Homeಮುಖಪುಟಕಥುವಾ ಬಾಲಕಿ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜಾಮೀನು: ಮೆಹಬೂಬ ಮುಫ್ತಿ ಕಿಡಿ

ಕಥುವಾ ಬಾಲಕಿ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜಾಮೀನು: ಮೆಹಬೂಬ ಮುಫ್ತಿ ಕಿಡಿ

ಡಿಸೆಂಬರ್ 16 ರಂದು ತಿಲಕ್ ರಾಜ್ ಎಂಬುವವರಿಗೆ ಜಾಮೀನು ದೊರಕಿದರೆ, ಡಿಸೆಂಬರ್ 21 ರಂದು ಆನಂದ್ ದತ್ತಾಗೆ ಜಾಮೀನು ದೊರಕಿದ್ದು ಉಳಿದ ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ.

- Advertisement -
- Advertisement -

2018ರಲ್ಲಿ ಜಮ್ಮುಕಾಶ್ಮೀರದ ಕಥುವಾದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ನಡೆದ ಅಮಾನವೀಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಗಳಿಬ್ಬರಿಗೆ ಪಂಜಾಬ್ ನ್ಯಾಯಾಲಯ ಜಾಮೀನು ನೀಡಿದ್ದು, ಶಿಕ್ಷೆಯನ್ನು ಅಮಾನತುಗೊಳಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ನ್ಯಾಯಾಂಗದ ಚಕ್ರಗಳು ಸಂಪೂರ್ಣವಾಗಿ ಕುಸಿದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಥುವಾ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿದ್ದಕ್ಕಾಗಿ ಅಪರಾಧಿ ಎಂದು ಆರೋಪಿಸಲಾದ ಪೊಲೀಸರಿಗೆ ಜಾಮೀನು ನೀಡಲಾಗಿದ್ದು, ಆತನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಮತ್ತು ಹತ್ಯೆಗೊಳಗಾದ ಮಗು ನ್ಯಾಯದಿಂದ ವಂಚಿತವಾದಾಗ, ನ್ಯಾಯದ ಚಕ್ರಗಳು ಸಂಪೂರ್ಣವಾಗಿ ಕುಸಿದಿವೆ ಎಂಬುದು ಸ್ಪಷ್ಟವಾಗುತ್ತದೆ” ಎಂದು ಮೆಹಬೂಬ ಮುಫ್ತಿ ಟ್ವೀಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ 2018 ಜನವರಿ ತಿಂಗಳಿನಲ್ಲಿ ಎಂಟು ವರ್ಷ ಬಾಲಕಿಯ ಸಾಮೂಹಿಕ ಬರ್ಬರ ಅತ್ಯಾಚಾರ, ಚಿತ್ರಹಿಂಸೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ದೋಷಿಗಳೆಂದು ಪಠಾಣ್ ಕೋಟ್ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆಯನ್ನು ಪಠಾಣ್ ಕೋಟ್ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಜೂನ್ 10, 2019ರಲ್ಲಿ ತೀರ್ಪು ನೀಡಿದ ನ್ಯಾಯಾಲಯ ಮುಖ್ಯ ಆರೋಪಿಗಳಾದ ಸಾಂಜಿ ರಾಮ್, ವಜಾಗೊಂಡ ಪೊಲೀಸ್ ಅಧಿಕಾರಿಗಳಾದ ದೀಪಕ್ ಖಾಜರಿಯ ಮತ್ತು ಪರ್ವೇಶ್ ಕುಮಾರ್ ಎಂಬುವವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಸಾಕ್ಷ್ಯ ನಾಶ ಆರೋಪ ಮಾಡಿದ ಆರೋಪದಲ್ಲಿ ಆನಂದ್ ದತ್ತಾ, ತಿಲಕ್ ರಾಜ್ ಮತ್ತು ಸುರೇಂದರ್ ವರ್ಮಾ ಎಂಬ ಪೊಲೀಸ್ ಅಧಿಕಾರಿಗಳಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಡಿಸೆಂಬರ್ 16 ರಂದು ತಿಲಕ್ ರಾಜ್ ಎಂಬುವವರಿಗೆ ಜಾಮೀನು ದೊರಕಿದರೆ, ಡಿಸೆಂಬರ್ 21 ರಂದು ಆನಂದ್ ದತ್ತಾಗೆ ಜಾಮೀನು ದೊರಕಿದ್ದು ಉಳಿದ ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ.

ಜನವರಿ 10, 2018ರಲ್ಲಿ ನಡೆದ ಅತ್ಯಾಚಾರ ಪ್ರಕರಣ ವಿಚಾರಣ ನಡೆಸಿದ ಪೊಲೀಸರು 2018 ರ ಎಪ್ರಿಲ್ ತಿಂಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 8 ವರ್ಷದ ಬಾಲಕಿಗೆ ಮಾದಕ ಸೇವನೆ ಮಾಡಿಸಿ ದೇವಾಲಯವೊಂದರಲ್ಲಿ ಸತತ ನಾಲ್ಕು ದಿನಗಳ ಕಾಲ ಅತ್ಯಾಚಾರ ಮಾಡಿ ಕಲ್ಲಿನಿಂದ ಚಚ್ಚಿ ಕೊಲೆ ಮಾಡಲಾಗಿತ್ತು.

ಕಥುವಾ ಪ್ರದೇಶ ಹಾಗೂ ಸುತ್ತಮುತ್ತ ಇರುವ ಅಲೆಮಾರಿಗಳನ್ನು ಭಯಪಡಿಸುವ ಸಲುವಾಗಿ ಹಾಗೂ ಅವರನ್ನು ಅಲ್ಲಿಂದ ಓಡಿಸುವ ಸಲುವಾಗಿಯೂ ಸಹ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ಮಾಡಲಾಗಿದೆ ಎಂಬ ಘೋರ ಸತ್ಯವು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ನಾಯಕರಾದ ಚೌಧುರಿ ಲಾಲ್ ಸಿಂಗ್ ಮತ್ತು ಪ್ರಕಾಶ್ ಗಂಗಾ ಎಂಬುವವರು ಆ ಸಂದರ್ಭದಲ್ಲಿ ಆರೋಪಿಗಳ ರಕ್ಷಣೆಗೆ ನಿಂತಿದ್ದರು. ಅಲ್ಲದೆ ಬಿಜೆಪಿ ಶಾಸಕ ರಾಜೀವ್ ಜಸ್ ರೊಟಿಯಾ ಎಂಬುವವರು ಆರೋಪಿಗಳ ಪರವಾಗಿ ಬಹಿರಂಗ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದನ್ನು ಬಹುತೇಕರು ಖಂಡಿಸಿದ್ದರು.


ಇದನ್ನೂ ಓದಿ : ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...