Homeಕರ್ನಾಟಕಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು - ಅರುಣ್ ಜೋಳದ ಕೂಡ್ಲಿಗಿ

ಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು – ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

| ಅರುಣ್ ಜೋಳದಕೂಡ್ಲಿಗಿ |

ನಿಷ್ಠಾವಂತ ದಕ್ಷ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸಾಮಿ ತಮ್ಮ ಕೆಲಸಕ್ಕೆ ರಾಜಿನಾಮೆ ನೀಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳನ್ನು ಒಳಗೊಂಡಂತೆ ಚರ್ಚೆಯಾಗುತ್ತಿದೆ. ಈ ಸಂಗತಿಯನ್ನು ಹೇಗೆ ನೋಡಬೇಕು? ಈ ಘಟನೆ ವಯಕ್ತಿಕ ನಿರ್ಧಾರವೆ ಆಗಿದ್ದರೂ, ಇದು ಹುಟ್ಟಿಸುವ ಪ್ರಶ್ನೆಗಳಾವುವು? ಈಗಿರುವ ನಿಷ್ಠಾವಂತ ಪೋಲೀಸ್ ಅಧಿಕಾರಿಗಳಲ್ಲಿ ಮೂಡಿಸಿದ ಭಾವನೆ ಯಾವುದು? ಪೊಲೀಸ್ ಇಲಾಖೆ ಸೇರಿ ದಕ್ಷ ಅಧಿಕಾರಿಯಾಗಬೇಕೆಂಬ ಕನಸು ಕಟ್ಟಿದ ಯುವಜನರ ಅಭಿಪ್ರಾಯವೇನು? ಇಂತಹ ಅಲ್ಪಸಂಖ್ಯಾತ ದಕ್ಷ ಅಧಿಕಾರಿಗಳ ಕಾರಣಕ್ಕೇ ಪೊಲೀಸ್ ಇಲಾಖೆಯ ಮೇಲೆ ಭರವಸೆ ಇಟ್ಟ ಜನರ ಪರ್ಯಾಯವೇನು? ಅಥವಾ ಇಂತಹ ದಕ್ಷ ಅಧಿಕಾರಿಯನ್ನು ಉಳಿಸಿಕೊಳ್ಳಬೇಕಾದ ಸಮಾಜದ ಪ್ರಾಮಾಣಿಕತೆಯು ಬ್ರಷ್ಟಗೊಂಡಿದೆಯೇ? ಎನ್ನುವಂತಹ ಪ್ರಶ್ನೆಗಳಿವೆ. ಹಾಗೆಯೇ ಪೋಲಿಸ್ ಇಲಾಖೆಯನ್ನು ಒತ್ತಡರಹಿತಗೊಳಿಸಬೇಕೆನ್ನುವ ಸಿದ್ಧ ಉತ್ತರವಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸ್ವತಃ ಅಣ್ಣಾಮಲೈ ಬರೆದ ಪತ್ರದಲ್ಲಿ ಮಧುಕರ್ ಶೆಟ್ಟಿ ಸಾವನ್ನು ಪ್ರಸ್ತಾಪಿಸಿದ್ದಾರೆ. ಮಧುಕರ್ ಶೆಟ್ಟಿ ಬ್ರಷ್ಟಾಚಾರವನ್ನು ತೊಡೆದು ಹಾಕುವ ಖಡಕ್ ಅಧಿಕಾರಿಯಾಗಿದ್ದರು. ಅವರ ಸಾವು ಚರ್ಚಾಸ್ಪದವಾಗಿತ್ತು. ಏನಿಲ್ಲವೆಂದರೂ ಬ್ರಷ್ಟಾಚಾರ ವಿರೋಧಿ ಪ್ರಾಮಾಣಿಕ ಅವಿರತ ದುಡಿಮೆಗೂ ಅವರ ಸಾವಿಗೂ ನಂಟಿತ್ತು. ಇದು ಅಣ್ಣಾಮಲೈ ಅವರನ್ನು ಕಾಡಿರಬಹುದು. ಈ ಪತ್ರ ವ್ಯಕ್ತಿಯೊಬ್ಬರ ಬಿಡುವಿಲ್ಲದ ಸಾಮಾಜಿಕ ತೊಡಗುವಿಕೆ, ಕುಟುಂಬದ ಜತೆಗಿನ ಒಡನಾಟ, ತನ್ನದೇ ವಯಕ್ತಿಕ ಖುಷಿ ಸಂಭ್ರಮಗಳ ಕುರಿತ ಜಿಜ್ಞಾಸೆಗಳನ್ನು ಹುಟ್ಟಿಸಿದೆ. ಸಾಮಾಜಿಕ ತೊಡಗುವಿಕೆಯಲ್ಲಿ ಕುಟುಂಬದ ಆಪ್ತತೆ ಮತ್ತು ವಯಕ್ತಿಕ ಖುಷಿಗಳನ್ನು ಕಳೆದುಕೊಳ್ಳುವ `ಸಾರ್ವಜನಿಕತೆ ಮತ್ತು ವಯಕ್ತಿಕತೆಯ’ ಚರ್ಚೆಯನ್ನು ಮುನ್ನಲೆಗೆ ತಂದಿದೆ.

ಅಣ್ಣಾಮಲೈ ಅವರಂತೆ ರಾಜಿನಾಮೆ ಕೊಡದೆಯೂ, ತಮ್ಮ ಕೆಲಸದಲ್ಲಿದ್ದುಕೊಂಡೇ ಯಾವುದೇ ಒತ್ತಡಗಳನ್ನು ಮೈಮೇಲೆ ಹಾಕಿಕೊಳ್ಳದೆ ಕುಟುಂಬದ ಜೊತೆ ಆರಾಮಾಗಿವವರ ಸಂಖ್ಯೆ ಕಡಿಮೆಯೇನೂ ಇಲ್ಲ. ಅವರಲ್ಲಿ ಬಹುಪಾಲು ವೃತ್ತಿ ಬದ್ಧತೆಗೆ ಬದಲಾಗಿ ಕುಟುಂಬದ ಬದ್ಧತೆ ಹೆಚ್ಚಿರುವವರು. ಇಡೀ ವ್ಯವಸ್ಥೆಯೇ ಬ್ರಷ್ಟಗೊಂಡಾಗ, ನೀನೊಬ್ಬ ಪ್ರಮಾಣಿಕನಾದರೆ ಸಮಾಜ ಬದಲಾಗುವುದೇ? ಎನ್ನುವ ಸಿನಿಕತನ ಬಹುಜನರನ್ನು ಪ್ರಭಾವಿಸಿದೆ. ಹೀಗಾಗಿ ಅನೇಕ ಅಧಿಕಾರಿ ವರ್ಗದವರು `ನನ್ನೊಬ್ಬನಿಂದ’ ಏನಾಗುವುದಿದೆ ಎಂದು ವ್ಯವಸ್ಥೆಗೆ ಹೊಂದಿಕೊಳ್ಳುತ್ತಾರೆ. ಸಮಸ್ಯೆ ಇರುವುದು ಈ `ನನ್ನೊಬ್ಬನಿಂದ’ ಎನ್ನುವವರ ಸಂಖ್ಯೆಯೂ ದೊಡ್ಡದಾಗುತ್ತಿರುವುದು. ಈ ನನ್ನಂಥವರೊಬ್ಬರಿಂದಲೂ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯ ಎನ್ನುವುದನ್ನು ಅಣ್ಣಾಮಲೈ ತೋರಿಸಿದ್ದರು. ಹಾಗಾಗಿ ಅವರ ರಾಜಿನಾಮೆ ಅಘಾತ ತಂದಿದೆ.

ಪೊಲೀಸ್ ಇಲಾಖೆಯ ಆಚೆಗೂ ಸಮಾಜದ ಒಳಿತಿಗಾಗಿ ದುಡಿಯುವ ಬದ್ಧತೆ ಇರುವ ಯಾವುದೇ ಕ್ಷೇತ್ರದ ಕೆಲಸಗಾರರೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಸದಾ ತಿರುಗಾಡುತ್ತ ಬರೆವ ಚಿಂತಕ ಪ್ರೊ.ರಹಮತ್ ತರೀಕೆರೆ ಅವರ ಮಗಳು ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವುದಿಲ್ಲವೆಂದು ಅಪ್ಪನ ಕುರಿತು ಸಿಡುಕಿನ ಪದ್ಯ ಬರೆದಿದ್ದಳು. ಈ ನಡುವೆ ಎರಡು ಲಕ್ಷದಷ್ಟು ಸಂಬಳ ಪಡೆದು ಕನಿಷ್ಠ ಪಾಠವನ್ನೂ ಮಾಡದೆ ಅರಾಮಾಗಿ ಕುಟುಂಬದ ಜತೆಗಿರುವ ಅದ್ಯಾಪಕರಿದ್ದಾರೆ.

ಉಸಿರುಕಟ್ಟಿಸಿ ದುಡಿಸಿಕೊಳ್ಳುವ ಕಾರ್ಪೋರೇಟ್ ವಲಯದ ನೌಕರ ವರ್ಗವೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಬಹುತೇಕ ಒಪ್ಪಂದದ ದುಡಿಮೆಯಾದ ಕಾರಣ ಅಣ್ಣಾಮಲೈ ಅವರಂತೆ ಬಿಡುಗಡೆಯೂ ಕಷ್ಟವಿದೆ. ಅಂತೆಯೇ ಸಾರ್ವಜನಿಕ ವಲಯದಲ್ಲಿ ಸಾಮಾಜಿಕ ಬದ್ಧತೆಯ ಅವಿರತ ದುಡಿಮೆಗೂ ಕುಟುಂಬದ ಜತೆಗಿನ ಒಡನಾಟಕ್ಕೂ ನೇರ ಸಂಬಂಧವಿದೆ. ಬಹುತೇಕ ತಮ್ಮ ದುಡಿಮೆಯಲ್ಲಿ ಬದ್ಧತೆ ಕಡಿಮೆ ಮಾಡಿಕೊಂಡವರು ಕುಟುಂಬದ ಜತೆ ಹೆಚ್ಚು ಸಮಯ ಕಳೆಯಬಲ್ಲರು. ಅಪವಾದವೆಂಬಂತೆ ಈ ಎರಡನ್ನೂ ಸರಿದೂಗಿಸುವವರ ಸಂಖ್ಯೆ ವಿರಳ. ಹೀಗಾಗಿ ಅಪ್ರಾಮಾಣಿಕತೆ, ಬ್ರಷ್ಟತೆ, ಸೋಮಾರಿತನ, ತನ್ನ ಕರ್ತವ್ಯದ ನಿಷ್ಠೆ ಇಲ್ಲದಿರುವಂತಹ ಗುಣಗಳಿಗೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವಿಕೆಗೂ ಸಂಬಂಧವಿದೆ. ಈ ನೆಲೆಯಲ್ಲಿ ಅಣ್ಣಾಮಲೈ ಅವರ ರಾಜಿನಾಮೆ ಸಾರ್ವಜನಿಕತೆ ಮತ್ತು ವಯಕ್ತಿಕತೆಯ ಚರ್ಚೆಗೆ ಹೊಸ ದಾರಿಗಳನ್ನು ತೆರೆದಿದೆ.

ಎಷ್ಟೋ ಜನ ಆಡಳಿತದಲ್ಲಿ ದಕ್ಷರಾಗಿದ್ದು, ಸಮಾಜದ ಬಗೆಗಿವ ದೃಷ್ಟಿಕೋನದಲ್ಲಿ ದೋಷವಿರುತ್ತದೆ. ಕಿರಣ್ ಬೇಡಿಯಂತಹ ದಕ್ಷ ಅಧಿಕಾರಿ ಕ್ರಿಮಿನಲ್ ಟ್ರೈಬ್ ಬಗೆಗೆ ಅರಣ್ಯವಾಸಿ ಬುಡಕಟ್ಟುಗಳೆಲ್ಲಾ ಕಳ್ಳರು ಎನ್ನುವ ಅರ್ಥದ ಟ್ವೀಟ್ ಮಾಡಿದ್ದರು. ಅಂತಹ ದಕ್ಷ ಅಧಿಕಾರಿಣಿಗೆ ಬುಡಕಟ್ಟುಗಳ ಬಗೆಗೆ ಮಾನವೀಯ ತಿಳಿವಿರಲಿಲ್ಲ. ಹೀಗೆ ಆಡಳಿತಗಾರರಾಗಿ ಪ್ರಾಮಾಣಿಕರಾಗಿದ್ದವರೂ, ಜಾತಿವಾದಿಯಾಗಿಯೂ, ಕೋಮುವಾದಿಯಾಗಿಯೂ, ಕಾರ್ಪೋರೇಟ್ ಪರವಾಗಿಯೂ ವಿಚಾರ ಭ್ರಷ್ಟರಾಗಿರಲಿಕ್ಕೆ ಸಾಧ್ಯವಿದೆ. ಆದರೆ ಅಣ್ಣಾಮಲೈ ಅವರ ಕೆಲವು ಮಾತು ಭಾಷಣಗಳನ್ನು ಕೇಳಿದರೆ ದಕ್ಷ ಅಧಿಕಾರಿ ಹೇಗೋ, ಸಮಾಜದ ಬಗೆಗೆ ಡೆಮಾಕ್ರಟಿಕ್ ಆದ ಜನಪರ ತಿಳಿವಿನಲ್ಲಿ ಸ್ಪಷ್ಟತೆ ಇದ್ದಂತಿದೆ. ಈ ತಿಳಿವೂ ಕೂಡ ಅವರನ್ನು ರಾಜಿನಾಮೆಗೆ ಪ್ರೇರೇಪಿಸಿರಬಹುದು. ಇದುವೆ ಅವರ ಮುಂದಿನ ದಾರಿಯನ್ನೂ ಸ್ಪಷ್ಟಗೊಳಿಸಬೇಕಿದೆ.

ಈ ಹೊತ್ತಿನ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಸತ್ಯದ ಪಾಲುದಾರಿಕೆಗಿಂತ ಸುಳ್ಳಿನ ಪಾಲುದಾರಿಕೆ ಹೆಚ್ಚಿದೆ. ಅಂತೆಯೇ ಭ್ರಷ್ಟತೆಯ ಪಾಲುದಾರರೂ ಹೆಚ್ಚುತ್ತಿದ್ದಾರೆ. ಈ ಮಧ್ಯೆ ಲೋಕಕ್ಕೂ ತನಗೂ ಸಂಬಂಧವಿಲ್ಲ ಎಂದು ಮೌನಧರಿಸುವ ಆಡಳಿತ ವರ್ಗ ಮತ್ತು ಮಧ್ಯಮವರ್ಗದ ಸಜ್ಜನರ ಸಂಖ್ಯೆ ದೊಡ್ಡದಿದೆ. ಇಂತಹ ಸಜ್ಜನರ ಮೌನ ಇವೆಲ್ಲವಕ್ಕಿಂತ ಅಪಾಯಕಾರಿಯಾಗಿದೆ. ಹೀಗಾಗಿ ಅಣ್ಣಾಮಲೈ ಅವರ ರಾಜಿನಾಮೆ ಬಹುಜನರನ್ನು ಆತ್ಮಾವಲೋಕನ ಮಾಡಿಕೊಳ್ಳಲು ಪ್ರೇರಕವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...