Homeಅಂತರಾಷ್ಟ್ರೀಯಅಫ್ಘಾನಿಸ್ತಾನ: ಪುರುಷನ ಬೆಂಗಾವಲು ಇಲ್ಲದೆ ಮಹಿಳೆ ದೂರ ಪ್ರಯಾಣಿಸುವಂತಿಲ್ಲ- ತಾಲಿಬಾನ್

ಅಫ್ಘಾನಿಸ್ತಾನ: ಪುರುಷನ ಬೆಂಗಾವಲು ಇಲ್ಲದೆ ಮಹಿಳೆ ದೂರ ಪ್ರಯಾಣಿಸುವಂತಿಲ್ಲ- ತಾಲಿಬಾನ್

- Advertisement -
- Advertisement -

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನ್ ಅಲ್ಲಿನ ಮಹಿಳೆಯರ ಮೇಲೆ ಹಿಡಿತ ಸಾಧಿಸುತ್ತಿದ್ದು, ಮತ್ತೆ ಹೊಸ ನಿರ್ಬಂಧ ವಿಧಿಸಿದೆ. ಇಸ್ಲಾಮಿಕ್ ಹಿಜಾಬ್‌ಗಳನ್ನು ಧರಿಸದೆ, ಹತ್ತಿರದ ಪುರುಷ ಸಂಬಂಧಿ ಜೊತೆಗಿರದೇ ದೂರದ ಸ್ಥಳಗಳಿಗೆ ಪ್ರಯಾಣಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಕಡಿಮೆ ದೂರದ ಹೊರತಾಗಿ ಬೇರೆ ಯಾವುದಾದರೂ ಸ್ಥಳಕ್ಕೆ ಪ್ರಯಾಣಿಸಲು ಬಯಸುವ ಮಹಿಳೆಯರು ತಮ್ಮ ಹತ್ತಿರದ ಪುರುಷ ಸಂಬಂಧಿ ಜೊತೆಗೆ ಮಾತ್ರ ಪ್ರಯಾಣಿಸಬಹುದುದಾಗಿದೆ. ಜೊತೆಗೆ ಇಸ್ಲಾಮಿಕ್ ಹಿಜಾಬ್‌ಗಳನ್ನು ಧರಿಸದಿರುವವರಿಗೆ ಪ್ರಯಾಣಿಸಲು ಅವಕಾಶ ನೀಡಬಾರದು ಎಂದು ಅಫ್ಘಾನಿಸ್ತಾನದ ತಾಲಿಬಾನ್ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

ತಾಲಿಬಾನ್ ಸರ್ಕಾರದ ಸಚ್ಚಾರಿತ್ರ್ಯ ಬೆಂಬಲ ಮತ್ತು ದುರಾಚಾರ ನಿಯಂತ್ರಣ ಸಚಿವಾಲಯವು ಹೊರಡಿಸಿದ ಮಾರ್ಗಸೂಚಿಯಲ್ಲಿ, ಇಸ್ಲಾಮಿಕ್ ಹಿಜಾಬ್‌ಗಳನ್ನು ಧರಿಸಿರುವ ಮಹಿಳೆಯರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶ ನೀಡುವಂತೆ ಎಲ್ಲಾ ವಾಹನ ಮಾಲೀಕರಿಗೆ ಕರೆ ನೀಡಲಾಗಿದೆ.

ಇದನ್ನೂ ಓದಿ: ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

“45 ಮೈಲುಗಳಿಗಿಂತ ಹೆಚ್ಚು (72 ಕಿಲೋಮೀಟರ್) ಪ್ರಯಾಣಿಸುವ ಮಹಿಳೆಯರು ತಮ್ಮ ಹತ್ತಿರದ ಕುಟುಂಬದ ಸದಸ್ಯರಿಲ್ಲದೆ ಪ್ರಯಾಣ ಮಾಡಬಾರದು” ಎಂದು ಸಚಿವಾಲಯದ ವಕ್ತಾರ ಸಾದಿಕ್ ಅಕಿಫ್ ಮುಹಾಜಿರ್ ಭಾನುವಾರ AFPಗೆ ತಿಳಿಸಿದ್ದಾರೆ. ಜೊತೆಗೆ, ಮಹಿಳೆಯ ಜೊತೆ ಹೋಗುವ ಪುರುಷ ಸಂಬಂಧಿ ಹತ್ತಿರದವರೇ ಆಗಿರಬೇಕು ಎಂದು ಸೂಚಿಸಿದ್ದಾರೆ.

ನಟಿಯರಿರುವ ಜಾಹೀರಾತು, ಧಾರಾವಾಹಿಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ಅಫ್ಘಾನಿಸ್ತಾನದ ಟಿವಿ ಚಾನೆಲ್‌ಗಳಿಗೆ ಕಳೆದ ವಾರ ಸೂಚನೆ ನೀಡಲಾಗಿತ್ತು. ಇನ್ನು ಮಹಿಳಾ ಟಿವಿ ಪತ್ರಕರ್ತರು ಸುದ್ದಿ ಓದುವಾಗ ಹಿಜಾಬ್ ಧರಿಸುವಂತೆ ಸಚಿವಾಲಯವು ಕರೆ ನೀಡಿದೆ. ಇನ್ನು ಜನರು ತಮ್ಮ ವಾಹನಗಳಲ್ಲಿ ಹಾಡು ಕೇಳುವುದನ್ನು ನಿಲ್ಲಿಸುವಂತೆ ತಿಳಿಸಲಾಗಿದೆ.

ಕಳೆದ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡ ತಾಲಿಬಾನ್‌ಗಳು 1990 ರ ದಶಕದಲ್ಲಿನ ಅಧಿಕಾರದಲ್ಲಿದ್ದಾಗ ನಡೆದುಕೊಂಡಂತೆ ನಡೆಯುವುದಿಲ್ಲ ಎಂದು ತಿಳಿಸಿದ್ದರು. ಆದರೆ, ಈಗ ಮಹಿಳೆಯರು ಮತ್ತು ಹುಡುಗಿಯರ ಮೇಲೆ ವಿವಿಧ ನಿರ್ಬಂಧಗಳನ್ನು ವಿಧಿಸಿದ್ದಾರೆ. ಹಲವು ಹೆಣ್ಣು ಮಕ್ಕಳು ಶಾಲೆಯಿಂದ ವಂಚಿತರಾಗಿದ್ದಾರೆ.

ಈ ಹಿಂದೆ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳಿಂದ ಬ್ಯಾನ್ ಮಾಡಲಾಗಿದೆ. ಆಸ್ಟ್ರೇಲಿಯಾದ ಎಸ್‌ಬಿಎಸ್ ಟಿವಿಗೆ ಹೇಳಿಕೆ ನೀಡಿರುವ ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್, “ಕ್ರಿಕೆಟ್‌ನಲ್ಲಿ, ಮಹಿಳೆಯರು ತಮ್ಮ ಮುಖ ಮತ್ತು ದೇಹವನ್ನು ಮುಚ್ಚಿಕೊಳ್ಳದಂತಹ ಪರಿಸ್ಥಿತಿಯನ್ನು ಎದುರಿಸಬಹುದು. ಮಹಿಳೆಯರನ್ನು ಈ ರೀತಿ ನೋಡಲು ಇಸ್ಲಾಂ ಅನುಮತಿಸುವುದಿಲ್ಲ” ಎಂದು ಹೇಳಿದ್ದರು.


ಇದನ್ನೂ ಓದಿ: ಅಫ್ಘಾನ್: ಮಹಿಳೆಯರನ್ನು ಕ್ರಿಕೆಟ್ ಸೇರಿ ಹಲವು ಕ್ರೀಡೆಗಳಿಂದ ಹೊರಗಿಟ್ಟ ತಾಲಿಬಾನ್‌ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತಾಲಿಬಾನಿಗಳ ಅಟ್ಟಹಾಸ ಅತಿಯಾಗುತ್ತಿದೆ.

    ಇವರನ್ನು ಸರಿ ದಾರಿಗೆ ತರಲು ವಿಶ್ವ ನಾಯಕರಿಗೆ ಏಕೆ ಆಗುತ್ತಿಲ್ಲ

    ಈ ಒಂದು ವಿಷಯದಲ್ಲಿಯಾದರೂ ಒಗ್ಗೂಡಿ ಕೆಲಸ ಮಾಡಬಹುದಲ್ಲಾ

    Biden ತಪ್ಪು ಮಾಡಿದರೇ……

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...