Homeಕರ್ನಾಟಕಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನ: ಶ್ರೀನಿವಾಸ ಪೂಜಾರಿ

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನ: ಶ್ರೀನಿವಾಸ ಪೂಜಾರಿ

- Advertisement -
- Advertisement -

ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ (ಮತಾಂತರ ನಿಷೇಧ ಕಾಯ್ದೆ) ಜಾರಿಗೆ ಮೇಲ್ಮನೆಯಲ್ಲಿ ಬಹುಮತ ದೊರೆಯದ ಕಾರಣ, ಸಚಿವ ಸಂಪುಟದಲ್ಲಿ ಈ ಕುರಿತು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕಾಯ್ದೆ ಅನುಷ್ಠಾನಗೊಳಿಸುತ್ತೇವೆ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಂಗಳೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ಕೆಳಮನೆಯಲ್ಲಿ ಕಾಯ್ದೆಗೆ ಬಹುಮತ ದೊರೆತಿದ್ದು, ಅದನ್ನು ಮಂಡಿಸಲಾಗಿದೆ. ಮೇಲ್ಮನೆಯಲ್ಲಿ ಬಹುಮತ ದೊರೆಯದ ಕಾರಣ ಪ್ರಜಾಪ್ರಭುತ್ವದಲ್ಲಿ ಬಹುಮತ ಪಡೆದು, ಜನವರಿ ವೇಳೆಗೆ ಮೇಲ್ಮನೆಯಲ್ಲಿ ಕಾಯ್ದೆ ಮಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆ ಎಲ್ಲಾ ಧರ್ಮ, ಜಾತಿ, ಪಕ್ಷದವರಿಗೂ ಅನ್ವಯಿಸುತ್ತದೆ. ಹಾಗಾಗಿ ಅದನ್ನು ಪ್ರತಿಯೊಬ್ಬರೂ ಹೆಮ್ಮೆಯಿಂದ ಸ್ವಾಗತಿಸಬೇಕು. ವಿರೋಧಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಕಾಯ್ದೆಯನ್ನು ವಿರೋಧಿಸುವವರು ರಾಜಕೀಯ ಕಾರಣಗಳಿಗಾಗಿ ಮಾತ್ರ ವಿರೋಧಿಸುತ್ತಾರೆ. ಆದರೆ ಮಾನಸಿಕವಾಗಿ ಅವರಿಗೂ ಈ ಕಾಯ್ದೆಗೆ ಒಪ್ಪಿಗೆ ಇದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ವಿವಾದಿತ ಮತಾಂತರ ನಿಷೇಧ ಮಸೂದೆಯನ್ನು ಕೊನೆಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅದು ವಿಧಾನ ಸಭೆಯಲ್ಲಿ ಅಂಗೀಕಾರವಾಗಿದ್ದರೂ ಪರಿಷತ್‌ನಲ್ಲಿ ಮಂಡನೆಯಾಗದ ಕಾರಣ ಕಾಯ್ದೆಯಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. 6 ತಿಂಗಳ ಒಳಗಾಗಿ ಪರಿಷತ್‌ನಲ್ಲಿ ಮಂಡನೆಯಾಗಿ, ಬಹುಮತದಿಂದ ಅಂಗೀಕಾರಗೊಂಡು, ರಾಜ್ಯಪಾಲರ ಸಹಿಯ ನಂತರವಷ್ಟೇ ಕಾಯ್ದೆಯಾಗಲು ಸಾಧ್ಯ. ಹೀಗಿರುವಾಗ ಸರ್ಕಾರ ಸರ್ಕಾರದ ಮುಂದಿನ ನಡೆಯೇನು ಎಂಬ ಪ್ರಶ್ನೆ ಎದ್ದಿದೆ.

ಸರ್ಕಾರವು ಅದನ್ನು ಪರಿಷತ್‌ನಲ್ಲಿ ಮಂಡಿಸದಿರಲು ಮುಖ್ಯ ಕಾರಣ ಬಹುಮತದ ಕೊರತೆ. ಅಲ್ಲದೆ ಪಕ್ಷದಲ್ಲಿನ ಕೆಲವರ ವಿರೋಧ ಸಹ ಸರ್ಕಾರಕ್ಕೆ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಸದಸ್ಯರನ್ನು ನೆಚ್ಚಿಕೊಂಡು ಮಸೂದೆ ಮಂಡಿಸಿದರೆ ಸೋಲಾಗಬಹುದೆಂಬ ಕಾರಣಕ್ಕೆ ಮಂಡನೆ ಮಾಡಿಲ್ಲ. ಬದಲಿಗೆ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿ ಅಧಿವೇಶನ ಅಂತ್ಯಗೊಳಿಸಲಾಗಿದೆ.

ಸದನದ ಕೊನೆ ದಿನ ಉಪಸಭಾಪತಿ ಪ್ರಾಣೇಶ್‌ ಮತ್ತು ಬಿಜೆಪಿ ಸದಸ್ಯರಾದ ರುದ್ರೇಗೌಡರವರು ಬೆಳಗಾವಿಯಿಂದ ಹೊರಟು ದಾವಣಗೆರೆ ತಲುಪಿದ್ದರು. ಅವರು ತುರ್ತಾಗಿ ವಾಪಸ್ ಬೆಳಗಾವಿಯ ಸುವರ್ಣ ಸೌಧಕ್ಕೆ ಬರುವಂತೆ ಸೂಚಿಸಲಾಗಿತ್ತು. ಅವರು ಬರುವಿಕೆಗಾಗಿ ಆಡಳಿತ ಪಕ್ಷ ಕಾಯುತ್ತಿತ್ತು. ಅದೇ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಅಧಿವೇಶನ ಆರಂಭಿಸುವಂತೆ ಸಭಾಪತಿ ಕೊಠಡಿಗೆ ತೆರಳಿ ಒತ್ತಾಯಿಸುತ್ತಿದ್ದರು. ಆದರೆ ಸಮಯ ಮೀರುತ್ತಿತ್ತು. ಇನ್ನೊಂದೆಡೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್‌ರವರು ಬಹಿರಂಗವಾಗಿಯೇ ಮತಾಂತರ ನಿಷೇಧ ಮಸೂದೆಯನ್ನು ವಿರೋಧಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಹುಮತವಿಲ್ಲದಿದ್ದಾಗ ಮಸೂದೆ ಮಂಡಿಸಿ ಅದಕ್ಕೆ ಸೋಲಾಗುವುದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಹಿಂತೆಗೆದುಕೊಂಡಿದೆ.

ಸುಗ್ರೀವಾಜ್ಞೆ ಮೂಲಕ ಜಾರಿ?

ಮತಾಂತರ ನಿಷೇಧ ಮಸೂದೆಯ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಮತ್ತು ನೂರಾರು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಆದರೆ ಸರ್ಕಾರ ಏನಾದರೂ ಮಾಡಿ ಅದನ್ನು ಜಾರಿಗೊಳಿಸಿಯೇ ಸಿದ್ದ ಎಂದು ಹಠ ಹಿಡಿದಿದೆ. ಮುಂದಿನ ಅಧಿವೇಶನ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಅಲ್ಲಿಯವರೆಗೂ ಕಾಯದ ಸರ್ಕಾರ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ರಾಜ್ಯಪಾಲರ ಒಪ್ಪಿಗೆ ಪಡೆದಲ್ಲಿ ಕಾಯ್ದೆಯ ಅಂಶಗಳನ್ನು ಹೀಗಿನಿಂದಲೇ ಜಾರಿಗೊಳಿಸಬಹುದು ಎಂಬ ಚರ್ಚೆಗಳಾಗಿವೆ. ಸಚಿವ ಪೂಜಾರಿಯವರ ಹೇಳಿಕೆ ಈ ಚರ್ಚೆಯ ಹಿನ್ನೆಲೆಯಲ್ಲಿ ಹೊರಬಿದ್ದಿದೆ. ಆದರೆ 6 ತಿಂಗಳೊಳಗೆ ಸದನದಲ್ಲಿ ಮಂಡಿಸಿ ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ.

ಮುಂದಿನ ಅಧಿವೇಶನದಲ್ಲಿ ಮಂಡನೆ

ಮುಂದಿನ ವಿಧಾನ ಪರಿಷತ್ ಅಧಿವೇಶನದಲ್ಲಿ ಮಂಡಿಸಿ ಹೇಗಾದರೂ ಬಹುಮತವನ್ನು ಒಟ್ಟುಗೂಡಿಸಿ ಮಸೂದೆಯನ್ನು ಪಾಸ್ ಮಾಡುವುದು ಸರ್ಕಾರದ ಎರಡನೇ ಆಯ್ಕೆಯಾಗಿದೆ. ಸದ್ಯ ಬಿಜೆಪಿಗೆ ವಿಧಾನ ಪರಿಷತ್‌ನಲ್ಲಿ ಬಹುಮತಕ್ಕೆ ಸದ್ಯ ಒಬ್ಬ ಸದಸ್ಯರ ಕೊರತೆಯಿದೆ. ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿತಯಾಗಿ ಜಯ ಗಳಿಸಿದ್ದಾರೆ. ಅವರನ್ನು ಬಿಜೆಪಿ ತನ್ನೆಡೆಗೆ ಸೆಳೆದುಕೊಳ್ಳುವ ಕಸರತ್ತು ಮಾಡಬಹುದು. ಇಲ್ಲವೇ ಕೆಲ ಜೆಡಿಎಸ್ ಸದಸ್ಯರನ್ನು ಮನವೊಲಿಸುವ ಕೆಲಸ ಮಾಡಬಹುದು.

ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ

ಸದ್ಯಕ್ಕೆ ವಿಧಾನಪರಿಷತ್‌ನಲ್ಲಿ ಮಸೂದೆ ಜಾರಿಯಾಗದಂತೆ ತಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಅದು ಸಹ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ ಸಿಗದಂತೆ ನೋಡಿಕೊಳ್ಳುವ ಕಾರ್ಯತಂತ್ರ ರೂಪಿಸಲಿದೆ. ಪಕ್ಷೇತರ ಶಾಸಕರನ್ನು ತನ್ನೆಡೆಗೆ ಸೆಳೆದುಕೊಳ್ಳುವುದು, ಜೆಡಿಎಸ್ ಮೇಲೆ ಒತ್ತಡ ತರುವುದು ಸೇರಿ ಹಲವು ಮಾರ್ಗಗಳನ್ನು ಅನುಸರಿಸಬಹುದಾಗಿದೆ.

ಜನಾಭಿಪ್ರಾಯ

ಈ ಮಸೂದೆಯನ್ನು ನೂರಾರು ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಅವು ಮತ್ತಷ್ಟು ಜನಾಭಿಪ್ರಾಯ ರೂಪಿಸುವ ಮೂಲಕ ಮಸೂದೆ ಜಾರಿಯಾಗದಂತೆ ಸರ್ಕಾರದ ಮೇಲೆ ಒತ್ತಡ ತರುವ ಸಾಧ್ಯತೆಯು ಇದೆ.


ಇದನ್ನೂ ಓದಿರಿ: ‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...