Homeಮುಖಪುಟರಾಜಕೀಯ ಪ್ರವೇಶದ ಕುರಿತು ಹರ್ಭಜನ್‌ ಸಿಂಗ್‌ ಸುಳಿವು

ರಾಜಕೀಯ ಪ್ರವೇಶದ ಕುರಿತು ಹರ್ಭಜನ್‌ ಸಿಂಗ್‌ ಸುಳಿವು

- Advertisement -
- Advertisement -

ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ಅವರು ಚುನಾವಣಾ ರಾಜಕೀಯಕ್ಕೆ ಸೇರಬಹುದು ಎಂಬ ವರದಿಗಳಾಗುತ್ತಿದೆ. ಇದರ ನಡುವೆ ಪ್ರತಿಕ್ರಿಯೆ ನೀಡಿರುವ ಹರ್ಭಜನ್‌, “ಹಲವಾರು ರಾಜಕೀಯ ಪಕ್ಷಗಳವರು ಆಫರ್‌ಗಳನ್ನು ನೀಡುತ್ತಿದ್ದಾರೆ. ರಾಜಕೀಯ ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ ಪಂಜಾಬ್‌ಗೆ ಸೇವೆ ಸಲ್ಲಿಸುತ್ತೇನೆ” ಎಂದಿದ್ದಾರೆ.

“ಭವಿಷ್ಯದ ಯೋಜನೆ ಕುರಿತು ಯೋಚಿಸಿಲ್ಲ. ನಾನು ಕ್ರಿಕೆಟ್‌ನೊಂದಿಗೆ ಸಂಪರ್ಕದಲ್ಲಿರುತ್ತೇನೆ. ಯಾಕೆಂದರೆ ಕ್ರಿಕೆಟ್‌ನಿಂದಾಗಿ ಜನರು ನನ್ನನ್ನು ಗುರುತಿಸಿದ್ದಾರೆ. ನನ್ನ ರಾಜಕೀಯ ವೃತ್ತಿಜೀವನವನ್ನು ನಿರ್ಧರಿಸಿದಾಗ ನಾನು ಎಲ್ಲರಿಗೂ ತಿಳಿಸುತ್ತೇನೆ” ಎಂದು ಹೇಳಿದ್ದಾರೆ.

“ನನಗೆ ಎಲ್ಲಾ ಪಕ್ಷದ ರಾಜಕಾರಣಿಗಳು ಗೊತ್ತು. ನಾನು ಯಾವುದೇ ಪಕ್ಷ ಸೇರುವುದಾದರೆ ಮೊದಲೇ ಘೋಷಣೆ ಮಾಡುತ್ತೇನೆ. ರಾಜಕೀಯ ಅಥವಾ ಯಾವುದಾದರೂ ರೀತಿಯಲ್ಲಿ ಪಂಜಾಬ್‌ಗೆ ಸೇವೆ ಸಲ್ಲಿಸುತ್ತೇನೆ. ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ” ಎಂದು ಹರ್ಭಜನ್‌ ಪ್ರತಿಕ್ರಿಯೆ ನೀಡಿದ್ದಾರೆ.

“ನಿಜ ಹೇಳಬೇಕೆಂದರೆ, ನಾನು ಅದರ ಬಗ್ಗೆ ಯೋಚಿಸಲಿಲ್ಲ, ನಾನು ರಾಜಕೀಯ ಸೇರಲು ವಿವಿಧ ಪಕ್ಷಗಳಿಂದ ಆಫರ್‌ಗಳಿವೆ … ಆದರೆ ನಾನು ತುಂಬಾ ಬುದ್ಧಿವಂತಿಕೆಯಿಂದ ಕುಳಿತು ಯೋಚಿಸಬೇಕಾಗಿದೆ. ಇದು ಬಹುಬೇಡಿಕೆ ಕೆಲಸವಾದ್ದರಿಂದ ನಿರ್ಧಾರ ಸುಲಭದ್ದಲ್ಲ. ನಾನು ಅರೆಮನಸ್ಸಿನಿಂದ ರಾಜಕಾರಣ ಮಾಡಲು ಬಯಸುವುದಿಲ್ಲ. ರಾಜಕಾರಣ ಮಾಡಲು ಸಿದ್ಧನಿದ್ದೇನೆ ಎಂದು ಭಾವಿಸಿದ ದಿನ, ನಾನು ರಾಜಕಾರಣಕ್ಕೆ ಹೋಗುತ್ತೇನೆ” ಎಂದಿದ್ದಾರೆ.

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ನವಜೋತ್ ಸಿಧು ಅವರು ಹರ್ಭಜನ್‌ ಸಿಂಗ್‌ ಅವರೊಂದಿಗೆ ಫೋಟೋವನ್ನು ಪೋಸ್ಟ್ ಮಾಡಿದ ಬಳಿಕ, ಹರ್ಭಜನ್‌ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಹಲವು ಊಹಾಪೋಹಗಳು ಹರಿದಾಡಿದ್ದವು.

“ಸಾಧ್ಯತೆಗಳಿಂದ ಕೂಡಿರುವ ಚಿತ್ರವಿದು… ಭಜ್ಜಿ, ಮಿನುಗುವ ತಾರೆ” ಎಂದು ಸಿಧು ಬರೆದಿದ್ದರು.

ಸಿಧು ಜೊತೆಗಿನ ಫೋಟೋ ಬಗ್ಗೆ ಹರ್ಭಜನ್‌ ಅವರಲ್ಲಿ ಪ್ರಶ್ನಿಸಿದ್ದಾಗ, “ಇದು ಸಾಂದರ್ಭಿಕ ಭೇಟಿಯಾಗಿದೆ. ಚುನಾವಣೆ ಹತ್ತಿರದಲ್ಲಿದೆ, ಜನರು ಏಕೆ ಊಹಿಸುತ್ತಾರೆ ಎಂದು ನನಗೆ ಅರ್ಥವಾಯಿತು … ಆದರೆ ಏನೂ ಇಲ್ಲ. ನಾನು ರಾಜಕೀಯಕ್ಕೆ ಬಂದರೆ, ನಾನು ಎಲ್ಲರಿಗೂ ತಿಳಿಸುತ್ತೇನೆ” ಎಂದಿದ್ದರು.

2022ರಲ್ಲಿ ನಡೆಯುವ ಪಂಜಾಬ್‌ನ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಹರ್ಭಜನ್ ಮತ್ತು ಭಾರತದ ಮತ್ತೊಬ್ಬ ಮಾಜಿ ಕ್ರಿಕೆಟ್ ತಾರೆ ಯುವರಾಜ್ ಸಿಂಗ್ ಬಿಜೆಪಿಗೆ ಸೇರಬಹುದು ಎಂಬ ವದಂತಿಗಳನ್ನೂ ಹರ್ಭಜನ್‌ ಅಲ್ಲಗಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...