Homeಕರ್ನಾಟಕಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

- Advertisement -
- Advertisement -

ಬಲಪಂಥೀಯ ಗುಂಪೊಂದು ಮಂಡ್ಯ ಜಿಲ್ಲೆಯ ಶಾಲೆಯೊಂದರಲ್ಲಿ ಕ್ರಿಸ್‌ಮಸ್ ಆಚರಣೆ ಮಾಡದಂತೆ ತಡೆದ ಘಟನೆ ಗುರುವಾರ ನಡೆದಿದೆ. ದುಷ್ಕರ್ಮಿಗಳ ಗುಂಪು ಬಲವಂತವಾಗಿ ಶಾಲೆಗೆ ನುಗ್ಗಿ ಶಾಲೆಯಲ್ಲಿರುವ ಶಿಕ್ಷಕರ ಜೊತೆಗೆ ವಾಗ್ವಾದ ನಡೆಸಿ ಬೆದರಿಕೆ ಹಾಕಿದ್ದಾರೆ.

ನಿರ್ಮಲಾ ಇಂಗ್ಲಿಷ್ ಹೈಸ್ಕೂಲ್ ಮತ್ತು ಕಾಲೇಜಿನ ಮುಖ್ಯೋಪಾಧ್ಯಾಯಿನಿ ಪ್ರಕಾರ, ವಿದ್ಯಾರ್ಥಿಗಳು ಕ್ರಿಸ್‌ಮಸ್ ಆಚರಣೆಯನ್ನು ಆಯೋಜಿಸಿದ್ದಾಗ ಬಲಪಂಥೀಯ ಗುಂಪುಗಳ ಸದಸ್ಯರು ಬಲವಂತವಾಗಿ ಸಂಸ್ಥೆಯೊಳಗೆ ಪ್ರವೇಶಿಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

“ನಾವು ಪ್ರತಿ ವರ್ಷ ಕ್ರಿಸ್‌ಮಸ್ ಆಚರಣೆಯನ್ನು ಆಯೋಜಿಸುತ್ತಿದ್ದೇವೆ. ಆದರೆ ಕೊರೊನಾ ಪ್ರೇರಿತ ನಿರ್ಬಂಧಗಳಿಂದ ಅದನ್ನು ರದ್ದುಗೊಳಿಸಲು ನಾವು ನಿರ್ಧರಿಸಿದ್ದೇವೆ. ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ನಾವು ಸಣ್ಣ ಆಚರಣೆಯನ್ನು ಆಯೋಜಿಸಿದ್ದೆವು. ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಹಣ ಸಂಗ್ರಹಿಸಿ ಕೇಕ್ ಅನ್ನು ಆರ್ಡರ್ ಮಾಡಿದ್ದರು. ಇದಕ್ಕೆ ಪೋಷಕರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ” ಎಂದು ಮುಖ್ಯೋಪಾಧ್ಯಾಯಿನಿ ಕನಿಕಾ ಫ್ರಾನ್ಸಿಸ್ ಮೇರಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ:ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಶಾಲೆಯು “ಕ್ರಿಶ್ಚಿಯಾನಿಟಿಯನ್ನು ಬೋಧಿಸುತ್ತಿದೆ” ಮತ್ತು ಕ್ರಿಸ್‌ಮಸ್ ಅನ್ನು ಆಚರಿಸುತ್ತಿದೆ. ಆದರೆ ಹಿಂದೂ ಹಬ್ಬಗಳನ್ನು ಆಚರಿಸುತ್ತಿಲ್ಲ ಎಂದು ವಿದ್ಯಾರ್ಥಿಯೊಬ್ಬನ ಪೋಷಕರು ಬಲಪಂಥೀಯ ಗುಂಪುಗಳಿಗೆ ತಿಳಿಸಿದ್ದರು ಎನ್ನಲಾಗಿದೆ. ಇದರ ಇದರ ನಂತರ ಆಚರಣೆಯ ಬಗ್ಗೆ ತಿಳಿದ ಬಲಪಂಥೀಯ ಗುಂಪಿನ ಸದಸ್ಯರು ಸಂಸ್ಥೆಗೆ ನುಗ್ಗಿ ಶಾಲೆಯಲ್ಲಿನ ಶಿಕ್ಷಕರನ್ನು ಪ್ರಶ್ನಿಸಿದ್ದಾರೆ.

ದೂರು ನೀಡಲು ನಿರ್ಧರಿಸಿದ ಶಾಲಾ ಆಡಳಿತ ಮಂಡಳಿ

“ಬಲಪಂಥೀಯ ಕಾರ್ಯಕರ್ತರು ನಮ್ಮೊಂದಿಗೆ ತೀವ್ರವಾದ ವಾಗ್ವಾದ ಮಾಡಿದ್ದಾರೆ. ನಮ್ಮ ಸಂಸ್ಥೆಯಲ್ಲಿ ಸರಸ್ವತಿ ದೇವಿಯ ಫೋಟೋವನ್ನು ನೇತುಹಾಕಲು ಮತ್ತು ಶಾಲೆಯ ಆವರಣದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ನಮಗೆ ಆದೇಶಿಸಿದ್ದಾರೆ. ಜೊತೆಗೆ ನಾವು ಮತಾಂತರ ಮಾಡುತ್ತಿರುವುದಾಗಿ ನಮ್ಮ ವಿರುದ್ಧ ಆರೋಪಿಸಿದ್ದಾರೆ” ಎಂದು ಶಾಲೆಯ ಮುಖ್ಯೋಪಾಧ್ಯಾಯಿನಿ NDTV ಗೆ ತಿಳಿಸಿದ್ದಾರೆ.

ವಿವಾದಾತ್ಮಕ ಮತಾಂತರ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರ ಪಡೆದ ನಂತರ ನಡೆಯುತ್ತಿರುವ ಎರಡನೇ ದಾಳಿ ಇದಾಗಿದೆ. ಇತ್ತೀಚಿನ ವಾರಗಳಲ್ಲಿ ಚರ್ಚ್‌ಗಳು ಸೇರಿದಂತೆ ಕ್ರಿಶ್ಚಿಯನ್ ಸಂಸ್ಥೆಗಳ ಮೇಲೆ ಪದೇ ಪದೇ ದಾಳಿ ಮಾಡುತ್ತಿರುವ ಬಿಜೆಪಿ ಬೆಂಬಲಿತ ಬಲಪಂಥೀಯ ಗುಂಪುಗಳ ಮೇಲೆ ಕರ್ನಾಟಕ ಸರ್ಕಾರವು ಸೌಮ್ಯವಾಗಿ ವರ್ತಿಸುತ್ತಿದೆ.

ಇದನ್ನೂ ಓದಿ:ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...