Homeಸಿನಿಮಾಸಿನಿ ಸುದ್ದಿಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ...

ಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ…

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಪ್ರತಿ ಎಲೆಕ್ಷನ್‍ನಂತೆ ಈ ಸಲವೂ ಸಿನಿಮಾ ಸ್ಟಾರ್‍ಗಳ ಪ್ರಚಾರ ಜೋರಾಗಿದೆ. ಅದರಲ್ಲೂ ನಟ ಯಶ್ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರೂ ಪಾರ್ಟಿಗಳಲ್ಲಿ ಪ್ರಚಾರ ಮಾಡ್ತಾ ಜನರಲ್ಲಿ ಶ್ಯಾನೆ ಗೊಂದಲ ಎಬ್ಬಿಸಿದ್ದಾರೆ. `ಎಲ್ಲಿದ್ದೀರಾ ಯಶ್, ಇದೇನ್ ಮಾಡ್ತಾ ಇದೀರಾ ಯಶ್’ ಅಂತ ಕೇಳಿದ್ರೆ, `ಪಕ್ಷ, ಸಿದ್ಧಾಂತ ನಂಗೆ ಗೊತ್ತಿಲ್ಲ. ಒಳ್ಳೇ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ’ ಅನ್ನೋ ಉತ್ತರ ಕೊಡ್ತಾರೆ. ಈ `ಒಳ್ಳೇ ಅಭ್ಯರ್ಥಿ’ `ಹತ್ತಿರದ ನೆಂಟ’ `ಒಳ್ಳೇ ಸ್ನೇಹಿತ’ ಹೀಗೆ ನೆಪ ಹೇಳಿಕೊಂಡು ಚುನಾವಣಾ ಪ್ರಚಾರ ನಡೆಸೋ ಯಶ್ ಮತ್ತು ಇನ್ನುಳಿದ ಸಿನಿ ಸಿಬ್ಬಂದಿಗಳಿಗೆ ಇಲ್ಲೊಂದು ಮಾತನ್ನು ಹೇಳಲೇಬೇಕಿದೆ.

ರಾಜಕೀಯ ಪ್ರಜ್ಞೆ ಮತ್ತು ಸಾಮಾಜಿಕ ಸನ್ನಿವೇಶಗಳ ಅರಿವಿಲ್ಲದೆ ತಮ್ಮ ಸ್ಟಾರ್‍ಗಿರಿಯನ್ನು ಮಾರ್ಕೆಟಿಂಗ್ ಸರಕುಗಳಾಗಿ ಮಾರಾಟಕ್ಕಿಡೋದು ಅಪಾಯಕಾರಿ ಮಾತ್ರವಲ್ಲ, ಜನರಿಗೆ ಎಸಗುವ ನಂಬಿಕೆ ದ್ರೋಹವೂ ಆಗಿರುತ್ತೆ. ಯಾಕೆಂದ್ರೆ ಚುನಾವಣೆಯಲ್ಲಿ ಒಬ್ಬ ವ್ಯಕ್ತಿ ಗೆದ್ದ ನಂತರ ಆತ ರಾಜಕೀಯ ಜವಾಬ್ಧಾರಿಯನ್ನು ನಿಭಾಯಿಸಬೇಕಿರುತ್ತದೆಯೇ ವಿನಾಃ ನಮ್ಮ ಜೊತೆಗಿನ ವೈಯಕ್ತಿಕ ಬಾಂಧವ್ಯವನ್ನಲ್ಲ. ಆ ರಾಜಕೀಯ ಜವಾಬ್ಧಾರಿ ಆತನ ಪಕ್ಷ, ಆ ಪಕ್ಷದ ಸಿದ್ಧಾಂತ, ನೀತಿಗಳನ್ನು ಅವಲಂಭಿಸಿರುತ್ತದೆ. ಒಂದು ಪಾರ್ಟಿ ಪ್ರಸ್ತುತ ಸನ್ನಿವೇಶದಲ್ಲಿ ಅಪಾಯಕಾರಿ ನಿಲುವುಗಳನ್ನು ತಳೆದಿದ್ದರೆ ಆ ಪಕ್ಷದ ಪರವಾಗಿ ಗೆದ್ದ ಆ `ಒಳ್ಳೆ ಅಭ್ಯರ್ಥಿ’ ಸಮಾಜದ ಜೊತೆ ಅಪಾಯಕಾರಿಯಾಗಿಯೇ ವರ್ತಿಸಬೇಕಾಗುತ್ತದೆ. ಅದನ್ನಾತ ಮೀರಲು ಸಾಧ್ಯವಿರುವುದಿಲ್ಲ.

ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಯಶ್ ಪ್ರಚಾರ

ಉದಾಹರಣೆಗೆ, ನಮ್ಮ ಒಳ್ಳೇ ಸ್ನೇಹಿತ ಅಥವಾ ಹತ್ತಿರದ ಸಂಬಂಧಿ ಒಬ್ಬ ಅಸಹಾಯಕ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ಸ್ಥಿತಿಯಲ್ಲಿ ನಮ್ಮ ಕಣ್ಣಿಗೆ ಬಿದ್ದ ಎಂದಿಟ್ಟುಕೊಳ್ಳಿ. ಆತ ನಮ್ಮ ಒಳ್ಳೆಯ ಸ್ನೇಹಿತನೇ ಆಗಿದ್ದರೂ ನಾವು ಆತನ ಪರ ನಿಲ್ಲುವುದಿಲ್ಲ. ಅದು ನಮ್ಮ ಸಾಮಾಜಿಕ ಹೊಣೆಗಾರಿಕೆ. ಅಷ್ಟರಮಟ್ಟಿಗೆ ನಮಗೆ ಪರಿಸ್ಥಿತಿಯ ಆಗುಹೋಗಿನ ಪ್ರಜ್ಞೆ ಇರುತ್ತೆ, ಇರಬೇಕು. ಇನ್ನೂ ಸಿಂಪಲ್ಲಾಗಿ ಹೇಳಬೇಕಂದ್ರೆ, ಕೆಟ್ಟ ಸ್ಕ್ರಿಪ್ಟ್ ಹಿಡಿದು ಬರುವ ನಿರ್ಮಾಪಕ ಅದೆಷ್ಟೇ ಒಳ್ಳೇ ಸ್ನೇಹಿತನಾಗಿದ್ದರೂ ಆತನಿಗೆ ಯಾವ ಸ್ಟಾರ್ ನಟನೂ ಕಾಲ್‍ಶೀಟ್ ಕೊಡೋದಿಲ್ಲ!

ಹಾಗಂತ ಸಿನಿಮಾ ಮಂದಿ ಪ್ರಚಾರ ಮಾಡಬಾರದು ಅಂತೇನಲ್ಲ. ಆದರೆ ತಮ್ಮ ಆ ಪ್ರಚಾರವನ್ನು ರಾಜಕೀಯವಾಗಿಯೇ ಸಮರ್ಥಿಸಿಕೊಳ್ಳುವ ಪೊಲಿಟಿಕಲ್ ಬದ್ಧತೆ ಮತ್ತು ಅರಿವು ಅಂತವರಲ್ಲಿ ಇರಬೇಕು. ರಾಜಕೀಯೇತರ ನೆಪವಿಟ್ಟುಕೊಂಡು ರಾಜಕೀಯ ಪ್ರಚಾರ ಮಾಡಬಾರದು! ಅಂದಹಾಗೆ, ಯಶ್‍ಗೆ ಗಣಿಮಾಫಿಯಾದ ಶ್ರೀರಾಮುಲುನಲ್ಲಿ ಅದ್ಯಾವ `ಒಳ್ಳೆ ಅಭ್ಯರ್ಥಿ’ ಕಾಣಿಸಿದನೋ ದೇವರೇ ಬಲ್ಲ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...