Homeದಲಿತ್ ಫೈಲ್ಸ್‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಇತ್ತೀಚೆಗೆ ಅದೇ ಶಾಲೆಯಲ್ಲಿ ದಲಿತ ಮಹಿಳೆ ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು.

- Advertisement -
- Advertisement -

ಉತ್ತರಾಖಂಡದ ದಲಿತ ವಿದ್ಯಾರ್ಥಿಗಳ ಗುಂಪೊಂದು ಮೇಲ್ಜಾತಿ ಹಿಂದೂ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ತಿನ್ನಲು ನಿರಾಕರಿಸಿದ್ದಾರೆ. ಈ ಹಿಂದೆ ಅದೇ ಶಾಲೆಯಲ್ಲಿ ದಲಿತ ಮಹಿಳೆ ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು. ಉತ್ತರಾಖಂಡ್‌ ರಾಜ್ಯದ ಚಂಪಾವತ್ ಜಿಲ್ಲೆಯ ಸುಖಿಧಾಂಗ್‌ನ ಸರ್ಕಾರಿ ಇಂಟರ್ ಕಾಲೇಜ್‌ನಲ್ಲಿ ಈ ಘಟನೆ ನಡೆದಿದೆ.

ಕಳೆದ ವಾರ, ದಲಿತ ಸಮುದಾಯಕ್ಕೆ ಸೇರಿದ ಸುನೀತಾ ದೇವಿ ಅವರು ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು. ಆದರೆ ಗಾಯಕ್ಕೆ ಉಪ್ಪು ಸವರಿದ್ದ ರಾಜ್ಯ ಸರ್ಕಾರ ಸುನೀತಾ ದೇವಿ ಅವರನ್ನು ಕೆಲಸದಿಂದ ವಜಾಗೊಳಿಸಿತ್ತು.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ಆದರೆ, ದಲಿತ ಸಮುದಾಯಕ್ಕೆ ಸೇರಿದ 23 ವಿದ್ಯಾರ್ಥಿಗಳು ಸುನಿತಾ ದೇವಿಯ ಬದಲಿಯಾಗಿ ನೇಮಕಗೊಂಡ ಮೇಲ್ಜಾತಿ ಹಿಂದೂ ಮಹಿಳೆ ವಿಮಿಲೇಶ್ ಉಪ್ರೇತಿ ಅವರು ತಯಾರಿಸಿದ ಊಟವನ್ನು ತಿನ್ನಲು ನಿರಾಕರಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಶುಕ್ರವಾರದಂದು ಮಧ್ಯಾಹ್ನದ ಊಟವನ್ನು ಬಡಿಸುತ್ತಿರುವಾಗ, 23 ದಲಿತ ವಿದ್ಯಾರ್ಥಿಗಳು ಆಹಾರವನ್ನು ತಿನ್ನಲು ನಿರಾಕರಿಸಿದ್ದಾರೆ. “ದಲಿತ ಮಹಿಳೆ ತಯಾರಿಸಿದ ಆಹಾರವನ್ನು ಮೇಲ್ವರ್ಗದ ವಿದ್ಯಾರ್ಥಿಗಳು ಬಹಿಷ್ಕರಿಸಿದರೆ, ಮೇಲ್ಜಾತಿಯ ಮಹಿಳೆ ತಯಾರಿಸಿದ ಊಟವನ್ನು ನಾವು ಬಹಿಷ್ಕರಿಸುವುದಾಗಿ ಅವರು ಹೇಳಿದರು” ಎಂದು ಇಂಟರ್ ಕಾಲೇಜಿನ ಪ್ರಾಂಶುಪಾಲ ಪ್ರೇಮ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ, ಉತ್ತರಾಖಂಡ ಚುನಾವಣೆಗೆ 150 ಕ್ಕೂ ಹೆಚ್ಚು ಹಿರಿಯ ಬಿಜೆಪಿ ನಾಯಕರ ನಿಯೋಜನೆ

ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿರುವುದರ ಬಗ್ಗೆ ಉತ್ತರಾಖಂಡ ಸರ್ಕಾರದ ವಿರುದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ನಂತರ ಇದು ದೇಶದಾದ್ಯಂತ ಸುದ್ದಿಯಾಗಿತ್ತು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಚಂದ್ರಶೇಖರ್‌‌, “ಉತ್ತರಾಖಂಡ್‌ನ ಚಂಪಾವತ್ ಜಿಲ್ಲೆಯಲ್ಲಿ ಎಸ್‌ಸಿ ಸಮುದಾಯದ ಅಡುಗೆಯ ಮಹಿಳೆಯನ್ನು ವಜಾ ಮಾಡುವ ಮೂಲಕ ಸರ್ಕಾರ ದಲಿತ ಸಮುದಾಯದ ಸ್ವಾಭಿಮಾನಕ್ಕೆ ಅವಮಾನ ಮಾಡಿದೆ. ನಮ್ಮ ಪಕ್ಷ ಮತ್ತು ಭೀಮ್ ಆರ್ಮಿ ತಮ್ಮ ತಾಯಂದಿರ ಮತ್ತು ಸಹೋದರಿಯರ ಸ್ವಾಭಿಮಾನದೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಆಕೆಯನ್ನು ಮತ್ತೇ ಹುದ್ದೆಗೆ ಸೇರಿಸಿಕೊಳ್ಳದಿದ್ದರೆ ಮುಖ್ಯಮಂತ್ರಿ ಪುಷ್ಕರ್ ಧಾಮಿ ವಿರುದ್ದ ಘೋರ ಹೋರಾಟ ಮಾಡುತ್ತೇವೆ. ಸ್ನೇಹಿತರೇ, ಪ್ರತಿಭಟನೆಗೆ ತಯಾರಿ ಆರಂಭಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ:ಕೆಲವೇ ತಿಂಗಳಲ್ಲಿ ಉತ್ತರಾಖಂಡ ಚುನಾವಣೆ: ಶಂಕರಾಚಾರ್ಯ ಪ್ರತಿಮೆ ಉದ್ಘಾಟಿಸಿ ರಾಮಮಂದಿರದ ಬಗ್ಗೆ ಉಲ್ಲೇಖಿಸಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಲಾಯಕ್ ಮುಖ್ಯಮ್ಂತ್ರಿ ಅವನು. ಮಕ್ಕಳು ಮೇಲ್ಜಾತಿಯವರಿಗೆ ಸರಿಯಾಗಿ ಬುದ್ದಿ ಕಲಿಸ್ತಿದ್ದಾರೆ. ಜೈ ಭೀಮ್‌ಆರ್ಮಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...