Homeಕರ್ನಾಟಕಹೊನ್ನಾವರ: ವಿವಾದಿತ ಬಂದರು ಯೋಜನಾ ಪ್ರದೇಶದಲ್ಲಿ ಮೊಟ್ಟೆಯಿಟ್ಟ ಕಡಲಾಮೆಗಳು!

ಹೊನ್ನಾವರ: ವಿವಾದಿತ ಬಂದರು ಯೋಜನಾ ಪ್ರದೇಶದಲ್ಲಿ ಮೊಟ್ಟೆಯಿಟ್ಟ ಕಡಲಾಮೆಗಳು!

ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೀನುಗಾರರ ಅವಲೋಕನ, ವಾದಕ್ಕೆ ಸಮರ್ಥನೆ ಸಿಕ್ಕಂತಾಗಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

- Advertisement -
- Advertisement -

ಹೊನ್ನಾವರದ ಕಾಸರಕೋಡಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿವಾದಿತ ಖಾಸಗಿ ಬಂದರು ಯೋಜನಾ ಪ್ರದೇಶದಲ್ಲಿ ಅಪರೂಪದ ಕಡಲಾಮೆಗಳು ಸಮುದ್ರ ತೀರದಲ್ಲಿ ಮೊಟ್ಟೆಯಿಟ್ಟಿರುವುದು ಭಾನುವಾರ ಕಂಡುಬಂದಿದೆ. ಇದರಿಂದ ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮೀನುಗಾರರ ಅವಲೋಕನ, ವಾದಕ್ಕೆ ಸಮರ್ಥನೆ ಸಿಕ್ಕಂತಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಕಡಲಾಮೆ ಹೆಜ್ಜೆಗುರುತು

ಕಾಸರಕೋಡು ಸಮುದ್ರ ದಂಡೆಯಲ್ಲಿ 2-3 ಕಡಲಾಮೆ ನೂರರು ಮೊಟ್ಟೆ ಹಾಕಿವೆ. ಇದರಿಂದ ಚೆನ್ನೈನ ಎನ್‌ಸಿಎಸ್‌ಸಿಎಮ್ ಸಂಶೋಧನಾ ಸಂಸ್ಥೆ ಈ ಪ್ರದೇಶದಲ್ಲಿ ಕಡಲಾಮೆಗಳ ವಾಸ ಸ್ಥಳಗಳಿಲ್ಲವೆಂಬ ಸುಳ್ಳು ವರದಿ ತಯಾರಿಸಿರುವುದನ್ನು ಖಾತ್ರಿ ಪಡಿಸುತ್ತದೆಂದು ಪರಿಸರ ವಿಜ್ಞಾನಿ ಡಾ.ಪ್ರಕಾಶ್ ಮೇಸ್ತ ಅಭಿಪ್ರಾಯ ಪಟ್ಟಿದ್ದಾರೆ. ಕಡಲಾಮೆಗಳಂಥ ಅಪರೂಪದ ಜೀವ ವೈವಿದ್ಯ ತಾಣವಾದ ಕಾಸರಕೋಡು ಟೊಂಕದಲ್ಲಿ ವಾಣಿಜ್ಯ ಬಂದರು ಸ್ಥಾಪನೆ ಸಲ್ಲದೆಂದು ಸ್ಥಳೀಯರು ಹಾಗೂ ಪರಿಸರ ವಿಜ್ಞಾನಿಗಳು ಈ ಹಿಂದೆ ಆಗ್ರಹಿಸಿದ್ದರು.

ಕಡಲಾಮೆ ಇರುವಿಕೆ ಬಗ್ಗೆ ಚೆನ್ನೈನ ಎನ್‌ಸಿಎಸ್‌ಸಿಎಮ್ ಎಂಬ ಸಂಸ್ಥೆಯಿಂದ ಸಂಶೋಧನೆ ಮಾಡಿಸಲಾಗಿತ್ತು. ಈ ಸಂಸ್ಥೆ ಖಾಸಗಿ ಬಂದರು ಕಟ್ಟಲಾಗುತ್ತಿರುವ ಪ್ರದೇಶದಲ್ಲಿ ಕಡಲಾಮೆಗಳ ವಾಸವಿಲ್ಲವೆಂದು ಹೈಕೋರ್ಟಿಗೆ ವರದಿ ಸಲ್ಲಿಸಿತ್ತು. ಈ ಆಧಾರದಲ್ಲಿ ನ್ಯಾಯಾಲಯ ಖಾಸಗಿ ಬಂದರು ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿತ್ತೆಂದು ಹೋರಾಟಗಾರರು ದೂರಿದ್ದಾರೆ. ಬಂದರು ನಿರ್ಮಾಣದ ಪರವಿರುವ ಆಡಳಿತ ವರ್ಗ ಮತ್ತು ಉದ್ಯಮಿಗಳು ನ್ಯಾಯಾಲಯವನ್ನು ದಿಕ್ಕು ತಪ್ಪಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.

ಈಗ ಕಡಲಾಮೆಗಳು ಮೊಟ್ಟೆಯನ್ನು ಬಂದರು ಯೋಜನೆ ಸ್ಥಳದಲ್ಲೇ ಹಾಕಿ ಪ್ರಾದೇಶಿಕತೆ ಸಾಬೀತು ಪಡಿಸಿವೆ. ಅಪರೂಪದ ಜೀವ ವೈವಿದ್ಯವಾದ ಕಡಲಾಮೆ ಸಂತತಿ ಸಂರಕ್ಷಿಸುವಂತೆ ಹೈಕೋರ್ಟ್ ಹಿಂದೆ ಹೇಳಿದೆ. ಹೀಗಾಗಿ ಕಾಸರಕೋಡು ಕಡಲತಡಿಯ ಕಡಲಾಮೆಗಳ ಕಾಪಾಡುವ ಹೊಣೆಗಾರಿಕೆ ಯಾರದು ಎಂಬ ಪ್ರಶ್ನೆ ಉದ್ಭವಿಸಿದೆ.

ಕಡಲಾಮೆ ಮೊಟ್ಟೆ ಸಂರಕ್ಷಿಸುವ ಗೂಡು

ಖಾಸಗಿ ಬಂದರು ನಿರ್ಮಾಣಕ್ಕೆ ಹಠ ತೊಟ್ಟಿರುವ ಬಂಡವಾಳಶಾಹಿಗಳು ಹಾಗೂ ಆವರಿಗೆ ಒತ್ತಾಸೆಯಾಗಿ ನಿಂತಿರುವ ಆಳುವ ವರ್ಗ ಸಿಕ್ಕಿರುವ ಕಡಲಾಮೆ ಮೊಟ್ಟೆಗಳನ್ನು ನಾಶಮಾಡಿ ಚೆನ್ನೈನ ಸಂಶೋಧನಾ ಸಂಸ್ಥೆ ಕಾಸರಕೋಡು ಕಡಲ ಪ್ರದೇಶದಲ್ಲಿ ಕಡಲಾಮೆಗಳಿಲ್ಲವೆಂದು ಕೊಟ್ಟಿರುವ ಖೋಟಾ ವರದಿಯೆ ನಿಜವೆಂದು ಬಿಂಬಿಸಿ ಬಂದರು ನಿರ್ಮಾಣಕ್ಕೆ ನ್ಯಾಯಾಲಯದಿಂದ ಪಡೆದಿರುವ ಒಪ್ಪಿಗೆ ಕಾಪಾಡಿಕೋಳ್ಳಲು ಹುನ್ನಾರ ನಡೆಸುವ ಸಾಧ್ಯತೆಯಿದೆಯೆಂದು ಸ್ಥಳಿಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಸರಕೋಡಲ್ಲಿ ದೊರೆತಿರುವ ಕಡಲಾಮೆ ಮೊಟ್ಟೆಗಳನ್ನು ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...