Homeಮುಖಪುಟನ್ಯಾಯಾಧೀಶರನ್ನು ನ್ಯಾಯಾಧೀಶರೇ ನೇಮಿಸುತ್ತಾರೆಂಬುದು ಮಿಥ್ಯೆಯಷ್ಟೇ: ಸಿಜೆಐ ರಮಣ

ನ್ಯಾಯಾಧೀಶರನ್ನು ನ್ಯಾಯಾಧೀಶರೇ ನೇಮಿಸುತ್ತಾರೆಂಬುದು ಮಿಥ್ಯೆಯಷ್ಟೇ: ಸಿಜೆಐ ರಮಣ

ಇತ್ತೀಚಿನ ದಿನಗಳಲ್ಲಿ ನ್ಯಾಯಾಂಗ ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆಗಳು ಹೆಚ್ಚುತ್ತಿವೆ ಎಂದು ಸಿಜೆಐ ಆತಂಕ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

“ನ್ಯಾಯಾಧೀಶರನ್ನು ನ್ಯಾಯಾಧೀಶರೇ ನೇಮಿಸುತ್ತಾರೆ ಎಂಬ ಕಲ್ಪನೆಯು ಮಿಥ್ಯೆಯಷ್ಟೇ. ನ್ಯಾಯಾಂಗ ಅಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ನ್ಯಾಯಾಂಗ ಒಂದು ಭಾಗವಷ್ಟೇ” ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಹೇಳಿದ್ದಾರೆ.

ವಿಜಯವಾಡದ ಸಿದ್ಧಾರ್ಥ ಕಾನೂನು ಕಾಲೇಜಿನಲ್ಲಿ “ಭಾರತೀಯ ನ್ಯಾಯಾಂಗ – ಭವಿಷ್ಯದ ಸವಾಲುಗಳು” ವಿಷಯ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ಇತ್ತೀಚಿನ ದಿನಗಳಲ್ಲಿ, ನ್ಯಾಯಾಂಗ ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆಗಳು ಹೆಚ್ಚುತ್ತಿವೆ. ಪಕ್ಷಗಳಿಗೆ ಅನುಕೂಲಕರ ಆದೇಶ ಹೊರಬರದಿದ್ದರೆ ನ್ಯಾಯಾಧೀಶರ ವಿರುದ್ಧ ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಂಘಟಿತವಾಗಿ ದಾಳಿ ನಡೆಸಲಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಧೀಶರು ತಾವೇ ನ್ಯಾಯಾಧೀಶರನ್ನು ನೇಮಿಸಿಕೊಳ್ಳುತ್ತಾರೆ” ಎಂಬಂತಹ ನುಡಿಗಟ್ಟುಗಳನ್ನು ಪುನರುಚ್ಚರಿಸುವುದು ಇತ್ತೀಚಿನ ದಿನಗಳಲ್ಲಿ ಫ್ಯಾಶನ್ ಆಗಿದೆ. ನಾನು ಇದನ್ನು ವ್ಯಾಪಕವಾಗಿ ಪ್ರಚಾರ ಮಾಡಲಾಗುತ್ತಿದೆ. ವಾಸ್ತವವೆಂದರೆ ನ್ಯಾಯಾಂಗವು ನೇಮಕಾತಿ ಪ್ರಕ್ರಿಯೆಯಲ್ಲಿ ಒಂದು ಭಾಗವಷ್ಟೇ” ಎಂದು ಸಿಜೆಐ ಸ್ಪಷ್ಟಪಡಿಸಿದ್ದಾರೆ.

ಕಾನೂನು ಜಾರಿಗೊಳಿಸುವ ಏಜೆನ್ಸಿಗಳು, ವಿಶೇಷವಾಗಿ ವಿಶೇಷ ಸಂಸ್ಥೆಗಳು, ನ್ಯಾಯಾಂಗದ ಮೇಲಿನ ದುರುದ್ದೇಶಪೂರಿತ ದಾಳಿಯನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾಗಿದೆ. ನ್ಯಾಯಾಲಯವು ಮಧ್ಯಪ್ರವೇಶಿಸಿ ಆದೇಶಗಳನ್ನು ನೀಡದ ಹೊರತು, ಅಧಿಕಾರಿಗಳು ಸಾಮಾನ್ಯವಾಗಿ ತನಿಖೆಯನ್ನು ಮುಂದುವರಿಸದಿರುವುದು ದುರದೃಷ್ಟಕರ ಎಂದಿದ್ದಾರೆ.

ಹೊಸ ಮಾಧ್ಯಮ ಪರಿಕರಗಳು ಅಗಾಧ ಸಾಮರ್ಥ್ಯವನ್ನು ಹೊಂದಿವೆ, ಆದರೆ ಸರಿ- ತಪ್ಪು, ಒಳ್ಳೆಯದು-ಕೆಟ್ಟದ್ದು, ನೈಜ-ನಕಲಿಗಳ ನಡುವೆ ವ್ಯತ್ಯಾಸವನ್ನು ಗುರುತಿಸಲು ಅಸಮರ್ಥವಾಗಿವೆ. ಪ್ರಕರಣಗಳನ್ನು ನಿರ್ಧರಿಸುವಲ್ಲಿ ಮಾಧ್ಯಮ ಪ್ರಯೋಗಗಳು ಮಾರ್ಗದರ್ಶಿ ಅಂಶವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಿಗೆ ಸ್ವಾತಂತ್ರ್ಯ ಅಗತ್ಯವಿದೆ. ಅವರು ನ್ಯಾಯಾಲಯಗಳಿಗೆ ಮಾತ್ರ ಉತ್ತರಿಸುವಂತಾಗಬೇಕು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಹೇಳಿದ್ದಾರೆ.

ಪ್ರಾಸಿಕ್ಯೂಟರ್‌ಗಳು ಸರ್ಕಾರದ ನಿಯಂತ್ರಣದಲ್ಲಿದ್ದಾರೆ. ಆದ್ದರಿಂದ ಅವರು ಸ್ವತಂತ್ರವಾಗಿ ಕಾರ್ಯನಿರ್ವಹಿಸದಿರುವುದು ಆಶ್ಚರ್ಯವೇನಿಲ್ಲ. ಕ್ಷುಲ್ಲಕ ಮತ್ತು ಅರ್ಹವಲ್ಲದ ಪ್ರಕರಣಗಳು ನ್ಯಾಯಾಲಯಗಳನ್ನು ತಲುಪುವುದನ್ನು ತಡೆಯಲು ಅವರು ಏನನ್ನೂ ಮಾಡುವುದಿಲ್ಲ. ಅವರು ವಿಚಾರಣೆಯ ಸಮಯದಲ್ಲಿ ಸಾಕ್ಷ್ಯವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾರೆ ಎಂದು ವಿಷಾದಿಸಿದ್ದಾರೆ.

ಆಮೂಲಾಗ್ರ ಬದಲಾವಣೆ ಕೈಗೊಳ್ಳಬೇಕಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್‌ಗಳನ್ನು ಪ್ರತ್ಯೇಕಿಸಲು, ಅವರ ನೇಮಕಾತಿಗಾಗಿ ಸ್ವತಂತ್ರ ಆಯ್ಕೆ ಸಮಿತಿಯನ್ನು ರಚಿಸಬಹುದು. ಇತರ ನ್ಯಾಯವ್ಯಾಪ್ತಿಗಳ ತುಲನಾತ್ಮಕ ವಿಶ್ಲೇಷಣೆಯ ನಂತರ ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿರಿ: ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನ: ಶ್ರೀನಿವಾಸ ಪೂಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...