Homeಮುಖಪುಟಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ನಮ್ಮ ದೇಶದಲ್ಲಿ ಕೋಟ್ಯಾಂತರ ಜನ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಾ, ಹಲವು ಕೆಲಸಗಳನ್ನು ಮಾಡುತ್ತಾ, ಕಷ್ಟಪಟ್ಟು ದುಡಿಯುತ್ತಾ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಅವರೆಲ್ಲರೂ ತಾವು ಕೆಲಸ ಮಾಡುವ ಕಂಪನಿ, ಕಾರ್ಖಾನೆ, ಕಚೇರಿಗಳಲ್ಲಿ ತಮ್ಮ ವಿಳಾಸ ಸೇರಿ ಕನಿಷ್ಟ ಮಾಹಿತಿ ಕೊಟ್ಟಿರುತ್ತಾರೆ. ಆದರೆ ಕನಿಷ್ಟ ವೇತನ ಪಡೆಯುತ್ತಾ ದುಡಿಯುತ್ತಿರುವ ಮನೆಗೆಲಸಗಾರರ ಮೇಲೆ ಕಣ್ಗಾವಲು ಇಡಲು ತೆಲಂಗಾಣ ಪೊಲೀಸ್ ಮೊಬೈಲ್ ಆಪ್ ಒಂದನ್ನು ರಚಿಸಿದ್ದಾರೆ. ಇದು ವ್ಯಕ್ತಿಗಳ ಖಾಸಗಿತನದ ಉಲ್ಲಂಘನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ತೀವ್ರ ವಿರೋಧ ಸಹ ವ್ಯಕ್ತವಾಗಿದೆ.

ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹೈದರಾಬಾದ್‌ನ ಹೆಚ್ಚುವರಿ ಪೊಲೀಸ್ ಕಮಿಷನರ್ (ಅಪರಾಧ) ಶಿಖಾ ಗೋಯೆಲ್, ಮನೆಕೆಲಸಗಾರರನ್ನು ನೇಮಿಸಿಕೊಳ್ಳುವಾಗ ಜಾಗರೂಕರಾಗಿರಿ, ನಿಮ್ಮ ಮತ್ತು ನಿಮ್ಮ ಪ್ರೀತಿ ಪಾತ್ರರ ಸುರಕ್ಷತೆಗಾಗಿ ನೇಮಕ ಮಾಡಿಕೊಳ್ಳುವ ಮೊದಲು HAWKEYE ಆಪ್ ಮೂಲಕ ಪರೀಶಿಲಿಸಿ ಮತ್ತು ಅವರ ಮಾಹಿತಿಯನ್ನು ನಮಗೆ ನೀಡಿ” ಎಂದು ಹೇಳಿದ್ದಾರೆ.

ಈ ದಿನಗಳಲ್ಲಿ ನಾವು ಮನೆಗೆಲಸದವರನ್ನು ಅವಲಂಬಿಸಬೇಕಾಗಿದೆ. ಕೆಲವೊಮ್ಮೆ ಅವರು ವಿವಿಧ ರಾಜ್ಯಗಳು ಅಥವಾ ಬೇರೆ ದೇಶದವರಾಗಿರುತ್ತಾರೆ. ಆದರೆ ಅವರು ಕಳ್ಳತನ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಅಡುಗೆಯವರಾಗಿ, ಭದ್ರತಾ ಸಿಬ್ಬಂದಿಗಳಾಗಿ ಮತ್ತು ಶ್ರೀಮಂತ ಕುಟುಂಬಗಳಿಗೆ ಚಾಲಕರಾಗಿ ಕೆಲಸ ಮಾಡುತ್ತಾರೆ. ಮಾಲೀಕರ ನಂಬಿಕೆಯನ್ನು ಗಳಿಸಿದ ನಂತರ, ಅದು ಒಂದೆರೆಡು ದಿನಗಳಲ್ಲಿ ಅಲ್ಲ, ಹಲವಾರು ತಿಂಗಳುಗಳು ಕೆಲಸ ಮಾಡಿ ಕೊನೆಗೆ ಮಾಲೀಕರು ದೂರವಿರುವಾಗ ಮನೆಯಲ್ಲಿ ಕಳ್ಳತನ ಮಾಡಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಾರೆ ಎಂದು ಆರೋಪಿಸಿದ್ದಾರೆ. ಹಾಗಾಗಿ ಅವರನ್ನು ನೇಮಿಸಿಕೊಳ್ಳುವ ಮುನ್ನ ನಮಗೆ ಅವರ ಪೂರ್ಣ ಮಾಹಿತಿ ನೀಡಿ ಎಂದಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಅವರು ಆಭರಣಗಳು ಮತ್ತು ಹಣವನ್ನು ದರೋಡೆ ಮಾಡುವ ಮೊದಲು ಕುಟುಂಬಗಳಿಗೆ ಮಾದಕ ದ್ರವ್ಯವನ್ನು ನೀಡಿದ್ದರು ಎಂದು ಸಹ ಅವರು ಆರೋಪಿಸಿದ್ದಾರೆ ಎಂದು ತೆಲಂಗಾಣ ಟುಡೆ ವರದಿ ಮಾಡಿದೆ.

ಹೈದರಾಬಾದ್ ಪೊಲೀಸರ ಈ ಕ್ರಮ ಮತ್ತು ಆರೋಪಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮನೆಗೆಲಸದವರು ಸಹ ಮನುಷ್ಯರು, ಅವರಲ್ಲಿ ಬಹುತೇಕರು ಪ್ರಾಮಾಣಿಕರಾಗಿರುತ್ತಾರೆ. ನಿಮ್ಮ ಶ್ರೀಮಂತಿಕೆಯ ಅಹಂನಿಂದ ಅವರನ್ನು ಕ್ರಿಮಿನಲ್‌ಗಳ ರೀತಿ ನೋಡುವುದನ್ನು ಬಿಡಿ ಎಂದು ತಾಕೀತು ಮಾಡಿದ್ದಾರೆ.

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ? ಅದರ ಪ್ರಕ್ರಿಯೆಯೇನು? ಅಥವಾ ಈ ಪರಿಶೀಲನೆ ಪ್ರಕ್ರಿಯೆಯು ಕಟ್ಟುನಿಟ್ಟಾಗಿ ಏಕಮುಖವಾಗಿದೆಯೇ? ಎಂದು ಧನಕ್ ಎಂಬುವವರು ಪ್ರಶ್ನಿಸಿದ್ದಾರೆ.

ಇದು ಬಡವರ ವಿರೋಧಿ ಮತ್ತು ಜಾತಿವಾದಿ ಕೊಳಕು ಕೆಲಸವಾಗಿದೆ. ಜನರು ತಮ್ಮ ವರ್ಗ, ಜಾತಿ, ಆರ್ಥಿಕ ಸವಲತ್ತುಗಳ ಕಾರಣದಿಂದ ಮನೆಗೆಲಸಗಾರರನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿದ್ದು, ಅದಕ್ಕಾಗಿ ಉದ್ಯೋಗದಾತರೆ ಹೆಚ್ಚು ಹೊಣೆಗಾರರಾಗಿರುತ್ತಾರೆ ಎಂದು ಸಬಿನಾ ಬಾಷ ಎಂಬುವವರು ಟ್ವೀಟ್ ಮಾಡಿದ್ದಾರೆ.

ಮನೆಗೆಲಸಗಾರರಿಗೆ ಶೌಚಾಲಯ ಬಳಸಲು ಅವಕಾಶ, ಸ್ವಚ್ಛತಾ ಉಪಕರಣಗಳು, ಕನಿಷ್ಠ ಮತ್ತು ವಾರ್ಷಿಕ ಹೆಚ್ಚಳ, ಕೆಲಸದ ಸಮಯ ನಿಗಧಿ, ಹಬ್ಬದ ರಜಾದಿನಗಳನ್ನು ನೀಡಿ. ದಯವಿಟ್ಟು ಇದನ್ನೂ ಸಹ ಖಚಿತಪಡಿಸಲು ಡವ್ ಐ ಎಂಬ ಆಪ್ ರಚಿಸಿರಿ ಎಂದು ರಾಜು ಎಂಬುವವರು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಮನೆಗೆಲಸ ಬಡಜನರ ಮೇಲೆ ಕಣ್ಗಾವಲು ಇಡುವ ಮೂಲಕ ತೆಲಂಗಾಣವನ್ನು ಪೊಲೀಸ್ ರಾಜ್ಯವನ್ನಾಗಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಮುಂಬೈ-ದೆಹಲಿಯಂತಹ ನಗರಗಳಲ್ಲಿ “ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು” ಎಂದು ಹೆಲ್ಫ್ ಚೆಕ್ಕರ್ ಎಂಬ ಫೇಸ್‌ಬುಕ್ ಗ್ರೂಪ್ ಒಂದನ್ನು ಮಾಡಿಕೊಂಡು ಹೆಣ್ಣು ಮಕ್ಕಳ ಫೋಟೊವನ್ನು ಹಾಕಿ ವಿಕೃತಿ ಮೆರೆಯುತ್ತಿರುವುದರ ಕುರಿತು ನಾನುಗೌರಿ.ಕಾಂ ಈ ಹಿಂದೆ ವರದಿ ಮಾಡಿತ್ತು. ಅದನ್ನು ಇಲ್ಲಿ ಓದಬಹುದು.


ಇದನ್ನೂ ಓದಿ: ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...