Homeಕರ್ನಾಟಕಪರಿಷತ್‌ನಲ್ಲಿ ಮಂಡನೆಯಾಗದ ಮತಾಂತರ ನಿಷೇಧ ಮಸೂದೆ: ಸರ್ಕಾರದ ಮುಂದಿನ ನಡೆಯೇನು?

ಪರಿಷತ್‌ನಲ್ಲಿ ಮಂಡನೆಯಾಗದ ಮತಾಂತರ ನಿಷೇಧ ಮಸೂದೆ: ಸರ್ಕಾರದ ಮುಂದಿನ ನಡೆಯೇನು?

- Advertisement -
- Advertisement -

ಕರ್ನಾಟಕ ಸರ್ಕಾರದ ಬಹು ಮಹತ್ವಕಾಂಕ್ಷೆಯ ವಿವಾದಿತ ಮತಾಂತರ ನಿಷೇಧ ಮಸೂದೆ (ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣ ವಿಧೇಯಕ, 2021) ಯನ್ನು ಕೊನೆಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅದು ವಿಧಾನ ಸಭೆಯಲ್ಲಿ ಅಂಗೀಕಾರವಾಗಿದ್ದರೂ ಪರಿಷತ್‌ನಲ್ಲಿ ಮಂಡನೆಯಾಗದ ಕಾರಣ ಕಾಯ್ದೆಯಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. 6 ತಿಂಗಳ ಒಳಗಾಗಿ ಪರಿಷತ್‌ನಲ್ಲಿ ಮಂಡನೆಯಾಗಿ, ಬಹುಮತದಿಂದ ಅಂಗೀಕಾರಗೊಂಡು, ರಾಜ್ಯಪಾಲರ ಸಹಿಯ ನಂತರವಷ್ಟೇ ಕಾಯ್ದೆಯಾಗಲು ಸಾಧ್ಯ. ಹೀಗಿರುವಾಗ ಸರ್ಕಾರ ಸರ್ಕಾರದ ಮುಂದಿನ ನಡೆಯೇನು ಎಂಬ ಪ್ರಶ್ನೆ ಎದ್ದಿದೆ.

ಸರ್ಕಾರವು ಅದನ್ನು ಪರಿಷತ್‌ನಲ್ಲಿ ಮಂಡಿಸದಿರಲು ಮುಖ್ಯ ಕಾರಣ ಬಹುಮತದ ಕೊರತೆ. ಅಲ್ಲದೆ ಪಕ್ಷದಲ್ಲಿನ ಕೆಲವರ ವಿರೋಧ ಸಹ ಸರ್ಕಾರಕ್ಕೆ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಸದಸ್ಯರನ್ನು ನೆಚ್ಚಿಕೊಂಡು ಮಸೂದೆ ಮಂಡಿಸಿದರೆ ಸೋಲಾಗಬಹುದೆಂಬ ಕಾರಣಕ್ಕೆ ಮಂಡನೆ ಮಾಡಿಲ್ಲ. ಬದಲಿಗೆ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿ ಅಧಿವೇಶನ ಅಂತ್ಯಗೊಳಿಸಲಾಗಿದೆ.

ಸದನದ ಕೊನೆ ದಿನ ಉಪಸಭಾಪತಿ ಪ್ರಾಣೇಶ್‌ ಮತ್ತು ಬಿಜೆಪಿ ಸದಸ್ಯರಾದ ರುದ್ರೇಗೌಡರವರು ಬೆಳಗಾವಿಯಿಂದ ಹೊರಟು ದಾವಣಗೆರೆ ತಲುಪಿದ್ದರು. ಅವರು ತುರ್ತಾಗಿ ವಾಪಸ್ ಬೆಳಗಾವಿಯ ಸುವರ್ಣ ಸೌಧಕ್ಕೆ ಬರುವಂತೆ ಸೂಚಿಸಲಾಗಿತ್ತು. ಅವರು ಬರುವಿಕೆಗಾಗಿ ಆಡಳಿತ ಪಕ್ಷ ಕಾಯುತ್ತಿತ್ತು. ಅದೇ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಅಧಿವೇಶನ ಆರಂಭಿಸುವಂತೆ ಸಭಾಪತಿ ಕೊಠಡಿಗೆ ತೆರಳಿ ಒತ್ತಾಯಿಸುತ್ತಿದ್ದರು. ಆದರೆ ಸಮಯ ಮೀರುತ್ತಿತ್ತು. ಇನ್ನೊಂದೆಡೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್‌ರವರು ಬಹಿರಂಗವಾಗಿಯೇ ಮತಾಂತರ ನಿಷೇಧ ಮಸೂದೆಯನ್ನು ವಿರೋಧಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಹುಮತವಿಲ್ಲದಿದ್ದಾಗ ಮಸೂದೆ ಮಂಡಿಸಿ ಅದಕ್ಕೆ ಸೋಲಾಗುವುದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಹಿಂತೆಗೆದುಕೊಂಡಿದೆ.

ಸುಗ್ರೀವಾಜ್ಞೆ ಮೂಲಕ ಜಾರಿ?

ಮತಾಂತರ ನಿಷೇಧ ಮಸೂದೆಯ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಮತ್ತು ನೂರಾರು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಆದರೆ ಸರ್ಕಾರ ಏನಾದರೂ ಮಾಡಿ ಅದನ್ನು ಜಾರಿಗೊಳಿಸಿಯೇ ಸಿದ್ದ ಎಂದು ಹಠ ಹಿಡಿದಿದೆ. ಮುಂದಿನ ಅಧಿವೇಶನ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಅಲ್ಲಿಯವರೆಗೂ ಕಾಯದ ಸರ್ಕಾರ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ರಾಜ್ಯಪಾಲರ ಒಪ್ಪಿಗೆ ಪಡೆದಲ್ಲಿ ಕಾಯ್ದೆಯ ಅಂಶಗಳನ್ನು ಹೀಗಿನಿಂದಲೇ ಜಾರಿಗೊಳಿಸಬಹುದು. ಆದರೆ 6 ತಿಂಗಳೊಳಗೆ ಸದನದಲ್ಲಿ ಮಂಡಿಸಿ ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ.

ಮುಂದಿನ ಅಧಿವೇಶನದಲ್ಲಿ ಮಂಡನೆ

ಮುಂದಿನ ವಿಧಾನ ಪರಿಷತ್ ಅಧಿವೇಶನದಲ್ಲಿ ಮಂಡಿಸಿ ಹೇಗಾದರೂ ಬಹುಮತವನ್ನು ಒಟ್ಟುಗೂಡಿಸಿ ಮಸೂದೆಯನ್ನು ಪಾಸ್ ಮಾಡುವುದು ಸರ್ಕಾರದ ಎರಡನೇ ಆಯ್ಕೆಯಾಗಿದೆ. ಸದ್ಯ ಬಿಜೆಪಿಗೆ ವಿಧಾನ ಪರಿಷತ್‌ನಲ್ಲಿ ಬಹುಮತಕ್ಕೆ ಸದ್ಯ ಒಬ್ಬ ಸದಸ್ಯರ ಕೊರತೆಯಿದೆ. ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿತಯಾಗಿ ಜಯ ಗಳಿಸಿದ್ದಾರೆ. ಅವರನ್ನು ಬಿಜೆಪಿ ತನ್ನೆಡೆಗೆ ಸೆಳೆದುಕೊಳ್ಳುವ ಕಸರತ್ತು ಮಾಡಬಹುದು. ಇಲ್ಲವೇ ಕೆಲ ಜೆಡಿಎಸ್ ಸದಸ್ಯರನ್ನು ಮನವೊಲಿಸುವ ಕೆಲಸ ಮಾಡಬಹುದು.

ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ

ಸದ್ಯಕ್ಕೆ ವಿಧಾನಪರಿಷತ್‌ನಲ್ಲಿ ಮಸೂದೆ ಜಾರಿಯಾಗದಂತೆ ತಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಅದು ಸಹ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ ಸಿಗದಂತೆ ನೋಡಿಕೊಳ್ಳುವ ಕಾರ್ಯತಂತ್ರ ರೂಪಿಸಲಿದೆ. ಪಕ್ಷೇತರ ಶಾಸಕರನ್ನು ತನ್ನೆಡೆಗೆ ಸೆಳೆದುಕೊಳ್ಳುವುದು, ಜೆಡಿಎಸ್ ಮೇಲೆ ಒತ್ತಡ ತರುವುದು ಸೇರಿ ಹಲವು ಮಾರ್ಗಗಳನ್ನು ಅನುಸರಿಸಬಹುದಾಗಿದೆ.

ಜನಾಭಿಪ್ರಾಯ

ಈ ಮಸೂದೆಯನ್ನು ನೂರಾರು ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಅವು ಮತ್ತಷ್ಟು ಜನಾಭಿಪ್ರಾಯ ರೂಪಿಸುವ ಮೂಲಕ ಮಸೂದೆ ಜಾರಿಯಾಗದಂತೆ ಸರ್ಕಾರದ ಮೇಲೆ ಒತ್ತಡ ತರುವ ಸಾಧ್ಯತೆಯು ಇದೆ.


ಇದನ್ನೂ ಓದಿ: ‘ಮತಾಂತರ ನಿಷೇಧ ಮಸೂದೆ’ ವಿಧಾನಸಭೆಯಲ್ಲಿ ಪಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. E vishayadalli yaru yenu tiliyade aakshepane madabardu munde onda dina nam hindu sanskruti dharma vichar achara yalla mare yaguttide nanu obba central job holder.
    Own my experience in tamilnadu kerala and andra Pradesh bhal speed aagi dharma parivartane aagtide aaddarinda stalin,peter,etc tarahad names aagtive addarind nammalliye kelavu sc,st,cast feeling maretu yalla ondagi balon dayavittu sahakarisi

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...