ ಸಂಸದ್ ದ್ವೇ‍ಷ ಭಾಷಣದ ಕುರಿತು ಎಫ್‌ಐಆರ್ ದಾಖಲಿಸಿರುವ ಪೊಲೀಸರು ಅದರಲ್ಲಿ ನರಸಿಂಗಾನಂದರ ಹೆಸರು ಸೇರಿಸದಿರುವುದು ಆಶ್ಚರ್ಯಕರವಾಗಿದೆ.

- Advertisement -
- Advertisement -

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್‌ನಲ್ಲಿ ಕೇಳಿಬಂದ ಮುಸ್ಲಿಮರ ವಿರುದ್ಧ ದ್ವೇ‍ಷಭಾಷಣಗಳಿಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಆ ಮಾತುಗಳನ್ನು ಕಾನೂನು ಬಾಹಿರ ಎಂದಿರುವ ಉತ್ತರಖಂಡ ಪೊಲೀಸರು ಧಾರ್ಮಿಕ ದ್ವೇಷ ಬಿತ್ತುವ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಧರ್ಮ ಸಂಸದ್ ಪ್ರಮುಖ ಸಂಘಟಕರಲ್ಲಿ ಒಬ್ಬರಾದ ವಿವಾದಿತ ಉಗ್ರ ಹಿಂದುತ್ವ ನಾಯಕ ನರಸಿಂಗಾನಂದ ಗಿರಿ ಅವರು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದರು. ಭಯೋತ್ಪಾದಕ ಸಂಘಟನೆಯಾದ ಎಲ್‌ಟಿಟಿಇ ನಾಯಕ ಪ್ರಭಾಕರನ್‌ ತರ ಆಗುವಂತೆ ಹಿಂದೂ ಯುವಕರಿಗೆ ಕರೆ ನೀಡಿದ್ದು, ಅವರಿಗೆ 1 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಹಿಂದೂಗಳು ಶಸ್ತ್ರಗಳನ್ನು ಕೈಗಿತ್ತೆಗೊಂಡು ಮುಸ್ಲಿಮರ ವಿರುದ್ಧ ಯುದ್ದ ಮಾಡಬೇಕು ಎಂದು ಅವರು ಕರೆ ನೀಡಿದ್ದರು.

ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ಇದು ನರಸಿಂಗಾನಂದ ಅವರ ಎರಡನೇ ಧರ್ಮ ಸಂಸದ್ ಆಗಿದ್ದು, ಮೊದಲನೇ ಧರ್ಮ ಸಂಸದ್‌‌ 2020 ರ ಜನವರಿ ತಿಂಗಳಲ್ಲಿ ನಡೆದಿತ್ತು. ಈ ವೇಳೆ ದೆಹಲಿ ವಿಧಾನಸಭಾ ಚುನಾವಣೆಗಳು ಇದ್ದವು. ಅಲ್ಲಿಯೂ ದ್ವೇಷಭಾಷಣ ಮಾಡಲಾಗಿತ್ತು ಮತ್ತು ಇದು ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಕೋಮು ಗಲಭೆಗಳಿಗೆ ಕಾರಣವಾಗಿತ್ತು ಎಂದು ದಿ ವೈರ್ ತನಿಖಾ ವರದಿಯೊಂದನ್ನು ಪ್ರಕಟಿಸಿದೆ. ಇದೀಗ ಹರಿದ್ವಾರದಲ್ಲಿ ಎರಡನೇ ಧರಂ ಸಂಸದ್‌ ನಡೆದಿದ್ದು, ಇನ್ನು ಕೆಲವೇ ತಿಂಗಳಲ್ಲಿ ಉತ್ತರಾಖಂಡದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅವರ ದ್ವೇಷ ಮಾತುಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಗುರುವಾರ ರಾತ್ರಿ, ಉತ್ತರಾಖಂಡ ಪೊಲೀಸರು ವಸೀಮ್ ರಿಜ್ವಿ ಮತ್ತು ಇತರರ ವಿರುದ್ಧ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಕೃತ್ಯಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹೇಳಿದರು. ಶಿಯಾ ವಕ್ಫ್ ಬೋರ್ಡ್‌ನ ಮಾಜಿ ಅಧ್ಯಕ್ಷ ರಿಜ್ವಿ ಇತ್ತೀಚೆಗೆ ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಮತ್ತು ತಮ್ಮ ಹೆಸರನ್ನು ಜಿತೇಂದ್ರ ನಾರಾಯಣ ತ್ಯಾಗಿ ಎಂದು ಬದಲಾಯಿಸಿಕೊಂಡರು. ತನಿಖೆ ಆರಂಭವಾದ ನಂತರ ಇನ್ನಷ್ಟು ಹೆಸರುಗಳನ್ನು ಸೇರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಪೊಲೀಸರು ನರಸಿಂಗಾನಂದರ ಹೆಸರು ಸೇರಿಸದಿರುವುದು ಆಶ್ಚರ್ಯಕರವಾಗಿದೆ.

“ಹರಿದ್ವಾರ್ ಧರ್ಮ ಸಂಸದ್‌ನಲ್ಲಿ ಏನು ನಡೆದಿದೆಯೋ ಅದು ತಪ್ಪು. ಸಂಬಂಧಪಟ್ಟವರು ಮತ್ತು ಹೊಣೆಗಾರರ ವಿರುದ್ಧ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ” ಎಂದು ಉತ್ತರಾಖಂಡ ಸರ್ಕಾರದ ವಕ್ತಾರ ಸುಬೋಧ್ ಉನಿಯಾಲ್ ಹೇಳಿದ್ದಾರೆ.

ಯತಿ ನರಸಿಂಗಾನಂದ್ ಈ ಹಿಂದೆಯೂ ಹಲವಾರು ಬಾರಿ ಪ್ರಚೋದನಾಕಾರಿ, ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.


ಇದನ್ನೂ ಓದಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...