Homeಮುಖಪುಟನೀತಿ ಆಯೋಗದ ಆರೋಗ್ಯ ಸೂಚ್ಯಂಕ: ಕೇರಳಕ್ಕೆ ಅಗ್ರ ಸ್ಥಾನ, ಉತ್ತರ ಪ್ರದೇಶ ಅತೀ ಕಳಪೆ

ನೀತಿ ಆಯೋಗದ ಆರೋಗ್ಯ ಸೂಚ್ಯಂಕ: ಕೇರಳಕ್ಕೆ ಅಗ್ರ ಸ್ಥಾನ, ಉತ್ತರ ಪ್ರದೇಶ ಅತೀ ಕಳಪೆ

- Advertisement -
- Advertisement -

ನೀತಿ ಆಯೋಗ ಬಿಡುಗಡೆ ಮಾಡಿರುವ ಆರೋಗ್ಯ ಸೂಚ್ಯಂಕದ ಪ್ರಕಾರ ಆರೋಗ್ಯ ಸೌಕರ್ಯಗಳ ನಿರ್ವಹಣೆಯಲ್ಲಿ ಕೇರಳ ಮತ್ತೆ ಮೊದಲ ಸ್ಥಾನದಲ್ಲಿದೆ. ಉತ್ತರ ಪ್ರದೇಶ ಅತೀ ಕಳಪೆ ಸಾಧನೆ ಮಾಡಿದ್ದು ಕೊನೆಯ ಸ್ಥಾನದಲ್ಲಿದೆ.

ನಾಲ್ಕನೇ ಆರೋಗ್ಯ ಸೂಚ್ಯಂಕ ಬಿಡುಗಡೆ ಮಾಡಿರುವ ನೀತಿ ಆಯೋಗ, ದೊಡ್ಡ ರಾಜ್ಯಗಳ ಒಟ್ಟಾರೆ ಆರೋಗ್ಯ ಸಾಧನೆಯಲ್ಲಿ ಕೇರಳ ಮತ್ತೆ ಅಗ್ರ ಶ್ರೇಯಾಂಕದ ರಾಜ್ಯವಾಗಿ ಹೊರಹೊಮ್ಮಿದೆ, ಆದರೆ ಉತ್ತರ ಪ್ರದೇಶವು ಅತ್ಯಂತ ಕೆಟ್ಟದಾಗಿದೆ ಎಂದು ತಿಳಿಸಿದೆ. ನಾಲ್ಕನೇ ಸುತ್ತಿನ ಆರೋಗ್ಯ ಸೂಚ್ಯಂಕವು 2019-20 ಅವಧಿಯನ್ನು ಗಣನೆಗೆ ತೆಗೆದುಕೊಂಡಿದೆ.

ಆರೋಗ್ಯದ ಮಾನದಂಡಗಳಲ್ಲಿ ತಮಿಳುನಾಡು ಮತ್ತು ತೆಲಂಗಾಣ ಕ್ರಮವಾಗಿ ಎರಡು ಮತ್ತು ಮೂರನೇ ಅತ್ಯುತ್ತಮ ರಾಜ್ಯಗಳಾಗಿ ಹೊರಹೊಮ್ಮಿವೆ ಎಂದು ಸರ್ಕಾರದ ವರದಿ ತಿಳಿಸಿದೆ.

ಇದನ್ನೂ ಓದಿ: ಉಡುಪಿ ದ್ವೇಷ ಭಾಷಣ: ಬೇಷರತ್‌‌ ಕ್ಷಮೆ ಕೇಳಿದ ತೇಜಸ್ವಿ ಸೂರ್ಯ

ಆದರೂ ಹಿಂದಿನ ವರ್ಷಕ್ಕೆ (2018-19) ಹೋಲಿಸಿಕೊಂಡರೆ ಈ ವರ್ಷಕ್ಕೆ (2019-20) ಆರೋಗ್ಯ ಮೂಲಸೌಕರ್ಯಗಳಲ್ಲಿ ಅತ್ಯಧಿಕ ಬದಲಾವಣೆಯನ್ನು ಮಾಡುವ ಮೂಲಕ ಉತ್ತರ ಪ್ರದೇಶವು ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ವರದಿಯಲ್ಲಿ ಸೇರಿಸಲಾಗಿದೆ.

ಸಣ್ಣ ರಾಜ್ಯಗಳ ಪೈಕಿ, ಮಿಜೋರಾಂ ಒಟ್ಟಾರೆ ಕಾರ್ಯಕ್ಷಮತೆ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆಯಲ್ಲಿ ಅತ್ಯುತ್ತಮ ರಾಜ್ಯವಾಗಿ ಹೊರಹೊಮ್ಮಿದೆ.

ಕೇಂದ್ರಾಡಳಿತ ಪ್ರದೇಶಗಳಲ್ಲಿ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರಗಳು ಒಟ್ಟಾರೆ ಆರೋಗ್ಯ ಕಾರ್ಯಕ್ಷಮತೆಯ ವಿಷಯದಲ್ಲಿ ಕಳಪೆಯಾಗಿವೆ. ಆದರೆ, ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಪ್ರಮುಖ ಪ್ರದೇಶಗಳಾಗಿವೆ ಎಂದು ನೀತಿ ಆಯೋಗದ ವರದಿ ತಿಳಿಸಿದೆ.

ನೀತಿ ಆಯೋಗ ಬಿಡುಗಡೆ ಮಾಡಿರುವ ವರದಿಯನ್ನು ವಿಶ್ವಬ್ಯಾಂಕ್‌ನ ತಾಂತ್ರಿಕ ನೆರವಿನೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಯೋಗದೊಂದಿಗೆ ಸಿದ್ಧಪಡಿಸಲಾಗಿದೆ.


ಇದನ್ನೂ ಓದಿ: ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು: ‘ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ’ಎಂದು ಎಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...