Homeಕರ್ನಾಟಕಎನ್‌ಇಟಿ 'ಕನ್ನಡ' ಪ್ರಶ್ನೆಪತ್ರಿಕೆಯಲ್ಲಿ 'ಹಿಂದಿ' ಹಾವಳಿ; ಅಭ್ಯರ್ಥಿಗಳ ಆಕ್ರೋಶ

ಎನ್‌ಇಟಿ ‘ಕನ್ನಡ’ ಪ್ರಶ್ನೆಪತ್ರಿಕೆಯಲ್ಲಿ ‘ಹಿಂದಿ’ ಹಾವಳಿ; ಅಭ್ಯರ್ಥಿಗಳ ಆಕ್ರೋಶ

ಪರೀಕ್ಷಾ ಅಭ್ಯರ್ಥಿಗಳು ಪ್ರತಿಭಟಿಸಿರುವ ಬೆನ್ನಲ್ಲೇ ಮರು ಪರೀಕ್ಷೆ ನಡೆಸುವುದಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ತಿಳಿಸಿದೆ

- Advertisement -
- Advertisement -

ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಇಂದು (ಭಾನುವಾರ) ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ನುಸುಳಿದ್ದು ಅಭ್ಯರ್ಥಿಗಳು ಗೊಂದಲಕ್ಕೆ ಸಿಲುಕಿದರು. ತಾಂತ್ರಿಕ ದೋಷದಿಂದಾಗಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಭಾಷೆಯ ಪ್ರಶ್ನೆಗಳು ಬಂದಿದ್ದು, ಮರು ಪರೀಕ್ಷೆ ನಡೆಸುವುದಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ತಿಳಿಸಿದೆ.

ಆನ್‌ಲೈನ್‌ನಲ್ಲಿ ಪರೀಕ್ಷೆ ನಿಗದಿಯಾಗಿತ್ತು. ಸಾಮಾನ್ಯಜ್ಞಾನ ಪ್ರಶ್ನೆಪತ್ರಿಕೆ (100 ಅಂಕಗಳು) ಸರಿಯಾಗಿತ್ತು. ಆದರೆ ಕನ್ನಡ ಪ್ರಶ್ನೆಪತ್ರಿಕೆ (200 ಅಂಕ) ಗೊಂದಲವನ್ನು ಉಂಟುಮಾಡಿತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಒಟ್ಟು ನೂರು ಪ್ರಶ್ನೆಗಳು ಇರುತ್ತವೆ. ತಾಂತ್ರಿಕ ದೋಷದಿಂದಾಗಿ ಮೊದಲ ಹತ್ತು ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ ಪ್ರಶ್ನೆಗಳೆಲ್ಲ ಹಿಂದಿ ಭಾಷೆಯದ್ದಾಗಿದ್ದವು. ಹೀಗಾಗಿ ಪರೀಕ್ಷಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಪರೀಕ್ಷಾ ಅಭ್ಯರ್ಥಿ ಹರೀಶ್ ಸಿಂಗ್ರಿಹಳ್ಳಿ, “ಹೆಚ್ಚುವರಿ ಸಮಯವನ್ನು ನೀಡಿ ಕೆಲವು ಕಡೆ ಪರೀಕ್ಷೆ ನಡೆಸಲಾಗಿದೆ. ಆದರೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ನಡೆದಿಲ್ಲ. ನನ್ನ ಪರೀಕ್ಷೆ 9ರಿಂದ 12 ಗಂಟೆಗೆ ಮುಗಿಯಬೇಕಿತ್ತು. ಆದರೆ 2 ಗಂಟೆಗೆ ಮುಗಿಯಿತು” ಎಂದು ತಿಳಿಸಿದರು.

“ಹೆಚ್ಚುವರಿ ಸಮಯ ನೀಡಿ ಪರೀಕ್ಷೆ ನಡೆಸಿದರೂ ಮತ್ತೊಂದು ಸಮಸ್ಯೆಯಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಪ್ರಶ್ನೆಗಳು ಪುನಾರಾವರ್ತನೆಯಾಗಿದ್ದವು. ಹೀಗಾಗಿ ಪರೀಕ್ಷೆ ಬರೆದವರಿಗೂ ಮರು ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಅಲ್ಲದೆ ತುಮಕೂರಿನಲ್ಲಿ ಪರೀಕ್ಷೆ ಬರೆಯಲು ಬಯಸಿದ್ದ ಅನೇಕರನ್ನು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಹಾಕಲಾಗಿತ್ತು. ಹೀಗಾಗಿ ನಮ್ಮ ಸಮಯ, ಹಣ ಎರಡೂ ವ್ಯರ್ಥವಾಗಿದೆ” ಎಂದರು.

ತುಮಕೂರಿನಲ್ಲಿ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಭ್ಯರ್ಥಿಗಳು, “ಈ ರೀತಿ ಮತ್ತೆ ಆಗಬಾರದು. ಎಲ್ಲರಿಗೂ ಅನ್ಯಾಯವಾಗಿದೆ. ಬೇರೆ ಭಾಷೆಗೆ ಇಲ್ಲದೆ ಇರುವ ಸಮಸ್ಯೆ ಕನ್ನಡಕ್ಕೆ ಮಾತ್ರ ಯಾಕೆ?” ಎಂದು ಪ್ರಶ್ನಿಸಿದರು.

“ಇಲ್ಲಿಯವರೆಗೂ ಬೇರೆ ವಿಷಯಗಳ ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆದಿವೆ. ಆದರೆ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ದೋಷ ಕಂಡು ಬಂದಿದೆ. ಮುಂದಿನ ಭವಿಷ್ಯದ ಮೇಲೆ ಜಿಗುಪ್ಸೆ ಬರುವ ರೀತಿಯಲ್ಲಿ ಹಿಂದಿ ಆಕ್ರಮಿಸಿದೆ. ಇದು ಕನ್ನಡಿಗರ ದುರಂತ ಸ್ಥಿತಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರೀಕ್ಷಾ ಅಭ್ಯರ್ಥಿಗಳ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಹೊಸ ನೋಟಿಫಿಕೇಷನ್‌ ಹೊರಡಿಸಿದ್ದು, ಮರು ಪರೀಕ್ಷೆ ನಡೆಸುವುದಾಗಿ ತಿಳಿಸಿದೆ.

“ತಾಂತ್ರಿಕ ದೋಷದಿಂದಾಗಿ ಯುಜಿಸಿ-ಎನ್‌ಇಟಿ ಕನ್ನಡ ಪರೀಕ್ಷೆಯಲ್ಲಿ ತೊಂದರೆಯಾಗಿದ್ದು, ಶೀಘ್ರದಲ್ಲೇ ಮರುಪರೀಕ್ಷೆ ನಡೆಸಲು ಕ್ರಮ ವಹಿಸಲಾಗುವುದು” ಎಂದು ಎನ್‌ಟಿಎ ಹೇಳಿದೆ.


ಇದನ್ನೂ ಓದಿರಿ: ಮಧ್ಯಪ್ರದೇಶ: ಹಿಂದುತ್ವ ಗುಂಪಿನ ರ್‍ಯಾಲಿಯಿಂದಾಗಿ ಕೋಮು ಘರ್ಷಣೆ; 12ಕ್ಕೂ ಹೆಚ್ಚು ಮುಸ್ಲಿಮರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...