Homeಮುಖಪುಟಧರ್ಮ ಸಂಸದ್‌ನಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ: ಎಫ್‌ಐಆರ್‌ನಲ್ಲಿ ಇನ್ನಿಬ್ಬರ ಹೆಸರು ಸೇರ್ಪಡೆ

ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ: ಎಫ್‌ಐಆರ್‌ನಲ್ಲಿ ಇನ್ನಿಬ್ಬರ ಹೆಸರು ಸೇರ್ಪಡೆ

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಕರೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಇನ್ನೂ ಇಬ್ಬರನ್ನು ಹೆಸರಿಸಲಾಗಿದೆ ಎಂದು ಹರಿದ್ವಾರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿಟಿ ಶೇಖರ್ ಸುಯಲ್ ಶನಿವಾರ ಹೇಳಿದ್ದಾರೆ.

ಹರಿದ್ವಾರದಲ್ಲಿ ಡಿಸೆಂಬರ್ 17 ಮತ್ತು 19 ರ ನಡುವೆ ಮೂರು ದಿನಗಳ ಕಾಲ ನಡೆದ ’ಧರ್ಮ ಸಂಸದ್‌’ ಧಾರ್ಮಿಕ ಸಭೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೋಶಕ್ಕೆ ಒಳಗಾಗಿದ್ದು, ಮುಸ್ಲಿಮರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಕರೆ ನೀಡಿರುವುದನ್ನು ಜನರು ಖಂಡಿಸಿದ್ದಾರೆ.  ದೇಶದ ನಾಯಕರು ಈ ಬಗ್ಗೆ ಮೌನ ವಹಿಸಿರುವುದನ್ನು ನೆಟ್ಟಿಗರು ಸೇರಿದಂತೆ ಅಂತರ ರಾಷ್ಟ್ರೀಯ ಮಾಧ್ಯಮಗಳು ಪ್ರಶ್ನಿಸಿ, ಆತಂಕ ವ್ಯಕ್ತಪಡಿಸಿವೆ.

ಸಭೆಯಲ್ಲಿ ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ಧರ್ಮ ದಾಸ್ ಮತ್ತು ಅನ್ನಪೂರ್ಣ ಎಂಬ ಇಬ್ಬರು ಮಹಿಳೆಯನ್ನು ಪೊಲೀಸರು ಎಫ್‌ಐಆರ್‌ನಲ್ಲಿ ಹೆಸರಿಸಿದ್ದಾರೆ. ಈ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ವಾಸಿಂ ರಿಜ್ವಿ ಅಕಾ ಜಿತೇಂದ್ರ ತ್ಯಾಗಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ಇದೇ ವೇಳೆ ಮಾತನಾಡಿರುವ ಧರ್ಮ ಸಂಸದ್‌ನ ಸದಸ್ಯ ಆನಂದ್‌ ಸ್ವರೂಪ್‌, “ನಾವು ಚೆನ್ನಾಗಿ ಯೋಚಿಸಿ ನೀಡಿರುವ ಹೇಳಿಕೆಗಳಿಗೆ ಬದ್ಧರಾಗಿದ್ದೇವೆ. ಒಬ್ಬ ವ್ಯಕ್ತಿ ನಮ್ಮ ಸಹೋದರಿಯ ಮೇಲೆ ಅತ್ಯಾಚಾರವೆಸಗಿದರೆ ನಾವು ಅವನನ್ನು ಕೊಲ್ಲುವುದಿಲ್ಲವೇ..? ಭಾಷಣಾಕಾರರು ಅಂತಹ ವ್ಯಕ್ತಿಗಳನ್ನು ಕೊಲ್ಲುವ ಬಗ್ಗೆ ಮಾತನಾಡಿದರು. ನಮ್ಮ ಸ್ನೇಹಿರತರಾಗಿರುವ ಸಾಮಾನ್ಯ ಮುಸ್ಲಿಮರ ಬಗೆಯಲ್ಲ. ಭಾರತ ಹಿಂದೂ ರಾಷ್ಟ್ರವಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” ಎಂದಿದ್ದಾರೆ.

“ನಮ್ಮಲ್ಲಿ 100 ಜನರು 20 ಲಕ್ಷ ಜನರನ್ನು (ಮುಸ್ಲಿಮರು) ಕೊಲ್ಲಲು ಸಿದ್ಧರಿದ್ದರೆ, ನಾವು ಗೆದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹಿಂದೂ ಮಹಾಸಭಾದ ನಾಯಕಿ ಪೂಜಾ ಶಕುನ್ ಪಾಂಡೆ ಹೇಳಿದ್ದರು. ದೇಶದ ಮುಸ್ಲಿಮರನ್ನು ಉಲ್ಲೇಖಿಸಿ “ಕೊಲ್ಲಲು ಮತ್ತು ಜೈಲಿಗೆ ಹೋಗಲು ಸಿದ್ಧರಾಗಿರಿ” ಎಂದು ಬಲಪಂಥೀಯ ಹಿಂದೂ ಕಾರ್ಯಕರ್ತರಿಗೆ ಕರೆ ನೀಡಿದ್ದರು.

ಧರ್ಮ ಸಂಸದ್‌ನ ಪ್ರಮುಖ ಸಂಘಟಕರಲ್ಲಿ ಒಬ್ಬರಾದ ವಿವಾದಿತ ಉಗ್ರಗಾಮಿ ಹಿಂದುತ್ವ ನಾಯಕ ನರಸಿಂಗಾನಂದ ಗಿರಿ ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

ಡಿಸೆಂಬರ್ 19 ರಂದು ನಡೆದ ಕಾರ್ಯಕ್ರಮದಲ್ಲಿ, “ನಮಗೆ ಸಹಾಯ ಬೇಕಾದಾಗ, ಹಿಂದೂ ಸಮುದಾಯವು ನಮಗೆ ಸಹಾಯ ಮಾಡಲಿಲ್ಲ. ಆದರೆ ಯಾವುದೇ ಯುವ ಕಾರ್ಯಕರ್ತ ‘ಹಿಂದೂ ಪ್ರಭಾಕರನ್’ ಆಗಲು ಸಿದ್ಧರಾಗಿದ್ದರೆ, ಬೇರೆಯವರಿಗಿಂತ ಮೊದಲು ನಾನು ಅವನಿಗೆ 1 ಕೋಟಿ ನೀಡುತ್ತೇನೆ…ಯಾರಾದರೂ ‘ಹಿಂದೂಗಳ ಪ್ರಭಾಕರನ್’ ಆಗುವ ಜವಾಬ್ದಾರಿಯನ್ನು ತೆಗೆದುಕೊಂಡರೆ, ನಾನು 1 ಕೋಟಿ ನೀಡುತ್ತೇನೆ ಮತ್ತು ಅವರು ಒಂದು ವರ್ಷ ಹಾಗೆ ಮುಂದುವರಿಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗೆ ಸಂಗ್ರಹಿಸುತ್ತೇನೆ” ಎಂದು ಹೇಳಿದ್ದರು.


ಇದನ್ನೂ ಓದಿ: ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...