Homeಮುಖಪುಟಗುರ್ಗಾಂವ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿ: ವೇದಿಕೆಗೆ ನುಗ್ಗಿ ದಾಂಧಲೆ

ಗುರ್ಗಾಂವ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿ: ವೇದಿಕೆಗೆ ನುಗ್ಗಿ ದಾಂಧಲೆ

ಬಲಪಂಥೀಯ ಕಾರ್ಯಕರ್ತರು ವೇದಿಕೆಗೆ ನುಗ್ಗಿ, ಅಲ್ಲಿದ್ದವರನ್ನು ಕೆಳಗೆ ತಳ್ಳಿ, ಮೈಕ್ ಕಿತ್ತುಕೊಂಡು ಜೈ ಶ್ರೀರಾಮ್ ಮತ್ತು ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಗಳನ್ನು ಕೂಗಿದ್ದಾರೆ.

- Advertisement -
- Advertisement -

ಇತ್ತೀಚಿಗಷ್ಟೇ ಹರಿಯಾಣದ ಗುರ್ಗಾಂವ್‌ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡುವುದಕ್ಕೆ ಅಡ್ಡಿಪಡಿಸಿದ್ದ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ನಿನ್ನೆ ಪಟೌಡಿಯ ಚರ್ಚ್ ಒಂದಕ್ಕೆ ನುಗ್ಗಿ ದಾಂಧಲೆ ನಡೆಸಿ, ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿಪಡಿಸಿರುವ ಘಟನೆ ವರದಿಯಾಗಿದೆ.

ಈ ಕುರಿತು ಎರಡು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಬಲಪಂಥೀಯ ಕಾರ್ಯಕರ್ತರು ವೇದಿಕೆಗೆ ನುಗ್ಗಿ, ಅಲ್ಲಿದ್ದವರನ್ನು ಕೆಳಗೆ ತಳ್ಳಿ, ಮೈಕ್ ಕಿತ್ತುಕೊಂಡು ಜೈ ಶ್ರೀರಾಮ್ ಮತ್ತು ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಗಳನ್ನು ಕೂಗುವುದನ್ನು ನೋಡಬಹುದು.

ವ್ಯಕ್ತಿಯೊಬ್ಬ ಮೈಕ್ ಕಿತ್ತುಕೊಂಡು ನೀವು ಭಾರತೀಯ ಸಂಸ್ಕೃತಿಯನ್ನು ಸರ್ವನಾಶ ಮಾಡುತ್ತಿದ್ದೀರಿ, ಇದನ್ನು ಸಹಿಸುವುದಿಲ್ಲ, ಈ ಮಕ್ಕಳು ನಿಮ್ಮಂತಾಗಲು ಬಿಡುವುದಿಲ್ಲ, ಈ ಕೆಲಸವನ್ನು ನಾವು ಒಪ್ಪುವುದಿಲ್ಲ ಮಾತ್ರವಲ್ಲ ಇನ್ನು ಮುಂದೆ ಈ ರೀತಿ ನಡೆಯಲು ಬಿಡುವುದಿಲ್ಲ ಎಂಬ ಸಂಕಲ್ಪ ತೊಡುತ್ತೇವೆ, ಸತ್ಯ ಸನಾತನ ಧರ್ಮಕ್ಕೆ ಜಯವಾಗಲಿ ಎಂದು ಮಾತನಾಡುವುದನ್ನು ವಿಡಿಯೋದಲ್ಲಿ ನೋಡಬಹುದು.

ಸ್ಥಳೀಯ ಪಾದ್ರಿಯೊಬ್ಬರು ಪಿಟಿಐನೊಂದಿಗೆ ಮಾತನಾಡಿ “ನಾವು ಚರ್ಚ್‌ನಲ್ಲಿ ಮಹಿಳೆಯರು ಮತ್ತು ಮಕ್ಕಳೊಂದಿಗೆ ಕ್ರಿಸ್‌ಮಸ್ ಪ್ರಾರ್ಥನೆ ಮಾಡುತ್ತಿದ್ದೆವು. ಏಕಾಏಕಿ ನುಗ್ಗಿ ದಾಂಧಲೆ ನಡಿಸಿದ್ದಾರೆ. ದಿನದಿಂದ ದಿನಕ್ಕೆ ಈ ಕಿರುಕುಳ ಹೆಚ್ಚುತ್ತಿದೆ. ಇದು ಧರ್ಮ ಪಾಲಿಸುವ ಮತ್ತು ಪ್ರಾರ್ಥಿಸುವ ನಮ್ಮ ಹಕ್ಕಿನ ಉಲ್ಲಂಘನೆಯಾಗಿದೆ” ಎಂದು ದೂರಿದ್ದಾರೆ. ಪಟೌಡಿ ಠಾಣಾಧಿಕಾರಿ ಅಮಿತ್ ಕುಮಾರ್ ಮಾತನಾಡಿ, ಪೊಲೀಸರು ಇದುವರೆಗೆ ಯಾವುದೇ ದೂರು ಸ್ವೀಕರಿಸಿಲ್ಲ ಎಂದು ತಿಳಿಸಿದ್ದಾರೆ.

ಬಹಳ ಹಿಂದಿನಿಂದಲೂ ಗುರುಗ್ರಾಮದ ಹಲವು ಖಾಲಿ ನಿವೇ‍ಶನಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ವಾರದಲ್ಲಿ ಒಂದು ದಿನ ನಮಾಜ್ ಮಾಡುತ್ತಿದ್ದರು. ಆದರೆ ಅಕ್ಟೋಬರ್ ಆರಂಭದಿಂದ ಕೆಲವು ಹಿಂದುತ್ವವಾದಿ ಸಂಘಟನೆಗಳು ಅದಕ್ಕೆ ಅಡ್ಡಿಪಡಿಸಿದ್ದವು. ಮುಸ್ಲಿಮರು ನಮಾಜ್ ಮಾಡುವ ಜಾಗದಲ್ಲಿಯೇ ಈ ಸಂಘಟನೆಗಳು ಗೋವರ್ಧನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಅಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿತ್ತು. ಕಾರ್ಯಕ್ರಮದಲ್ಲಿ ದೆಹಲಿ ಗಲಭೆಯ ಪ್ರಚೋದನಾಕಾರಿ ಭಾಷಣಕಾರರದ ಕಪಿಲ್ ಮಿಶ್ರಾ ಭಾಗವಹಿಸಿದ್ದರು. ನಂತರ ಅದೇ ಜಾಗದಲ್ಲಿ ಸಗಣಿಗಳನ್ನು ತಂದು ಹಾಕಿ ನಮಾಜ್ ಮಾಡಲು ಅಡ್ಡಿಪಡಿಸಲಾಗಿತ್ತು. ಹಾಗಾಗಿ ಜಿಲ್ಲಾಡಳಿತ ಅಲ್ಲಿ ನಮಾಜ್ ಮಾಡಲು ಅನುಮತಿ ನಿರಾಕರಿಸಲಾಗಿತ್ತು. ಈಗ ಸಿಖ್ ಮತ್ತು ಕೆಲ ಹಿಂದೂ ಜನರು ಮಸ್ಲಿಮರು ನಮ್ಮ ಸ್ಥಳಗಳಿಗೆ ಬಂದು ನಮಾಜ್ ಮಾಡಿ ಎಂದು ಆಹ್ವಾನ ನೀಡುವ ಮೂಲಕ ಸಾಮರಸ್ಯ ಮೆರೆದಿದ್ದಾರೆ. ಸದ್ಯಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡುವುದಕ್ಕೆ ಅಡ್ಡಿಪಡಿಸಲಾಗುತ್ತಿದೆ. ಅದು ಈಗ ಕ್ರಿಶ್ಚಿಯನ್ ಚರ್ಚ್‌ಗಳಿಗೂ ವ್ಯಾಪಿಸಿದೆ.


ಇದನ್ನೂ ಓದಿ: ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...