HomeಮುಖಪುಟAFSPA ರದ್ದತಿ ಕುರಿತು ಸಮಿತಿ ರಚನೆ: ಅಮಿತ್ ಶಾ ಜೊತೆ ಸಭೆ ನಂತರ ನಾಗಾಲ್ಯಾಂಡ್‌ ಸಿಎಂ...

AFSPA ರದ್ದತಿ ಕುರಿತು ಸಮಿತಿ ರಚನೆ: ಅಮಿತ್ ಶಾ ಜೊತೆ ಸಭೆ ನಂತರ ನಾಗಾಲ್ಯಾಂಡ್‌ ಸಿಎಂ ಹೇಳಿಕೆ

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ 13 ನಾಗರಿಕರ ಹತ್ಯೆ ಪ್ರರಕಣದ ಹಿನ್ನೆಲೆಯಲ್ಲಿ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಯನ್ನು ವಾಪಾಸ್ ಪಡೆಯುವ ಕುರಿತು ನಿರ್ಧರಿಸಲು ಸಮತಿ ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾರೊಂದಿಗಿನ ಸಭೆಯ ಬಳಿಕ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಮಾನ್ಯ ಗೃಹಮಂತ್ರಿ ಅಮಿತ್‌ ಶಾರವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 23 ರಂದು ಸಭೆ ನಡೆಯಲಾಗಿದೆ. AFSPA ರದ್ದುಗೊಳಸಬೇಕೆಂಬ ನಮ್ಮ ಮನವಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ರಾಜ್ಯದ ಎಲ್ಲಾ ವರ್ಗದ ಜನರು ಶಾಂತಿಯಿಂದ ವರ್ತಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಈ ಕುರಿತು ನಾಗಲ್ಯಾಂಡ್ ಸರ್ಕಾರವು ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ AFSPA ರದ್ದುಗೊಳಿಸುವ ಕುರಿತು ಸಮಿತಿ ರಚಿಸಲಾಗುತ್ತದೆ. ಅದು ಅಧ್ಯಯನ ನಡೆಸಿ 45 ದಿನಗಳಲ್ಲಿ ತನ್ನ ವರದಿ ಸಲ್ಲಿಸಲಿದೆ. ಅದರ ಆಧಾರದಲ್ಲಿ ಗಲಭೆ ಪ್ರದೇಶದಲ್ಲಿ ಕಾನೂನನ್ನು ಹಿಂತೆಗೆದುಕೊಳ್ಳಲಾಗುವುದು” ಎಂದು ಹೇಳಲಾಗಿದೆ.

ಇತ್ತೀಚೆಗೆ ನಡೆದ 13 ನಾಗರೀಕರ ಹತ್ಯೆ ಪ್ರಕರಣದ ಕುರಿತು ಕೋರ್ಟ್ ನಿಷ್ಪಷಪಾತ ತನಿಖೆ ನಡೆಸುತ್ತದೆ ಮತ್ತು ತಪ್ಪಿತಸ್ಥ ಸೈನ್ಯದ ತುಕಡಿಯ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಘಟನೆಯನ್ನು ನೇರವಾಗಿ ಭಾಗಿಯಾದವರನ್ನು ತಕ್ಷಣದಿಂದಲೇ ಅಮಾನತುಗೊಳಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನವೆಂಬರ್ 20 ರಂದು, ನಾಗಾಲ್ಯಾಂಡ್ ಅಸೆಂಬ್ಲಿಯು ಭಾರತ ಸರ್ಕಾರವು ಈಶಾನ್ಯ ಪ್ರದೇಶದಿಂದ AFSPA ಅನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.


ಇದನ್ನೂ ಓದಿ: ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA...

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...