Homeಮುಖಪುಟರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ರಿಪೋ ರೇಟ್ ದರ ಕಡಿತ ಮತ್ತು ಅದರಿಂದ ನಮಗೇನು ಪ್ರಯೋಜನ?

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ.

- Advertisement -
- Advertisement -

| ಜಿ.ಆರ್.ವಿದ್ಯಾರಣ್ಯ |

ಭಾರತೀಯ ರಿಜರ್ವ್ ಬ್ಯಾಂಕ್ ಇಂದು ತನ್ನ ಹಣಕಾಸು ನೀತಿಯ ಅಡಿಯಲ್ಲಿ  ಮರುಖರೀದಿ (ರಿಪೊ) ದರವನ್ನು 25  ಅಂಕದಷ್ಟು (ಅಂದರೆ ¼%) ಕಡಿತಗೊಳಿಸಿದೆ. ಇದರಿಂದ ನೆನೆಗುದಿಗೆ ಬಿದ್ದಿರುವ ದೇಶದ ಆರ್ಥಿಕ ಪ್ರಗತಿಯ ಬಂಡಿ ಮತ್ತೆ ಹೆದ್ದಾರಿ ಹಿಡಿಯಬಹುದೆಂಬ ಆಶಯ ವ್ಯಕ್ತಪಡಿಸಿದೆ. ಭಾರತೀಯ ರಿಜರ್ವ್ ಬ್ಯಾಂಕ್  ಈ ವರ್ಷ ಆಗಲೇ ರಿಪೊ ದರವನ್ನು ಎರಡು ಬಾರಿ (ಫಬ್ರುವರಿ ಮತ್ತು ಏಪ್ರಿಲ್ ತಿಂಗಳಲ್ಲಿ) ¼% ಕಡಿಮೆ ಮಾಡಿದೆ. ಕಡಿತದಿಂದ ಬ್ಯಾಂಕುಗಳಿಗೆ ಉಪಯೋಗಿಸಲು ಕಡಿಮೆ ದರದಲ್ಲಿ ಹಣವೇನೋ ಲಭಿಸುತ್ತದೆ. ಕಡಿತದಿಂದ ಸಾಮಾನ್ಯವಾಗಿ ಎಲ್ಲಾ ರೀತಿಯ ಸಾಲದ ಮೇಲಿನ ಬಡ್ಡಿದರವೂ ಕಡಿಮೆಯಾಗಬೇಕು. ಆದರೆ ಕೇವಲ ಕಾಲು ಪ್ರತಿಶತ ಈ ಬಾರಿಯ ಇಳಿತದ ಲಾಭವನ್ನು ಬ್ಯಾಂಕುಗಳು ತನ್ನ ಗ್ರಾಹಕರಿಗೆ ಹಸ್ತಾಂತರಿಸುವುದು ಸಂದೇಹ.

ಸುಮಾರು ಎಲ್ಲಾ ಬ್ಯಾಂಕುಗಳು ತಾವೇ ಸ್ವತಃ ಸಂಕಷ್ಟದಲ್ಲಿರುವಾಗ ತಮ್ಮ ಲಾಭಾಂಶ ಹೆಚ್ಚಿಸಿಕೊಳ್ಳುವತ್ತ ಅವರ ಗಮನ ಇರುತ್ತದೇ ವಿನಃ ಜನಸಾಮಾನ್ಯರ ಸಾಲಕ್ಕೆ ಬಡ್ಡಿದರ ಕಡಿಮೆ ಮಾಡುವುದು ಅವರ ಪ್ರಾಥಮಿಕತೆ ಆಗುವುದಿಲ್ಲ. ಹಣ ಸುಲಭವಾಗಿ ದೊರೆತ ಮಾತ್ರಕ್ಕೆ ಜನರು ಸಾಲ ಪಡೆದು ಹೊಸ ಉದ್ಯೋಗ ಪ್ರಾರಂಭಿಸುತ್ತಾರೆ ಅಥವಾ ಅವರ ಈಗಿರುವ ವಹಿವಾಟನ್ನು ವಿಸ್ತರಿಸಿಕೊಳ್ಳುತ್ತಾರೆ, ಅದರಿಂದ ದೇಶದ ಆರ್ಥಿಕ ಪ್ರಗತಿ ವೇಗ ಹಿಡಿಯುತ್ತದೆ, ಜನರಿಗೆ ಹೆಚ್ಚಿನ ಉದ್ಯೋಗವಾಕಾಶ ದೊರೆಯುತ್ತದೆ ಎಂದು ನಂಬಿದರೆ ಅದು ಶೇಖ್ ಮೊಹಮ್ಮದನ ಕನಸು.

ನಮಗೆ ತಿಳಿದಂತೆ, ಮತ್ತು ಇತ್ತೀಚೆಗೆ ಸರಕಾರ ಒಪ್ಪಿಕೊಂಡಂತೆ, ನಿರುದ್ಯೋಗಿಗಳ ಸಂಖ್ಯೆ ಸತತವಾಗಿ ಹೆಚ್ಚುತ್ತಲೇ ಇದೆ ಮತ್ತು ಕಳೆದ 45 ವರ್ಷಗಳ ಕೆಳ ಹಂತ ತಲುಪಿದೆ. ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯತ್ತಿರುವ ದೊಡ್ಡ ಆರ್ಥಿಕ ಶಕ್ತಿ ಭಾರತ ಎಂದು ಬಿಂಬಿಸಲು ಮಾಧ್ಯಮಗಳು ಪೈಪೋಟಿ ನಡೆಸುತ್ತಿವೆ. ಭಾರತದ ಆರ್ಥಿಕತೆ ಔದ್ಯೋಗಿಕ ಕ್ಷೇತ್ರದ ಶಕ್ತಿಯಿಂದ ಮೇಲೇರುತ್ತಿಲ್ಲ, ಅದು ಮೇಲೇರುತ್ತಿರುವುದು ಕೇವಲ ಸೇವಾ ಕ್ಷೇತ್ರದ ಬಲದ ಮೇಲೆ. ಕೃಷಿ ವಲಯ 15% ಕೊಡುಗೆ ನೀಡಿದರೆ ಔದ್ಯೋಗಿಕ ಕ್ಷೇತ್ರದ ಕಾಣಿಕೆ 30% ಸಹ ಇಲ್ಲ.

ನಿರುದ್ಯೋಗ ಸಮಸ್ಯೆ ಸೇವಾ ಕ್ಷೇತ್ರಕ್ಕೆ ಬಲವಾದ ಅಡ್ಡಗಲ್ಲು. ಹಣ ಹೂಡಿಕೆ ಸ್ತರ ಸತತವಾಗಿ ಕಡಿಮೆಯಾಗುತ್ತಿದೆ. ಸರಕಾರದ ಖರ್ಚು ಹೆಚ್ಚುತ್ತಿದೆ. ಆಂತರಿಕ ವ್ಯಯ ಶಕ್ತಿ ಕಡಿಮೆಯಾಗುತ್ತಿದೆ. ಭಾರತಕ್ಕಿಂತ ಚೀನಾ ದೇಶದ ಜಿಡಿಪಿ ವೃದ್ಧಿ ದರ 2018-19ರಲ್ಲಿ ಸ್ವಲ್ಪ ಕಡಿಮೆ ಇದ್ದರೂ ಸಹ, ಅದರ ಗಾತ್ರ ಅಗಾಧವಾದದು. ಚೀನಾ ದೇಶ ಪ್ರತಿ ವರ್ಷ ಒಂದು ಆಸ್ಟ್ರೇಲಿಯಾದಷ್ಟು ಆರ್ಥಿಕ ಶಕ್ತಿಯನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಸಾಮರ್ಥ್ಯ ಇಟ್ಟುಕೊಂಡಿದೆ, ಆದರೆ ಕಳೆದ ವರ್ಷ ಅದು ಸೃಷ್ಟಿಸಿದ ಹೊಸ ಉದ್ಯೋಗವಕಾಶ ಕೇವಲ 1.2 ಕೋಟಿ. ಚೀನಾ ದೇಶದ ಕಾಲು ಭಾಗದಷ್ಟು ಶಕ್ತಿ ಇರುವ ಭಾರತ ಪ್ರತಿವರ್ಷ ಎರಡು ಕೋಟಿ ಹೊಸ ಉದ್ಯೋಗ ಎಲ್ಲಿಂದ ಸೃಷ್ಟಿಸಬಲ್ಲದೋ ಆ ದೇವರೇ ಬಲ್ಲ.

ಬ್ಯಾಂಕಿನಿಂದ ದೊಡ್ಡ ಮೊತ್ತದ ಸಾಲ ಪಡೆದ ಹಲವಾರು ದೊಡ್ಡ ಉದ್ಯೋಗಪತಿಗಳು ಈಗಾಗಲೇ ಪರಾರಿಯಾಗಿದ್ದಾರೆ. ಸಣ್ಣ ಪುಟ್ಟ ಸಾಲ ಪಡೆದ ಬಡವರು ಯಾರಿಗೆ ಮತ್ತು ಎಷ್ಟರ ಮಟ್ಟಿಗೆ ಕೆಲಸ ಕೊಡಬಲ್ಲರೋ ತಿಳಿಯದು. ಈಗಾಗಲೇ ಸಾಲದ ಭಾರಕ್ಕೆ ಸಿಲುಕಿರುವ ಜನರು ಆದಷ್ಟು ಬೇಗ ಋಣಮುಕ್ತವಾಗುವದನ್ನು ಚಿಂತಿಸುತ್ತಾರೆಯೇ ವಿನಃ ಹೊಸ ಸಾಲಕ್ಕೆ ಬ್ಯಾಂಕಿನ ಮುಂದೆ ಮರುದಿನ ಸರದಿಯಲ್ಲಿ ನಿಲ್ಲುವುದಿಲ್ಲ.

ಜನರ ಬ್ಯಾಂಕ್ ಠೇವಣಿ ಹಣಕ್ಕೆ ದರ ಕಡಿಮೆಯಾಗಿ, ನಿತ್ಯೋಪಯೋಗಿ ವಸ್ತುಗಳ ಬೆಲೆ ಸತತವಾಗಿ ಮೇಲೇರುತ್ತಿದ್ದರೆ ಜನರು ಹಣ ಠೇವಣಿ ಇಟ್ಟು ಪ್ರಯೋಜನವಿಲ್ಲ. ಖರ್ಚು ಮಾಡೋಣ ಎಂದು ಮುಂದಾದರೆ ಹಣದ ಮೌಲ್ಯ ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಉಬ್ಬರ ಮೇಲೇರುವ ಭೀತಿಯೂ ಇರುತ್ತದೆ. ಒಟ್ಟಿನಲ್ಲಿ ಭಾರತೀಯ ರಿಜರ್ವ್ ಬ್ಯಾಂಕ್ ಮಾಡುತ್ತಿರುವ ದರ ಕಡಿತ-ಏರಿಕೆ ಪ್ರಯೋಗಗಳು ಆರ್ಥಿಕ ಪ್ರಚೋದನೆ ನೀಡಲಿ, ದೇಶ ಮುಂದೆ ಸಾಗಲಿ ಎಂದು ಆಶಿಸೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...