Homeಕರ್ನಾಟಕಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನ: ಶ್ರೀನಿವಾಸ ಪೂಜಾರಿ

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನ: ಶ್ರೀನಿವಾಸ ಪೂಜಾರಿ

- Advertisement -
- Advertisement -

ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ (ಮತಾಂತರ ನಿಷೇಧ ಕಾಯ್ದೆ) ಜಾರಿಗೆ ಮೇಲ್ಮನೆಯಲ್ಲಿ ಬಹುಮತ ದೊರೆಯದ ಕಾರಣ, ಸಚಿವ ಸಂಪುಟದಲ್ಲಿ ಈ ಕುರಿತು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕಾಯ್ದೆ ಅನುಷ್ಠಾನಗೊಳಿಸುತ್ತೇವೆ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಂಗಳೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ಕೆಳಮನೆಯಲ್ಲಿ ಕಾಯ್ದೆಗೆ ಬಹುಮತ ದೊರೆತಿದ್ದು, ಅದನ್ನು ಮಂಡಿಸಲಾಗಿದೆ. ಮೇಲ್ಮನೆಯಲ್ಲಿ ಬಹುಮತ ದೊರೆಯದ ಕಾರಣ ಪ್ರಜಾಪ್ರಭುತ್ವದಲ್ಲಿ ಬಹುಮತ ಪಡೆದು, ಜನವರಿ ವೇಳೆಗೆ ಮೇಲ್ಮನೆಯಲ್ಲಿ ಕಾಯ್ದೆ ಮಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆ ಎಲ್ಲಾ ಧರ್ಮ, ಜಾತಿ, ಪಕ್ಷದವರಿಗೂ ಅನ್ವಯಿಸುತ್ತದೆ. ಹಾಗಾಗಿ ಅದನ್ನು ಪ್ರತಿಯೊಬ್ಬರೂ ಹೆಮ್ಮೆಯಿಂದ ಸ್ವಾಗತಿಸಬೇಕು. ವಿರೋಧಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಕಾಯ್ದೆಯನ್ನು ವಿರೋಧಿಸುವವರು ರಾಜಕೀಯ ಕಾರಣಗಳಿಗಾಗಿ ಮಾತ್ರ ವಿರೋಧಿಸುತ್ತಾರೆ. ಆದರೆ ಮಾನಸಿಕವಾಗಿ ಅವರಿಗೂ ಈ ಕಾಯ್ದೆಗೆ ಒಪ್ಪಿಗೆ ಇದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ವಿವಾದಿತ ಮತಾಂತರ ನಿಷೇಧ ಮಸೂದೆಯನ್ನು ಕೊನೆಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅದು ವಿಧಾನ ಸಭೆಯಲ್ಲಿ ಅಂಗೀಕಾರವಾಗಿದ್ದರೂ ಪರಿಷತ್‌ನಲ್ಲಿ ಮಂಡನೆಯಾಗದ ಕಾರಣ ಕಾಯ್ದೆಯಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. 6 ತಿಂಗಳ ಒಳಗಾಗಿ ಪರಿಷತ್‌ನಲ್ಲಿ ಮಂಡನೆಯಾಗಿ, ಬಹುಮತದಿಂದ ಅಂಗೀಕಾರಗೊಂಡು, ರಾಜ್ಯಪಾಲರ ಸಹಿಯ ನಂತರವಷ್ಟೇ ಕಾಯ್ದೆಯಾಗಲು ಸಾಧ್ಯ. ಹೀಗಿರುವಾಗ ಸರ್ಕಾರ ಸರ್ಕಾರದ ಮುಂದಿನ ನಡೆಯೇನು ಎಂಬ ಪ್ರಶ್ನೆ ಎದ್ದಿದೆ.

ಸರ್ಕಾರವು ಅದನ್ನು ಪರಿಷತ್‌ನಲ್ಲಿ ಮಂಡಿಸದಿರಲು ಮುಖ್ಯ ಕಾರಣ ಬಹುಮತದ ಕೊರತೆ. ಅಲ್ಲದೆ ಪಕ್ಷದಲ್ಲಿನ ಕೆಲವರ ವಿರೋಧ ಸಹ ಸರ್ಕಾರಕ್ಕೆ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಸದಸ್ಯರನ್ನು ನೆಚ್ಚಿಕೊಂಡು ಮಸೂದೆ ಮಂಡಿಸಿದರೆ ಸೋಲಾಗಬಹುದೆಂಬ ಕಾರಣಕ್ಕೆ ಮಂಡನೆ ಮಾಡಿಲ್ಲ. ಬದಲಿಗೆ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿ ಅಧಿವೇಶನ ಅಂತ್ಯಗೊಳಿಸಲಾಗಿದೆ.

ಸದನದ ಕೊನೆ ದಿನ ಉಪಸಭಾಪತಿ ಪ್ರಾಣೇಶ್‌ ಮತ್ತು ಬಿಜೆಪಿ ಸದಸ್ಯರಾದ ರುದ್ರೇಗೌಡರವರು ಬೆಳಗಾವಿಯಿಂದ ಹೊರಟು ದಾವಣಗೆರೆ ತಲುಪಿದ್ದರು. ಅವರು ತುರ್ತಾಗಿ ವಾಪಸ್ ಬೆಳಗಾವಿಯ ಸುವರ್ಣ ಸೌಧಕ್ಕೆ ಬರುವಂತೆ ಸೂಚಿಸಲಾಗಿತ್ತು. ಅವರು ಬರುವಿಕೆಗಾಗಿ ಆಡಳಿತ ಪಕ್ಷ ಕಾಯುತ್ತಿತ್ತು. ಅದೇ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಅಧಿವೇಶನ ಆರಂಭಿಸುವಂತೆ ಸಭಾಪತಿ ಕೊಠಡಿಗೆ ತೆರಳಿ ಒತ್ತಾಯಿಸುತ್ತಿದ್ದರು. ಆದರೆ ಸಮಯ ಮೀರುತ್ತಿತ್ತು. ಇನ್ನೊಂದೆಡೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್‌ರವರು ಬಹಿರಂಗವಾಗಿಯೇ ಮತಾಂತರ ನಿಷೇಧ ಮಸೂದೆಯನ್ನು ವಿರೋಧಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಹುಮತವಿಲ್ಲದಿದ್ದಾಗ ಮಸೂದೆ ಮಂಡಿಸಿ ಅದಕ್ಕೆ ಸೋಲಾಗುವುದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಹಿಂತೆಗೆದುಕೊಂಡಿದೆ.

ಸುಗ್ರೀವಾಜ್ಞೆ ಮೂಲಕ ಜಾರಿ?

ಮತಾಂತರ ನಿಷೇಧ ಮಸೂದೆಯ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಮತ್ತು ನೂರಾರು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಆದರೆ ಸರ್ಕಾರ ಏನಾದರೂ ಮಾಡಿ ಅದನ್ನು ಜಾರಿಗೊಳಿಸಿಯೇ ಸಿದ್ದ ಎಂದು ಹಠ ಹಿಡಿದಿದೆ. ಮುಂದಿನ ಅಧಿವೇಶನ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಅಲ್ಲಿಯವರೆಗೂ ಕಾಯದ ಸರ್ಕಾರ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ರಾಜ್ಯಪಾಲರ ಒಪ್ಪಿಗೆ ಪಡೆದಲ್ಲಿ ಕಾಯ್ದೆಯ ಅಂಶಗಳನ್ನು ಹೀಗಿನಿಂದಲೇ ಜಾರಿಗೊಳಿಸಬಹುದು ಎಂಬ ಚರ್ಚೆಗಳಾಗಿವೆ. ಸಚಿವ ಪೂಜಾರಿಯವರ ಹೇಳಿಕೆ ಈ ಚರ್ಚೆಯ ಹಿನ್ನೆಲೆಯಲ್ಲಿ ಹೊರಬಿದ್ದಿದೆ. ಆದರೆ 6 ತಿಂಗಳೊಳಗೆ ಸದನದಲ್ಲಿ ಮಂಡಿಸಿ ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ.

ಮುಂದಿನ ಅಧಿವೇಶನದಲ್ಲಿ ಮಂಡನೆ

ಮುಂದಿನ ವಿಧಾನ ಪರಿಷತ್ ಅಧಿವೇಶನದಲ್ಲಿ ಮಂಡಿಸಿ ಹೇಗಾದರೂ ಬಹುಮತವನ್ನು ಒಟ್ಟುಗೂಡಿಸಿ ಮಸೂದೆಯನ್ನು ಪಾಸ್ ಮಾಡುವುದು ಸರ್ಕಾರದ ಎರಡನೇ ಆಯ್ಕೆಯಾಗಿದೆ. ಸದ್ಯ ಬಿಜೆಪಿಗೆ ವಿಧಾನ ಪರಿಷತ್‌ನಲ್ಲಿ ಬಹುಮತಕ್ಕೆ ಸದ್ಯ ಒಬ್ಬ ಸದಸ್ಯರ ಕೊರತೆಯಿದೆ. ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿತಯಾಗಿ ಜಯ ಗಳಿಸಿದ್ದಾರೆ. ಅವರನ್ನು ಬಿಜೆಪಿ ತನ್ನೆಡೆಗೆ ಸೆಳೆದುಕೊಳ್ಳುವ ಕಸರತ್ತು ಮಾಡಬಹುದು. ಇಲ್ಲವೇ ಕೆಲ ಜೆಡಿಎಸ್ ಸದಸ್ಯರನ್ನು ಮನವೊಲಿಸುವ ಕೆಲಸ ಮಾಡಬಹುದು.

ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ

ಸದ್ಯಕ್ಕೆ ವಿಧಾನಪರಿಷತ್‌ನಲ್ಲಿ ಮಸೂದೆ ಜಾರಿಯಾಗದಂತೆ ತಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಅದು ಸಹ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ ಸಿಗದಂತೆ ನೋಡಿಕೊಳ್ಳುವ ಕಾರ್ಯತಂತ್ರ ರೂಪಿಸಲಿದೆ. ಪಕ್ಷೇತರ ಶಾಸಕರನ್ನು ತನ್ನೆಡೆಗೆ ಸೆಳೆದುಕೊಳ್ಳುವುದು, ಜೆಡಿಎಸ್ ಮೇಲೆ ಒತ್ತಡ ತರುವುದು ಸೇರಿ ಹಲವು ಮಾರ್ಗಗಳನ್ನು ಅನುಸರಿಸಬಹುದಾಗಿದೆ.

ಜನಾಭಿಪ್ರಾಯ

ಈ ಮಸೂದೆಯನ್ನು ನೂರಾರು ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಅವು ಮತ್ತಷ್ಟು ಜನಾಭಿಪ್ರಾಯ ರೂಪಿಸುವ ಮೂಲಕ ಮಸೂದೆ ಜಾರಿಯಾಗದಂತೆ ಸರ್ಕಾರದ ಮೇಲೆ ಒತ್ತಡ ತರುವ ಸಾಧ್ಯತೆಯು ಇದೆ.


ಇದನ್ನೂ ಓದಿರಿ: ‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...