Homeಕರ್ನಾಟಕಹೊನ್ನಾವರ: ವಿವಾದಿತ ಬಂದರು ಯೋಜನಾ ಪ್ರದೇಶದಲ್ಲಿ ಮೊಟ್ಟೆಯಿಟ್ಟ ಕಡಲಾಮೆಗಳು!

ಹೊನ್ನಾವರ: ವಿವಾದಿತ ಬಂದರು ಯೋಜನಾ ಪ್ರದೇಶದಲ್ಲಿ ಮೊಟ್ಟೆಯಿಟ್ಟ ಕಡಲಾಮೆಗಳು!

ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೀನುಗಾರರ ಅವಲೋಕನ, ವಾದಕ್ಕೆ ಸಮರ್ಥನೆ ಸಿಕ್ಕಂತಾಗಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

- Advertisement -
- Advertisement -

ಹೊನ್ನಾವರದ ಕಾಸರಕೋಡಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿವಾದಿತ ಖಾಸಗಿ ಬಂದರು ಯೋಜನಾ ಪ್ರದೇಶದಲ್ಲಿ ಅಪರೂಪದ ಕಡಲಾಮೆಗಳು ಸಮುದ್ರ ತೀರದಲ್ಲಿ ಮೊಟ್ಟೆಯಿಟ್ಟಿರುವುದು ಭಾನುವಾರ ಕಂಡುಬಂದಿದೆ. ಇದರಿಂದ ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೀನುಗಾರರ ಅವಲೋಕನ, ವಾದಕ್ಕೆ ಸಮರ್ಥನೆ ಸಿಕ್ಕಂತಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಕಡಲಾಮೆ ಹೆಜ್ಜೆಗುರುತು

ಕಾಸರಕೋಡು ಸಮುದ್ರ ದಂಡೆಯಲ್ಲಿ 2-3 ಕಡಲಾಮೆ ನೂರರು ಮೊಟ್ಟೆ ಹಾಕಿವೆ. ಇದರಿಂದ ಚೆನ್ನೈನ ಎನ್‌ಸಿಎಸ್‌ಸಿಎಮ್ ಸಂಶೋಧನಾ ಸಂಸ್ಥೆ ಈ ಪ್ರದೇಶದಲ್ಲಿ ಕಡಲಾಮೆಗಳ ವಾಸ ಸ್ಥಳಗಳಿಲ್ಲವೆಂಬ ಸುಳ್ಳು ವರದಿ ತಯಾರಿಸಿರುವುದನ್ನು ಖಾತ್ರಿ ಪಡಿಸುತ್ತದೆಂದು ಪರಿಸರ ವಿಜ್ಞಾನಿ ಡಾ.ಪ್ರಕಾಶ್ ಮೇಸ್ತ ಅಭಿಪ್ರಾಯ ಪಟ್ಟಿದ್ದಾರೆ. ಕಡಲಾಮೆಗಳಂಥ ಅಪರೂಪದ ಜೀವ ವೈವಿದ್ಯ ತಾಣವಾದ ಕಾಸರಕೋಡು ಟೊಂಕದಲ್ಲಿ ವಾಣಿಜ್ಯ ಬಂದರು ಸ್ಥಾಪನೆ ಸಲ್ಲದೆಂದು ಸ್ಥಳೀಯರು ಹಾಗೂ ಪರಿಸರ ವಿಜ್ಞಾನಿಗಳು ಈ ಹಿಂದೆ ಆಗ್ರಹಿಸಿದ್ದರು.

ಕಡಲಾಮೆ ಇರುವಿಕೆ ಬಗ್ಗೆ ಚೆನ್ನೈನ ಎನ್‌ಸಿಎಸ್‌ಸಿಎಮ್ ಎಂಬ ಸಂಸ್ಥೆಯಿಂದ ಸಂಶೋಧನೆ ಮಾಡಿಸಲಾಗಿತ್ತು. ಈ ಸಂಸ್ಥೆ ಖಾಸಗಿ ಬಂದರು ಕಟ್ಟಲಾಗುತ್ತಿರುವ ಪ್ರದೇಶದಲ್ಲಿ ಕಡಲಾಮೆಗಳ ವಾಸವಿಲ್ಲವೆಂದು ಹೈಕೋರ್ಟಿಗೆ ವರದಿ ಸಲ್ಲಿಸಿತ್ತು. ಈ ಆಧಾರದಲ್ಲಿ ನ್ಯಾಯಾಲಯ ಖಾಸಗಿ ಬಂದರು ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿತ್ತೆಂದು ಹೋರಾಟಗಾರರು ದೂರಿದ್ದಾರೆ. ಬಂದರು ನಿರ್ಮಾಣದ ಪರವಿರುವ ಆಡಳಿತ ವರ್ಗ ಮತ್ತು ಉದ್ಯಮಿಗಳು ನ್ಯಾಯಾಲಯವನ್ನು ದಿಕ್ಕು ತಪ್ಪಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.

ಈಗ ಕಡಲಾಮೆಗಳು ಮೊಟ್ಟೆಯನ್ನು ಬಂದರು ಯೋಜನೆ ಸ್ಥಳದಲ್ಲೇ ಹಾಕಿ ಪ್ರಾದೇಶಿಕತೆ ಸಾಬೀತು ಪಡಿಸಿವೆ. ಅಪರೂಪದ ಜೀವ ವೈವಿದ್ಯವಾದ ಕಡಲಾಮೆ ಸಂತತಿ ಸಂರಕ್ಷಿಸುವಂತೆ ಹೈಕೋರ್ಟ್ ಹಿಂದೆ ಹೇಳಿದೆ. ಹೀಗಾಗಿ ಕಾಸರಕೋಡು ಕಡಲತಡಿಯ ಕಡಲಾಮೆಗಳ ಕಾಪಾಡುವ ಹೊಣೆಗಾರಿಕೆ ಯಾರದು ಎಂಬ ಪ್ರಶ್ನೆ ಉದ್ಭವಿಸಿದೆ.

ಕಡಲಾಮೆ ಮೊಟ್ಟೆ ಸಂರಕ್ಷಿಸುವ ಗೂಡು

ಖಾಸಗಿ ಬಂದರು ನಿರ್ಮಾಣಕ್ಕೆ ಹಠ ತೊಟ್ಟಿರುವ ಬಂಡವಾಳಶಾಹಿಗಳು ಹಾಗೂ ಆವರಿಗೆ ಒತ್ತಾಸೆಯಾಗಿ ನಿಂತಿರುವ ಆಳುವ ವರ್ಗ ಸಿಕ್ಕಿರುವ ಕಡಲಾಮೆ ಮೊಟ್ಟೆಗಳನ್ನು ನಾಶಮಾಡಿ ಚೆನ್ನೈನ ಸಂಶೋಧನಾ ಸಂಸ್ಥೆ ಕಾಸರಕೋಡು ಕಡಲ ಪ್ರದೇಶದಲ್ಲಿ ಕಡಲಾಮೆಗಳಿಲ್ಲವೆಂದು ಕೊಟ್ಟಿರುವ ಖೋಟಾ ವರದಿಯೆ ನಿಜವೆಂದು ಬಿಂಬಿಸಿ ಬಂದರು ನಿರ್ಮಾಣಕ್ಕೆ ನ್ಯಾಯಾಲಯದಿಂದ ಪಡೆದಿರುವ ಒಪ್ಪಿಗೆ ಕಾಪಾಡಿಕೋಳ್ಳಲು ಹುನ್ನಾರ ನಡೆಸುವ ಸಾಧ್ಯತೆಯಿದೆಯೆಂದು ಸ್ಥಳಿಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಸರಕೋಡಲ್ಲಿ ದೊರೆತಿರುವ ಕಡಲಾಮೆ ಮೊಟ್ಟೆಗಳನ್ನು ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...