Homeಕರ್ನಾಟಕಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

ಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

- Advertisement -
- Advertisement -

ಮ್ಯಾನ್‌ಹೋಲ್‌‌ಗೆ ಇಳಿದ ಪರಿಣಾಮದಿಂದಾಗಿ ಚಿನ್ಮಯ ಮಿಷನ್ ಆಸ್ಪತ್ರೆಯ (CMH) ಉದ್ಯೋಗಿ ದೈವದೀನಂ(53) ಅವರು ಉಸಿರಾಟದ ತೊಂದರೆ, ರಕ್ತದೊತ್ತಡ ಮತ್ತು ಇತರ ಅನಾರೋಗ್ಯ ತೊಂದರೆಗೆ ಒಳಗಾಗಿದ್ದಾರೆ ಎಂದು TOI ವರದಿ ಮಾಡಿದೆ. ಇದರ ನಂತರ ಅವರನ್ನು ಅದೇ ಆಸ್ಪತ್ರೆಯ ICU ಗೆ ದಾಖಲಿಸಲಾಗಿದೆ.

ಅವರನ್ನು ಮ್ಯಾನ್‌ಹೋಲ್‌ಗೆ ಇಳಿದು ಅದನ್ನು ಸ್ವಚ್ಛ ಮಾಡುವಂತೆ ಆಸ್ಪತ್ರೆಯ ಮೇಲಾಧಿಕಾರಿಗಳು ಒತ್ತಾಯಿಸಿದ್ದರಿಂದ ಅವರು ಮ್ಯಾನ್‌ಹೋಲ್‌ಗೆ ಇಳಿದಿದ್ದರು. ಈ ಬಗ್ಗೆ ಕಳೆದ ಮಂಗಳವಾದಂದು ವರದಿಯಾಗಿತ್ತು. ಘಟನೆಯ ಬಗ್ಗೆ ವರದಿಯಾದ ಎರಡು ದಿನಗಳ ನಂತರ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರು ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಆಸ್ಪತ್ರೆ ಮತ್ತು ಅದರ ಇಬ್ಬರು ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಹಲಸೂರು ಸಹಾಯಕ ಪೊಲೀಸ್ ಆಯುಕ್ತ ಕುಮಾರ್, ನಡೆಯುತ್ತಿರುವ ತನಿಖೆಯ ವಿವರಗಳನ್ನು ಬಹಿರಂಗಪಡಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆಂದು TOI ವರದಿ ಹೇಳಿದೆ. “ತನಿಖೆಯಲ್ಲಿ ಪ್ರಗತಿ ಕಂಡುಬಂದಿದೆ ಆದರೆ ಸಂಪೂರ್ಣ ಪ್ರಕ್ರಿಯೆಯು ಪೂರ್ಣಗೊಂಡ ನಂತರ ಮಾತ್ರ ಅದನ್ನು ಬಹಿರಂಗಪಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಚಿನ್ಮಯ ಮಿಷನ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲ್ ಬಿ ಹೊಸೂರ್ ಅವರಯ ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಅಥವಾ ವಿವರಿಸಲು ನಿರಾಕರಿಸಿದ್ದು, “ಆಸ್ಪತ್ರೆಯು ಅಧಿಕಾರಿಗಳೊಂದಿಗೆ ಸಹಕರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ದೈವದೀನಂ ಅವರು ಆಸ್ಪತ್ರೆಯ ಒಳಚರಂಡಿ ಸ್ವಚ್ಛಗೊಳಿಸಿದ ನಂತರ ಅವರ ಆರೋಗ್ಯವು ಹದಗೆಟ್ಟಿದೆ ಎಂದು ಸಿಎಂಹೆಚ್ ಮೂಲಗಳು ತಿಳಿಸಿವೆ ಎಂದು ಪತ್ರಿಕೆ ಹೇಳಿದೆ.

ಇದನ್ನೂ ಓದಿ:ಪೊಲಿಟಿಕಲ್ ಕರೆಕ್ಟ್‌ನೆಸ್ ಮತ್ತು ಸಂವೇದನೆ; ಚಿತ್ರ, ಕಾರ್ಟೂನು, ಮಾಧ್ಯಮ ಮತ್ತು ತಿಳಿವಳಿಕೆಯ ಸಂವಾದ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಮಾತನಾಡಿ, “ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಸಿಪಿ ಮತ್ತು ಆ ಭಾಗದ ವಿಭಾಗೀಯ ಮ್ಯಾಜಿಸ್ಟ್ರೇಟ್‌ ಆಗಿರುವ ಸಹಾಯಕ ಆಯುಕ್ತರಿಗೆ ಸೂಚನೆ ನೀಡಿದ್ದೇನೆ” ಎಂದು ಹೇಳಿದ್ದರೆ.

ಭಾರಿ ಬೆಲೆ ತೆರುತ್ತಿರುವ ನೈರ್ಮಲ್ಯ ಕಾರ್ಮಿಕರು

“ನೈರ್ಮಲ್ಯ ಕಾರ್ಮಿಕರ ತೆರುತ್ತಿರುವ ಅಂತಿಮ ಬೆಲೆ ಸಾವಾಗಿದೆ. ಉಸಿರಾಟದ ತೊಂದರೆಗಳು ಸೇರಿದಂತೆ ಇತರ ಗಂಭೀರ ಆರೋಗ್ಯ ಸಮಸ್ಯೆಗಳು ಅವರು ಸತತವಾಗಿ ಆಸ್ಪತ್ರೆ ಸೇರುವಂತೆ ಮಾಡುತ್ತದೆ” ಎಂದು ಸಫಾಯಿ ಕರ್ಮಚಾರಿಗಳು ಹೇಳಿದ್ದಾರೆ.

“ನನ್ನ ವೈದ್ಯಕೀಯ ಬಿಲ್‌ಗಳು ತುಂಬಾ ಹೆಚ್ಚಿದ್ದು, ಅದಕ್ಕೆ ಅಂತ್ಯವಿಲ್ಲ. ಇದರಿಂದ 4 ಲಕ್ಷ ರೂ.ಗೂ ಹೆಚ್ಚು ಸಾಲ ಹೊಂದಿದ್ದೇನೆ’’ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ನೈರ್ಮಲ್ಯ ಕಾರ್ಮಿಕ ಸತೀಶ್ ಜೆ.ಆರ್. ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ:ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಅಪಾಯಕಾರಿ ಮತ್ತು ದೈಹಿಕವಾಗಿ ಹಾನಿಕರ ಕೆಲಸದ ಕಾರಣದಿಂದಾಗಿ ನೈರ್ಮಲ್ಯ ಕಾರ್ಮಿಕರು ಹೆಚ್ಚಾಗಿ ನ್ಯುಮೋಕೊನಿಯೋಸಿಸ್, ಸಿಲಿಕೋಸಿಸ್, ವಿವಿಧ ಚರ್ಮ ಮತ್ತು ಕಣ್ಣಿನ ಸೋಂಕುಗಳಿಂದ ಬಳಲುತ್ತಿದ್ದಾರೆ ಎಂದು ಸಫಾಯಿ ಕರ್ಮಾಚಾರಿಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಕಾರ್ಯಕರ್ತರು ಹೇಳಿದ್ದಾರೆ.

“ಕೆಲವು ಸಾವುಗಳು ಅವರು ಕೆಲಸದಲ್ಲಿರುವಾಗ ಸಂಭವಿಸುತ್ತವೆ. ಆದರೆ ಕಾನೂನುಬಾಹಿರ ಕೆಲಸಗಳಿಗೆ ಅವರನ್ನು ಹಚ್ಚುವುದರಿಂದ ಉಂಟಾಗುವ, ಅದರಿಂದ ಉಲ್ಬಣಗೊಳ್ಳುವ ತೀವ್ರ ಆರೋಗ್ಯ ಸಮಸ್ಯೆಗಳಿಂದಾಗಿಯೆ ನೈರ್ಮಲ್ಯ ಕಾರ್ಮಿಕರಲ್ಲಿ ಹೆಚ್ಚಿನವರು ಬೇಗನೆ ಸಾಯುತ್ತಾರೆ” ಎಂದು ನೈರ್ಮಲ್ಯ ಕಾರ್ಮಿಕರನ್ನು ಪ್ರತಿನಿಧಿಸುವ ವಕೀಲ ಎಸ್. ಬಾಲನ್ ಹೇಳಿದ್ದಾರೆ.

ಇದನ್ನೂ ಓದಿ:ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...