Homeಮುಖಪುಟ‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

- Advertisement -
- Advertisement -

ಬಲಪಂಥೀಯ ಸಂಘಟನೆಗಳಾದ ಐಎಚ್‌ಪಿ ಮತ್ತು ರಾಷ್ಟ್ರೀಯ ಜಬರಂಗದಳದ ಕಾರ್ಯಕರ್ತರು ಸಾಂತ ಕ್ಲಾಸ್‌ನ ಪ್ರತಿಕೃತಿಗಳನ್ನು ಸುಟ್ಟ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ನಡೆದಿದೆ. ಕ್ರಿಶ್ಚಿಯನ್ ಮಿಷನರಿಗಳು ಜನರನ್ನು ಮತಾಂತರಿಸುವ ತಂತ್ರದ ಭಾಗವಾಗಿ ಸಾಂತಾ ಕ್ಲಾಸ್‌‌‌ ಅನ್ನು ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕ್ರಿಸ್‌ಮಸ್ ಮುನ್ನಾದಿನದಂದು ಮಹಾತ್ಮ ಗಾಂಧಿ ಮಾರ್ಗದಲ್ಲಿರುವ ಸೇಂಟ್ ಜಾನ್ಸ್ ಕಾಲೇಜಿನ ಕ್ಯಾರಿಡಾರ್‌‌ ಬಳಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ:ಗುರ್ಗಾಂವ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿ: ವೇದಿಕೆಗೆ ನುಗ್ಗಿ ದಾಂಧಲೆ

ಐಎಚ್‌ಪಿ ಮತ್ತು ರಾಷ್ಟ್ರೀಯ ಬಜರಂಗದಳದ ಸದಸ್ಯರು ಸಾಂತಕ್ಲಾಸ್ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಸಂತ ನಿಕೋಲಸ್ ಅವರ ಪ್ರತಿಕೃತಿಗಳನ್ನು ಹೊತ್ತು ಮೆರವಣಿಗೆ ನಡೆಸಿದ್ದಾರೆ. ಇದರ ನಂತರ ಅವರು “ಸಾಂತಕ್ಲಾಸ್ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕೂಗಿ ಪ್ರತಿಕೃತಿಗಳನ್ನು ದಹಿಸಿದ್ದಾರೆ.

ಕ್ರಿಸ್‌ಮಸ್ ಸಮಯದಲ್ಲಿ ಸಾಂತ ಕ್ಲಾಸ್‌ ಅನ್ನು ಬಳಸಿಕೊಂಡು ತಂತ್ರಪೂರ್ವಕವಾಗಿ ಹಿಂದೂಗಳನ್ನು ಮತಾಂತರಿಸುವ ಕ್ರಿಶ್ಚಿಯನ್ ಸಮಾಜದ ಆಪಾದಿತ ಪ್ರಯತ್ನಗಳನ್ನು ಬಲವಾಗಿ ವಿರೋಧಿಸುತ್ತೇವೆ ಎಂದು ಬಲಪಂಥೀಯ ಕಾರ್ಯಕರ್ತರು ಹೇಳಿಕೆ ನೀಡಿದ್ದಾರೆ.

ಮಿಷನರಿ ಶಾಲೆಗಳು ವಿದ್ಯಾರ್ಥಿಗಳನ್ನು ಸಾಂತ ಕ್ಲಾಸ್‌ನಂತೆ ವೇಷಧರಿಸಿ ಬಲವಂತವಾಗಿ ಮತಾಂತರ ಮಾಡಲು ಪ್ರಯತ್ನಿಸುತ್ತಿವೆ ಎಂದು ಅಹಿಂಪ ಮತ್ತು ರಾಷ್ಟ್ರೀಯ ಬಜರಂಗದಳದ ಪ್ರಧಾನ ಕಾರ್ಯದರ್ಶಿ ಅಜ್ಜು ಚೌಹಾಣ್ ಆರೋಪಿಸಿದ್ದಾರೆ.

ಇದನ್ನೂ ಓದಿ:ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

“ಸಾಂತ ಯಾವುದೇ ಉಡುಗೊರೆಗಳನ್ನು ಹೊತ್ತುಕೊಂಡು ಬರುವುದಿಲ್ಲ. ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವುದು ಅವನ ಏಕೈಕ ಗುರಿಯಾಗಿದೆ. ಇದು ಇನ್ನು ಮುಂದೆ ಕೆಲಸ ಮಾಡುವುದಿಲ್ಲ. ಯಾವುದೇ ಮತಾಂತರದ ಪ್ರಯತ್ನವನ್ನು ಯಶಸ್ವಿಯಾಗಲು ಬಿಡುವುದಿಲ್ಲ, ಇದನ್ನು ನಿಲ್ಲಿಸದಿದ್ದರೆ, ಮಿಷನರಿ ಶಾಲೆಗಳ ವಿರುದ್ದ ಆಂದೋಲನಗಳು ನಡೆಯುತ್ತವೆ” ಎಂದು ಅಜ್ಜು ಚೌಹಾಣ್ ಹೇಳಿದ್ದಾರೆ.

ರಾಷ್ಟ್ರೀಯ ಬಜರಂಗದಳದ ಅಧ್ಯಕ್ಷ ಅವತಾರ್ ಸಿಂಗ್ ಗಿಲ್ ಮಾತನಾಡಿ, “ಒಂದೆಡೆ ಕ್ರಿಶ್ಚಿಯನ್ ಮಿಷನರಿಗಳು ದೊಡ್ಡ ಶಾಲೆಗಳನ್ನು ನಡೆಸುತ್ತಾ, ಮತ್ತೊಂದೆಡೆ ಹಿಂದೂಗಳನ್ನು ಅವರು ಮತಾಂತರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನು ತಡೆಯಲು ರಾಷ್ಟ್ರೀಯ ಬಜರಂಗ ದಳದಿಂದ ತಂಡಗಳನ್ನು ರಚಿಸಲಾಗುವುದು. ಈ ತಂಡಗಳು ಪ್ರದೇಶಗಳು ಮತ್ತು ಮೊಹಲ್ಲಾಗಳ ಮೇಲೆ ನಿಗಾ ಇಡುತ್ತವೆ. ಇದರಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವ ದುರುದ್ದೇಶಪೂರಿತ ಪ್ರಯತ್ನಗಳನ್ನು ವಿಫಲಗೊಳಿಸಲಾಗುತ್ತದೆ. ಯಾವುದೇ ಮಿಷನರಿ ಈ ರೀತಿ ಮಾಡುವುದು ಕಂಡುಬಂದರೆ, ಅಹಿಂಪ ಮತ್ತು ರಾಷ್ಟ್ರೀಯ ಬಜರಂಗದಳ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ’’ ಎಂದು ಅವತಾರ್ ಸಿಂಗ್ ಗಿಲ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಯೇಸುವಿನ ಜೀವನ ಬೋಧನೆ ಸ್ಮರಿಸುತ್ತೇವೆ: ಪ್ರಧಾನಿ ಮೋದಿ ಟ್ವೀಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...