Homeಮುಖಪುಟಛತ್ತೀಸ್‌ಗಢ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ ಭರ್ಜರಿ ಗೆಲುವು; BJP ಹೀನಾಯ ಸೋಲು

ಛತ್ತೀಸ್‌ಗಢ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ ಭರ್ಜರಿ ಗೆಲುವು; BJP ಹೀನಾಯ ಸೋಲು

- Advertisement -
- Advertisement -

ಛತ್ತೀಸ್‌ಗಢದ 15 ನಗರ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದೆ. ಇದೀಗ ಮತ ಎಣಿಕೆ ಪೂರ್ಣಗೊಂಡಿದ್ದು, 300 ವಾರ್ಡ್‌ಗಳ ಪೈಕಿ 174ರಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದ್ದು 89 ವಾರ್ಡ್‌ಗಳನ್ನಷ್ಟೇ ಜಯಿಸಿಕೊಂಡಿದೆ.

ಸೋಮವಾರದಂದು 15 ನಗರ ಸಂಸ್ಥೆಗಳಲ್ಲಿ ಮತ್ತು 15 ವಾರ್ಡ್‌ಗಳ ಉಪಚುನಾವಣೆಯ ಮತಗಳ ಎಣಿಕೆಯು ಗುರುವಾರದಂದು 29 ಎಣಿಕೆ ಕೇಂದ್ರಗಳಲ್ಲಿ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಿತ್ತು.

ಇದನ್ನೂ ಓದಿ:ಉತ್ತರ ಪ್ರದೇಶ:ಪ್ರಧಾನಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ 70 ಮಂದಿ ಎಸ್‌ಪಿ ಕಾರ್ಯಕರ್ತರ ಬಂಧನ, ಬಿಡುಗಡೆ

ಫಲಿತಾಂಶ ಘೋಷಿಸಿದ ನಂತರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ತಮ್ಮ ಸರ್ಕಾರವು ಪ್ರಾರಂಭಿಸಿದ ಕಲ್ಯಾಣ ಯೋಜನೆಗಳ ಯಶಸ್ಸನ್ನು ಈ ಫಲಿತಾಂಶವು ಸೂಚಿಸುತ್ತದೆ ಎಂದು ಹೇಳಿದ್ದಾರೆ.

15 ನಗರ ಸಂಸ್ಥೆಗಳ ಒಟ್ಟು 370 ವಾರ್ಡ್‌ಗಳ ಪೈಕಿ 300 ವಾರ್ಡ್‌ಗಳಿಗೆ ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಫಲಿತಾಂಶ ಪ್ರಕಟಿಸಿದ್ದು, ಇದರಲ್ಲಿ 174 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು, 89 ರಲ್ಲಿ ಬಿಜೆಪಿ, 6 ರಲ್ಲಿ ಜನತಾ ಕಾಂಗ್ರೆಸ್ ಛತ್ತೀಸ್‌ಗಢ (ಜೆ) ಮತ್ತು 31 ರಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

ದುರ್ಗ್ ಜಿಲ್ಲೆಯ ಪ್ರಮುಖ ಭಿಲಾಯಿ ಮುನ್ಸಿಪಲ್ ಕಾರ್ಪೊರೇಷನ್‌ಗೆ ಒಳಪಡುವ ಉಳಿದ 70 ವಾರ್ಡ್‌ಗಳ ಫಲಿತಾಂಶವನ್ನು ಇನ್ನೂ ಅಧಿಕೃತವಾಗಿ ಘೋಷಿಸಲಾಗಿಲ್ಲ. ಅಲ್ಲಿ ಎಣಿಕೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ರಾಹುಲ್‌ ಸಾಮರ್ಥ್ಯ ಅಲ್ಲಗಳೆದು ಕಾಂಗ್ರೆಸ್ ವಕ್ತಾರರೊಬ್ಬರು ಮೋದಿಯನ್ನು ಹೊಗಳಿದ್ದಾರೆಯೇ?

ಆದಾಗ್ಯೂ, 70 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಮುನ್ನಡೆ ಸಾಧಿಸಿದೆ ಎಂದು ಹೇಳಲಾಗುತ್ತಿದೆ. ಈ 70 ವಾರ್ಡ್‌ಗಳಲ್ಲಿ ಕಾಂಗ್ರೆಸ್ 37, ಬಿಜೆಪಿ 24, ಇತರರು 8 ರಲ್ಲಿ ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) 1 ರಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್ ಶಾಸಕ ದೇವೇಂದ್ರ ಯಾದವ್ ಅವರು ಭಿಲಾಯಿ ಮುನ್ಸಿಪಲ್ ಕಾರ್ಪೊರೇಷನ್‌ನ ಹಾಲಿ ಮೇಯರ್ ಆಗಿದ್ದಾರೆ.

4 ಮುನಿಸಿಪಲ್ ಕಾರ್ಪೊರೇಶನ್‌ಗಳು, 6 ಮುನ್ಸಿಪಲ್ ಕೌನ್ಸಿಲ್‌ಗಳು ಮತ್ತು ಐದು ನಗರ ಪಂಚಾಯತ್‌ಗಳಿಗೆ ಚುನಾವಣೆ ನಡೆದಿತ್ತು.

ರಾಯ್‌ಪುರ ಜಿಲ್ಲೆಯ ಬಿರ್‌ಗಾಂವ್ ಮುನ್ಸಿಪಲ್ ಕಾರ್ಪೊರೇಷನ್‌ನ 40 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 19 ಮತ್ತು ಬಿಜೆಪಿ 10, ಜೆಸಿಸಿ (ಜೆ) ಮತ್ತು ಸ್ವತಂತ್ರ ಅಭ್ಯರ್ಥಿಗಳು ಕ್ರಮವಾಗಿ 5 ಮತ್ತು 6 ವಾರ್ಡ್‌ಗಳಲ್ಲಿ ವಿಜೇತರಾಗಿದ್ದಾರೆ.

ಇದನ್ನೂ ಓದಿ:ಗೋವಾ: ಕಾಂಗ್ರೆಸ್‌‌‌ನ ಮಾಜಿ ಕಾರ್ಯಾಧ್ಯಕ್ಷ, ಶಾಸಕ ಅಲೆಕ್ಸೊ ಟಿಎಂಸಿಗೆ ಸೇರ್ಪಡೆ

13 ನಗರ ಸಂಸ್ಥೆಗಳ ವ್ಯಾಪ್ತಿಯ 15 ವಾರ್ಡ್‌ಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ 11 ಮತ್ತು ಬಿಜೆಪಿ 1 ಸ್ಥಾನ ಗಳಿಸಿದರೆ, ಉಳಿದ 3 ರಲ್ಲಿ ಸ್ವತಂತ್ರ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

“ಎಲ್ಲಾ ಪುರಸಭೆಯ ಫಲಿತಾಂಶಗಳು ಕಾಂಗ್ರೆಸ್ ಪರವಾಗಿವೆ. ಈ ಫಲಿತಾಂಶವು ರಾಜ್ಯ ಸರ್ಕಾರದ ಜನಕಲ್ಯಾಣ ಯೋಜನೆಗಳ ಯಶಸ್ಸನ್ನು ತೋರಿಸುತ್ತದೆ. ರಾಜ್ಯದಲ್ಲಿ ಮೂರು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಜನರು ನಂಬಿಕೆ ಇರಿಸಿದ್ದಾರೆ ಮತ್ತು ಹೀಗಾಗಿ ಪಕ್ಷದ ಪರವಾಗಿ ತಮ್ಮ ಜನಾದೇಶವನ್ನು ನೀಡಿದ್ದಾರೆ” ಎಂದು ಮುಖ್ಯಮಂತ್ರಿ ಬಘೇಲ್ ಹೇಳಿದ್ದಾರೆ.

ಮತದಾರರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ವಿಜೇತರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಯುಪಿ ವಿಧಾನಸಭಾ ಚುನಾವಣೆಗೆ ಬಘೇಲ್ ಅವರನ್ನು ಕಾಂಗ್ರೆಸ್ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ.

ಇದನ್ನೂ ಓದಿ:ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...