Homeಕರ್ನಾಟಕಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

ಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

- Advertisement -
- Advertisement -

ಮ್ಯಾನ್‌ಹೋಲ್‌‌ಗೆ ಇಳಿದ ಪರಿಣಾಮದಿಂದಾಗಿ ಚಿನ್ಮಯ ಮಿಷನ್ ಆಸ್ಪತ್ರೆಯ (CMH) ಉದ್ಯೋಗಿ ದೈವದೀನಂ(53) ಅವರು ಉಸಿರಾಟದ ತೊಂದರೆ, ರಕ್ತದೊತ್ತಡ ಮತ್ತು ಇತರ ಅನಾರೋಗ್ಯ ತೊಂದರೆಗೆ ಒಳಗಾಗಿದ್ದಾರೆ ಎಂದು TOI ವರದಿ ಮಾಡಿದೆ. ಇದರ ನಂತರ ಅವರನ್ನು ಅದೇ ಆಸ್ಪತ್ರೆಯ ICU ಗೆ ದಾಖಲಿಸಲಾಗಿದೆ.

ಅವರನ್ನು ಮ್ಯಾನ್‌ಹೋಲ್‌ಗೆ ಇಳಿದು ಅದನ್ನು ಸ್ವಚ್ಛ ಮಾಡುವಂತೆ ಆಸ್ಪತ್ರೆಯ ಮೇಲಾಧಿಕಾರಿಗಳು ಒತ್ತಾಯಿಸಿದ್ದರಿಂದ ಅವರು ಮ್ಯಾನ್‌ಹೋಲ್‌ಗೆ ಇಳಿದಿದ್ದರು. ಈ ಬಗ್ಗೆ ಕಳೆದ ಮಂಗಳವಾದಂದು ವರದಿಯಾಗಿತ್ತು. ಘಟನೆಯ ಬಗ್ಗೆ ವರದಿಯಾದ ಎರಡು ದಿನಗಳ ನಂತರ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರು ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಆಸ್ಪತ್ರೆ ಮತ್ತು ಅದರ ಇಬ್ಬರು ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಹಲಸೂರು ಸಹಾಯಕ ಪೊಲೀಸ್ ಆಯುಕ್ತ ಕುಮಾರ್, ನಡೆಯುತ್ತಿರುವ ತನಿಖೆಯ ವಿವರಗಳನ್ನು ಬಹಿರಂಗಪಡಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆಂದು TOI ವರದಿ ಹೇಳಿದೆ. “ತನಿಖೆಯಲ್ಲಿ ಪ್ರಗತಿ ಕಂಡುಬಂದಿದೆ ಆದರೆ ಸಂಪೂರ್ಣ ಪ್ರಕ್ರಿಯೆಯು ಪೂರ್ಣಗೊಂಡ ನಂತರ ಮಾತ್ರ ಅದನ್ನು ಬಹಿರಂಗಪಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಚಿನ್ಮಯ ಮಿಷನ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲ್ ಬಿ ಹೊಸೂರ್ ಅವರಯ ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಅಥವಾ ವಿವರಿಸಲು ನಿರಾಕರಿಸಿದ್ದು, “ಆಸ್ಪತ್ರೆಯು ಅಧಿಕಾರಿಗಳೊಂದಿಗೆ ಸಹಕರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ದೈವದೀನಂ ಅವರು ಆಸ್ಪತ್ರೆಯ ಒಳಚರಂಡಿ ಸ್ವಚ್ಛಗೊಳಿಸಿದ ನಂತರ ಅವರ ಆರೋಗ್ಯವು ಹದಗೆಟ್ಟಿದೆ ಎಂದು ಸಿಎಂಹೆಚ್ ಮೂಲಗಳು ತಿಳಿಸಿವೆ ಎಂದು ಪತ್ರಿಕೆ ಹೇಳಿದೆ.

ಇದನ್ನೂ ಓದಿ:ಪೊಲಿಟಿಕಲ್ ಕರೆಕ್ಟ್‌ನೆಸ್ ಮತ್ತು ಸಂವೇದನೆ; ಚಿತ್ರ, ಕಾರ್ಟೂನು, ಮಾಧ್ಯಮ ಮತ್ತು ತಿಳಿವಳಿಕೆಯ ಸಂವಾದ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಮಾತನಾಡಿ, “ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಸಿಪಿ ಮತ್ತು ಆ ಭಾಗದ ವಿಭಾಗೀಯ ಮ್ಯಾಜಿಸ್ಟ್ರೇಟ್‌ ಆಗಿರುವ ಸಹಾಯಕ ಆಯುಕ್ತರಿಗೆ ಸೂಚನೆ ನೀಡಿದ್ದೇನೆ” ಎಂದು ಹೇಳಿದ್ದರೆ.

ಭಾರಿ ಬೆಲೆ ತೆರುತ್ತಿರುವ ನೈರ್ಮಲ್ಯ ಕಾರ್ಮಿಕರು

“ನೈರ್ಮಲ್ಯ ಕಾರ್ಮಿಕರ ತೆರುತ್ತಿರುವ ಅಂತಿಮ ಬೆಲೆ ಸಾವಾಗಿದೆ. ಉಸಿರಾಟದ ತೊಂದರೆಗಳು ಸೇರಿದಂತೆ ಇತರ ಗಂಭೀರ ಆರೋಗ್ಯ ಸಮಸ್ಯೆಗಳು ಅವರು ಸತತವಾಗಿ ಆಸ್ಪತ್ರೆ ಸೇರುವಂತೆ ಮಾಡುತ್ತದೆ” ಎಂದು ಸಫಾಯಿ ಕರ್ಮಚಾರಿಗಳು ಹೇಳಿದ್ದಾರೆ.

“ನನ್ನ ವೈದ್ಯಕೀಯ ಬಿಲ್‌ಗಳು ತುಂಬಾ ಹೆಚ್ಚಿದ್ದು, ಅದಕ್ಕೆ ಅಂತ್ಯವಿಲ್ಲ. ಇದರಿಂದ 4 ಲಕ್ಷ ರೂ.ಗೂ ಹೆಚ್ಚು ಸಾಲ ಹೊಂದಿದ್ದೇನೆ’’ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ನೈರ್ಮಲ್ಯ ಕಾರ್ಮಿಕ ಸತೀಶ್ ಜೆ.ಆರ್. ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ:ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಅಪಾಯಕಾರಿ ಮತ್ತು ದೈಹಿಕವಾಗಿ ಹಾನಿಕರ ಕೆಲಸದ ಕಾರಣದಿಂದಾಗಿ ನೈರ್ಮಲ್ಯ ಕಾರ್ಮಿಕರು ಹೆಚ್ಚಾಗಿ ನ್ಯುಮೋಕೊನಿಯೋಸಿಸ್, ಸಿಲಿಕೋಸಿಸ್, ವಿವಿಧ ಚರ್ಮ ಮತ್ತು ಕಣ್ಣಿನ ಸೋಂಕುಗಳಿಂದ ಬಳಲುತ್ತಿದ್ದಾರೆ ಎಂದು ಸಫಾಯಿ ಕರ್ಮಾಚಾರಿಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಕಾರ್ಯಕರ್ತರು ಹೇಳಿದ್ದಾರೆ.

“ಕೆಲವು ಸಾವುಗಳು ಅವರು ಕೆಲಸದಲ್ಲಿರುವಾಗ ಸಂಭವಿಸುತ್ತವೆ. ಆದರೆ ಕಾನೂನುಬಾಹಿರ ಕೆಲಸಗಳಿಗೆ ಅವರನ್ನು ಹಚ್ಚುವುದರಿಂದ ಉಂಟಾಗುವ, ಅದರಿಂದ ಉಲ್ಬಣಗೊಳ್ಳುವ ತೀವ್ರ ಆರೋಗ್ಯ ಸಮಸ್ಯೆಗಳಿಂದಾಗಿಯೆ ನೈರ್ಮಲ್ಯ ಕಾರ್ಮಿಕರಲ್ಲಿ ಹೆಚ್ಚಿನವರು ಬೇಗನೆ ಸಾಯುತ್ತಾರೆ” ಎಂದು ನೈರ್ಮಲ್ಯ ಕಾರ್ಮಿಕರನ್ನು ಪ್ರತಿನಿಧಿಸುವ ವಕೀಲ ಎಸ್. ಬಾಲನ್ ಹೇಳಿದ್ದಾರೆ.

ಇದನ್ನೂ ಓದಿ:ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...