Homeಮುಖಪುಟಯೇಸುವಿನ ಜೀವನ ಬೋಧನೆ ಸ್ಮರಿಸುತ್ತೇವೆ: ಪ್ರಧಾನಿ ಮೋದಿ ಟ್ವೀಟ್‌

ಯೇಸುವಿನ ಜೀವನ ಬೋಧನೆ ಸ್ಮರಿಸುತ್ತೇವೆ: ಪ್ರಧಾನಿ ಮೋದಿ ಟ್ವೀಟ್‌

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ನಾಯಕರು ಕ್ರಿಸ್ಮಸ್ ಹಬ್ಬದ ಶುಭಕೋರಿದ್ದಾರೆ.

- Advertisement -
- Advertisement -

ಕೋವಿಡ್‌ ಕಾರಣದಿಂದಾಗಿ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧ ಹೇರಿರುವುದರ ನಡುವೆ ಕ್ರಿಸ್ಮಸ್ ಆಚರಣೆಯಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಕ್ರಿಸ್ಮಸ್ ಹಬ್ಬದ ಶುಭಕೋರಿದ್ದಾರೆ.

ಟ್ವೀಟ್ ಮೂಲಕ ಶುಭಕೋರಿರುವ ಪ್ರಧಾನಿ ಮೋದಿ, “ಎಲ್ಲರಿಗೂ ಕ್ರಿಸ್‌ಮಸ್ ಶುಭಾಶಯಗಳು! ಸೇವೆ, ದಯೆ ಮತ್ತು ನಮ್ರತೆಗೆ ಹೆಚ್ಚಿನ ಒತ್ತು ನೀಡಿದ ಯೇಸು ಕ್ರಿಸ್ತನ ಜೀವನ, ಉದಾತ್ತ ಬೋಧನೆಗಳನ್ನು ನಾವು ಸ್ಮರಿಸುತ್ತೇವೆ. ಎಲ್ಲರೂ ಆರೋಗ್ಯವಂತರಾಗಿ ಮತ್ತು ಸಮೃದ್ಧರಾಗಿರಲಿ. ನಮ್ಮ ಸುತ್ತಮುತ್ತ ಸಾಮರಸ್ಯವಿರಲಿ” ಎಂದು ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಟ್ವೀಟ್‌ ಮಾಡಿದ್ದು, “ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಕಾಮನೆಗಳು. ಎಲ್ಲರಿಗೂ ಸಂತಸ, ಉತ್ತಮ ಆರೋಗ್ಯ, ಯಶಸ್ಸು ದೊರೆಯಲಿ, ಸಾಂಕ್ರಾಮಿಕದ ಸಂಕಷ್ಟಗಳೆಲ್ಲ ಪರಿಹಾರವಾಗಲಿ ಎಂದು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸೋಣ. ಎಲ್ಲರೂ ಕೋವಿಡ್-ಸೂಕ್ತ ನಡವಳಿಕೆಗಳನ್ನು ಪಾಲಿಸುತ್ತಾ ಹಬ್ಬವನ್ನಾಚರಿಸೋಣ” ಎಂದಿದ್ದಾರೆ.

ಬಿಜೆಪಿ ಕರ್ನಾಟಕ ಟ್ವೀಟರ್‌ ಅಕೌಂಟ್ ಮೂಲಕವೂ ಕ್ರಿಸ್ಮಸ್ ಹಬ್ಬದ ಶುಭಕೋರಲಾಗಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, “ಶಾಂತಿ, ಪ್ರೀತಿ, ದಯೆ ಮತ್ತು ಕ್ಷಮಾ ಗುಣಗಳಿಂದ ಮಾಡುವ ಜನರ ಸೇವೆಯಿಂದ ದೇವರನ್ನು ಕಾಣಲು ಸಾಧ್ಯ ಎಂಬ ಜೀಸಸ್ ಕ್ರೈಸ್ತನ ಅರ್ಥಪೂರ್ಣ ಸಂದೇಶ ನಮ್ಮ ದಾರಿಗೆ ಬೆಳಕಾಗಿ ನಮ್ಮನ್ನು ಮುನ್ನಡೆಸಲಿ. ನಾಡಿನ ಕ್ರೈಸ್ತ ಬಂಧುಗಳಿಗೆ ಹಾರ್ದಿಕ ಶುಭಾಶಯಗಳು” ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಕ್ರಿಸ್ಮಸ್‌ ಶುಭಕೋರಿದ್ದಾರೆ.

ಓಮೈಕ್ರಾನ್‌ ರೂಪಾಂತರದ ತಳಿಯ ಸೋಂಕು ಹೆಚ್ಚಿತ್ತಿರುವ ನಡುವೆ ಕ್ರಿಸ್ಮಸ್ ಹಬ್ಬ ಬಂದಿದೆ. ಇದರಿಂದಾಗಿ ಹಲವೆಡೆ ನಿರ್ಬಂಧಗಳನ್ನು ಹಾಕಲಾಗಿದೆ.

ರಾತ್ರಿ 9ರಿಂದ ಬೆಳಿಗ್ಗೆ 6ರವರೆಗೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಭೆಗಳನ್ನು ನಡೆಸದಿರಲು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ. ಹರಿಯಾಣ ಮತ್ತು ದೆಹಲಿಯಲ್ಲೂ ನಿರ್ಬಂಧಗಳನ್ನು ಹೇರಲಾಗಿದೆ. ಆದರೆ ದೆಹಲಿಯಲ್ಲಿ ಪೂಜಾ ಸ್ಥಳಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ರಜೆ ದಿನದ ಪ್ರವಾಸವನ್ನು ಕೈಗೊಳ್ಳಲು ಕೋವಿಡ್ ಅಡ್ಡಿಯಾಗಿದೆ. ವಿಶ್ವದಾದ್ಯಂತ 2,300ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಟ್ರ್ಯಾಕಿಂಗ್ ವೆಬ್‌ಸೈಟ್ Flightaware.com ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.


ಇದನ್ನೂ ಓದಿರಿ: ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...